ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯದಲ್ಲಿ ಶ್ರೀ ಸಂಸ್ಥಾನದವರ ಕಾರ್ಯದರ್ಶಿ ಮತ್ತು ಪದನಿಮಿತ್ತ ಆಡಳಿತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಜಿ.ಕೆ. ಹೆಗಡೆ ಇವರ ಮೇಲೆ ಆಸಿಡ್ ದಾಳಿ ಬೆದರಿಕೆ ನಡೆದಿದೆ ಎಂದು ದೂರು ದಾಖಲಾಗಿದೆ.
ಕಳೆದ ಶನಿವಾರ(ಜ.5ರಂದು) ರಾತ್ರಿ 11 ಘಂಟೆ ಸುಮಾರಿಗೆ ಜಿ ಕೆ ಹೆಗಡೆಯವರು ಅಮಾವಾಸ್ಯೆ ರಥೋತ್ಸವ ಮುಗಿಸಿ ದೇವಾಲಯದಿಂದ ವಸತಿಗೆ ನಡೆದು ಹೋಗತ್ತಿರುವಾಗ ವಿಶ್ವನಾಥ ಫಣಿರಾಜ್ ಗೋಪಿ ಎನ್ನುವವರು ಬೈಕಿನಲ್ಲಿ ಬಂದು, ಜಿ.ಕೆ. ಹೆಗಡೆಯವರೇ, ನಿಮಗೆ ಆಸಿಡ್ ಹಾಕಲು ಗೋಕರ್ಣದಲ್ಲಿ ತಯಾರಿ ನಡೆದಿದೆ. ಆಸಿಡ್ ಬಾಟಲಿಯನ್ನು ತಂದು ಇಟ್ಟಿದ್ದಾರೆ . ಇದರಲ್ಲಿ ಗೋಕರ್ಣದ ಕೆಲವರು ಇದ್ದಾರೆ. ನೀವು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ಹೇಳಿ ಹೋಗಿದ್ದಾರೆ ಎಂದು ದೂರಲಾಗಿದೆ.
ಬೆದರಿಕೆ ಕುರಿತಂತೆ ಗೋಕರ್ಣ ಪೊಲೀಸ್ ಠಾಣೆಯಲ್ಲಿ ಜಿ.ಕೆ. ಹೆಗಡೆಯವರು ದೂರು ದಾಖಲಿಸಿದ್ದು, ರಕ್ಷಣೆ ನೀಡುವಂತೆ ಕೋರಿದ್ದಾರೆ. ಈ ಹಿಂದೆ ನಕಲಿ ಸಿಡಿ ಕೇಸ್ ಕೇಸಿನಲ್ಲಿ ದೂರು ದಾಖಲಿಸಿದಾಗ ಜಿ.ಕೆ. ಹೆಗಡೆಯವರಿಗೆ ಕೊಲೆ ಬೆದರಿಕೆ ಬಂದಿತ್ತು ಮತ್ತು ಬ್ಲಾಕ್ ಮೇಲ್ ಪ್ರಕರಣದಲ್ಲಿಯೂ ಸಹ ಜೀವ ಬೆದರಿಕೆ ಕರೆ ಬಂದಿತ್ತು.
ಶ್ರಿÃರಾಮಚಂದ್ರಾಪುರ ಮಠದ ಆಡಳಿತದಲ್ಲಿ ಸಂಸ್ಥಾನ ಶ್ರೀ ಮಹಾಬಲೇಶ್ವರ ದೇವಾಲಯವು ಅಭಿವೃದ್ಧಿ ಹೊಂದುತ್ತಿರುವುದನ್ನು ಸಹಿಸದ ವಿರೋಧಿಗಳು ಜನತೆಯ ಗಮನವನ್ನು ಬೇರೆಡೆ ಸೆಳೆಯಲು ಮತ್ತು ಇಲ್ಲಿನ ಕಾರ್ಯಕರ್ತರ ಧೃತಿಗೆಡಿಸಲು ಈ ರೀತಿಯ ಷಡ್ಯಂತ್ರ ರೂಪಿಸಿರಬಹುದು ಎಂಬ ಸಂಶಯವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.
Discussion about this post