ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳ ಕಾರ್ಯಕ್ಷಮತೆ ಹಾಗೂ ಹಣಕಾಸಿನ ಸಮರ್ಥನೀಯತೆಯ ಬಗ್ಗೆ ಮತ್ತು ಈ ಕಂಪೆನಿಗಳ ಸರ್ವತೋಮುಖ ಅಭಿವೃದ್ದಿಯ ಸಲುವಾಗಿ, ಸರ್ಕಾರವು ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಏಕಸದಸ್ಯ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ CM Basavaraja Bommai ಅವರು ಸೂಚಿಸಿದರು.
ಸಮಿತಿಯ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಗುರುಚರಣ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವರದಿಯನ್ನು ಇಂದು ಸಲ್ಲಿಸಿದರು. ಈ ಸಂದರ್ಭದಲ್ಲಿ ವರದಿಯ ಶಿಫಾರಸುಗಳ ಅನುಷ್ಠಾನದ ಸಂದರ್ಭದಲ್ಲಿ ಅವರ ಸಲಹೆ, ಮಾರ್ಗದರ್ಶನ ಪಡೆಯಲು ಅನುವಾಗುವಂತೆ ಸಮಿತಿಯ ಅವಧಿಯನ್ನು ವಿಸ್ತರಿಸುವಂತೆ ಮುಖ್ಯಮಂತ್ರಿಯವರು ಸೂಚಿಸಿದರು.
ಈ ವರದಿಯಲ್ಲಿ ರಾಜ್ಯದ ವಿದ್ಯುತ್ ಸರಬರಾಜು ಕಂಪೆನಿಗಳ ವಸ್ತುಸ್ಥಿತಿ, ಸುಧಾರಣೆಗಳ ಅಗತ್ಯತೆ ಮತ್ತು ಅನುಷ್ಠಾನ ಯೋಜನೆಯ ಬಗ್ಗೆ ಸವಿಸ್ಥಾರ ವಿವರಣೆಗಳನ್ನು ನೀಡುವುದರೊಂದಿಗೆ ರಚನಾತ್ಮಕ ಬದಲಾವಣೆ, ಮಧ್ಯಮ ಮತ್ತು ದೀರ್ಘಾವಧಿಯ ಸುಧಾರಣೆ, ಈ ಸುಧಾರಣೆಗಳ ಸಕಾಲಿಕ ಅನುಷ್ಠಾನದ ಬಗ್ಗೆ ನಿಖರವಾಗಿ ತಿಳಿಸಲಾಗಿದೆ.
Also read: ಸುಂದರ ಜೀವನ ಅನುಭವಿಸಲು ಉತ್ತಮ ಆರೋಗ್ಯ, ಅಭ್ಯಾಸಗಳು ಅವಶ್ಯ: ಕವಿರಾಜ್
ಈ ವರದಿಯಲ್ಲಿ ತಿಳಿಸಿರುವ ಸುಧಾರಣಾ ಕಾರ್ಯಗಳನ್ನು ಅನುಷ್ಠಾನಗೊಳಿಸುವ ಕುರಿತು ವಿವರವಾಗಿ ಚರ್ಚಿಸಿ, ಕ್ರಿಯಾ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಇಂಧನ ಸಚಿವ ವಿ.ಸುನಿಲ್ ಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಿ. ಕುಮಾರ ನಾಯಕ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post