No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ದೇವೇಗೌಡರ ನಿವಾಸಕ್ಕೆ ತರಳುಬಾಳು ಶ್ರೀ ಭೇಟಿ: ಮಾಜಿ ಪಿಎಂ ಆರೋಗ್ಯ ವಿಚಾರಣೆ

ಶ್ರೀ ಜಗದ್ಗುರುಗಳವರ ಸಲಹೆಯಂತೆ ಆತ್ಮಚರಿತ್ರೆ ಬರೆಯಲು ಹೆಚ್.ಡಿ. ದೇವೇಗೌಡರ ಒಪ್ಪಿಗೆ..!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 7, 2022
in ಬೆಂಗಳೂರು ನಗರ
0
ದೇವೇಗೌಡರ ನಿವಾಸಕ್ಕೆ ತರಳುಬಾಳು ಶ್ರೀ ಭೇಟಿ: ಮಾಜಿ ಪಿಎಂ ಆರೋಗ್ಯ ವಿಚಾರಣೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ಶ್ರೀ ತರಳಬಾಳು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ Former PM H.D. Devegowda ನಿವಾಸದಲ್ಲಿಂದು ಭೇಟಿಯಾಗಿ ಆರೋಗ್ಯ ವಿಚಾರಿಸಿ ಆಶೀರ್ವಾದಿಸಿದರು.

ಇಳಿ ವಯಸ್ಸಿನಲ್ಲೂ ಎಚ್.ಡಿ.ದೇವೇಗೌಡರು ಶ್ರೀ ಜಗದ್ಗುರುಗಳವರ ಪಾದಕ್ಕೆ ಪ್ರಣಾಮಗಳನ್ನು ಸಲ್ಲಿಸಿ ಸ್ವಾಗತಿಸಿದರು. ಶ್ರೀ ಜಗದ್ಗುರುಗಳವರು ಮಾಜಿ ಪ್ರಧಾನಿಗಳಿಗೆ ಏಲಕ್ಕಿ ಹಾರ, ಶಾಲು ಹೊದಿಸಿ, ಹಣ್ಣುಗಳ ಬುಟ್ಟಿಯನ್ನು ನೀಡಿ ಆರೋಗ್ಯ ಪೂರ್ಣರಾಗಿ ಕರುನಾಡಿನ ಧ್ಯೇಯಕ್ಕೆ ಮತ್ತೊಷ್ಟು ಕ್ರೀಯಾಶೀಲರಗಿ ಯುವ ನೇತಾರರಿಗೆ ರಾಜಕೀಯ ಮಾರ್ಗದರ್ಶನ ಆಶೀರ್ವಾದಿಸಿದರು.
ವಯೋಸಹಜತೆಯಿಂದ ಆರೋಗ್ಯದಲ್ಲಿ ಏರುಪೇರಾಗಿದ್ದು. ವಿಶ್ರಾಂತಿಯಲ್ಲಿರುವುದರಿಂದ ಆರೋಗ್ಯ ಸುಧಾರಣೆಯಾಗುತ್ತಿರುವುದಾಗಿ ಗೌಡರು ತಿಳಿಸಿದರು. ಶ್ರೀ ಜಗದ್ಗುರುಗಳವರ ಬಿಸಿಲು ಬೆಳದಿಂಗಳು ಅಂಕಣ ಪ್ರಕಟಣೆಯ ದಿನವಾದ ಇಂದಿನ ಲೇಖನ ವಾದ ‘ಮರೆತು ಹೋದ ಕನ್ನಡ ನಾಡಿನ ಜಲಿಯನ್ ವಾಲಾ ಬಾಗ್’ ಕುರಿತಾಗಿ ಮಾಜಿ ಪ್ರಧಾನಿ ಚರ್ಚಿಸಿದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಜನಿಸಿರುವ ಗೌಡರು 1953ರಲ್ಲಿ ಕಾಂಗ್ರೆಸ್ ಪಕ್ಷದಿಂದ ಆರಂಭವಾದ ತಮ್ಮ ರಾಜಕೀಯ ಹೋರಾಟವನ್ನು ಹಂಚಿಕೊಂಡರು.

1970-80 ರ ದಶಕದಲ್ಲಿ ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರನ್ನು ಸಾಸಲು ಮತ್ತು ಸಿರಿಗೆರೆಯ ಮಠದಲ್ಲಿ ಹಲವಾರು ಬಾರಿ ಭೇಟಿ ಮಾಡಿ ರಾಜಕೀಯ ಮಾರ್ಗದರ್ಶನ ನೀಡುವಂತೆ ಪ್ರಾರ್ಥಿಸಿದ್ದಾಗಿ, ಶ್ರೀಗಳ ಸಾಮಾಜಿಕ ಕಳಕಳಿಗೆ ಆಗಿನ ತಲೆಮಾರಿನ ರಾಜಕೀಯ ಧುರೀಣರಲ್ಲಿ ಎದುರಾಡುವ ಸಾಮರ್ಥ್ಯ ಇರಲಿಲ್ಲ, ಇದಕ್ಕೆ ಮಾಜಿ ಮುಖ್ಯಮಂತ್ರಿ ನಿಜಲಿಂಗಪ್ಪನವರ ಘಟನೆಯೇ ಸಾಕ್ಷಿಯಾಗಿದೆ. ತರಳಬಾಳು ಹುಣ್ಣಿಮೆ ಮಹೋತ್ಸವವು ಭಾವೈಕ್ಯತೆಯ ಸಂಗಮವಾಗಿ ಈ ನಾಡಿಗೆ ಮಾದರಿಯಾದ ಸಮಾರಂಭ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಮಾದರಿ ಸಮಾಜ ಸೇವಾಕಾರ್ಯಾಗಳನ್ನು ಸ್ಮರಿಸಿದ ಹೆಚ್.ಡಿ.ದೇವೇಗೌಡರವರು ತಮ್ಮ ನೇತೃತ್ವದಲ್ಲಿ ಜಾರಿಯಾದ 20 ಕ್ಕೂ ಅಧಿಕ ಏತನೀರಾವರಿ ಯೋಜನೆಗಳ ಮೂಲಕ 500 ಕ್ಕೂ ಅಧಿಕ ಕೆರೆಗಳಿಗೆ ನೀರು ತುಂಬಿಸಿ, ವಿಶೇಷವಾಗಿ ಜಗಳೂರು ಮತ್ತು ಭರಮಸಾಗರ ಯೋಜನೆಗಳ ಮೂಲಕ ಲಕ್ಷಾಂತರ ರೈತರಿಗೆ ಸಂಜೀವಿನಿಯಾಗಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ದೋಷಗಳನ್ನು ಸರಿಪಡಿಸಲು ತಾವು ಶ್ರಮಿಸಿ,ತಮ್ಮ ಮಾರ್ಗದರ್ಶನದಲ್ಲಿ ಹೊರ ತಂದ ಭೂಮಿ ಆನ್ಲೈನ್ ತಂತ್ರಾಂಶವು ಕಂದಾಯ ಇಲಾಖೆಯ ಮೂಲಕ ನೀಡುವ ನೆರೆ,ಬರ ಪರಿಹಾರಕ್ಕೆ ಯಾವುದೇ ಲಂಚರಹಿತವಾಗಿ‌ ರೈತ ಫಲಾನುಭವಿಗಳಿಗೆ ಡಿಬಿಟಿಯ ಮೂಲಕ ಸಹಸ್ರಾರು ಕೋಟಿ ರೂಪಾಯಿಗಳು ತಲುಪುತ್ತಿರುವುದು ದೇಶಕ್ಕೆ ಮಾದರಿಯಾದ ಕಾರ್ಯವಾಗಿದ್ದು, ಕರ್ನಾಟಕದಲ್ಲಿ 2018 ರಲ್ಲಿಯೇ ಈ ಕಾರ್ಯ ಕೈಗೂಡಿದ್ದು ಸ್ಮರಣೀಯವಾದುದೆಂದು ಗೌಡರು ಅಭಿಪ್ರಾಯ ಪಟ್ಟರು.
ಸಾರ್ವಜನಿಕ ಕಾರ್ಯಕ್ರಮಗಳಿಗೆ ಕೆಲವು ದಿನಗಳವರೆಗೆ ವಿರಾಮ ನೀಡಿ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದ ಶ್ರೀ ಜಗದ್ಗುರುಗಳವರು, “ನಿಮ್ಮ ಈ ಹೋರಾಟದ ಕಿಚ್ಚು ದೇಶದ ಯುವ ಪೀಳಿಗೆಗೆ ಸ್ಪೂರ್ತಿಯಾಗುವ ಆಶಯ ನಮ್ಮದಾಗಿದೆ.
ಪ್ರಜಾಸತ್ತಾತ್ಮಕ ವ್ಯವಸ್ಥೆಯ ಕೆಳ ಸ್ತರದಿಂದ ಆರಂಭಿಸಿದ ನಿಮ್ಮ ಜೀವನ ಹೋರಾಟ ಪ್ರಧಾನಿಯಾಗುವವರೆಗೆ ಕರೆದೊಯ್ದುದ್ದು, ಸಮಾಜದಲ್ಲಿನ ಅಸಮಾನತೆಗಳನ್ನು ಸರಿಪಡಿಸಿ,ಸಾಮಾಜಿಕ-ಆರ್ಥಿಕ ಅಭಿವೃದ್ಧಿಯೊಕದಿಗೆ ಆದರ್ಶ ರಾಜ್ಯವೊಂದರ ನಿಮ್ಮ ಕನಸು, ತಮ್ಮ ಸ್ವಾತಂತ್ರ್ಯ ಮತ್ತು ಸಮಾನತೆಯ ಆಶಯಗಳು, ತುರ್ತು ಪರಿಸ್ಥಿತಿ ದಿನಗಳಲ್ಲಿ ಜೈಲು ವಾಸ . ರಾಜಕೀಯ ಜೀವನ, ಕುಟುಂಬದ ಸಹಕಾರವನ್ನು ಕುರಿತು ಸಿಂಹಾವಲೋಕನಗೈಯುವ ಆತ್ಮಕಥೆಯನ್ನು ರಚಿಸಲು ಈ ವಿಶ್ರಾಂತಿ ಸಮಯವನ್ನು ಬೆಳೆಸಿಕೊಳ್ಳುವಂತೆ ಶ್ರೀ ಜಗದ್ಗುರುಗಳವರು ದೇವೇಗೌಡರಿಗೆ ಒತ್ತಾಯ ಪೂರ್ವಕವಾಗಿ ಸೂಚಿಸಿದರು.ಶ್ರೀ ಜಗದ್ಗುರುಗಳವರ ಸೂಚನೆಯನ್ನು ಪ್ರಸಾದವೆಂದು ಸ್ವೀಕರಿಸಿರುವುದಾಗಿ ಆತ್ಮಚರಿತ್ರೆ ಬರೆಯಲು ಸೂಕ್ತ ವ್ಯಾಖ್ಯಾನಕಾರರನ್ನು ನೀಡುವಂತೆ ಕೋರಿದರು.

ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ನಿವಾಸದಲ್ಲಿ ಶ್ರೀ ತರಳಬಾಳು ಜಗದ್ಗುರುಗಳವರ ಆಗಮನವು ಸಂತಸ ತಂದಿತ್ತು. ಗೌಡರ ಕುಟುಂಬವು ಅತ್ಯಂತ ಶ್ರದ್ಧಾ ಭಕ್ತಿಯಿಂದ ಸ್ವಾಗತಿಸಿತು.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)       

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreFormer PM H D DevegowdaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಬೆಂಗಳೂರುಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ
Share203Tweet123Send
Previous Post

ವಿಧಿ ವಿಜ್ಞಾನ ವಿಶ್ವ ವಿದ್ಯಾಲಯಕ್ಕೆ ಕೇಂದ್ರ ಹಸಿರು ನಿಶಾನೆ: ಗೃಹಸಚಿವ ಆರಗ ಜ್ಞಾನೇಂದ್ರ ಸಭೆ

Next Post

ಡಿ.15ರ ವೇಳೆಗೆ ರಾಜ್ಯದಲ್ಲಿ 438 “ನಮ್ಮ ಕ್ಲಿನಿಕ್‌” ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್‌

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಡಿ.15ರ ವೇಳೆಗೆ ರಾಜ್ಯದಲ್ಲಿ 438 “ನಮ್ಮ ಕ್ಲಿನಿಕ್‌” ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್‌

ಡಿ.15ರ ವೇಳೆಗೆ ರಾಜ್ಯದಲ್ಲಿ 438 "ನಮ್ಮ ಕ್ಲಿನಿಕ್‌" ಕಾರ್ಯಾರಂಭ: ಸಚಿವ ಡಾ.ಕೆ. ಸುಧಾಕರ್‌

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL