ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಾಯಿಯೇ ತನ್ನ ಮಗುವನ್ನು ಮಹಡಿಯಿಂದ ಎಸೆದು ಹತ್ಯೆ ಮಾಡಲು ಯತ್ನಿಸಿದ ಘಟನೆ ನಗರದಲ್ಲಿ ನಡೆದಿದೆ.
ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದ್ದು, ಸಾವನ್ನಪ್ಪಿರುವ ಮಗುವನ್ನು ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ.

ದಂತ ವೈದ್ಯೆಯಾಗಿ ಪ್ರಾಕ್ಟೀಸ್ ಮಾಡುತ್ತಿದ್ದ ಸುಷ್ಮಾ ಪತಿ ಖಾಸಗಿ ಕಂಪನಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡಿದ್ದರು. ಅನಾರೋಗ್ಯದಿಂದ ಪತಿ ತೀರಿಕೊಂಡಿದ್ದರು. ಇತ್ತ ಮಗಳು ಬುದ್ಧಿಮಾಂದ್ಯತೆಯಿಂದ ಬಳಲುತ್ತಿದ್ದಾಳೆ ಎಂದು ಸುಷ್ಮಾ ಈ ಕೃತ್ಯ ಎಸಗಿದ್ದಾಳೆ ಎನ್ನಲಾಗಿದೆ.
ಮೇಲಿಂದ ಬಿದ್ದ ರಭಸಕ್ಕೆ ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮಗುವನ್ನು ಮೇಲಿಂದ ಬಿಸಾಕಿದ ಬಳಿಕ ಸುಷ್ಮಾ ತಾನೂ ಆತ್ಮಹತ್ಯೆ ಮಡಿಕೊಳ್ಳಲು ಯತ್ನಿಸಿದ್ದಾಳೆ. ಈ ವೇಳೆ ಅಕ್ಕಪಕ್ಕದ ಮನೆಯವರು ಬಂದು ಆಕೆಯನು ರಕ್ಷಣೆ ಮಾಡಿರುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ.

ಈ ಸಂಬಂಧ ತಾಯಿ ಸುಷ್ಮಾ ವಿರುದ್ದ ಸಂಪಂಗಿ ರಾಮನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










Discussion about this post