ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಬಸವಣ್ಣ ಅವರಂತಹ ದಾರ್ಶನಿಕ ವ್ಯಕ್ತಿಗಳ ಜಯಂತಿಗಳನ್ನು ಆಚರಿಸುವುದರೊಂದಿಗೆ ಅವರು ಹೇಳಿರುವ ಜೀವನ ಮೌಲ್ಯಗಳನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮರುಳಸಿದ್ದೇಶ್ವರ ಜನಕಲ್ಯಾಣ ಟ್ರಸ್ಟ್ ನ ಅಧ್ಯಕ್ಷ ಸಿದ್ದಲಿಂಗಯ್ಯ ಸಲಹೆ ನೀಡಿದರು.
ನಗರದ ನಂದಿನಿ ಹೋಟೆಲ್ ಸಭಾಂಗಣದಲ್ಲಿ ಸ್ನೇಹ ಮಿಲನ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾಗಿದ್ದ ಬಸವೇಶ್ವರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಿಮ್ಮ ಸಂಘಕ್ಕೆ ಯಾವುದೇ ರೀತಿಯ ಸಹಕಾರ ಬೇಕಿದ್ದರೂ ಮಾಡಲು ತಾನು ಸಿದ್ಧನಿದ್ದೇನೆ ಎಂದು ಭರವಸೆ ನೀಡಿದರು.
Also read: ಆಜಾದಿ ಕಾ ಅಮೃತ್ ಮಹೋತ್ಸವ್: ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ಮೋದಿ ವೀಡಿಯೊ ಸಂವಾದ
ಸಂಘದ ಅಧ್ಯಕ್ಷೆ ಕವಿತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಸಂಘದ ಸಹಕಾರ್ಯದರ್ಶಿ ರೇಣುಕಾ ಯಶೋಧ, ಪ್ರಧಾನ ಕಾರ್ಯದರ್ಶಿ ವತ್ಸಲಾ ರಮೇಶ್, ಮಮತಾ, ರೂಪ ಧನರಾಜ್, ಗೀತಾ ನಾಗರಾಜ್, ಮಂಜುಳಾ ರಮೇಶ್ ಹಾಗೂ ಸಂಘದ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post