ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಭದ್ರಾವತಿ ನಗರಸಭೆ ವ್ಯಾಪ್ತಿಯ ವಾರ್ಡ್ ನಂ. 22ರ ಬಿಳಿ ಕಟ್ಟೆ ಕೆರೆ ಮತ್ತು ಬಳಸ ಕಟ್ಟೆ ಕೆರೆ ತೆರವು ಕಾರ್ಯಾಚರಣೆ ಶುಕ್ರವಾರ ನಡೆಯಿತು.

ಸರ್ವೆ ನಂ. 13ರ ಬಿಳಿಕಟ್ಟೆ ಕೆರೆ ಮತ್ತು ಸರ್ವೆ ನಂ. 16ರ ಬಳಸಕಟ್ಟೆ ಕೆರೆ ಒಟ್ಟು10 ಎಕರೆ 18 ಗುಂಟೆ ವಿಸ್ತೀರ್ಣ ಹೊಂದಿದ್ದು, ಸುಮಾರು ಮೂರ್ನಾಲ್ಕು ದಶಕಗಳಿಂದ ಒತ್ತುವರಿಯಾಗಿತ್ತು. ವಿವಿಧ ಸಂಘ-ಸಂಸ್ಥೆಗಳಿಂದ ಕೆರೆ ಒತ್ತುವರಿ ತೆರವುಗೊಳಿಸುವಂತೆ ತಾಲೂಕು ಆಡಳಿತಕ್ಕೆ ದೂರುಗಳ ಬಂದ ಹಿನ್ನೆಲೆಯಲ್ಲಿ ಸರ್ವೆ ಕಾರ್ಯಕ್ಕೆ ಮುಂದಾಗಿ ನಗರಸಭೆ ಆಡಳಿತದೊಂದಿಗೆ ತೆರವು ಕಾರ್ಯಾಚರಣೆ ನಡೆಸಲಾಯಿತು.
Also read: ದೇವರ ಕಾಡು ಪಾರಂಪರಿಕ ಜೀವವೈವಿಧ್ಯ ತಾಣವಾಗಿ ಘೋಷಿಸಿರುವುದು ಹೆಮ್ಮೆಯ ಸಂಗತಿ: ಅನಂತಹೆಗಡೆ ಅಶಿಸರ

ತೆರವು ಕಾರ್ಯಾಚರಣೆಯಲ್ಲಿ ನಗರಸಭೆ ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳು ಪಾಲ್ಗೊಂಡಿದ್ದರು. ಪೇಪರ್ ಟೌನ್ ಪೊಲೀಸ್ ಠಾಣೆ ಸಿಬ್ಬಂದಿಗಳನ್ನು ಭದ್ರತೆಗೆ ನಿಯೋಜಿಸಲಾಗಿತ್ತು.

ಕಂದಾಯಾಧಿಕಾರಿ ಪ್ರಶಾಂತ್ ನಗರಸಭೆ ಇಂಜಿನಿಯರ್ ರಂಗರಾಜಪುರ ಮತ್ತು ಕಂದಾಯಾಧಿಕಾರಿ ರಾಜಕುಮಾರ್ ಪೊಲೀಸ್ ಇನ್ಸ್ ಪೆಕ್ಟರ್ ಈ ಓ ಮಂಜುನಾಥ್ ಸೇರಿದಂತೆ ಇನ್ನಿತರ ಅಧಿಕಾರಿಗಳು, ನಗರಸಭೆ ಮಾಜಿ ಸದಸ್ಯರಾದ ಬದರಿ ನಾರಾಯಣ, ವೆಂಕಟಯ್ಯ ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















