ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಇಂದು ಮುಂಜಾನೆ ಹಳೇನಗರ ಪೊಲೀಸರು ನಡೆಸಿದ ದಾಳಿಯಲ್ಲಿ ಬಂಧನಕ್ಕೆ ಒಳಗಾಗಿರುವ ಮೂವರು ಪಿಎಫ್’ಐ ಕಾರ್ಯಕರ್ತರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಲಾಗಿದೆ.
ರಾಜ್ಯದಾದ್ಯಂತ ಇಂದು ನಸುಕಿನಲ್ಲಿ ಪಿಎಫ್’ಐ ಹಾಗೂ ಎಸ್’ಡಿಪಿಐ ಕಾರ್ಯಕರ್ತರುಗಳ ನಿವಾಸಗಳ ಮೇಲೆ ಪೊಲೀಸರು ದಾಳಿ ನಡೆಸಿರುವಂತೆಯೇ ನಗರದಲ್ಲೂ ಸಹ ರೈಡ್ ಮಾಡಲಾಗಿದ್ದು, ಹಳೇನಗರ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಖಾಜಿ ಮೊಹೊಲ್ಲಾ ಕೋಟೆ ಏರಿಯಾದ ಇಬ್ಬರು ಹಾಗೂ ಅನ್ವರ್ ಕಾಲೋನಿಯ ಒಬ್ಬನನ್ನು ಬಂಧಿಸಿ, ತಹಶೀಲ್ದಾರ್ ಮುಂದೆ ಇಂದು ಬೆಳಗ್ಗೆ ಹಾಜರುಪಡಿಸಲಾಯಿತು. ಈ ಮೂವರನ್ನು ಒಂದು ವಾರಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ತಹಶೀಲ್ದಾರ್ ಅವರು ಆದೇಶಿಸಿದ್ದಾರೆ.
ಬಂಧಿತರನ್ನು ತಾಹಿರ್, ಸಾಧಿಕ್ ಹಾಗೂ ಖುರೇಷಿ ಎಂದು ಗುರುತಿಸಲಾಗಿದ್ದು, ಇಂದು ನಸುಕಿನ 3 ಗಂಟೆ ವೇಳೆಯಲ್ಲಿ ಈ ಮೂವರ ನಿವಾಸಗಳ ಮೇಲೆ ದಾಳೀ ನಡೆಸಿ ಬಂಧಿಸಲಾಗಿದೆ.
ಶಿವಮೊಗ್ಗದ ಇಬ್ಬರಿಗೆ ಜಾಮೀನು
ಇನ್ನು, ತಾಲೂಕು ದಂಡಾಧಿಕಾರಿಗಳೂ ಆದ ತಹಶೀಲ್ದಾರ್ ನಾಗರಾಜ್ ಅವರು, ರಾಗಿಗುಡ್ಡದ ಮನ್ಸೂರ್ ಅಲಿ ಖಾನ್ ಮತ್ತು ರಫಿಕ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಇದೇ ವೇಳೆ ಸೂಳೆಬೈಲಿನ ರಹೀಮ್ ಹಾಗೂ ಸೈಯ್ಯದ್ ಅವರುಗಳಿಗೆ ವೈಯಕ್ತಿಕ ಬಾಂಡ್ ಪಡೆದು ಜಾಮೀನು ಮಂಜೂರು ಮಾಡಿದ್ದಾರೆ.
Also read: ತಂತ್ರಜ್ಞಾನ ಸಂಶೋಧನಾ ಅಭಿವೃದ್ಧಿಯಿಂದ ದೇಶವು ಜಾಗತಿಕ ಮಟ್ಟದಲ್ಲಿ ಸಮೃದ್ಧವಾಗಲಿದೆ: ರಾಷ್ಟ್ರಪತಿ ದ್ರೌಪದಿ ಮುರ್ಮು
ಇವರುಗಳ ವಿರುದ್ಧ ಶಾಂತಿ, ಸುವ್ಯವಸ್ಥೆ ಕದಡುವ ಸಾಧ್ಯತೆ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ಕಾರ್ಯಕರ್ತರ ಬಂಧಿಸಿ, ಸೆಕ್ಷನ್ 107, 151 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post