ಬೆಂಗಳೂರು: 17ನೆಯ ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದ್ದು, ರಾಜ್ಯದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದೆ.
ಎಪ್ರಿಲ್ 18ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದರೆ ಎಪ್ರಿಲ್ 23ರಂದು 14 ಕ್ಷೇತ್ರಗಳಿಗೆ ಎರಡನೆಯ ಹಂತದ ಮತದಾನ ನಡೆಯಲಿದೆ.
ಯಾವ ಕ್ಷೇತ್ರದಲ್ಲಿ ಯಾವತ್ತು ಮತದಾನ? ಇಲ್ಲಿದೆ ಮಾಹಿತಿ:
ಎಪ್ರಿಲ್ 18: ಮೊದಲ ಹಂತದ ಮತದಾನ
- ಬೆಂಗಳೂರು ಸೆಂಟ್ರಲ್
- ಬೆಂಗಳೂರು ಉತ್ತರ
- ಬೆಂಗಳೂರು ದಕ್ಷಿಣ
- ಚಿಕ್ಕಬಳ್ಳಾಪುರ
- ಕೋಲಾರ
- ಚಾಮರಾಜನಗರ
- ಮಂಡ್ಯ
- ತುಮಕೂರು
- ಚಿತ್ರದುರ್ಗ
- ದಕ್ಷಿಣ ಕನ್ನಡ
- ಹಾಸನ
- ಉಡುಪಿ-ಚಿಕ್ಕಮಗಳೂರು
- ಮೈಸೂರು
- ದಕ್ಷಿಣ ಕನ್ನಡ
ಎಪ್ರಿಲ್ 23: ಎರಡನೆಯ ಹಂತದ ಮತದಾನ
- ಚಿಕ್ಕೋಡಿ
- ಬೆಳಗಾವಿ
- ಬಾಗಲಕೋಟೆ
- ಬೀದರ್
- ವಿಜಯಪುರ
- ಗುಲ್ಬರ್ಗಾ
- ರಾಯಚೂರು
- ಬೀದರ್
- ಕೊಪ್ಪಳ
- ಬಳ್ಳಾರಿ
- ಹಾವೇರಿ
- ಧಾರವಾಡ
- ಉತ್ತರ ಕನ್ನಡ
- ದಾವಣಗೆರೆ
- ಶಿವಮೊಗ್ಗ
ಮಾರ್ಚ್ 26 ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. ಮಾರ್ಚ್ 27 ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ಮಾರ್ಚ್ 29 ನಾಮಪತ್ರ ವಾಪಾಸ್ ಪಡೆಯಲು ಕೊನೆಯ ದಿನವಾಗಿದೆ. ಮಾರ್ಚ್ 28 ರಂದು ಮೂರನೇ ಹಂತದ ಚುನಾವಣೆಯ ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಏ. 4 ಕಡೆಯ ದಿನವಾಗಿದೆ.ಏ. 5 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏ. 8 ನಾಮಪತ್ರ ವಾಪಾಸ್ ಪಡೆಯಲು ಕಡೆಯ ದಿನವಾಗಿದೆ. ಮೇ 23 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
2014ರ ಲೋಕಸಭಾ ಚುನಾವಣೆಯಲ್ಲಿ ಒಟ್ಟು 54265 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಬಾರಿ 58186 ಮತಗಟ್ಟೆಗಳನ್ನು ಸ್ಥಾಪಿಸಲಾಗುತ್ತಿದ್ದು, ಶೇ. 7 ರಷ್ಟು ಏರಿಕೆಯಾಗಿದೆ ಎಲ್ಲಾ ಮತಗಟ್ಟೆಗಳಲ್ಲಿ ನೀರು, ಶೇಡ್, ಶೌಚಾಲಯ, ಮತ್ತಿತರ ಕನಿಷ್ಠ ಸೌಕರ್ಯಗಳನ್ನು ಒದಗಿಸಲಾಗುವುದು, ಎಲ್ಲಾ ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಹಾಗೂ ಇವಿಎಂಗಳನ್ನು ಬಳಸಲಾಗುವುದು. ಸೂಕ್ಷ್ಮ ಚಟುವಟಿಕೆಗಳ ಮೇಲೆ ನಿಗಾ ಇಡಲು ವಿಡಿಯೋ , ಡಿಜಿಟಲ್ ಕ್ಯಾಮರಾ ಹಾಗೂ ಕ್ಯಾಮರಾ ತಂಡವನ್ನು ನಿಯೋಜಿಸಲಾಗುವುದು, ಮುಕ್ತ ಹಾಗೂ ನ್ಯಾಯ ಸಮ್ಮತ ರೀತಿಯಲ್ಲಿ ಚುನಾವಣೆಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು.
Discussion about this post