ಬೆಂಗಳೂರು: ಜಮ್ಮುವಿನ ಪುಲ್ವಾಮಾದಲ್ಲಿ ಪಾಕ್ ಉಗ್ರರು ನಡೆಸಿದ ಭೀಕರ ದಾಳಿಗೆ ಭಾರತೀಯ ಸೇನೆಯ 42 ಉಗ್ರರು ವೀರಸ್ವರ್ಗ ಸೇರಿದ ಹಿನ್ನೆಲೆಯಲ್ಲಿ, ಇದಕ್ಕೆ ಪ್ರತೀಕಾರವಾಗಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿದ್ದ ಪಾಕ್ ಆಟಗಾರರ ಫೋಟೋಗಳನ್ನು ಕೆಎಸ್’ಸಿಎ ತೆರವುಳಿಸಿದೆ.
ಈ ಕುರಿತಂತೆ ಮಾತನಾಡಿರುವ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಹಂಗಾಮಿ ಕಾರ್ಯದರ್ಶಿ ಸುಧಾಕರ ರಾವ್, ಭಾರತೀಯ ಸೇನೆಯ ಮೇಲೆ ಪಾಕಿಸ್ಥಾನದ ಉಗ್ರರು ನಡೆಸಿದ ದಾಳಿ ಖಂಡನೀಯವಾಗಿದ್ದು, ಇದಕ್ಕೆ ಪ್ರತೀಕಾರವಾಗಿ ನಮ್ಮಲ್ಲಿದ್ದ ಎಲ್ಲ ಪಾಕ್ ಆಟಗಾರರ ಭಾವಚಿತ್ರಗಳನ್ನು ತೆರವುಗೊಳಿಸಿದ್ದೇವೆ ಎಂದಿದ್ದಾರೆ.
Karnataka State Cricket Association: We at Karnataka State Cricket Association to show our support to our armed forces & to express our strong protest against the recent terrorist bombing at Pulwama, we have brought down all photographs of Pakistan Cricketers including Imran Khan pic.twitter.com/TQDPxXAZ8c
— ANI (@ANI) February 20, 2019
ಮಾಜಿ ಕ್ರಿಕೆಟಿಗ ಹಾಲಿ ಪಾಕ್ ಪ್ರಧಾನಿ ಇಮ್ರಾನ್ ಖಾನ್, ಪಾಕಿಸ್ತಾನ ಕ್ರಿಕೆಟ್ ದಂತಕಥೆಗಳಾದ ವಾಸೀಂ ಅಕ್ರಂ ಮತ್ತು ಇಂಜಮಾಮ್ ಉಲ್ ಹಕ್ ಸೇರಿದಂತೆ ಎಲ್ಲ ಪಾಕ್ ಆಟಗಾರರ ಚಿತ್ರಗಳನ್ನು ಎರಡು ದಿನಗಳ ಹಿಂದೆ ತೆರವುಗೊಳಿಸಿದ್ದೇವೆ ಎಂದಿದ್ದಾರೆ.
ದೇಶದ ಪ್ರತಿಯೊಬ್ಬ ನಾಗರಿಕನಿಗೂ ದೇಶವೇ ಮೊದಲು. ಆ ಬಳಿಕವೇ ಉಳಿದದ್ದು. ನಮಗೂ ಕೂಡ ದೇಶ ಮೊದಲು ಎಂದು ರಾವ್ ದೇಶಪ್ರೇಮ ಮೆರೆದಿದ್ದಾರೆ.
Discussion about this post