ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಶಿಕಾರಿಪುರ ಪಟ್ಟಣದಲ್ಲಿ ತಾಲ್ಲೂಕು ಮಟ್ಟದ ಬಾಬು ಜಗಜೀವನ್ ರಾಂ ಭವನ ನಿರ್ಮಾಣಕ್ಕಾಗಿ ಸುಮಾರು 1 ಕೋಟಿ 50 ಲಕ್ಷಕ್ಕೂ ಅನುದಾನ ಬಿಡುಗಡೆ ಮಾಡಿ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯು ಆಗಿದ್ದು, ಹೀಗೆ ತಾಲ್ಲೂಕಿನಾದ್ಯಂತ ವಿವಿಧ ಆಯ್ದ ಗ್ರಾಮಗಳಲ್ಲಿ ಬಾಬು ಜಗಜೀವನ್ ರಾಂ ಭವನಗಳನ್ನು ನಿರ್ಮಾಣ ಮಾಡಲಾಗಿದೆ. ಈ ಸಮಾಜದ ವರ್ಗದ ಏಳಿಗೆಗಾಗಿ ಅನೇಕ ಯೋಜನೆಗಳಿವೆ ಅದನ್ನು ಸರಿಯಾಗಿ ಉಪಯೋಗಿಸುವ ಕೆಲಸವಾಗಬೇಕು ಎಂದು ಸಂಸದರಾದ ಬಿ. ವೈ ರಾಘವೇಂದ್ರ ಅವರು ತಿಳಿಸಿದರು.
ಶಿಕಾರಿಪುರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾ. ಆದಿ ಜಾoಭವ ನೌಕರರ ಕ್ಷೇಮಾಭಿವೃದ್ಧಿ ಸಂಘ, ನಿತ್ಯೋತ್ಸವ ಸೇವಾ ಟ್ರಸ್ಟ್ ಹಾಗೂ ದಲಿತ ಸಂಘರ್ಷ ಸಮಿತಿ ವತಿಯಿಂದ ಪ್ರತಿಭಾವಂತ ಮಕ್ಕಳಿಗೆ ಪುರಸ್ಕಾರ, ನಿವೃತ್ತ ನೌಕರರಿಗೆ ಹಾಗೂ ಸಾಧಕರಿಗೆ ಕಾರ್ಯಕ್ರಮವನ್ನು ಸಂಸದರಾದ ಬಿ ವೈ ರಾಘವೇಂದ್ರ ಅವರು ಉದ್ಘಾಟಿಸಿ, ಅವರು ಮಾತನಾಡಿದರು.

Also read: ನಿಮ್ಮ ಹಣ ಬೇಡ: ಸಿದ್ದರಾಮಯ್ಯ ಕೊಟ್ಟ ಹಣವನ್ನು ಅವರ ಕಾರಿನತ್ತ ಎಸೆದ ಮುಸ್ಲಿಂ ಮಹಿಳೆ
ಜಂಭೂ ದ್ವೀಪ ಎಂಬ ಹೆಸರು ನಮ್ಮ ಭಾರತಕ್ಕಿದೆ. ರಾಮಾಯಣದಲ್ಲಿ ಜಾoಭವಂತನ ಪುರಾಣದಲ್ಲಿ ಉಲ್ಲೇಖವಿದೆ. ಆರ್ಥಿಕವಾಗಿ ಸಾಮಾಜಿಕವಾಗಿ ಹಿಂದುಳಿದ ವರ್ಗದವರು ಮೀಸಲಾತಿಯನ್ನು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಆಗ ಮಾತ್ರ ಉಳ್ಳವರು ಹಣ ಮಾಡುವ ಚಾಳಿ ಕಡಿಮೆಯಾಗುತ್ತದೆ ಎಂದು ಹೇಳಿದರು.












Discussion about this post