ಶಿಕಾರಿಪುರ: ಶಿವಮೊಗ್ಗ ಲೋಕಸಭಾ ಉಪಚುನಾವಣೆಯ ಮತದಾನದ ಹಿನ್ನೆಲೆಯಲ್ಲಿ ಪ್ರತಿಪಕ್ಷ ನಾಯಕ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಹಿತ ಮತದಾನ ಮಾಡಿದರು.
ತಮ್ಮ ಪುತ್ರ ಬಿ.ವೈ. ರಾಘವೇಂದ್ರ ಹಾಗೂ ವಿಜಯೇಂದ್ರ ಸೇರಿದಂತೆ ಕುಟುಂಬ ಸದಸ್ಯರೊಂದಿಗೆ ಮತಗಟ್ಟೆಗೆ ಆಗಮಿಸಿದ ಯಡಿಯೂರಪ್ಪ ತಮ್ಮ ಹಕ್ಕು ಚಲಾಯಿಸಿದರು.
ನನ್ನ ಮತದಾನದ ಹಕ್ಕನ್ನು ಚಲಾಯಿಸಿದ್ದೇನೆ. ನೀವು..?
ತಪ್ಪದೇ ಚುನಾವಣೆಯಲ್ಲಿ ಭಾಗವಹಿಸಿ, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ… pic.twitter.com/dZij0kxnss— B.S. Yeddyurappa (@BSYBJP) November 3, 2018
ಮತದಾನಕ್ಕೂ ಮುನ್ನ ಹುಚ್ಚರಾಯ ಸ್ವಾಮಿ ದೇವಾಲಯಕ್ಕೆ ಕುಟುಂಬ ಸಹಿತ ಭೇಟಿ ನೀಡಿದ ಬಿಎಸ್ವೈ ವಿಶೇಷ ಪೂಜೆ ಸಲ್ಲಿಸಿದರು.
ಮತದಾನ ಮಾಡಿದ ನಂತರ ಮಾತನಾಡಿದ ಬಿಎಸ್ವೈ, ಮೂರೂ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Discussion about this post