ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶೈಕಣಿಕ ಪದವಿಯು ಬದುಕಿನಲ್ಲಿ ಮತ್ತೊಂದು ಮೈಲಿಗಲ್ಲಾಗಿದ್ದು ನಾವು ಪಡೆದ ಪದವಿ ದೇಶದ ಅಭ್ಯುದಯಕ್ಕೆ ಸಹಕಾರಿಯಾಗಲಿ ಎಂದು ಕುವೆಂಪು ವಿಶ್ವವಿದ್ಯಾಲಯ ಕುಲಸಚಿವರಾದ ಅನುರಾಧ.ಜಿ ಅಭಿಪ್ರಾಯಪಟ್ಟರು.
ಮಂಗಳವಾರ ನಗರದ ಜೆ.ಎನ್.ಎನ್.ಎಂಜಿನಿಯರಿಂಗ್ ಕಾಲೇಜಿನ JNNCE College ವತಿಯಿಂದ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಎಂಜಿನಿಯರಿಂಗ್, ಎಂ.ಬಿ.ಎ, ಎಂ.ಸಿ.ಎ ವಿಭಾಗದ ವಿದ್ಯಾರ್ಥಿಗಳ ಗ್ರಾಜುಯೇಷನ್ ಡೇ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು.
ಶಿಕ್ಷಣದ ನಂತರವೇ ಬದುಕಿನಲ್ಲಿ ನಿಜವಾದ ಸವಾಲುಗಳು ಎದುರಾಗುತ್ತದೆ. ಅಂತಹ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಬೇಕಿದೆ. ದೇಶದ ಅಭಿವೃದ್ಧಿಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರಮುಖ ಸ್ಥಾನ ಪಡೆದಿದ್ದು ಅಂತಹ ಅನೇಕ ನಾವಿನ್ಯಯುತ ಸಾಧನೆಗಳಿಗೆ ತಾಂತ್ರಿಕ ಪದವೀಧರರಾಗಿ ಹೊರಹೊಮ್ಮುತ್ತಿರುವ ತಮ್ಮೆಲ್ಲರ ಕೊಡುಗೆ ಹೆಚ್ಚಾಗಲಿ ಎಂದು ಹೇಳಿದರು.
Also read: ಪ್ರವೀಣ್ ಹತ್ಯೆ ಪ್ರಕರಣ: ಇನ್ನಿಬ್ಬರು ಆರೋಪಿಗಳ ಬಂಧನ
ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್ ಮಾತನಾಡಿ, ಪದವಿ ಪಡೆದುಕೊಳ್ಳುವುದು ಜೀವನದ ನಿಜವಾದ ಸಾಕ್ಷಾತ್ಕಾರವಲ್ಲ, ಬದುಕಿನ ದೀರ್ಘ ಆಯಾಮದಲ್ಲಿ ಅದೊಂದು ಘಟ್ಟ ಮಾತ್ರ. ಶಿಕ್ಷಣದ ಜೊತೆಗೆ ವ್ಯಕ್ತಿತ್ವ ಪ್ರಮುಖವಾಗಿದೆ. ವ್ಯಕ್ತಿ ಮತ್ತು ವ್ಯಕ್ತಿತ್ವದ ನಡುವೆ ಶಬ್ದದ ವ್ಯತ್ಯಾಸವಿದ್ದರು ವ್ಯಕ್ತಿತ್ವವಿಲ್ಲದ ಬದುಕು ವ್ಯರ್ಥವಾಗಿ ಬಿಡುತ್ತದೆ. ಬದುಕಿನಲ್ಲಿ ಯಶಸ್ಸು ಆಕಸ್ಮಿಕವಾಗಿ ಸಿಗುವ ವಸ್ತುವಲ್ಲ. ಅದರ ಹಿಂದೆ ದೀರ್ಘಕಾಲಿಕ ಪ್ರಯತ್ನ, ಕಠಿಣ ಪರಿಶ್ರಮ, ಕೌಶಲ್ಯಯುತ ಅನುಷ್ಟಾನ ಅವಶ್ಯಕ. ಹಾಗಾಗಿಯೇ ಶಿಕ್ಷಣದೊಂದಿಗೆ ಉತ್ತಮ ವ್ಯಕ್ತಿತ್ವ, ಕೌಶಲ್ಯತೆ, ಹೊಸತನದ ಚಿಂತನೆಗಳು ಅಳವಡಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿ ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಹೆಚ್.ಸಿ.ಶಿವಕುಮಾರ್, ಎನ್.ಟಿ.ನಾರಾಯಣರಾವ್, ಸೀತಾಲಕ್ಷ್ಮೀ, ಕುಲಸಚಿವರಾದ ಪ್ರೊ.ಟಿ.ಎಸ್.ಹೂವಯ್ಯಗೌಡ, ಪ್ರಾಂಶುಪಾಲರಾದ ಡಾ.ಕೆ.ನಾಗೇಂದ್ರಪ್ರಸಾದ್, ಶೈಕ್ಷಣಿಕ ಡೀನ್ ಡಾ.ಪಿ.ಮಂಜುನಾಥ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಶಲ್ಯದಲ್ಲಿ ಮಿಂಚಿದ ವಿದ್ಯಾರ್ಥಿಗಳು:
ಗ್ರಾಜುಯೇಷನ್ ಡೇ ಕಾರ್ಯಕ್ರಮದಲ್ಲಿ ಕಪ್ಪು ಗೌನ್ ಬದಲಾಗಿ ಪ್ರಾದೇಶಿಕ ಸಂಸ್ಕೃತಿಯಾದ ಶಲ್ಯದಲ್ಲಿ ವಿದ್ಯಾರ್ಥಿಗಳು ಮಿಂಚಿದ್ದು ವಿಶೇಷವಾಗಿತ್ತು. ಎನ್.ಇ.ಎಸ್ ಮತ್ತು ಜೆ.ಎನ್.ಎನ್.ಸಿ.ಇ ಕಾಲೇಜಿನ ಲಾಂಛನ ಹೊಂದಿದ್ದ ಶಲ್ಯ ಧರಿಸಿದ ವಿದ್ಯಾರ್ಥಿಗಳು ತಮ್ಮ ಸ್ನೇಹಿತರು ಗುರುಗಳೊಂದಿಗೆ ಫೋಟೋ ಸೆಲ್ಫಿಯಲ್ಲಿ ಸಂಭ್ರಮಿಸುತ್ತಿರುವುದು ಸಾಮಾನ್ಯವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post