ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೊಳಗ, ಪಾವು, ಸೇರು, ಅಡಿಕೆ ಸುಲಿಯುವ ಕತ್ತಿ, ಮೆಟ್ಟುಗತ್ತಿ, ದರಗಿನ ಕೊಕ್ಕೆ, ನೊಳ್ಳಿ, ಹಲಸಿನ ಹಣ್ಣುಗಳು, ನೊಳ್ಳಿ, ಕೈ ಕೊಡಲಿ, ಗೆರ್ಸಿ, ಬಾಯಿ ಕೊಕ್ಕೆ, ಹಾಳೆ ಕೊಟ್ಟೆ, ದೇಸಿಯ ಸಾಮಾಗ್ರಿಗಳು, ಗೊಂಬೆಗಳು ಹೀಗೆ ಆಧುನಿಕತೆಯ ಭರಾಟೆಗೆ ಸಿಲುಕಿ ಕಣ್ಮರೆಯಾಗುತ್ತಿರುವ ಮಲೆನಾಡಿನ ಬೇಸಾಯದ ಉಪಕರಣಗಳು ಅಲ್ಲಿ ಅನಾವರಣಗೊಂಡಿತ್ತು.
ಅಂತಹ ಮಲೆನಾಡ ವೈಭವದ ಪರಂಪರೆ ಅನಾವರಣಗೊಂಡಿದ್ದು ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ Shivamogga JNNCE ಎಂಬಿಎ ವಿಭಾಗದ ವತಿಯಿಂದ ಏರ್ಪಡಿಸಿದ್ದ ಮಲೆನಾಡು ಮೇಳ – 2022, Malenadu Mela-2022 ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ದೇಸಿಯ ಉಡುಗೆಯೊಂದಿಗೆ ಸಂಭ್ರಮಿಸಿದರು.
ರೂಪಾಂತರಗೊಳ್ಳುತ್ತಿರುವ ಮಲೆನಾಡನ್ನು ಉಳಿಸಿಕೊಳ್ಳಬೇಕಿದೆ :
ಮಲೆನಾಡಿನ ಬದುಕು ರೂಪಾಂತರಗೊಂಡಿದೆ ಅದರೇ ಸೊಗಡು ಹಾಗೆಯೇ ಉಳಿದಿದೆ. ರೂಪಾಂತರತೆ ಮೂಲಕ ಕಳೆದು ಹೋಗುತ್ತಿರುವ ಮೂಲ ಮಲೆನಾಡಿನ ಸೊಗಡನ್ನು ನಾವು ಉಳಿಸಿಕೊಳ್ಳಬೇಕಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಅಂದಿನ ದಿನಮಾನದಲ್ಲಿ ಒಮ್ಮೆಯೂ ಅವಲಕ್ಕಿ ಕೊಳ್ಳುವುದೇ ಗೊತ್ತಿರಲಿಲ್ಲ. ಮನೆಯಲ್ಲಿಯೇ ಒನಕೆ ಮೂಲಕ ಕುಟ್ಟಿ ಮಾಡುತ್ತಿದ್ದ ಅವಲಕ್ಕಿಯು ಅದ್ಭುತ ರುಚಿ ನೀಡುತ್ತಿತ್ತು. ಅದರೇ ಇಂದು ಎಲ್ಲವೂ ಕೃತಕವಾಗಿದೆ. ಎಲ್ಲವನ್ನು ಕೊಳ್ಳುವ ಶಕ್ತಿ ಪಡೆದುಕೊಂಡಿರಬಹುದು ಅದರೇ ಸಂಭ್ರಮಿಸುವ ಗುಣವನ್ನು ನಾವು ಕಳೆದುಕೊಂಡಿದ್ದೇವೆ ಎಂದು ವಿಷಾದಿಸಿದರು.
Also read: ಮುಖ್ಯ ರಸ್ತೆಯಲ್ಲಿದ್ದ ಗುಂಡಿಗಳನ್ನು ಮುಚ್ಚಿದ ಚಳ್ಳಕೆರೆ ತಹಶೀಲ್ದಾರ್ : ಸಾರ್ವಜನಿಕರ ಮೆಚ್ಚುಗೆ
ಕಾರ್ಯಕ್ರಮ ಉದ್ಘಾಟಿಸಿ ಖ್ಯಾತ ಉದ್ಯಮಿ ವಿಶ್ವನಾಥ ಕುಂಟುವಳ್ಳಿ ಮಾತನಾಡಿ, ಹಳ್ಳಿಗಳಲ್ಲಿಯೇ ಸಾಕಷ್ಟು ಅವಕಾಶಗಳು ದೊರೆಯುತ್ತಿರುವ ಈ ಹೊತ್ತಿನಲ್ಲಿ ಯುವ ಸಮೂಹ ಪಟ್ಟಣಗಳಿಂದ ಮಾತ್ರ ಭವಿಷ್ಯವೆಂಬ ಭ್ರಮೆಯಿಂದ ಹೊರಬಂದು ನಮ್ಮ ಊರುಗಳನ್ನು ಉನ್ನತಿಕರಣದತ್ತ ಕೊಂಡೊಯ್ಯುವಂತೆ ಶ್ರಮಿಸಬೇಕಿದೆ. ಹಳ್ಳಿಗಳಲ್ಲಿ ಲಭ್ಯವಿರುವ ದೇಶೀಯ ಸಂಪನ್ಮೂಲಗಳು ಸ್ವಾವಲಂಬಿಯಾಗಿ ಬದುಕು ನಡೆಸಲು ಪೂರಕ ವಾತಾವರಣ ನೀಡಲಿದ್ದು, ಗ್ರಾಮೀಣ ಕೈಗಾರಿಕೆಗಳ ಮೂಲಕ ಇರುವಲ್ಲಿಯೇ ಯಶಸ್ವಿ ಉದ್ಯಮಿಗಳಾಗಿ ಹೊರಹೊಮ್ಮಿ ಎಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಜೆ.ಎನ್.ಎನ್.ಸಿ.ಇ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೆ. ನಾಗೇಂದ್ರಪ್ರಸಾದ್ ಅಧ್ಯಕ್ಷತೆ ವಹಿಸಿದ್ದರು. ಪ್ರಗತಿಪರ ಕೃಷಿಕ ನಾಗಭೂಷಣ್ ಭಟ್ , ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್, ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ , ಎನ್.ಟಿ.ನಾರಾಯಣರಾವ್, ಹೆಚ್.ಸಿ.ಶಿವಕುಮಾರ್, ಎಂಬಿಎ ವಿಭಾಗದ ನಿರ್ದೇಶಕರಾದ ಡಾ.ಸಿ.ಶ್ರೀಕಾಂತ್, ಸಹ ಪ್ರಾಧ್ಯಾಪಕರಾದ ಡಾ.ಬಿ.ವಿ.ಶ್ರೀನಿವಾಸಮೂರ್ತಿ, ಪೋ.ಅನುರಾಧ, ಡಾ.ಸುಭದ್ರ , ಡಾ.ವಿಕ್ರಮ್. ವಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post