No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
  • Advertise With Us
  • Grievances
  • About Us
  • Contact Us
Wednesday, July 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಶೋಧನೆಗೆ ಹೊಸ ರೂಪಕೊಟ್ಟವರು ರಾಮಭಟ್ಟರು: ಬೆಕ್ಕಿನಕಲ್ಮಠ ಶ್ರೀ

kalpa News by kalpa News
June 7, 2022
in ಶಿವಮೊಗ್ಗ
0
ಸಂಶೋಧನೆಗೆ ಹೊಸ ರೂಪಕೊಟ್ಟವರು ರಾಮಭಟ್ಟರು: ಬೆಕ್ಕಿನಕಲ್ಮಠ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದಿ. ಬಿ.ಎಸ್. ರಾಮ ಭಟ್ಟರು ಮಲೆನಾಡಿನ ಅಪ್ಪಟ ಪ್ರತಿಭೆ. ಶಿವಮೊಗ್ಗ ಜಿಲ್ಲೆಯ ಐತಿಹಾಸಿಕ ಸ್ಥಳಗಳು, ಪುರಾತನ ಶಾಸನಗಳು ಮತ್ತು ದೇವಾಲಯಗಳ ಬಗ್ಗೆ ತಳಸ್ಪರ್ಶಿ ಅಧ್ಯಯನ ನಡೆಸಿ, ಬರೆದ ಲೇಖನಗಳು ತುಂಬ ಜನಪ್ರಿಯವಾಗಿದ್ದವು. ಅದರಲ್ಲಿಯೂ ಕೆಳದಿ ಸಂಸ್ಥಾನದ ಬಗ್ಗೆ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾಡಿದ ಕಾರ್ಯ ಶ್ಲಾಘನೀಯ ಎಂದು ಬೆಕ್ಕಿನ ಕಲ್ಮಠದ ಶ್ರೀ ಗಳಾದ ಡಾ.ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾ ಸ್ವಾಮಿಗಳು ಹೇಳಿದರು.

ಅವರು ಎಂ.ಎನ್. ಸುಂದರ ರಾಜ್ ಸಂಪಾದಿಸಿರುವ ದಿ.ಬಿ.ಎಸ್. ರಾಮಭಟ್ಟರ “ಗೊಂಚಲು” ಸಮಗ್ರ ಸಾಹಿತ್ಯವನ್ನು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ರಾಮಭಟ್ಟರ ವ್ಯಕ್ತಿತ್ವದ ಬಗ್ಗೆ ಪ್ರಸ್ತಾಪಿಸಿದ ಶ್ರೀ ಗಳು ಸರಳತೆ, ಸಜ್ಜನಿಕೆಗೆ ಮತ್ತೊಂದು ಹೆಸರೇ ಅವರಾಗಿದ್ದರು. ಪ್ರಾಥಮಿಕ ಶಾಲೆ ಶಿಕ್ಷಕರಾಗಿ, ಸ್ವ ಸಾಮರ್ಥ್ಯದಿಂದ ಖಾಸಗಿಯಾಗಿ ಕಲಿತು, ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾಗಿ ವಿದ್ಯಾರ್ಥಿಗಳಲ್ಲಿ ಮೆಚ್ಚುಗೆ ಗಳಿಸಿದ್ದರು. ನಿರಹಂಕಾರದ ಮೂರ್ತಿಯಾಗಿದ್ದ ಶ್ರೀ ಯುತರ ಸಮಗ್ರ ಸಾಹಿತ್ಯ ಅಧ್ಯಯನಶೀಲರಿಗೆ ಮಾರ್ಗದರ್ಶಿಯಾಗಿರಲಿ ಎಂದು ಹಾರೈಸಿದರು.

ರಾಮಭಟ್ಟರ ಇತಿಹಾಸ ಪ್ರಜ್ಞೆ ಕುರಿತು ನಿವೃತ್ತ ಉಪನ್ಯಾಸಕ ಎಸ್.ಜಿ. ಸಾಮಕ್ ಮಾತನಾಡಿ, ಆಳವಾದ ಅಧ್ಯಯನ ದಿಂದ ಎಲ್ಲರ ಮನಸೂರೆಗೊಂಡಿದ್ದ ರಾಮಭಟ್ಟ ಅವರು, ಐತಿಹಾಸಿಕ ವಿಷಯ ಸಂಗ್ರಹಣೆಯಲ್ಲಿ ಅವರ ಬದ್ಧತೆ, ವಿಷಯ ನಿರೂಪಣಾ ಶೈಲಿ ಅನುಕರಣೀಯವಾಗಿತ್ತು ಎಂದು ಶ್ಲಾಘಿಸಿದರು.

ಮತ್ತೊಬ್ಬ ಸಂಶೋಧಕ ಡಾ. ಕೆಳದಿ ವೆಂಕಟೇಶ ಜೋಯಿಸ್ ಮಾತನಾಡಿ, “ರಾಮ ಭಟ್ಟರು ಬರೆದ ಕವಿತೆಗಳು, ನಾಟಕಗಳು, ಕಾದಂಬರಿ ಸಹ ಅವರನ್ನು ಅಪೂರ್ವ ಬರಹಗಾರರನ್ನಾಗಿ ಮಾಡಿದೆ. ಅವರು ರಚಿಸಿದ ಸಾಹಿತ್ಯ ನಮ್ಮ ಯುವ ಸಾಹಿತಿಗಳಿಗೆ ದಾರಿದೀಪವಾಗಿವೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಗೊಂಚಲು ಕೃತಿಯ ಪ್ರಧಾನ ಸಂಪಾದಕ ಎಂ.ಎನ್. ಸುಂದರ ರಾಜ್ ಮಾತನಾಡಿ, ದಿ. ರಾಮಭಟ್ಟರಂತಹ ಅಸಮಾನ್ಯ ಲೇಖಕರ ಸಮಗ್ರ ಸಾಹಿತ್ಯವನ್ನು ಹೊರತರುವ ಕಾರ್ಯ ತಮಗೆ ಅತೀವ ಆನಂದವನ್ನುಂಟು ಮಾಡಿದೆ. ಅವರ ಲೇಖನದ ಕೆಲ ಸಂಗತಿಗಳನ್ನು ಉಲ್ಲೇಖಿಸಿ, ಅವರ ಲೇಖನಗಳಲ್ಲಿ ಹಲವಾರು ವಿಷಯಗಳು ಓದುಗನಿಗೆ ಚಿಂತೆಗೆ ಹಚ್ಚುತ್ತದೆ ಎಂದು ಅಭಿಪ್ರಾಯಪಟ್ಟರು.

Also read: ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಬಂಧನೆಗಳನ್ನು ಸರಳಗೊಳಿಸಿ

ಕೃತಿಯನ್ನು ಹೊರತರುವಲ್ಲಿ ರಾಮಭಟ್ಟರ ಕುಟುಂಬವರ್ಗದವರ ಸಹಕಾರವನ್ನು ಕೃತಜ್ಞತೆಯಿಂದ ಸ್ಮರಿಸಿದರು. ಅಮೂಲ್ಯ ಲೇಖನಗಳ ಗುಚ್ಛವಾದ ಈ ಕೃತಿ ವಿದ್ಯಾರ್ಥಿಗಳಗೆ, ಸಂಶೋದಕರಿಗೆ ಮತ್ತು ಸಾಹಿತ್ಯಾಸಕ್ತರಿಗೆ ಅಕರ ಗ್ರಂಥವಾಗಿದೆ ಎಂಬುದನ್ನು ಮನವರಿಕೆ ಮಾಡಿಕೊಟ್ಟರು. ಹಲವಾರು ಗ್ರಾಮಗಳ ಹೆಸರುಗಳ ಹಿಂದಿನ ಇತಿಹಾಸವನ್ನು ಲೀಲಾಜಾಲವಾಗಿ ವಿವರಿಸುತ್ತಿದ್ದ ಪ್ರತಿಭೆಯನ್ನು ಕೊಂಡಾಡಿದರು.


ರಾಮಭಟ್ಟರ ಸಾಧನೆ ಮತ್ತು ವ್ಯಕ್ತಿತ್ವದ ಬಗ್ಗೆ ಕತ್ತಿಗೆ ಚನ್ನಪ್ಪ ಮತ್ತು ಮಾರ್ಪಳ್ಳಿ ಮಂಜುನಾಥ್ ಮಾತನಾಡಿದರು. ಪ್ರಾರಂಭದಲ್ಲಿ ಕು.ಪನ್ನಗಳಿಂದ ಪ್ರಾರ್ಥನೆ, ಶ್ರೀಕಂಠಮೂರ್ತಿಯವರಿಂದ ಸ್ವಾಗತ ಮತ್ತು ಪದ್ಮನಾಭ ಜೋಯಿಸ್ ಅವರಿಂದ ವಂದನಾರ್ಪಣೆ ನಡೆಯಿತು. ಜಿ.ವಿಜಯ ಕುಮಾರ್ ಮತ್ತು ರುಕ್ಮಿಣಿ ಆನಂದ್ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆ ಮತ್ತು ಮಾರಾಟ ನಿಬಂಧನೆಗಳನ್ನು ಸರಳಗೊಳಿಸಿ

Next Post

ವಿಶ್ವ ಪರಿಸರ ದಿನ : ಸಸಿ ನೆಡುವ ಮೂಲಕ ಎಸ್. ದತ್ತಾತ್ರಿ ಕಾರ್ಯಕ್ರಮಕ್ಕೆ ಚಾಲನೆ

kalpa News

kalpa News

Next Post
ವಿಶ್ವ ಪರಿಸರ ದಿನ : ಸಸಿ ನೆಡುವ ಮೂಲಕ ಎಸ್. ದತ್ತಾತ್ರಿ ಕಾರ್ಯಕ್ರಮಕ್ಕೆ ಚಾಲನೆ

ವಿಶ್ವ ಪರಿಸರ ದಿನ : ಸಸಿ ನೆಡುವ ಮೂಲಕ ಎಸ್. ದತ್ತಾತ್ರಿ ಕಾರ್ಯಕ್ರಮಕ್ಕೆ ಚಾಲನೆ

Leave a Reply Cancel reply

Your email address will not be published. Required fields are marked *

No Result
View All Result
A.G. Srinivas assumes charge as Additional General Manager of SWR
English Articles

A.G. Srinivas assumes charge as Additional General Manager of SWR

by kalpa News
June 30, 2026
0

Kalpa Media House  | Hubballi | Shri A.G. Srinivas, an officer of the Indian Railway Service of Engineers (IRSE) of...

Read moreDetails
V. Somanna Dedicates ₹22.40 Crore Road Over Bridge at Yelekeri Gate

V. Somanna Dedicates ₹22.40 Crore Road Over Bridge at Yelekeri Gate

June 30, 2026
Mysore - Shivamogga - Talguppa Train

Cancellation, Regulation and Diversion of Trains

June 27, 2026
Surprise Inspection for Enhanced Passenger Safety

Surprise Inspection for Enhanced Passenger Safety

June 27, 2026
Henkel appoints Pradhyumna Ingle as Country President for India

Henkel appoints Pradhyumna Ingle as Country President for India

June 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL