Thursday, November 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೇಸರಿಯಲ್ಲಿ ಮಿಂದೆದ್ದ ಶಿವಮೊಗ್ಗ: ಗಣಪತಿ ರಾಜಬೀದಿ ಉತ್ಸವಕ್ಕೆ ಹರಿದು ಬಂದ ಜನಸಾಗರ…

ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರದ ನಡುವೆ ಶಾಂತಿಯುತ ಮೆರವಣಿಗೆ

September 9, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಪೊಲೀಸರ ಬಿಗಿ ಬಂದೋಬಸ್ತ್, ಯುವಕರ ಸಂಭ್ರಮೋತ್ಸವ, ಕಲಾತಂಡಗಳ ಸಡಗರಗಳ ನಡುವೆ ಶಾಂತಿಯುತವಾಗಿ ಸಾಗುತ್ತಿದ್ದು, ಮಾರ್ಗದುದ್ದಕ್ಕೂ ಅಪಾರ ಸಂಖ್ಯೆಯ ಜನ ವೀಕ್ಷಿಸಲು ಕಾಯುತ್ತಿದ್ದ ದೃಶ್ಯ ಸಾಮಾನ್ಯವಾಗಿದೆ.

ಬಜರಂಗದಳ, ವಿಶ್ವ ಹಿಂದು ಪರಿಷತ್, ಹಿಂದು ಮಹಾಸಭಾ ಸೇರಿದಂತೆ ಹಿಂದು ಪರ ಸಂಘಟನೆಗಳ ಕಾರ್ಯಕರ್ತರು, ಅಪಾರ ಸಂಖ್ಯೆಯಲ್ಲಿ ಭಕ್ತರು ಮೆರವಣಿಗೆಯಲ್ಲಿ ಭಾಗವಹಿಸಿದ್ದಾರೆ. ಭಗವಾಧ್ವಜ ಹಿಡಿದು ಯುವಕರು ಜೈ ಶ್ರೀ ರಾಮ ಘೋಷಣೆ ಕೂಗುತ್ತಿದ್ದರು. ಇಡೀ ಶಿವಮೊಗ್ಗ ನಗರ ಕೇಸರಿಮಯವಾಗಿದೆ. ಎಸ್‌ಪಿಎಂ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿಬಜಾರ್, ಶಿವಪ್ಪನಾಯಕ ವೃತ್ತ, ಅಮೀರ್ ಅಹಮ್ಮದ್ ವೃತ್ತ, ಬಿ.ಹೆಚ್.ರಸ್ತೆ, ಅಶೋಕವೃತ್ತ, ನೆಹರೂ ರಸ್ತೆ, ಗೋಪಿವೃತ್ತ, ದುರ್ಗಿಗುಡಿ, ಮಹಾವೀರ ವೃತ್ತ, ಬಾಲರಾಜ್ ಅರಸು ರಸ್ತೆ ಸೇರಿದಂತೆ ಪ್ರಮುಖ ವೃತ್ತ ಹಾಗೂ ರಸ್ತೆಗಳಲ್ಲಿ ಕೇಸರಿ ಬಾವುಟ, ಬ್ಯಾನರ್, ಬಂಟಿಂಗ್ಸ್ ರಾರಾಜಿಸುತ್ತಿವೆ. ಪ್ರಮುಖ ವೃತ್ತಗಳನ್ನು ಕೇಸರಿ ಧ್ವಜಗಳಿಂದ ಅಲಂಕರಿಸಲಾಗಿದೆ. ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಸಾಗುವ ಮಾರ್ಗದುದ್ದಕ್ಕೂ ತಳಿರು ತೋರಣಗಳು ಕೇಸರಿ ಬಾವುಟಗಳನ್ನು ಕಟ್ಟಲಾಗಿದೆ.
ಅಮೀರ್ ಅಹಮ್ಮದ್ ವೃತ್ತದಲ್ಲಿ ವೀರ ಸಾವರ್ಕರ್ ಬೃಹತ್ ಫ್ಲೆಕ್ಸ್ ಹಾಕಲಾಗಿದೆ. ಇಡೀ ವೃತ್ತ ಕೇಸರಿ ಮಯವಾಗಿದೆ. ನೆಹರೂ ರಸ್ತೆಯಲ್ಲಿ ಭಗತ್‌ಸಿಂಗ್, ಸ್ವಾಮಿ ವಿವೇಕಾನಂದ, ಅಂಬೇಡ್ಕರ್, ರಾಣಾ ಪ್ರತಾಪ್ ಸಿಂಹ, ಸರ್ದರ್ ವಲ್ಲಭ ಬಾಯಿ ಪಟೇಲ್, ಸುಭಾಷ್ ಚಂದ್ರ ಬೋಸ್, ಪುರಂದರ ದಾಸರು, ಝಾನ್ಸಿರಾಣಿ ಲಕ್ಷ್ಮೀ ಬಾಯಿ ಸೇರಿದಂತೆ ಅನೇಕ ಮಹನೀಯರ ಕಟೌಟ್‌ಗಳನ್ನು ಹಾಕಲಾಗಿದೆ.

ಗಾಂಧಿಬಜಾರ್‌ನ ಪ್ರವೇಶದ್ವಾರದಲ್ಲಿ ಕುರುಕ್ಷೇತ್ರದಲ್ಲಿ ಶ್ರೀಕೃಷ್ಣ ಪರಮಾತ್ಮನ ಸಾರಥ್ಯದಲ್ಲಿ ಅರ್ಜುನ ಯುದ್ಧ ಮಾಡುತ್ತಿರುವ ಪ್ರತಿಕೃತಿಯನ್ನು ಸ್ಥಾಪಿಸಲಾಗಿದ್ದು, ಇದು ಎಲ್ಲರ ಗಮನ ಸೆಳೆಯುತ್ತಿದೆ. ಕೆಜಿಎಫ್-2 ಚಿತ್ರದಲ್ಲಿ ಕಲಾ ವಿಭಾಗದಲ್ಲಿ ಕೆಲಸ ಮಾಡಿರುವ ಓತಿಘಟ್ಟದ ಜೀವನ್ ಇದನ್ನು ನಿರ್ಮಿಸಿದ್ದಾರೆ. ನಿನ್ನೆ ರಾತ್ರಿಯಿಂದಲೇ ಈ ದೃಶ್ಯವನ್ನು ಅಪಾರ ಸಂಖ್ಯೆ ಜನಸ್ತೋಮ ಸೇರಿ ಕಣ್ತುಂಬಿಕೊಳ್ಳುತ್ತಿದ್ದುದು ಕಂಡು ಬಂತು. ಯುವಕ, ಯುವತಿಯರು ಫೋಟೋ, ಸೆಲ್ಪಿ ತೆಗೆದುಕೊಳ್ಳುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಶಿವಪ್ಪನಾಯಕ ವೃತ್ತದಲ್ಲಿ ಶ್ರೀರಾಮಚಂದ್ರ, ವಿಷ್ಣು ದಶಾವತಾರ, ಆಂಜನೇಯ, ಡಾ.ಬಿ.ಆರ್. ಅಂಬೇಡ್ಕರ್ ಕಟೌಟ್ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಲಾಗಿದೆ.
ಇನ್ನು ರಾಜಬೀದಿಯ ಮಾರ್ಗದಲ್ಲಿ ಯುವಕರ ದಂಡು ಬೈಕ್‌ಗಳಲ್ಲಿ ಜೈ ಶ್ರೀರಾಮ್ ಎಂದು ಕೂಗುತ್ತಾ ಸಾಗುತ್ತಿದ್ದರು. ಇನ್ನೂ ವಿಶೇಷವೆಂದರೆ ಗಣಪತಿಯ ರಾಜಬೀದಿ ಉತ್ಸವಕ್ಕೆ ಸ್ವಾಗತ ಕೋರುವ ಫೆಕ್ಸ್‌ಗಳ ಮಾರ್ಗದುದ್ದಕ್ಕೂ ಪುನಿತ್ ರಾಜ್‌ಕುಮಾರ್, ಪ್ರವೀಣ್ ನೆಟ್ಟಾರು, ಹಿಂದೂ ಹರ್ಷನ ಭಾವಚಿತ್ರ ಹಾಕಲಾಗಿದೆ. ಮಾರ್ಗದುದ್ದಕ್ಕೂ ವಿವಿಧ ಸಂಘಟನೆಗಳವರು ಗಣಪತಿಗೆ ಬೃಹತ್ ಹಾರಗಳನ್ನು ಹಾಕಲು ಸಿದ್ಧತೆ ನಡೆಸಿದ್ದರು.

Also read: ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

ಇನ್ನು ಮೊದಲು ಡಿಜೆಗೆ ಅವಕಾಶ ನೀಡದ ಪೊಲೀಸ್ ಇಲಾಖೆ ಒತ್ತಡ ಹೆಚ್ಚಾಗಿದ್ದರಿಂದ ಡಿಜೆಗೆ ಅವಕಾಶ ಕಲ್ಪಿಸಿದ್ದು, ಗೋಪಿ ವೃತ್ತದಲ್ಲಿ ಡಿಜೆ ನೃತ್ಯಕ್ಕಾಗಿ ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಮೆರವಣಿಗೆ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ನಗರದ ಎಲ್ಲೆಡೆ ಬಿಗಿ ಬಂದೋಬಸ್ತ್ ಕಲ್ಪಿಸಲಾಗಿದೆ. ಸಿಸಿ ಟಿವಿ, ದಿವ್ಯದೃಷ್ಠಿ ಕಣ್ಗಾವಲು ಹಾಗೂ ಡ್ರೋಣ್ ಕ್ಯಾಮೆರಾಗಳಲ್ಲಿ ಪ್ರತಿ ಹಂತದಲ್ಲೂ ಎಚ್ಚರಿಕೆ ವಹಿಸಲಾಗಿದೆ. ಎಎ ಸರ್ಕಲ್‌ನಲ್ಲಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಆರ್‌ಎಫ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪೊಲೀಸರು ವಿಶೇಷವಾಗಿ ಮಫ್ತಿಯಲ್ಲಿ ಇದ್ದು ನಿಗಾ ವಹಿಸುತ್ತಿದ್ದುದು ಕಂಡುಬಂದಿತು.

ಹೆಚ್ಚಿನ ಭದ್ರತೆಗಾಗಿ ಮೂರು ಸಾವಿರಕ್ಕೂ ಅಧಿಕ ಪೊಲೀಸರನ್ನು ಹೊರ ಜಿಲ್ಲೆಗಳಿಂದ ಕರೆಸಿಕೊಳ್ಳಲಾಗಿದೆ. ಎರಡು ಎಎಸ್ಪಿ, 19 ಡಿವೈಎಸ್ಪಿ, 40 ಪೊಲೀಸ್ ಇನ್ಸ್‌ಪೆಕ್ಟರ್, 71 ಪೊಲೀಸ್ ಸಬ್ ಇನ್ಸ್‌ಪೆಕ್ಟರ್, 1970 ಪೊಲೀಸ್ ಸಿಬ್ಬಂದಿ, 700 ಗೃಹರಕ್ಷಕ ಸಿಬ್ಬಂದಿ, 200 ಸಿಬ್ಬಂದಿಗಳನ್ನೊಳಗೊಂಡ ಆರ್‌ಎಎಫ್ ತುಕಡಿ, 15 ಕೆಎಸ್‌ಆರ್‌ಪಿ ತುಕಡಿ, 15 ಡಿ.ಎ.ಆರ್ ತುಕಡಿ, ಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ.

ಮುನ್ನಚ್ಚರಿಕೆ ಕ್ರಮವಾಗಿ ನಗರದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಒಟ್ಟಾರೆಯಾಗಿ ಹಿಂದೆಂದಿಗಿಂತಲೂ ಅದ್ದೂರಿಯಾಗಿ ಗಣಪತಿ ರಾಜಬೀದಿ ಉತ್ಸವ ಸಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ದಾಖಲೆಗಳಿಲ್ಲದೆ ಹಣ ಇಟ್ಟುಕೊಂಡಿದ್ದ ಮೂವರ ಬಂಧನ; 76 ಲಕ್ಷ ಹಣ, 3 ಮೊಬೈಲ್ ಸಿಸಿಬಿ ಪೋಲಿಸ್ ವಶ

Next Post

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ಶಿವಮೊಗ್ಗ : ಭದ್ರಾ ನಾಲೆಗೆ ಬಿದ್ದು ಪಿಯುಸಿ ವಿದ್ಯಾರ್ಥಿ ಆತ್ಮಹತ್ಯೆ‌!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025

ಕರುನಾಡನ್ನು ಕುಣಿಸಲು ಮತ್ತೆ ಮರಳಿ ಬಂದ ಡಾನ್ಸ್ ಕರ್ನಾಟಕ ಡಾನ್ಸ್ | ನ.15 ರಿಂದ ನಿಮ್ಮ ಜೀ ಕನ್ನಡದಲ್ಲಿ!

November 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬಾಳೆ ತೋಟದ ಆರೈಕೆ ಮಾಡುವುದು ಹೇಗೆ? ಕೀಟರೋಗ ಮುಕ್ತ ಉತ್ಪಾದನೆಗೆ ದಾರಿ

November 13, 2025

ಕುಕ್ಕೆ ಸುಬ್ರಹ್ಮಣ್ಯಕ್ಕೆ ನಟಿ ನಯನತಾರಾ ದಂಪತಿ ಭೇಟಿ | ಸರ್ಪ ಸಂಸ್ಕಾರ ಪೂಜೆ

November 13, 2025

ಉಗ್ರ ರೂಪಕ್ಕೆ ಕಬ್ಬು ಬೆಳೆಗಾರರ ಹೋರಾಟ : 50ಕ್ಕೂ ಅಧಿಕ ಟ್ರಾಕ್ಟರ್’ಗಳು ಧಗ ಧಗ

November 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!