ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕುರುಬ ಸಮಾಜಕ್ಕೆ ಎಸ್’ಟಿ ಮೀಸಲಾತಿ ನೀಡುವ ಕುರಿತಾಗಿ ಕುಲಶಾಸ್ತ್ರ ಅಧ್ಯಯನ ನಡೆಯುತ್ತಿದ್ದು, ಇದರ ವರದಿ ನಂತರ ನಿರ್ಧಾರ ಕೈಗೊಂಡು ಅನುಕೂಲವನ್ನು ರಾಜ್ಯ ಸರ್ಕಾರ ಮಾಡಿಕೊಡುತ್ತದೆ ಎಂದು ಶಾಸಕ ಕೆ.ಎಸ್. ಈಶ್ವರಪ್ಪ MLA Eshwarappa ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ದಲಿತರಿಗೆ ಮೀಸಲಾತಿ ನೀಡಿ, 10 ವರ್ಷಗಳಲ್ಲಿ ಅವರು ಎಲ್ಲ ಸೌಲಭ್ಯಗಳನ್ನು ಬಳಸಿಕೊಂಡು ಎಲ್ಲ ಸಮುದಾಯದ ಸರಿಸಮಕ್ಕೆ ಬರಬೇಕು ಎನ್ನುವುದು ಅಂಬೇಡ್ಕರ್ ಅವರ ಆಸೆಯಾಗಿತ್ತು. ಆದರೆ, ಸ್ವಾತಂತ್ರ ಬಂದು 75 ವರ್ಷವಾದರೂ ಅದು ಈಡೇರಿಲ್ಲ. ಇಂದಿಗೂ ಬಹಳಷ್ಟು ದಲಿತರಿಗೆ ಶಿಕ್ಷಣವಿಲ್ಲ, ಉದ್ಯೋಗವಿಲ್ಲ, ಆಹಾರವಿಲ್ಲ. ಹೀಗಾಗಿ, ಇದನ್ನು ಸಕಾರಗೊಳಿಸುವ ಭಾಗವಾಗಿ ರಾಜ್ಯ ಸರ್ಕಾರ ನಿನ್ನೆ ಮೀಸಲಾತಿ ಹೆಚ್ಚಿಸಿದ್ದು, ಈ ನಿರ್ಧಾರ ಸ್ವಾಗತಾರ್ಹ ಎಂದರು.
Also read: ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನವಿದೆ, ಆದರೆ…! ಶಾಸಕ ಈಶ್ವರಪ್ಪ ಹೇಳಿದ್ದೇನು?
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post