ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಮೀಪದ ಅನುಪಿನಕಟ್ಟೆಯ ಅರಣ್ಯಇಲಾಖೆಯ ಡಿಪೋದಲ್ಲಿ ಸಸಿನೆಡುವ ಕಾರ್ಯಕ್ರಮ, ಪುರದಾಳು ಡ್ಯಾಮ್ ಸುತ್ತ ಮುತ್ತಲು ಪ್ಲಾಸ್ಟಿಕ್ ಆರಿಸುವ ಮೂಲಕ ಕುವೆಂಪು ವಿಶ್ವವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ, ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗ ಮತ್ತು ಪರೋಪಕಾರಂ ತಂಡ, ಶಿವಮೊಗ್ಗ ಇವರ ಸಹಯೋಗದೊಂದಿಗೆ ವಿಶ್ವಪರಿಸರ ದಿನಾಚರಣೆ ಆಚರಿಸಲಾಯಿತು.
ನಂತರ ಶೆಟ್ಟಿಹಳ್ಳಿ ಅಭಯಾರಣ್ಯದಲ್ಲಿ ಬೀಜ ಬಿತ್ತನೆ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕಾರ್ಯಕ್ರಮ ಸಂಯೋಜನಾಧಿಕಾರಿಗಳಾದ ಡಾ. ನಾಗರಾಜ್ ಪರಿಸರ ಇವರು ಮಾತನಾಡಿ ಪರಿಸರ ದಿನಾಚರಣೆಯ ಮಹತ್ವವನ್ನು ತಿಳಿಸುತ್ತಾ ಇರುವುದೊಂದೇ ಭೂಮಿ ಅದರ ರಕ್ಷಣೆ ನಮ್ಮ ನಿಮ್ಮೆಲ್ಲರ ಹೊಣೆ ಎಂದು ತಿಳಿಸಿದರು.
Also read: ಆರ್ಎಸ್ಎಸ್ ದೇಶಭಕ್ತ ಸಂಘಟನೆ: ಅನಾವಶ್ಯಕ ಟೀಕೆ ಸರಿಯಲ್ಲ – ಸಂಸದ ರಾಘವೇಂದ್ರ
ಅರಣ್ಯ ಇಲಾಖೆಯ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುರೇಶ್, ಆರ್.ಎಫ್.ಓ ಪಿ. ಎಸ್. ಹಾಲುಬಾವಿ ಮತ್ತು ತಂಡದವರು, ಪರೋಪಕಾರಂ ಸಂಸ್ಥೆಯ ಶ್ರೀಧರ್ ಮತ್ತು ತಂಡದವರು ಭಾಗವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post