ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಯೋಗವು ಮನಸ್ಸು ದೇಹ ಮತ್ತು ಆತ್ಮಗಳನ್ನು ಶುದ್ದೀಕರಿಸಲು ನೆರವಾಗುತ್ತದೆ. ಅಲ್ಲದೆ ಪ್ರಕೃತಿಯ ನಡುವೆ ಅವಿನಾಭಾವ ಸಂಬಂಧ ಮೂಡಿಸುವ ಜೊತೆಗೆ ವಿಶ್ವದ ಜೊತೆಗೆ ಏಕತೆಯ ಸಂದೇಶವನ್ನು ಸಾರುತ್ತದೆ, ಯೋಗದ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಪಡೆದುಕೊಳ್ಳೋಣ ಎಂದು ಸಂಸದ ಬಿ. ವೈ. ರಾಘವೇಂದ್ರ MP Raghavendra ಹೇಳಿದರು.
ನಗರದ ನೆಹರು ಕ್ರೀಡಾಂಗಣದಲ್ಲಿ ನಡೆದ 8 ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಅವರು ಭಾಗವಹಿಸಿ ಮಾತನಾಡಿದ ಅವರು, ವಿಶ್ವದಾದ್ಯಂತ ಇಂದು ಅಂತರರಾಷ್ಟ್ರೀಯ ಯೋಗ ದಿನವನ್ನು “ಮಾನವೀಯತೆಗಾಗಿ ಯೋಗ” ಎಂಬ ಥೀಮ್ನೊಂದಿಗೆ ಆಚರಿಸಲಾಗುತ್ತಿದೆ. ಎಲ್ಲರಿಗೂ ವಿಶ್ವ ಯೋಗ ದಿನಾಚರಣೆಯ ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ಡಿ. ಎಚ್. ಶಂಕರಮೂರ್ತಿ ಮತ್ತು ಹಿರಿಯ ಯೋಗಪಟುಗಳಾದ ಡಾ. ಬಾ. ಸು. ಅರವಿಂದ್, ಡಾ. ಭ.ಮ. ಶ್ರೀಕಂಠ ಅವರನ್ನ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಅವದೂತ ಶ್ರೀ ವಿನಯ್ ಗುರೂಜಿ ಆಶೀರ್ವಚನ ನೀಡಿದರು. ಶಾಸಕ ಕೆ. ಎಸ್. ಈಶ್ವರಪ್ಪ, ವಿಭಾಗೀಯ ಪ್ರಭಾರಿ ಗಿರೀಶ್ ಪಟೇಲ್, ಯೋಗ ಶಿಕ್ಷಣ ಸಮಿತಿಯ ಅಧ್ಯಕ್ಷ ಡಾ. ಹೆಚ್.ವೈ. ಸಂಜಯ್ ಕುಮಾರ್ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post