ಕಲ್ಪ ಮೀಡಿಯಾ ಹೌಸ್ | ಸೊರಬ |
ತಾಲೂಕಿನ ಮಾವಲಿ ಗ್ರಾಮದ ಶ್ರೀ ಉಮಾಮಹೇಶ್ವರ ಗ್ರಾಮಾಂತರ ಪ್ರೌಢ ಶಾಲೆಯ ಪ್ರಸಕ್ತ ಸಾಲಿನ ಆಡಳಿತ ಮಂಡಳಿಯಲ್ಲಿ ಎಸ್ಸಿ-ಎಸ್ಟಿ ಸಮುದಾಯದ ಯಾವುದೇ ಸದಸ್ಯರು ಇಲ್ಲವಾಗಿದ್ದು, ಸಂಪೂರ್ಣವಾಗಿ ಆಡಳಿತ ಮಂಡಳಿಯು ದಲಿತ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕು ಸಂಚಾಲಕ ಮಹೇಶ್ ಶಕುನವಳ್ಳಿ ಆರೋಪಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸರ್ಕಾರದ ನಿಮಯಗಳನ್ನು ಗಾಳಿಗೆ ತೂರಿರಿರುವ ಶಾಲಾ ಆಡಳಿತ ಮಂಡಳಿಯ ಮಾನ್ಯತೆಯನ್ನು ರದ್ದುಪಡಿಸಬೇಕು. ಹಾಗೂ ಮುಂದಿನ ಏಳು ದಿನಗಳಲ್ಲಿ ಎಸ್.ಜೆ. ರಾಮಚಂದ್ರ ಅವರಿಗೆ ಮುಂಬಡ್ತಿ ನೀಡಿ ನ್ಯಾಯ ಒದಗಿಸಬೇಕು. ಇಲ್ಲವಾದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮುಂಭಾಗದಲ್ಲಿ ನಿರಂತರ ಧರಣಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಡಿಎಸ್ಎಸ್ ರಾಜ್ಯ ವಿಭಾಗೀಯ ಸಂಚಾಲಕ ಗುರುರಾಜ್, ಜಿಲ್ಲಾ ಸಂಘಟನಾ ಸಂಚಾಲಕ ಬಂಗಾರಪ್ಪ ನಿಟ್ಟಕ್ಕಿ, ತಾಲೂಕು ಸಂಘಟನಾ ಸಂಚಾಲಕ ನಾಗರಾಜ್ ಹುರಳಿಕೊಪ್ಪ ಉಪಸ್ಥಿತರರಿದ್ದರು.










Discussion about this post