Sunday, July 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಶಿವಮೊಗ್ಗ: ಮಹಿಳೆಯರೇ ನಿರ್ಮಿಸಿದ ಕೆರೆ, ಊರಿಗಾಯಿತು ಆಸರೆ

August 23, 2022
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ವಿಶೇಷ ಲೇಖನ  |

ಭಾರತವು ಹಳ್ಳಿಗಳಿಂದ ಕೂಡಿದ ದೇಶವಾಗಿದ್ದು, ಇಲ್ಲಿಯ ಬಹುಪಾಲು ಜನರು ತಮ್ಮ ಜೀವನೋಪಾಯಕ್ಕೆ ಕೃಷಿ ಮತ್ತು ಕೂಲಿಯನ್ನೆ ನಂಬಿ ಬದುಕು ನಡೆಸುತ್ತಿದ್ದಾರೆ. ಭಾರತ ಸರ್ಕಾರವು ಗ್ರಾಮೀಣ ಭಾಗದ ಜನರ ಕಲ್ಯಾಣಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಈ ಯೋಜನೆಗಳ ಲಾಭ ಪಡೆದು ಇಂದು ಗ್ರಾಮೀಣ ಭಾಗದಲ್ಲಿ ಹಲವಾರು ಕಾಮಗಾರಿಗಳು ಯಶಸ್ವಿಯಾಗಿವೆ.
ಹೀಗೆಯೆ ಮಹಾತ್ಮ ಗಾಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಅನುಕೂಲ ಪಡೆದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಖಂಡಿಕಾ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಕುಗ್ವೆ ಗ್ರಾಮದ ಜನರು ತಮ್ಮ ಊರಿನಲ್ಲಿ ಲಭ್ಯವಿರುವ ಸರ್ಕಾರಿ ಖಾಲಿ ಜಾಗದಲ್ಲಿ ಕೆರೆಯನ್ನು ನಿರ್ಮಿಸಿದ್ದಾರೆ.

ಕುಗ್ವೆ ಗ್ರಾಮದ ಹೊಸ ಕೆರೆ ಕಾಮಗಾರಿಯ ವಿಶೇಷವೆಂದರೆ ಕೆರೆ ನಿರ್ಮಾಣದಲ್ಲಿ ಗ್ರಾಮದ ಮಹಿಳೆಯರೇ ಹೆಚ್ಚಾಗಿ ಕಾರ್ಯ ನಿರ್ವಹಿಸಿರುವುದು.

ಖಂಡಿಕಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಗ್ವೆ ಗ್ರಾಮವು ಸಾಗರ ಪಟ್ಟಣ ಪ್ರದೇಶಕ್ಕೆ ಹೊಂದಿಕೊಂಡಂತೆ ಇದೆ. ಗ್ರಾಮದಲ್ಲಿ 189 ಕುಟುಂಬಗಳು ವಾಸವಾಗಿದ್ದು ಇಲ್ಲಿನ ಬಹುಪಾಲು ಜನರು ಕೃಷಿಯನ್ನೇ ಅವಲಂಬಿಸಿದ್ದಾರೆ.
ಕಾಮಗಾರಿಯ ಅನುಷ್ಠಾನ:
ಕುಗ್ವೆ ಗ್ರಾಮದಲ್ಲಿನ ನೂರಾರು ಮಹಿಳಾ ಕೂಲಿ ಕಾರ್ಮಿಕರು ಉದ್ಯೋಗ ನೀಡುವಂತೆ ಖಂಡಿಕಾ ಗ್ರಾಮ ಪಂಚಾಯ್ತಿಗೆ ಅರ್ಜಿ ಸಲ್ಲಿಸಿದಾಗ, ಇದರ ಬಗ್ಗೆ ಗಮನ ಹರಿಸಿದ ಗ್ರಾಮ ಪಂಚಾಯ್ತಿಯು, ಗ್ರಾಮದಲ್ಲಿನ 150 ರಿಂದ 180 ಜನರಿಗೆ ಏಕ ಕಾಲದಲ್ಲಿ ಕೂಲಿ ಕೆಲಸ ನೀಡಲು ಕುಗ್ವೆ ಗ್ರಾಮದ ಸರ್ವೆ ನಂ. 22 ರಲ್ಲಿನ 3 ಎಕರೆ ಸರ್ಕಾರಿ ಖಾಲಿ ಜಾಗದಲ್ಲಿ ಕೆರೆ ನಿರ್ಮಿಸಲು ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯಿತು. ನಂತರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮಾರ್ಗಸೂಚಿಯನ್ವಯ ಕಾಮಗಾರಿಯನ್ನು ಅನುಷ್ಠಾನಗೊಳಿಸಲಾಯಿತು.

ಇಲ್ಲಿಯವರೆಗೆ ಖಂಡಿಕಾ ಗ್ರಾಮ ಪಂಚಾಯ್ತಿಯ ವ್ಯಾಪ್ತಿಯಲ್ಲಿ ಇರುವ ಕೆರೆಗಳಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕೇವಲ ಹೂಳೆತ್ತುವ ಕಾಮಗಾರಿ ಮಾತ್ರ ಅನುಷ್ಠಾನಗೊಳ್ಳುತ್ತಿತ್ತು, ಆದರೆ ಹೊಸ ಪ್ರಯೋಗವೆಂಬಂತೆ ಹೊಸದಾಗಿ ಕೆರೆ ನಿರ್ಮಿಸಲು ಮುಂದಾದ ಗ್ರಾಮ ಪಂಚಾಯತ್ ಆಡಳಿತ, ಗ್ರಾ. ಪ. ಸದಸ್ಯರು, ಪಿ.ಡಿ.ಒ. ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ನೂತನವಾಗಿ ನಿರ್ಮಾಣವಾಗುವ ಕೆರೆಯ ಒಳ ಮತ್ತು ಹೊರ ಹರಿವುಗಳ ಬಗ್ಗೆ ಪೂರ್ಣ ಪರಿಶೀಲನೆ ನಡೆಸಿ ರೈತರಿಗೆ ಮತ್ತು ಸಾರ್ವಜನಿಕರಿಗರಿಗೆ ಹಾಗೂ ಪ್ರಾಣಿ ಪಕ್ಷಿಗಳಿಗೆ ಅನುಕೂಲವಾಗುವ ಪ್ರದೇಶದಲ್ಲಿ ಕೆರೆ ನಿರ್ಮಿಸಲು ನಿರ್ಧರಿಸಿತು.
ಮಹಿಳೆಯರಿಂದಲೇ ಕೆರೆ ನಿರ್ಮಾಣ:
ಅಂದಾಜು ಮೊತ್ತ ರೂ.10 ಲಕ್ಷಗಳಲ್ಲಿ ಮಹಿಳೆಯರೇ ಮುಂದಾಳತ್ವ ವಹಿಸಿ ಕರೆ ನಿರ್ಮಿಸಿರುವುದ ಈ ಕೆರೆ ವಿಶೇಷ. ಒಟ್ಟು 146 ಜನ ಕೂಲಿ ಕಾರ್ಮಿಕರಲ್ಲಿ 134 ಜನ ಮಹಿಳೆಯರೇ ಭಾಗವಹಿಸಿದ್ದಾರೆ. ಕೆರೆ ನಿರ್ಮಾಣ ಕಾಮಗಾರಿಯಲ್ಲಿ ಒಟ್ಟು 2997 ಮಾನವ ದಿನಗಳು ಸೃಜನೆಯಾಗಿದ್ದು ನಿಗದಿತ ಸಮಯದೊಳಗೆ ಕೂಲಿ ಪಾವತಿಯಾಗಿದೆ. ಸದರಿ ಕಾಮಗಾರಿಯಲ್ಲಿ ಒಟ್ಟು 8 ಜನ ಮಹಿಳಾ ಮೇಟ್‍ಗಳು ಕೆಲಸ ನಿರ್ವಹಿಸಿದ್ದು, ಮೇಟ್‍ಗಳು ಗ್ರಾಮದ ಮಹಿಳೆಯರಿಗೆ ನರೇಗಾ ಯೋಜನೆಯಡಿ ದೊರೆಯುವ ಕೂಲಿ ಹಾಗೂ ಅವರ ಕೆಲಸದ ಕುರಿತು ಸರಿಯಾದ ಮಾಹಿತಿ ನೀಡಿ ತಮ್ಮ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ.

Also read: ಶಿವಮೊಗ್ಗ ಪಾಲಿಕೆ ಆಡಳಿತ ಪಕ್ಷದ ನಾಯಕರ ಕಚೇರಿಯಲ್ಲಿ ವೀರ ಸಾವರ್ಕರ್ ಫೋಟೋ ಅನಾವರಣ

ಕಾಮಗಾರಿಯ ಉಪಯೋಗ:
ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಾಣಗೊಂಡ ಹೊಸ ಕೆರೆ ಕಾಮಗಾರಿಯಿಂದಾಗಿ ಕುಗ್ವೆ ಗ್ರಾಮದ ಮಹಿಳಾ ಕೂಲಿ ಕಾರ್ಮಿಕರಿಗೆ ಉದ್ಯೋಗದ ಜೊತೆಗೆ, ಕೆರೆಯ ಸುತ್ತ ಮುತ್ತಲಿನ ಕೊಳವೆ ಬಾವಿ ಹಾಗೂ ಸಾರ್ವಜನಿಕ ಬಾವಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಇದರಿಂದಾಗಿ ರೈತರಿಗೆ ಬೇಸಿಗೆಯಲ್ಲೂ ಭತ್ತ ಬೆಳೆಯಲು ಅನೂಕೂಲವಾಗಿದೆ. ಇದರ ಜೊತೆಗೆ ಪ್ರಾಣಿ ಪಕ್ಷಿಗಳು ಹಾಗೂ ಗ್ರಾಮದ ಸುಮಾರು 50 ಕುಟುಂಬಗಳ ಜಾನುವಾರುಗಳಿಗೂ ಅನುಕೂಲವಾಗಿರುವುದು ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ.

ಹೊಸ ಕೆರೆ ನಿರ್ಮಾಣದಲ್ಲಿ ನಾವುಗಳು ಶ್ರಮವಹಿಸಿ ಭಾಗವಹಿಸಿದ್ದೆವು, ಜೊತೆಗೆ ಗ್ರಾಮದ ಮಹಿಳೆಯರಿಂದಲೇ ಕೆರೆ ನಿರ್ಮಾಣವಾಗಿರುವುದು ಸಂತಸದ ವಿಷಯವಾಗಿದೆ.
– ನಾರಾಯಣಪ್ಪ ಗ್ರಾ. ಪಂ. ಸದಸ್ಯರು

ಮಹಾತ್ಮ ಗಾಧಿ ನರೇಗಾ ಯೋಜನೆಯನ್ನು ಬಳಸಿಕೊಂಡು ಖಂಡಿಕಾ ಗ್ರಾಮ ಪಂಚಾಯ್ತಿ ಉತ್ತಮ ಕೆಲಸಕ್ಕೆ ಕೈ ಹಾಕಿದೆ. ಪ್ರತಿಯೊಬ್ಬರಿಗೂ ಅಗತ್ಯವಾದ ನೀರನ್ನು ಉಳಿಸಲು ಮತ್ತು ಸಂರಕ್ಷಿಸಲು ಪ್ರಯತ್ನ ಮಾಡಿ ಅದರಲ್ಲಿ ಯಶಸ್ವಿಯಾಗಿದೆ.
– ಮಹಾಲೇಶ್ವರನಾಯ್ಕ, ಗ್ರಾಮಸ್ಥರು.

ನಗರೀಕರಣ ಆದಂತೆಲ್ಲ್ಲಾ ಸಾರ್ವಜನಿಕ ಪ್ರದೇಶಗಳ ಸುತ್ತಮುತ್ತಲಿನ ನೀರಿನ ಮೂಲವಾದ ಕೆರೆಗಳು ಒತ್ತುವರಿಯಾಗಿ ನಶಿಸುತ್ತಿವೆ. ಇಂತಹ ಸಂದರ್ಭದಲ್ಲಿ ಕೆರೆಗಳನ್ನು ನಿರ್ಮಿಸುವುದು ಮತ್ತು ಇರುವ ಕೆರೆಗಳನ್ನು ಪುನರುಜ್ಜೀವನಗೋಳಿಸಿ, ಮುಂದಿನ ಪೀಳಿಗೆಗೆ ನೀರನ್ನು ಸಂರಕ್ಷಿಸಿಡುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿಯಾಗಿದೆ. ಜೀವಜಲದ ಮೂಲಗಳು ಕಣ್ಮರೆಯಾಗುತ್ತಿರುವ ಈ ಸಮಯದಲ್ಲಿ ಮಾದರಿಯೆಂಬಂತೆ ಖಂಡಿಕಾ ಗ್ರಾಮ ಪಂಚಾಯ್ತಿ ಹಾಗು ಕುಗ್ವೆ ಗ್ರಾಮದ ಮಹಿಳೆಯರು ಸರ್ಕಾರದ ಯೋಜನೆಯ ಸದುಪಯೋಗ ಪಡೆದುಕೊಂಡು ಹೊಸ ಕೆರೆಯನ್ನು ನಿರ್ಮಿಸಿ ಇತರರಿಗೂ ಪ್ರೇರಣೆಯಾಗಿದ್ದಾರೆ.
ವರದಿ: ರಿಥೇಶ ನಾಯ್ಕ್, ಅಪ್ರೆಂಟೀಸ್, ವಾರ್ತಾ ಇಲಾಖೆ ಶಿವಮೊಗ್ಗ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿವಿಶೇಷ ಲೇಖನಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗ ಪಾಲಿಕೆ ಆಡಳಿತ ಪಕ್ಷದ ನಾಯಕರ ಕಚೇರಿಯಲ್ಲಿ ವೀರ ಸಾವರ್ಕರ್ ಫೋಟೋ ಅನಾವರಣ

Next Post

ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವೀರಶೈವ-ಲಿಂಗಾಯತ ಸಮುದಾಯದ ಏಳಿಗೆಗಾಗಿ ನಿರಂತರ ಪ್ರಯತ್ನ: ಎಸ್. ಎಸ್. ಜ್ಯೋತಿಪ್ರಕಾಶ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!