ಮೈಸೂರು: ವಿಶ್ವದಲ್ಲೇ ಖ್ಯಾತಿವೆತ್ತ ಕನ್ನಡಿಗರ ನಾಡಹಬ್ಬ ಮೈಸೂರು ದಸರಾಗೆ ಇಂದು ಮುಂಜಾನೆ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ಅಧಿಕೃತ ಚಾಲನೆ ನೀಡಿದರು.
ಇಂದು ಮುಂಜಾನೆ 7.05ರಿಂದ 7.35ಕ್ಕೆ ಸಲ್ಲುವ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಚಾಮುಂಡಿ ಬೆಟ್ಟದಲ್ಲಿ ನಾಡದೇವತೆ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ, ದೇವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ವಿದ್ಯುಕ್ತ ಸಾಂಪ್ರದಾಯಿಕ ಚಾಲನೆ ನೀಡಿದರು.
ಉದ್ಘಾಟನೆ ಹಿನ್ನೆಲೆಯಲ್ಲಿ ತಮ್ಮ ಕುಟುಂಬದ 20 ಆಪ್ತ ಸದಸ್ಯರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದ ಸುಧಾಮೂರ್ತಿ ಅವರು ದಂಪತಿ ಸಮೇತ ನಾಡದೇವತೆಗೆ ಪೂಜೆ ಸಲ್ಲಿಸಿದರು.
ಸುಧಾಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಸಚಿವೆ ಜಯಮಾಲಾ, ಸಚಿವರಾದ ಜಿ.ಟಿ. ದೇವೇಗೌಡ, ಸಾ.ರಾ.ಮಹೇಶ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ ಇದ್ದರು.
ದಸರಾ ಉದ್ಘಾಟನೆಗಾಗಿ ನಿನ್ನೆ ಸಂಜೆಯೇ ವಿಶೇಷ ವಿಮಾನದಲ್ಲಿ ಕುಟುಂಬ ಸಮೇತ ಬಂದಿಳಿದ ಸುಧಾಮೂರ್ತಿ ದಂಪತಿಗಳನ್ನು ಜಿಲ್ಲಾಡಳಿತದ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಇನ್ನು ಈ ಕುರಿತಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಅಧಿಕೃತ ಟ್ವಿಟರ್ನಲ್ಲಿ ಟ್ವೀಟ್ ಮಾಡಿದ್ದು, ನಾಡಿನ ಜನತೆಗೆ ಅವರು ನವರಾತ್ರಿಯ ಶುಭಾಶಯ ಕೋರಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಹಬ್ಬ ಇಂದಿನಿಂದ ಆರಂಭವಾಗುತ್ತಿದೆ. ಸರಳವಾಗಿ ಆದರೆ ಸುಂದರವಾಗಿ ದಸರಾ ಆಚರಿಸಲು ಈ ಬಾರಿ ನಿರ್ಧರಿಸಲಾಗಿದೆ. ಕರ್ನಾಟಕದ ಹೆಮ್ಮೆಯ ದಸರಾ ಎಲ್ಲರ ಮನದಲ್ಲಿ ಉಳಿಯುವಂತೆ ಮಾಡೋಣ.#MysuruDasara #Dasara #Nadahabba
— CM of Karnataka (@CMofKarnataka) October 10, 2018
Extending you all wishes for a great festive season of Dasara. Happy to be part of the celebrations with my beloved Mysureans. #Dasara festivities to be opened today by Ms. Sudha Murty, who is a symbol of simplicity & compassion, & inspires all of us with her selfless work.
— CM of Karnataka (@CMofKarnataka) October 10, 2018
Discussion about this post