No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Thursday, March 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂತಾರಾಷ್ಟ್ರೀಯ

ಅಮೆರಿಕಾದ ಕೊಲಂಬಸ್‌ನಲ್ಲಿ ರಾಧಾ ಕೃಷ್ಣ ವಾಸುದೇವ ಮಹಾಯಜ್ಞ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 16, 2016
in ಅಂತಾರಾಷ್ಟ್ರೀಯ
0
Share on FacebookShare on TwitterShare on WhatsApp
ಕೊಲಂಬಸ್: ಅಮೆರಿಕಾದ ಕೊಲಂಬಸ್ ನಗರದ ಭಾರತೀಯ ಹಿಂದೂ ದೇವಾಲಯದಲ್ಲಿ ನಾಲ್ಕು ದಿನಗಳ ಕಾಲ ಕಳೆದ ವಾರ ನಡೆದ ಶ್ರೀರಾಧಾ ಕೃಷ್ಣ ವಾಸುದೇವ ಮಹಾಯಜ್ಞ ಆಯೋಜನೆ ಮಾಡಲಾಗಿತ್ತು.
ವರದಿ: ಶಂಕರ್ ಅಜ್ಜಂಪುರ, ಒಮಾಹಾ, ಅಮೆರಿಕಾ
ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸದವಕಾಶ ನನ್ನದಾಗಿತ್ತು. ಇದು ಸುದರ್ಶನ ಹೋಮದ ಕ್ರಮವನ್ನೇ ಆಧರಿಸಿದ ಕಲಾಪವಾಗಿದ್ದರೂ ಇದನ್ನು ಆಯೋಜಿಸಿದ ಭಕ್ತಾದಿಗಳಲ್ಲಿ ಹೆಚ್ಚಿನವರು ಗುಜರಾತಿನವರಾದ್ದರಿಂದ ಮೇಲ್ಕಂಡಂತೆ ಹೆಸರಿಸಲಾಗಿತು.್ತ
ದೇವನೊಬ್ಬ ನಾಮ ಹಲವು ಎಂಬ ಪ್ರಚಲಿತ ನುಡಿಗಟ್ಟಿನ ಮುಂದುವರೆದ ಭಾಗವಾಗಿ ಕಾಣುವ ದಕ್ಷಿಣೋತ್ತರ ರಾಜ್ಯಗಳ, ಪೂರ್ವ ಪಶ್ಚಿಮ ರಾಜ್ಯಗಳ ಪೂಜಾವಿಧಿಗಳಲ್ಲೂ ವೈವಿಧ್ಯತೆ ಕಾಣಬರುತ್ತದೆ. ಭಾರತದಲ್ಲಿರುವಾಗ ಇಂಥ ಅವಕಾಶ ಕಾಣಸಿಕ್ಕದು ಮತ್ತು ಅದು ಅವಶ್ಯವೂ ಅಲ್ಲ.
ಭಾರತದ ಪ್ರತಿ ರಾಜ್ಯದಲ್ಲಿ ಇರುವ ಪೂಜಾ ಪರಂಪರೆಗಳು ಆಯಾ ರಾಜ್ಯದ ವಿಶೇಷದ ಭಾಗವಾಗಿ ಮಾತ್ರ ಪರಿಗಣಿತವಾಗುತ್ತದೆಯೇ ವಿನಾ, ಅದನ್ನೊಂದು ಸಂಕಲಿತ ರೂಪದಲ್ಲಿ ನೋಡಲು ದೊರೆಯುವುದು ಅಪರೂಪ. ಈ ಕಾರಣಗಳಿಂದಾಗಿ ಇಲ್ಲಿ ನಡೆದ ಕಾರ್ಯಕ್ರಮವು ಹಿಂದೂಸ್ತಾನಿ, ಕರ್ನಾಟಕ ಸಂಗೀತಗಳ ಜುಗಲ್ ಬಂದಿ ಕಾರ್ಯಕ್ರಮದಂತೆ ಇತ್ತು.  ಏಕೆಂದರೆ ಭಾರತದ ಎಲ್ಲ ರಾಜ್ಯಗಳ ನಿವಾಸಿಗಳು ನೆಲೆಯಾಗಿರುವ ಇಂಥ ಎಡೆಗಳಲ್ಲಿ, ಆಯಾ ರಾಜ್ಯಗಳಲ್ಲಿ ಪ್ರಚಲಿತವಿರುವ ಆಚರಣೆಯ ವಿಧಾನಗಳನ್ನು ಅನುಸರಿಸಬೇಕಾದುದು ಅನಿವಾರ್ಯವಾಗುತ್ತದೆ. ಅಂತೆಯೇ ದೈವಸನ್ನಿಧಿಗಳು, ಪೂಜಾ ವ್ಯವಸ್ಥೆ ಕೂಡ. ಕೊಲಂಬಸ್‌ನ ಭಾರತೀಯ ಹಿಂದೂ ದೇವಾಲಯದಲ್ಲಿ ಗಣಪತಿ, ಶಿವ, ಅಯ್ಯಪ್ಪ, ವೆಂಕಟೇಶ್ವರ, ವೈಷ್ಣೋದೇವೀ, ಸುಭದ್ರಾ, ಬಲಭಧ್ರ ಮತ್ತು ಜಗನ್ನಾಥ, ಶ್ರೀರಾಮ ಮುಂತಾಗಿ ಪ್ರತ್ಯೇಕ ಕೋಣೆಗಳಲ್ಲಿ ಪ್ರತಿಷ್ಠಾಪಿಸಲಾಗಿದೆ.
ಪ್ರತಿ ವಾರವೂ ಆಯಾ ದೇವತೆಗಳನ್ನು ಉದ್ದೇಶಿಸಿ, ಒಂದೊಂದು ದಿನ ವಿಶೇಷ ಪೂಜೆಗಳು ಜರುಗುತ್ತವೆ. ಪ್ರತಿ ವರ್ಷವೂ ನಾಲ್ಕಾರು ಉತ್ಸವ, ಯಜ್ಞಗಳನ್ನು ಆಚರಿಸುವ ಪದ್ಧತಿಯಂತೆ ನಡೆದ ಈ ಹವನದಲ್ಲಿ ದಕ್ಷಿಣ ಭಾರತ ಹಾಗೂ ಉತ್ತರ ಭಾರತದ ಪುರೋಹಿತರು, ಋತ್ವಿಜರು ಪಾಲ್ಗೊಂಡಿದ್ದರು. ಉತ್ತರ ಭಾರತದಲ್ಲಿ ಮಂತ್ರಗಳನ್ನು ಪಠಿಸುವ ಪದ್ಧತಿಯು ದಕ್ಷಿಣಕ್ಕಿಂತ ಭಿನ್ನವಾಗಿರುತ್ತದೆ. ಆದರೆ ಮಂತ್ರಗಳು ಮಾತ್ರ ಒಂದೇ. ನಾಲ್ಕು ವೇದಗಳಲ್ಲಿನ ಪೂಜಾರಾಧನೆಯ ಮಂತ್ರಗಳನ್ನು ಆರಿಸಿಕೊಂಡು, ಅವುಗಳನ್ನು ಸೂಕ್ತವಾಗಿ ಸಂಯೋಜಿಸಿ, ನಡೆಸಿದ ಪೂಜಾ ಕ್ರಮವನ್ನು, ಪೌರೋಹಿತ್ಯದ ಪರಿಚಯವುಳ್ಳವರು ಮಾತ್ರವೇ ಆಸ್ವಾದಿಸುವಂಥ ವಾತಾವರಣ ಎಲ್ಲೆಡೆಯಲ್ಲೂ ಇರುವುದು ಸಾಮಾನ್ಯ.
ವಿದೇಶದಲ್ಲಿ ನೆಲೆಸಿರುವ ಕಾರಣಕ್ಕೆ, ಭಾರತೀಯ ಸಂಸ್ಕೃತಿಯ ಬೇರುಗಳು ಕಡಿತವಾಗಬಾರದೆಂಬ ಭಾವ, ಭಾರತಕ್ಕಿಂತ ವಿದೇಶೀ ನೆಲದಲ್ಲಿ ಬಾಧಿಸುವುದು ಸ್ವಾಭಾವಿಕವೇ ಸರಿ. ಅದೇ ರೀತಿ, ಇದನ್ನು ಸರಿತೂಗಿಸುವಂತೆ ಇತ್ತೀಚಿನ ದಿನಗಳಲ್ಲಿ  ಕಂಡುಬರುತ್ತಿರುವ ಉತ್ತಮ ಬೆಳವಣಿಗೆಯೆಂದರೆ, ತಾವು ಮಾಡುತ್ತಿರುವ ಕಲಾಪದ ವಿವರಗಳನ್ನು ಕಾರ್ಯಕ್ರಮದ ನಡುವೆಯೇ ನೀಡುವಂಥ ವ್ಯವಸ್ಥೆ ಇಲ್ಲಿತ್ತು. ಎಂಟು ಹವನ ಕುಂಡಗಳು ಹಾಗೂ ಒಂದು ಪ್ರಧಾನ ಕುಂಡಗಳಲ್ಲಿ ನಡೆಸಲಾದ ಈ ಕಾರ್ಯಕ್ರಮದ ಆಚಾರ್ಯತ್ವವನ್ನು ವಹಿಸಿದ್ದ ಶ್ರೀಪ್ರಕಾಶ ಚತುರ್ವೇದಿಯವರು ಏಕಕಾಲದಲ್ಲಿ ಎಲ್ಲ ಉಪಕುಂಡಗಳ ಆಚಾರ್ಯರಿಗೆ ಮಾರ್ಗದರ್ಶನ ಮಾಡಿದರು.
ಹೆಸರಿಗೆ ಮಾತ್ರವೇ ಚತುರ್ವೇದಿಯಾಗಿರದ ಅವರು ಸಂಸ್ಕೃತ, ಹಿಂದಿ ಮತ್ತು ಇಂಗ್ಲೀಷಿನಲ್ಲಿ ನೀಡುತ್ತಿದ ಸರಳ ವಿವರಣೆಗಳು  ಜನಸಾಮಾನ್ಯರಿಗೂ ತಲುಪುವಂತಿತ್ತು. ಭಾರತದ ವಿವಿಧ ನಗರಗಳಿಂದ ಬಂದಿದ್ದ, ಇಲ್ಲಿನ ನಿವಾಸಿಗಳ ತಂದೆ-ತಾಯಿಯರು, ಬಂಧುಗಳಿಗೆ ಇದೊಂದು ಅಪೂರ್ವ ಅವಕಾಶ ಎನ್ನಿಸಿದ್ದರಲ್ಲಿ ಆಶ್ಚರ್ಯವಿಲ್ಲ. ಪೂಜಾ ಕಾರ್ಯಕ್ರಮವನ್ನು ರಂಜನೀಯವಾಗಿಸಲು, ಹೋಮಾದಿಗಳ ನಡುವಣ ಅಂತರದಲ್ಲಿ ಉದ್ದಿಷ್ಟ ದೇವತೆಗಳ ಬಗ್ಗೆ ಲಘು ಉಪನ್ಯಾಸ, ಡೋಲಕ್ ಸಹಿತ ಭಜನೆಗಳನ್ನು ಸೇರಿಸಲಾಗಿತ್ತು.
ಪ್ರತಿದಿನದ ಪ್ರಸಾದಕ್ಕೆಂದು ಸೇವಾವ್ರತಿಗಳು ತಾವಾಗಿಯೇ ತಮ್ಮಿಂದಾಗುವಷ್ಟು ಕೆಲಸಗಳನ್ನು ನಿರ್ವಹಿಸುತ್ತಿದ್ದರು. ತರಕಾರಿ ಹೆಚ್ಚುವುದು, ಬಡಿಸುವುದು, ಆಹಾರ ತಯಾರಿಸುವುದು ಮುಂತಾದ ಚಟುವಟಿಕೆಗಳಲ್ಲಿ ಮಡಿ, ಮೈಲಿಗೆಯ ಉಸಾಬರಿಯಿಲ್ಲದೇ, ಜಾತಿ ಭೇದಗಳ ವ್ಯತ್ಯಾಸವಿಲ್ಲದೇ,  ಸಾಧ್ಯವಿದ್ದಷ್ಟೂ ಭಾರತೀಯ ಉಡುಗೆ ತೊಡುಗೆಗಳನ್ನೇ ಧರಿಸಿದ ಜನರಿಗೆ ಭಕ್ತಿಯೇ ಪ್ರಧಾನವೆಂಬ ಭಾವನೆಯನ್ನು ಮೂಡಿಸಿರುವ ದೇವಾಲಯವು ತನ್ನ ನೈಜ ಅರ್ಥದಲ್ಲಿ ಕೆಲಸಮಾಡುತ್ತಿದೆ. ಪೂಜಾ ಪರಿಕರಗಳು, ಹೋಮ ದ್ರವ್ಯಗಳು, ಹವನ ಸಾಮಗ್ರಿಗಳು ಮುಂತಾಗಿ ಯಾವುದಕ್ಕೂ ಕೊರತೆಯಿಲ್ಲದಂತೆ, ಸುಂದರ ಪರಿಸರದಲ್ಲಿ ನಡೆದ ಈ ಪೂಜಾ ಕಾರ್ಯಕ್ರಮದಲ್ಲಿ ಉತ್ತರ, ದಕ್ಷಿಣ ಭಾರತೀಯರು ತಮ್ಮ ಸಂಸ್ಕೃತಿಗಳನ್ನು ಮುಖಾಮುಖಿಯಾಗಿಸಿಕೊಂಡು, ಅವುಗಳ ಸ್ವಾರಸ್ಯವನ್ನು ಅರ್ಥಮಾಡಿಕೊಳ್ಳುವಂತೆ ಆಯೋಜಿಸಿದ್ದ ಪರಿ ಮೆಚ್ಚುವಂತಿತ್ತು.
unnamed-1unnamed-2unnamed-5unnamed-8
ದೇವಾಲಯವನ್ನು ಹೊರಗಿನಿಂದ ನೋಡುವಾಗ, ನಮ್ಮ ಸಾಂಪ್ರದಾಯಿಕ ಮಂದಿರಗಳನ್ನು ನೋಡಿದಂತಾಗುವುದಿಲ್ಲ. ಏಕೆಂದರೆ ಇಟ್ಟಿಗೆಯ ಕೋಟೆಯಂತೆ ಕಾಣುವ ಈ ಕಟ್ಟಡಕ್ಕೆ ದೇವಾಲಯ ಗೋಪುರ, ವಿವಿಧ ಮೂರ್ತಿಗಳ ಅಲಂಕಾರಗಳಾವುವೂ ಇಲ್ಲ. ೨೨ ಎಕರೆ ವಿಸ್ತಾರದಲ್ಲಿ ಹರಡಿರುವ ಈ ಮಂದಿರವನ್ನು ಬರುವ ವರ್ಷಗಳಲ್ಲಿ ಪ್ರಮುಖ ಆಕರ್ಷಣೆಯಾಗುವಂತೆ ಮಾಡುವ ಯೋಜನೆಯಿದೆ ಎಂದು ದೇವಾಲಯ ಸಂಚಾಲಕ, ವೃತ್ತಿಯಿಂದ ಹೃದಯರೋಗ ತಜ್ಞರಾಗಿರುವ ಪಾಂಡೆ ತಿಳಿಸಿದರು. ಭಾರತೀಯರ, ಅದರಲ್ಲೂ ಹಿಂದೂ ಜನರ ಸಂಖ್ಯೆ ಪ್ರತಿವರ್ಷ ಅಮೆರಿಕಾದ ಎಲ್ಲ ರಾಜ್ಯಗಳಲ್ಲೂ ವೃದ್ಧಿಯಾಗುತ್ತಿರುವುದರಿಂದ, ಭಾರತೀಯ ಸಂಸ್ಕೃತಿಯ ಪ್ರಚಾರ-ಪ್ರಸಾರಗಳಿಗೆ ಒತ್ತು ನೀಡಿ, ಸಂಘಟಿತವಾಗಿ ಕೆಲಸಮಾಡುವ ವಾತಾವರಣವನ್ನು ನಿರ್ಮಿಸುವ ಜವಾಬ್ದಾರಿ ಹಿಂದೂ ದೇಗುಲಗಳಿಗೆ ಇದೆ ಮತ್ತು ಅದನ್ನು ಸಮರ್ಥವಾಗಿ ನಿರ್ವಹಿಸುತ್ತಿರುವುದಾಗಿ ಪಾಂಡೆ ತಿಳಿಸಿದರು. unnamed-3unnamed-6
Share196Tweet123Send
Previous Post

ಹಿಂದೂ ಮುಖಂಡರ ಹತ್ಯೆ ಸಂಚು ಪ್ರಕರಣ: ದೋಷಿಗಳಿಗೆ ಐದು ವರ್ಷ ಜೈಲು ಶಿಕ್ಷೆ

Next Post

ಏಜೆನ್ಸಿಗಳು ಆಧಾರ್ ಮಾಹಿತಿ ಬಹಿರಂಗ ಮಾಡುವಂತಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಏಜೆನ್ಸಿಗಳು ಆಧಾರ್ ಮಾಹಿತಿ ಬಹಿರಂಗ ಮಾಡುವಂತಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

March 5, 2026
ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

ವಿಟಿಯು ‘ಯುಕ್ತಿ-2026’ ಸಾಂಸ್ಕೃತಿಕ ಉತ್ಸವ |  ಜೆಎನ್‌ಎನ್‌ಸಿಇ ಕಾಲೇಜು ತಂಡ ಚಾಂಪಿಯನ್ಸ್

March 5, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL