Thursday, March 23, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

October 17, 2016
in ಜಿಲ್ಲೆ, ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು, ಅ.17: ಉಕ್ಕು ಸೇತುವೆ ನಿರ್ಮಾಣ ಯೋಜನೆ ಸಂಪೂರ್ಣ ಪಾರದರ್ಶಕವಾಗಿದೆ. ಈ ಕುರಿತು ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಪರಿಶೀಲನೆ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಯವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಸಾರ್ವಜನಿಕರ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡೇ ಸರ್ಕಾರ ಯೋಜನೆ ರೂಪಿಸಿದೆ. ಸಂಚಾರದ ಒತ್ತಡದಿಂದ ಜನ ಅನುಭವಿಸುತ್ತಿರುವ ಕಷ್ಟ ಕಡಿಮೆ ಮಾಡುವುದು ಯೋಜನೆಯ ಉದ್ದೇಶ ಎಂದು ಅವರು ಸ್ಪಷ್ಟಪಡಿಸಿದ್ದಾರೆ.  ಉಕ್ಕು ಸೇತುವೆ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ನಗರ ಸಂಚಾರ ಕೈಗೊಂಡಿರಲಿಲ್ಲ. ಉಕ್ಕು ಸೇತುವೆ ನಿರ್ಮಾಣ ವಿಚಾರ 2010ರಲ್ಲೇ ಪ್ರಸ್ತಾಪವಾಗಿತ್ತು. ಬಳಿಕ 2014-15ನೇ ಸಾಲಿನ ಬಜೆಟ್ನಲ್ಲಿ ಯೋಜನೆ ಘೋಷಿಸಲಾಗಿತ್ತು. ಬಳಿಕ ಯೋಜನಾ ವರದಿ ಸಿದ್ಧಪಡಿಸಿ ವೆಬ್ ಸೈಟ್ ಗೂ ಹಾಕಲಾಗಿದೆ. ಯೋಜನೆ ಸಂಪೂರ್ಣ ಪಾರದರ್ಶಕವಾಗಿದೆ. ಮುಖ್ಯ ಕಾರ್ಯದರ್ಶಿಗಳು ಈ ಕುರಿತು ನಾಲ್ಕು ಮತ್ತು ನಾನು ಎರಡು ಸಭೆಗಳನ್ನು ನಡೆಸಿದ್ದೇನೆ. ಸಮಗ್ರ ಯೋಜನಾ ವರದಿ ಸಿದ್ಧಪಡಿಸುವ ಜವಾಬ್ದಾರಿಯನ್ನು ಬಿಬಿಎಂಪಿ 2010ರಲ್ಲಿ ಖಾಸಗಿ ಸಂಸ್ಥೆಗೆ ವಹಿಸಿತ್ತು. ಬಳಿಕ ಅದೇ ವರ್ಷ ಬಿಡಿಎಗೆ ಯೋಜನೆಯನ್ನು ವರ್ಗಾಯಿಸಲಾಗಿದೆ ಎಂದು ತಿಳಿಸಿದರು.

ಹೊಟ್ಟೆ ಉರಿಯಿಂದ ಮತ್ತು ರಾಜಕೀಯ ಕಾರಣಗಳಿಗೆ ಬಿಜೆಪಿಯವರು ಯೋಜನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಇದು ಅವರದ್ದೇ ಕೂಸು. ನಾವು ಬೆಳೆಸಿದ್ದೇವೆ ಅಷ್ಟೆ. ಉಕ್ಕು ಸೇತುವೆ ನಿರ್ಮಾಣ ಸಂಬಂಧ 2013ರಲ್ಲಿ ಮೊದಲ ಯೋಜನಾ ವರದಿ ಸಿದ್ಧವಾಯಿತು. ಅಂತಿಮ ಯೋಜನಾ ವರದಿ ತಯಾರಾಗಿದ್ದು 2015ರಲ್ಲಿ. ಜೊತೆಗೆ ಸಾಧ್ಯಾಸಾಧ್ಯತೆ ವರದಿಯೂ ವೆಬ್ ಸೈಟ್ ನಲ್ಲಿದೆ.

ಯೋಜನೆಗೆ ಸಂಬಂಧಿಸಿದಂತೆ ಸರಾಸರಿ ದರ 2014ರಲ್ಲಿ ಕಡಿಮೆ ಇತ್ತು. ಎರಡು ವರ್ಷದ ಬಳಿಕ ಟೆಂಡರ್ ಕರೆದಿರುವುದರಿಂದ ವೆಚ್ಚದ ಪ್ರಮಾಣ  ಕೊಂಚ ಏರಿಕೆಯಾಗಿದೆ. ಉಕ್ಕು ಮಾರಾಟದ ಮೇಲಿನ  ಮೌಲ್ಯವರ್ಧಿತ ತೆರಿಗೆ 5ರಿಂದ 14ಕ್ಕೆ ಏರಿಕೆಯಾಗಿರುವುದೂ ವೆಚ್ಚ ಹೆಚ್ಚಲು  ಕಾರಣವಾಗಿದೆ. ಯೋಜನೆಯ ವಿವರಗಳನ್ನು ವೆಬ್ ಸೈಟ್ ಲಿ ಅಳವಡಿಸಿದ ಬಳಿಕ ಶೇ. 77ರಷ್ಟು ಮಂದಿ ಸೇತುವೆ ನಿರ್ಮಾಣವಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ನಾವು ಪ್ರಜಾಪ್ರಭುತ್ವ, ಜನಾಭಿಪ್ರಾಯ, ಸಂಚಾರದ ಒತ್ತಡ ಕಡಿಮೆ ಆಗಬೇಕು ಎನ್ನುತ್ತೇವೆ. ಮತ್ತೊಂದೆಡೆ ಯೋಜನೆ ಜಾರಿಗೆ ಬರಬಾರದು ಎಂದರೆ ಏನು ಮಾಡಬೇಕು ನೀವೇ ಹೇಳಿ. ವೆಬ್ ಸೈಟ್ ಲಿ ಎಲ್ಲರ ಅಭಿಪ್ರಾಯ ಕೇಳಲಾಗಿದೆ. ಯೋಜನೆಗೆ ಜಾಗತಿಕ ಟೆಂಡರ್ ಕರೆದಾಗ ನವಯುಗ ಮತ್ತು ಎಲ್ ಅಂಡ್ ಟಿ ಕಂಪನಿ ಭಾಗವಹಿಸಿತ್ತು. ಕಡಿಮೆ ಬಿಡ್ ದಾಖಲು ಮಾಡಿದ್ದು ಎಲ್ ಆಂಡ್ ಟಿ ಕಂಪನಿಯವರು. ಅವರು ದಾಖಲು ಮಾಡಿದ್ದ ಬಿಡ್ ನಲ್ಲೂ ಮಾತುಕತೆ ನಡೆಸಿ ಕೊಂಚ ಕಡಿಮೆ ಮಾಡಲಾಗಿದೆ ಎಂದು ಹೇಳಿದರು.

ಉಕ್ಕು ಸೇತುವೆ ಜೊತೆಗೆ ವಿಮಾನ ನಿಲ್ದಾಣಕ್ಕೆ ಮೆಟ್ರೊ ರೈಲು ಸಂಪರ್ಕವನ್ನೂ ಕಲ್ಪಿಸಲಾಗುವುದು. ಅದಕ್ಕಾಗಿ 9 ಮಾರ್ಗಗಳನ್ನು ಗುರುತಿಸಿ ವೆಬ್ ಸೈಟ್ ಗೆ ಹಾಕಲಾಗಿದೆ. ಅದಕ್ಕೂ ಜನಾಭಿಪ್ರಾಯ ಕೇಳಲಾಗುವುದು.

ಯಾವುದೇ ಯೋಜನೆ ಮಾಡುವಾಗ ಕೆಲ ಮರಗಳು ಹೋಗುವುದು ಸಹಜ. ಮೇಲು ರಸ್ತೆ, ಫುಟ್ಪಾತ್, ಅಂಡರ್ ಪಾಸ್ ನಿರ್ಮಿಸುವಾಗ ಅನಿವಾರ್ಯವಾಗಿ ಮರಗಳನ್ನು ಕಡಿಯಬೇಕಾಗುತ್ತದೆ. ಅದಕ್ಕಾಗಿ ಬೇರೆ ಕಡೆ ಗಿಡಗಳನ್ನು ನೆಡಲು ಮತ್ತು ಮರಗಳನ್ನು ಸ್ಥಳಾಂತರಿಸುವ ಬಗ್ಗೆ ಆಲೋಚಿಸಲಾಗುತ್ತಿದೆ.

ಬೆಂಗಳೂರಿನಲ್ಲಿ ಹತ್ತು ಲಕ್ಷ ಗಿಡಗಳನ್ನು ನೆಡಲು ಬಿಬಿಎಂಪಿಗೆ ಸೂಚಿಸಲಾಗಿದೆ. ನಮಗೂ ಪರಿಸರದ ಬಗ್ಗೆ ಕಾಳಜಿ ಇದೆ. ಪರಿಸರ ಉಳಿಸುವ ಬಗ್ಗೆ ಬದ್ಧತೆ ಇದೆ. ಪರಿಸರ ನಾಶವಾಗಲಿ ಎಂದು ನಾವು ಹೇಳುವುದಿಲ್ಲ. ಎಸ್ಟೀಮ್ ಮಾಲ್ ಬಳಿ ಸ್ಕೈ ವಾಕ್ ನಿರ್ಮಾಣದಲ್ಲಿ ವಿಳಂಬವಾಗಿದೆ. ಭೂ ಸ್ವಾಧೀನದಲ್ಲಿ ಸಮಸ್ಯೆ ಉಂಟಾಗಿದ್ದು ಇದಕ್ಕೆ ಕಾರಣ. ಈಗ ಸಮಸ್ಯೆ ನಿವಾರಣೆಯಾಗಿದ್ದು, ಕಾಮಗಾರಿ ಆರಂಭವಾಗಲಿದೆ. ಉಕ್ಕು ಸೇತುವೆ ನಿರ್ಮಾಣ ವಿರೋಧಿಸಿ ನಮ್ಮ ಬೆಂಗಳೂರು ಪ್ರತಿಷ್ಠಾನದವರು ಹೈಕೋರ್ಟ್ ಮೊರೆ ಹೋಗಿದ್ದರು. ನ್ಯಾಯಾಲಯ -ಯೋಜನೆ ವಿಚಾರದಲ್ಲಿ ಮುಂದುವರಿಯಿರಿ ಎಂದು ಹೇಳಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಏನು ಮಾಡಬೇಕೋ ಎಲ್ಲವನ್ನೂ ಮಾಡಿದ್ದೇವೆ. ಹೀಗಾಗಿ ಸಂಶಯಕ್ಕೆ ಅವಕಾಶ ಇಲ್ಲ ಎಂದು ಸಪಷ್ಟಪಡಿಸಿದರು.

ಕೆಂಪೇಗೌಡ ಅಂತರ್ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೆಬ್ಬಳಾದ ವರೆಗೆ ಸಿಗ್ನಲ್ ಫ್ರೀ ರಸ್ತೆ ಇದೆ. ಈ ರಸ್ತೆಯಲ್ಲಿ ಇತ್ತೀಚೆಗೆ ಸಂಚಾರ ದಟ್ಟಣೆ ಮಿತಿ ಮೀರಿದೆ. ಹೀಗಾಗಿ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಪರ್ಯಾಯ ಮಾರ್ಗಗಳನ್ನು ಗುರುತಿಸಲಾಗಿದೆ.

ಹೆಣ್ಣೂರು, ಕಣ್ಣೂರು, ಮೈಲನಹಳ್ಳಿ ಬಾಗಲೂರು ರಸ್ತೆ ವಿಮಾನ ನಿಲ್ದಾಣ ಸಂಪರ್ಕ ಕಲ್ಪಿಸಲಿದೆ. ಈ ರಸ್ತೆಯನ್ನು ಈಗಾಗಲೇ ಅಭಿವೃದ್ಧಿಪಡಿಸಲಾಗುತ್ತಿದೆ. ಹೆಣ್ಣೂರು ಬಳಿ ಸ್ಥಗಿತಗೊಂಡಿದ್ದ ಮೇಲು ರಸ್ತೆ ಕಾಮಗಾರಿಯನ್ನು ಪುನಾರಂಭಿಸಲಾಗಿದೆ.

ಥಣಿಸಂದ್ರ, ನಾಗವಾರ ರಸ್ತೆ 21 ಕಿ.ಮೀ. ಮಾರ್ಗ ಹೊಂದಿದೆ. ಟ್ಯಾನರಿ ರಸ್ತೆಗೆ ಸಂಪರ್ಕ ಕಲ್ಪಿಸುವ ಮಾರ್ಗ 20 ಕಿ.ಮೀ. ಇದೆ. ಥಣಿಸಂದ್ರ, ನಾಗವಾರ ರಸ್ತೆ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. 31 ಕೋಟಿ ರೂ. ವೆಚ್ಚದಲ್ಲಿ ಗ್ರೇಡ್ ಸಪರೇಟರ್ ನಿರ್ಮಿಸಲಾಗುತ್ತಿದೆ. ಹೆಣ್ಣೂರು, ಬಾಗಲೂರು, ಮೈಲನಹಳ್ಳಿ ರಸ್ತೆ ಅಭಿವೃದ್ಧಿಗೂ ಅನುದಾನ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು. ಬಳ್ಳಾರಿ ಮತ್ತು ತುಮಕೂರು ರಸ್ತೆಗೆ ಸಂಪರ್ಕ ಮಾರ್ಗವನ್ನೂ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗಿದೆ. ವೈಟ್ಫೀಲ್ಡ್-ಕೆ.ಆರ್.ಪುರ ರಸ್ತೆಯ ಅಭಿವೃದ್ಧಿಗೂ ಸರ್ಕಾರ ಮುಂದಾಗಿದೆ. ಇವೆಲ್ಲವೂ ಸಂಚಾರದ ಒತ್ತಡ ಕಡಿಮೆ ಮಾಡುವ ಕ್ರಮಗಳಾಗಿವೆ.

ಮೈಲನಹಳ್ಳಿ ಬಳಿ ಸ್ವಲ್ಪ ಭೂಮಿ ಸ್ವಾಧೀನ ಆಗಬೇಕಿದೆ. ಈ ಕುರಿತು ಕೆಐಎಡಿಬಿ ಅಧಿಕಾರಿಗಳು ಮತ್ತು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಲಾಗಿದೆ. ಡಿಸೆಂಬರ್ ವೇಳೆಗೆ 15 ಎಕರೆ ಭೂಮಿ ಸ್ವಾಧೀನ ಮಾಡಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಈ ಎಲ್ಲ ಕಾಮಗಾರಿಗಳ ಪರಿಶೀಲನೆಯನ್ನು ಇಂದು ನಡೆಸಿದ್ದೇನೆ. ಈ ಹಿಂದೆ ಅಧಿಕಾರ ನಡೆಸಿದವರು ಈ ಅಭಿವೃದ್ಧಿ ಕಾರ್ಯಗಳಿಗೆ ಕೈ ಹಾಕಿರಲಿಲ್ಲ. ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ನಾವು 300 ಕೋಟಿ ರೂ. ಒದಗಿಸಿದ್ದೇವೆ ಎಂದು ತಿಳಿಸಿದರು.

Previous Post

ಆರ್ ಎಸ್ ಎಸ್ ಸ್ವಯಂಸೇವಕನ ಹತ್ಯೆಗೆ ಭುಗಿಲೆದ್ದ ಆಕ್ರೋಶ: ಬೆಳವಣಿಗೆಯ ಸಂಪೂರ್ಣ ಸುದ್ಧಿ

Next Post

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

kalpa

kalpa

Next Post

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023

ಸಾವನ್ನು ಸಾರ್ಥಕಗೊಳಿಸಲು ಅಂಗ ದಾನದ ಮಹತ್ವ ಅರಿಯಿರಿ: ಡಾ. ಧನಂಜಯ ಸರ್ಜಿ ಕರೆ

March 21, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Representational File Photo Only

ಎಸ್’ಎಸ್’ಎಲ್’ಸಿ ಪರೀಕ್ಷಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ ಕೆಎಸ್’ಆರ್’ಟಿಸಿ: ಏನದು?

March 22, 2023

ಶಿವಮೊಗ್ಗದ ಇಂದಿನ ಸುದ್ಧಿಗಳು: ಶಿಕಾರಿಪುರದಲ್ಲಿ ಚುನಾವಣಾ ಕಣಕ್ಕಿಳಿಯಲಿದ್ದಾರಾ ಯುವ ವಕೀಲ ಚಂದ್ರಕಾಂತ್ ಪಾಟೀಲ್?

March 22, 2023

ಬ್ಯಾಂಕ್ ಆಫ್ ಬರೋಡ ನೂತನ ಪ್ರಾದೇಶಿಕ ಕಚೇರಿಗೆ ಚಾಲನೆ

March 21, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!