Monday, January 30, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Army

ಕಾವೇರಿ ವಿಚಾರ: ರಹಸ್ಯ ಸಂಧಾನಕ್ಕೆ ನಾರಿಮನ್ ಸಲಹೆ

September 15, 2016
in Army
0 0
0
Share on facebookShare on TwitterWhatsapp
Read - 2 minutes
ಬೆಂಗಳೂರು, ಸೆ.15: ಕಾವೇರಿ ನದಿಯಿಂದ ತಮಿಳುನಾಡಿಗೆ ಸೆ.20ರವರೆಗೆ ನೀರು ಬಿಡುಗಡೆ ಮಾಡಿ, ನಂತರ ಪುನಃ ನೀರು ಬಿಡುಗಡೆಗೆ ಸುಪ್ರೀಂಕೋರ್ಟ್ ಆದೇಶ ನೀಡದಂತೆ ನೋಡಿಕೊಳ್ಳಲು ರಹಸ್ಯ ಸಂಧಾನ ಪ್ರಕ್ರಿಯೆ ನಡೆಸುವಂತೆ ರಾಜ್ಯದ ಪರ ವಕೀಲ ನಾರಿಮನ್ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿರುವ ಅಂಶ ಬೆಳಕಿಗೆ ಬಂದಿದೆ.
ವಾಸ್ತವವಾಗಿ ಸಂಕಷ್ಟ ಸೂತ್ರ ಅಸ್ತಿತ್ವದಲ್ಲಿ ಇಲ್ಲದೆ ಇದ್ದರೂ ಕರ್ನಾಟಕ ನದಿ ಪಾತ್ರದಲ್ಲಿ ಲಭ್ಯವಾಗುವ ಒಟ್ಟು ನೀರಿನಲ್ಲಿ ನ್ಯಾಯಮಂಡಳಿ ನಿಗದಿ ಮಾಡಿದ ಪ್ರಮಾಣದಲ್ಲಿ ನೀರು ಹಂಚಿಕೆ ಮಾಡಿಕೊಳ್ಳಬೇಕು ಎಂದು ತಮಿಳುನಾಡು ಪಟ್ಟು ಹಿಡಿದಿದ್ದು,ಈ ವಿಷಯದಲ್ಲಿ ಸುಪ್ರೀಂಕೋರ್ಟ್ ಕೂಡ  ಏನೂ ಮಾಡಲು ಸಾಧ್ಯವಿಲ್ಲ ಎಂದು ಅವರು ವಿವರಿಸಿದ್ದಾರೆ.
ಉನ್ನತ ಮೂಲಗಳು ಈ ವಿಷಯವನ್ನು ತಿಳಿಸಿದ್ದು, ಸೆ.20 ರ ತನಕ ಮಾತ್ರವಲ್ಲ, ನಂತರವೂ ನೀರು ಬಿಡುಗಡೆಗೆ ಸುಪ್ರೀಕೋರ್ಟ್ ಆದೇಶ ನೀಡಿದರೆ ಕರ್ನಾಟಕದ ಕಾವೇರಿ ನದಿ ಪಾತ್ರ ಭೀಕರ ಕ್ಷಾಮಕ್ಕೆ ಗುರಿಯಾಗುತ್ತದೆ. ಹೀಗಾಗಿ ಸೆ.20 ರವರೆಗೆ ಮಾತ್ರ ನೀರು ಬಿಡುಗಡೆ ಮಾಡಿ ಅಷ್ಟರೊಳಗಾಗಿ ಉನ್ನತ ಮಟ್ಟದಲ್ಲಿ ರಹಸ್ಯ ಸಂಧಾನ ನಡೆಸಿಕೊಂಡು ಸಮಸ್ಯೆಯಿಂದ ಪಾರಾಗುವಂತೆ ನಾರಿಮನ್ ಸಲಹೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ಕಾವೇರಿ ನ್ಯಾಯಮಂಡಳಿ 2007 ರಲ್ಲಿ ನೀಡಿದ ಅಂತಿಮ ಆದೇಶದ ಪ್ರಕಾರ ನಾಲ್ಕು ರಾಜ್ಯಗಳನ್ನು ಒಳಗೊಂಡ ಕಾವೇರಿ ನದಿ ಪಾತ್ರದಲ್ಲಿ 740 ಟಿಎಂಸಿ ನೀರು ಲಭ್ಯವಾಗುತ್ತದೆ. ಈ ಪೈಕಿ ಕರ್ನಾಟಕದಲ್ಲಿ 462 ಟಿಎಂಸಿ ನೀರು ದಕ್ಕುತ್ತದೆ.
ಈ ಪೈಕಿ  ಕರ್ನಾಟಕ 270 ಟಿಎಂಸಿ ನೀರನ್ನು ಇಟ್ಟುಕೊಂಡು ತಮಿಳುನಾಡಿಗೆ 192 ಟಿಎಂಸಿ ನೀರನ್ನು ಬಿಡುಗಡೆ ಮಾಡಬೇಕು.
ಅಂದರೆ ಲಭ್ಯವಾಗುವ ನೀರಿನಲ್ಲಿ ಶೇ.57 ರಷ್ಟು ಪ್ರಮಾಣದ ನೀರು ಕರ್ನಾಟಕಕ್ಕೆ ಸಿಗುವಂತಾಗಬೇಕು.ಶೇ.43 ರಷ್ಟು ನೀರು ತಮಿಳುನಾಡಿಗೆ ಲಭ್ಯವಾಗಬೇಕು.ಹೀಗಾಗಿ ಈ ಬಾರಿ ಕರ್ನಾಟಕದಲ್ಲಿ 120 ಟಿಎಂಸಿಯಷ್ಟು ನೀರು ಸಿಕ್ಕಿದೆ ಎಂದರೂ ಅದರಲ್ಲೇ ಶೇ.43 ರಷ್ಟು ಪ್ರಮಾಣದ ನೀರು ತನಗೆ ದೊರೆಯಬೇಕು ಎಂಬುದು ತಮಿಳುನಾಡು ಸರ್ಕಾರದ ವಾದ.
ಇದನ್ನು ಲೆಕ್ಕ ಹಾಕಿದರೂ ತಮಿಳುನಾಡಿಗೆ ಕರ್ನಾಟಕದಿಂದ 49 ಟಿಎಂಸಿಯಷ್ಟು ನೀರು ಬಿಡುಗಡೆಯಾಗಬೇಕು. ಹೀಗಾಗಿ ಸೆ.20 ರಂದು ಸುಪ್ರೀಂಕೋರ್ಟ್ ಮುಂದೆ ವಿಚಾರಣೆ ನಡೆಯುವುದಕ್ಕಿಂತ ಮುನ್ನ ರಹಸ್ಯ ಸಂಧಾನ ನಡೆಸಿಕೊಂಡು ಕಂಟಕದಿಂದ ಪಾರಾಗಿ ಎಂಬುದು

ನಾರಿಮನ್ ಸಲಹೆ

ಈ ಸಂದರ್ಭದಲ್ಲಿ ಉನ್ನತ ಮಟ್ಟದಲ್ಲೇ ರಹಸ್ಯ ಸಂಧಾನ ನಡೆಯಬೇಕು. ಸೆ.20 ರ ನಂತರ ಮತ್ತೆ ನೀರು ಬಿಡುಗಡೆಗೆ ತಮಿಳುನಾಡು ಪಟ್ಟು ಹಿಡಿಯದಂತೆ ನೋಡಿಕೊಳ್ಳಬೇಕು ಎಂದು ನಾರಿಮನ್ ಸಲಹೆಗೆ ದೇವೇಗೌಡರೂ ಸಹಮತ ವ್ಯಕ್ತಪಡಿಸಿದ್ದು ಈ ಹಿನ್ನೆಲೆಯಲ್ಲಿ ಉನ್ನತ ಮಟ್ಟದ ಸಂಧಾನ ಪ್ರಕ್ರಿಯೆಗೆ ಈಗಾಗಲೇ ಚಾಲನೆ ದೊರೆತಿದೆ ಎಂದು ಇವೇ ಮೂಲಗಳು ಹೇಳಿವೆ.
ನಾರಿಮನ್ ಸಲಹೆಯ ಬೆನ್ನಲ್ಲೇ ಮಾಜಿ ಪ್ರಧಾನಿ ದೇವೇಗೌಡ ಕೂಡಾ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದು ಒಕ್ಕೂಟ ವ್ಯವಸ್ಥೆಯಲ್ಲಿ ನೀರು ಬಿಡುಗಡೆ ಮಾಡುವುದಿಲ್ಲ ಎನ್ನಲು ಸಾಧ್ಯವೇ ಇಲ್ಲ.  ಹಾಗೇನಾದರೂ ಹೇಳಿದರೆ ಕೇಂದ್ರ ಸರ್ಕಾರ ಸೈನ್ಯವನ್ನು ಕಳುಹಿಸಿ ನೀರು ಬಿಡುಗಡೆಯಾಗುವಂತೆ ನೋಡಿಕೊಳ್ಳುತ್ತದೆ. ಇದೇ ರೀತಿ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡಿದರೂ ಸಮಸ್ಯೆ ಪರಿಹಾರವಾಗುವುದಿಲ್ಲ. ಮೇಲ್ನೋಟಕ್ಕೆ ಪ್ರಧಾನಿ ಮೋದಿ ಮಧ್ಯೆ ಪ್ರವೇಶಿಸಬೇಕೆಂದು ಹೇಳಿದರೂ ಬಹಿರಂಗವಾಗಿ ಅವರೂ ಬರಲು ಸಾಧ್ಯವಿಲ್ಲ ಎಂದು ವಿವರಿಸಿದ್ದಾರೆ.
ಕಾವೇರಿ ನದಿ ನೀರಿನ ವಿಷಯದಲ್ಲಿ 2007 ರ ಟ್ರಿಬ್ಯುನಲ್ ಆದೇಶಕ್ಕೆ ಅಂಟಿಕೊಂಡಿರುವ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಮನ ಒಲಿಸುವುದು ಈ ಸಂಧಾನ ಪ್ರಕ್ರಿಯೆಯ ಬಹುಮುಖ್ಯ ಅಜೆಂಡಾ (ಕಾರ್ಯಸೂಚಿ) ಎಂದಿರುವ ಮೂಲಗಳು,ರಹಸ್ಯ ಸಂಧಾನದ ಸ್ವರೂಪ ಯಾವ ಮಟ್ಟದಲ್ಲಿರಲಿದೆ ಎಂಬುದನ್ನು ಹೇಳಲು ನಿರಾಕರಿಸಿವೆ.
ಈ ಮಧ್ಯೆ ರಾಜ್ಯದ ಬಿಜೆಪಿ ನಾಯಕರೂ ಕೇಂದ್ರ ಸಚಿವ ಅನಂತಕುಮಾರ್ ಅವರನ್ನು  ಸಂಪರ್ಕಿಸಿ ಮಾತುಕತೆ ನಡೆಸಿದ್ದು ಅವರು ಕೂಡಾ ಉನ್ನತ ಮಟ್ಟದ ರಹಸ್ಯ ಸಂಧಾನಕ್ಕೆ ತೆರೆಮರೆಯ ಪಾತ್ರಧಾರಿಗಳಲ್ಲಿ ಒಬ್ಬರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
Previous Post

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

Next Post

ಜಲಾಶಯ ಸ್ಥಿತಿ-ಗತಿ ಬಗ್ಗೆ ಅಧ್ಯಯನ ನಡೆಸಲು ಕಾನೂನು ತಜ್ಞರ ಸಲಹೆ

kalpa

kalpa

Next Post

ಜಲಾಶಯ ಸ್ಥಿತಿ-ಗತಿ ಬಗ್ಗೆ ಅಧ್ಯಯನ ನಡೆಸಲು ಕಾನೂನು ತಜ್ಞರ ಸಲಹೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಧ್ವ ನವಮಿ: ಜಗದ ಜೀವಿಗಳ ಜೀವನ ಪಾವನಗೊಳಿಸಿದ ಆಚಾರ್ಯ ಮಧ್ವರು

January 30, 2023

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!