No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಕೊಡ್ಲಿಪೇಟೆಯಲ್ಲಿ ಯಶಸ್ವಿಯಾಗಿ ನಡೆದ ವೀರಶೈವ ಸಮಾಜ ಬಾಂಧವರ ಜಿಲ್ಲಾ ಸಮಾವೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2016
in ಜಿಲ್ಲೆ
0
Share on FacebookShare on TwitterShare on WhatsApp

ಶನಿವಾರಸಂತೆ, ಅ.18: ವೀರಶೈವ ಧರ್ಮ ಇಡೀ ವಿಶ್ವಕ್ಕೆ ತನ್ನದೆಯಾದ ಸಾಮಾಜಿಕ ಮೌಲ್ಯ, ಸಮಾನತೆ, ತತ್ವ-ಸಿದ್ದಾಂತಗಳ ಚಿಂತನೆ ಹಾಗೂ ವೈಚಾರಿಕತೆಯ ಕೊಡುಗೆಯನ್ನು ನೀಡಿದ ಐತಿಹಾಸಿಕ ಮತ್ತು ಸಾಮಾಜಿಕ ಧರ್ಮವಾಗಿದೆ’ ಎಂದು ರಾಜ್ಯ ಪೌರಾಡಳಿತ ಸಚಿವ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟರು.

ಅವರು ಕೊಡ್ಲಿಪೇಟೆ ಕಿರಿಕೊಡ್ಲಿ ಮಠ ವಿದ್ಯಾಸಂಸ್ಥೆಯ ವೇದಿಕೆಯಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ವೀರಶೈವ ಬಾಂಧವರ ಸಮಾವೇಶದ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಿದ್ದರು.

ವೀರಶೈವ ಸಮಾಜ 12ನೇ ಶತಮಾನದ ಹಿಂದಿನಿಂದ ಮೊದಲುಗೊಂಡು ದೇಶ ಸ್ವತಂತ್ರಗೊಂಡ ನಂತರದ ಇಂದಿನ ದಿನದ ವರೆಗೂ ಸಮಾಜಕ್ಕೆ ತತ್ವ ಸಾರಗಳ ಮೂಲಕ ಸಮಾಜವನ್ನು ಜಾಗೃತಿಗೊಳಿಸುವ ಕಾಯಕವನ್ನು ಮಾಡುತ್ತಿದೆ, ವೀರಶೈವ ಧರ್ಮ ಬಸವಣ್ಣರು ಸಾರಿದ ಸಿದ್ದಾಂತಗಳ ನೆಲೆಗಟ್ಟಿನಲ್ಲಿ ತನ್ನದೆಯಾದ ಕಾಯಕವನ್ನು ಮಾಡುತ್ತಿದೆ, ವಚನ ಸಾಹಿತ್ಯಗಳ ಮೂಲಕ ಸಮಾಜದಲ್ಲಿರುವ ಮೌಢ್ಯಗಳು, ಸಮಾನತೆ, ವೈಚಾರಿಕತೆ ಮುಂತಾದ ಚಿಂತನೆಗಳ ಮೂಲಕ ಸಮಾಜವನ್ನು ಬಡಿದೆಬ್ಬಿಸುವ ಏಕೈಕ ಧರ್ಮವಾಗಿದೆ ಎಂದರು. ವೀರಶೈವ ಧರ್ಮ ಸಮಾಜದಲ್ಲಿರುವ ಇತರೆ ಧರ್ಮಗಳಿಗಿಂತಲೂ ವಿಭಿನ್ನವಾಗಿದೆ, ಸಂಸ್ಕೃತಿ-ಪರಂಪರೆಯನ್ನು ಹೊಂದಿದೆ ಎಂದರು.

ಸಮಾಜ ಆಧುನಿಕತೆಗೆ ಬದಲಾಗುವುದು ಸಹಜ ಆದರೆ ವೀರಶೈವ ಸಮಾಜ ಆಧುನಿಕತೆಗೆ ಹೊಂದಿಕೊಂಡು ವೈಚಾರಿಕತೆಯ ಬದಲಾವಣೆಯ ಜೊತೆಯಲ್ಲಿ ವೈಜ್ಞಾನಿಕ, ಶೈಕ್ಷಣಿಕವಾಗಿಯೂ ಅಭಿವೃದ್ದಿ ಸಾಧಿಸಿದೆ, ಈ ನಿಟ್ಟಿನಲ್ಲಿ ಯುವ ಜನಾಂಗ ವೀರಶೈವ ಲಿಂಗಾಯಿತ ಸಮೂದಾಯವನ್ನು ಬಲಪಡಿಸಲು ಪ್ರಯತ್ನಿಸಬೇಕು, ಸಮಾಜದಲ್ಲಿ ಮಾನವ ಸಂಪನ್ಮೂಲ ಪ್ರಮುಖ ಪಾತ್ರವಹಿಸುತ್ತದೆ, ವೀರಶೈವ ಸಮಾಜ ಬಡ ವರ್ಗದ ವಿದ್ಯಾರ್ಥಿಗಳಿಗೆ ಉನ್ನತ್ತ ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡುತ್ತಿದೆ, ಇಂತಹ ಸಂದರ್ಭದಲ್ಲಿ ವೀರಶೈವ ಸಮಾಜ ಸಮಾಜದಲ್ಲಿರುವ ಇತರೆ ಸಮೂದಾಯದ ಬಡವರ್ಗದ ಜನರಿಗೆ ಶೈಕ್ಷಣಿಕವಾಗಿಯೂ, ಆರ್ಥಿಕವಾಗಿಯೂ ಸಹಾಯವನ್ನು ನೀಡುವ ಕಾರ್ಯವನ್ನು ಮಾಡುತ್ತಿದೆ ಎಂದರು. ವೀರಶೈವ ಸಮಾಜದ ಯುವಕ-ಯುವತಿಯರು ಪಾಶ್ಚ್ಯಮಾತ್ಯ ಸಂಸ್ಕೃತಿಗೆ ಒಳಗಾಗದೆ ತಮ್ಮ ಧರ್ಮ, ಸಿದ್ದಾಂತಗಳನ್ನು ಅಳವಡಿಸಿಕೊಂಡು ಸಮಾಜಕ್ಕೆ ಮಾದರಿಯಾಗಬೇಕು, ವೀರಶೈವ ಕೊಡಗು ಜಿಲ್ಲೆ ಐತಿಹಾಸಿಕ ಕುರುಹು ಹೊಂದಿರುವ ಜಿಲ್ಲೆಯಾಗಿದೆ, ಜಿಲ್ಲೆಗೆ ವೀರಶೈವ ಸಮೂದಾಯದ ರಾಜರು ಆಳ್ವಿಕೆಯನ್ನು ನೀಡಿದ್ದಾರೆ, ವೀರಶೈವ ಸಮಾಜದ ಅಭಿವೃದ್ದಿಗೆ ಸಮೂದಾಯ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ, ನಮ್ಮ ದೇಶ ಅಧ್ಯಾತ್ಮಿಕ ಚಿಂತನೆಯಲ್ಲಿ ಜಗತ್ತಿಗೆ ಶ್ರೀಮಂತ ದೇಶವಾಗಿದೆ, ಅಧ್ಯಾತ್ಮಿಕತೆಗೆ ಸಮಾಜವನ್ನು ಬದಲಾಯಿಸುವ ಶಕ್ತಿ ಹೊಂದಿದೆ, ಅದೇರೀತಿಯಲ್ಲಿ ವೀರಶೈವ ಸಮಾಜ ಸಮಾಜಿಕ ಮೌಲ್ಯ, ಸಮಾಜದಲ್ಲಿರುವ ಇತರೆ ಸಮೂದಾಯವನ್ನು ಒಂದೆಡೆ ಸೇರಿಸುವ ಕಾರ್ಯವನ್ನು ಮಾಡುತ್ತಾ ಬರುತ್ತಿದೆ ಎಂದರು. ಭಾರತ ದೇಶದ ಅಧ್ಯಾತ್ಮಿಕ ಚಿಂತನೆ, ಸಂಸ್ಕೃತಿ, ಸಹನೆ ಮನೋಭಾವನೆ, ಸಾಧಕರು, ಮೇಧಾವಿಗಳಿದ್ದು ಇದರಿಂದ ವಿಶ್ವದಲ್ಲಿರುವ ಇತರೆ ದೇಶಗಳ ನಮ್ಮ ದೇಶದತ್ತ ನೋಡುತ್ತಿದೆ, ನಮ್ಮ ದೇಶದಲ್ಲಿ ಉತ್ತಮ ಮೌಲ್ಯಗಳನ್ನು ಹೊಂದಿರುವ ಶಿಕ್ಷಣದ ವ್ಯವಸ್ಥೆ ಇದೆ, ಇದಕ್ಕೆ ಅಧ್ಯಾತ್ಮಿಕ ಮತ್ತು ಸಂಸ್ಕೃತಿ ಮೌಲ್ಯಗಳಿಂದ ಸಾಧ್ಯವಾಗಿದೆ, ಈ ನಿಟ್ಟಿನಲ್ಲೂ ವೀರಶೈವ ಸಮಾಜ ಸಮಾಜಕ್ಕೆ ಕೊಡುಗೆಯನ್ನು ನೀಡುತ್ತಿದೆ ಎಂದರು.

ಕೊಡಗು ಅನೇಕ ವೈಶಿಷ್ಠ್ಯತೆಯನ್ನು ಹೋದಿರುವ ಜಿಲ್ಲೆಯಾಗಿದೆ, ನಮ್ಮ ದೇಶಕ್ಕೆ ಸೈನಿಕರನ್ನು ಕೊಟ್ಟ ನಾಡಾಗಿದೆ, ವೀರಶೈವ ರಾಜರು ಆಳ್ವಿಕೆಯನ್ನು ನಡೆಸಿರುವುದರಿಂದ ಐತಿಹಾಸಿಕವಾಗಿಯೂ ಶ್ರೀಮಂತವಾಗಿದೆ ಆದರೆ ಈ ವರ್ಷ ರಾಜ್ಯ ಭೀಕರ ಬರಗಾಲವನ್ನು ಎದುರಿಸುತ್ತಿದೆ, ಮುಂದಿನ ದಿನದಲ್ಲಿ ರಾಜ್ಯದ ಜನತೆ ಜನರಿಗೆ ಮತ್ತು ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೆ ಪರದಾಡ ಬೇಕಾಗುತ್ತದೆ, ಕೊಡಗು ಜಿಲ್ಲೆಯೂ ಬರಗಾಲಕ್ಕೆ ಹೊರತಾಗಿಲ್ಲ, ಸರಕಾರ ಜಿಲ್ಲೆ 2 ತಾಲೋಕನ್ನು ಬರಗಾಗ ಎಂದು ಘೋಷಣೆ ಮಾಡಿದೆ, ಆದರೆ ಜಿಲ್ಲೆ ಸೋಮವಾರಪೇಟೆ ತಾಲೋಕು ಸಹ ತೀವ್ರ ಬರಗಾಲವನ್ನು ಎದುರಿಸುತ್ತಿದೆ, ಈ ಹಿನ್ನೆಲೆಯಲ್ಲಿ ಈ ತಾಲೋಕನ್ನು ಸಹ ಸರಕಾರ ಬರಗಾಲ ಪ್ರದೇಶ ತಾಲೂಕು ಎಂದು ಘೋಷಣೆ ಮಾಡುವಂತೆ ನಾನು ಸರಕಾರವನ್ನು ಒತ್ತಾಯಿಸುತ್ತೇನೆ ಎಂದರು.ಕೇಂದ್ರ ಸರಕಾರ ನಮ್ಮ ರಾಜ್ಯದ ಬರಗಾಲ ಸಮಸ್ಯೆ ಸೇರಿದಂತೆ ಕಾವೇರಿ ಮತ್ತು ಮಹದಾಯಿ ಸಮಸ್ಯೆಗಳಿಗೆ ಸಹಕಾರ ನೀಡುತ್ತದೆ, ಈ ಸಮಸ್ಯೆಗಳ ಬಗ್ಗೆ ನಾನು ಪ್ರದಾನಿ ನರೇಂದ್ರಮೋದಿ ಅವರಿಗೆ ಸಲಹೆ ನೀಡುತ್ತೇನೆ, ಇಂತಹ ಸಮಸ್ಯೆಗಳಿಗೆ ಪಕ್ಷ ಬೇಧ ಮರೆತು ಎಲ್ಲಾರು ಒಟ್ಠಗಿ ಸಹಕಾರ ನೀಡಿದರೆ ಮಾತ್ರ ಸಮಸ್ಯೆಗಳು ಬಗೆಹರಿಯುತ್ತದೆ ಎಂದರು.
ಮಾಜಿ ಸಚಿವ ಮತ್ತು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಮಾತನಾಡಿ, ವೀರಶೈವ ಸಮಾಜದ ಬಾಂಧವರ ಸರ್ವಾಂಗಿಣಿಯ ಅಭಿವೃದ್ದಿಗಾಗಿ ಮತ್ತು ಸಮೂದಾಯದ ಬಾಂಧವರನ್ನು ಮುಖ್ಯ ವಾಹಿನಿ ತರಬೇಕೆಂಬ ಉದ್ದೇಶದಿಂದ ವೀರಶೈವ ಮಹಾಸಭಾವನ್ನು ಸ್ಥಾಪಿಸಲಾಗಿದೆ, ಅಲ್ಲದೆ ವೀರಶೈವ ಸಮಾಜದ ಬಡವರ್ಗದ ವಿದ್ಯಾರ್ಥಿಗಳ ಶ್ರೇಯೋಭಿವೃದ್ದಿಗಾಗಿ ದಾವಣಗೆರೆಯಲ್ಲಿ ಶಾಮನೂರು ಶಿವಶಂಕರಪ್ಪ ಟ್ರಸ್ಟ್ ಸ್ಥಾಪಿಸಲಾಗಿದೆ, ಒಟ್ಟು 12 ಕೋಟಿಯನ್ನು ಟ್ರಸ್ಟಿನಲ್ಲಿ ವಿನಿಯೋಗಿಸಿ ರಾಜ್ಯದಲ್ಲಿ ವೀರಶೈವ ಬಾಂಧವರ ಶಿಕ್ಷಣ, ವಸತಿ ಸೌಲಭ್ಯ, ಇಂಜಿನಿಯರ್, ಮೆಡಿಕಲ್ ಶಿಕ್ಷಣ ಮತ್ತು ಇತರೆ ಸಹಾಯಕ್ಕಾಗಿ ನೆರವು ನೀಡುತ್ತಿದೆ, ಇದರಲ್ಲಿ 2 ಕೋಟಿ ರೂ ಹಣದಲ್ಲಿ ರಾಜ್ಯದಲ್ಲಿರುವ ಅಕ್ಷರ ಮತ್ತು ದೃಶ್ಯ ಮಾಧ್ಯಮಗಳ ಪ್ರತಿನಿಧಿಗಳಿಗೆ ಆರೋಗ್ಯ ಸಮಸ್ಯೆಗಳ ಚಿಕಿತ್ಸೆಗಾಗಿ ನೆರವು ನೀಡಲಾಗುತ್ತಿದೆ, ಈ ನಿಟ್ಟಿನಲ್ಲಿ ವೀರಶೈವ ಸಮಾಜದ ಅಭಿವೃದ್ದಿಗಾಗಿ ಪ್ರತಿಯೊಂದು ಜಿಲ್ಲಾ ಕೇಂದ್ರಗಳಲ್ಲಿ ಸಾಂಸ್ಕೃತಿಕ ಭವನ ನಿರ್ಮಿಸಲು ಮಹಾಸಭಾ ನಿರ್ಣಯಿಸಿದೆ, ಈ ಹಿನ್ನೆಲೆಯಲ್ಲಿ ಜಿಲ್ಲಾ ಘಟಕ ಸಹಕಾರ ನೀಡಬೇಕಾಗಿದೆ ಎಂದರು.
ವೀರಾಜಪೇಟೆ ಅರಮೇರಿ ಕಳಂಚೇರಿ ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಕೊಡಗು ಜಿಲ್ಲೆ 16ನೇ ಶತಮಾನದ ಹಿಂದಿನ ಇತಿಹಾಸವನ್ನು ಹೊಂದಿದೆ, 16 ನೇ ಶತಮಾನದಲ್ಲಿ ವೀರಶೈವ ಸಮಾಜದ ಹಾಲೇರಿ ವಂಶಸ್ಥರು ಆಳ್ವಿಕೆ ನಡೆಸುವುದರ ಮೂಲಕ ವೀರಶೈವ ಸಮಾಜದ ಉದ್ದಾರಕ್ಕಾಗಿ ನಾಂದಿ ಹಾಡಿದರು. 1586 ರಿಂದ 1806 ತನಕ ಕೊಡಗಿನ ರಾಜರು ಆಳ್ವಿಕೆ ನಡೆಸಿರುವ ಕುರುಹು ಒಳಗೊಂಡಿದೆ, ಈ ನಿಟಿನಲ್ಲಿ ಜಿಲ್ಲೆಯ ವೀರಶೈವ ಸಮಾಜದ ಉದ್ದಾರಕ್ಕಾಗಿ ಜಿಲ್ಲೆಯಲ್ಲಿರುವ ವೀರಶೈವ ರಾಜರ ಅರಮನೆ, ರಾಜರ ಸ್ಮಾರಕಗಳನ್ನು ಜೀರ್ಣೋದ್ದಾರ ಮಾಡಬೇಕಾಗಿದೆ, ವೀರಶೈವ ಸಮಾಜದ ಬಾಂಧವರಿಗಾಗಿ ಕೇಂದ್ರ ಸಮೂದಾಯ ಭವನವನ್ನು ನಿರ್ಮಿಸಿಕೊಡಬೇಕೆಂದು ಸರಕಾರವನ್ನು ಒತ್ತಾಯಿಸಿದರು.
ಮಹಾಸಭಾದ ರಾಜ್ಯ ಕಾರ್ಯದರ್ಶಿ ಬಿ.ಎಸ್. ವಾಗೀಶ್ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿ, ವೀರಶೈವ ಸಮಾಜ ಸಮಾಜದ ಏಳಿಗೆಗಾಗಿ ಕಾರ್ಯನಿರ್ವಹಿಸುತ್ತಿದೆ, ಆದರೆ ವೀರಶೈವ ಸಮಾಜವನ್ನು ಕೆಣಕಿದರೆ ನಮ್ಮ ಸಮೂದಾಯ ಪ್ರಾಣಕೊಡಲು ಸಿದ್ದರಿದ್ದೇವೆ ಎಂದರು.
ಕಾರ್ಯಕ್ರಮದಲ್ಲಿ ರಾಜ್ಯ ಮಾಹಿತಿಹಕ್ಕು ಆಯೋಗದ ನಿವೃತ್ತ ಆಯುಕ್ತ ಜೆ.ಎಸ್. ವಿರೂಪಾಕ್ಷಯ್ಯ, ಉಚ್ಚನ್ಯಾಯಲಯದ ನಿವೃತ್ತ ಸರಕಾರಿ ಆಬಿಯೋಜಕ ಎಚ್.ಎಸ್. ಚಂದ್ರಮೌಳಿ ಮಾತನಾಡಿದರು. ವೇದಿಕೆಯಲ್ಲಿ ವಿವಿಧ ಮಠಗಳ ಮಠಾದೀಶರು, ಜಿಲ್ಲಾ ಘಕಕದ ಅಧ್ಯಕ್ಷ ಡಿ.ಬಿ. ಧರ್ಮಪ್ಪ, ಕೇಂದ್ರ ಮಹಿಳಾ ಘಟಕದ ಗೀತಜಯಂತ್, ಸುವರ್ಣಚಿನ್ನಣ್ಣ, ಪ್ರಮುಖರಾದ ಉಷಾತೇಜಶ್ವಿ, ಬಿ.ಕೆ. ಯತೀಶ್, ಕೆ.ಎನ್. ಸಂದೀಪ್. ಸಿ.ವಿ. ವಿಶ್ವನಾಥ್, ವರಪ್ರಸಾದ್, ಎಸ್. ಮಹೇಶ್, ಕಾಂತರಾಜು ಮುಂತಾದವರಿದ್ದು
ಈ ಸಂದರ್ಭದಲ್ಲಿ ಜಿಲ್ಲಾ ಘಟಕದ ವತಿಯಿಂದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಷ್ಕಾರ ನೀಡಿ ಗೌರವಿಸಲಾಯಿತು, ಸಮೂದಾಯದ ವಿವಿಧ ಕ್ಷೇತ್ರಗಳ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

—>
News by: ಇಂದ್ರೇಶ್, ಮಡಿಕೇರಿ
Share196Tweet123Send
Previous Post

ಡೆಂಗ್ಯೂ ಜ್ವರ ಉಲ್ಬಣ: ಪ್ರತಿದಿನ ಮೂರು ಪ್ರಕರಣ ದಾಖಲು

Next Post

ಪಾಕಿಸ್ಥಾನದ ಸಮರ ಸನ್ನಾಹ !

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಾಕಿಸ್ಥಾನದ ಸಮರ ಸನ್ನಾಹ !

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL