No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Saturday, May 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಡೆಂಗ್ಯೂ ಜ್ವರ ಉಲ್ಬಣ: ಪ್ರತಿದಿನ ಮೂರು ಪ್ರಕರಣ ದಾಖಲು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಅ.18:  ನಗರದಲ್ಲಿ ದಿನದಿಂದ ದಿನಕ್ಕೆ ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಪ್ರತಿ ದಿನ ಕನಿಷ್ಠ ಮೂರು ಪ್ರಕರಣಗಳಲ್ಲಿ ಡೆಂಗ್ಯೂ ಜ್ವರ ಇರುವುದು ಪತ್ತೆಯಾಗುತ್ತಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಕಿ-ಅಂಶಗಳ ಪ್ರಕಾರ ಕಳೆದ 30 ದಿನಗಳಲ್ಲಿ ಡೆಂಗ್ಯೂ ಇರುವ ಹೊಸ 82 ಪ್ರಕರಣಗಳು ದಾಖಲಾಗಿವೆ. ಮೇ 23 ರ ವೇಳೆಗೆ ಕೇವಲ 44 ಡೆಂಘೀ ಜ್ವರ ಪ್ರಕರಣಗಳು ದಾಖಲಾಗಿದ್ದರೆ, ಜೂನ್ 22 ರ ವೇಳೆಗೆ ಈ ಸಂಖ್ಯೆ 126ಕ್ಕೆ ಏರಿಕೆ ಆಗಿದೆ.
ಪ್ರತಿ ಪ್ರಕರಣಗಳು ಪತ್ತೆಯಾಗುತ್ತಿದ್ದಂತೆಯೇ ಬಿಬಿಎಂಪಿಯ ಆರೋಗ್ಯ ಇಲಾಖೆ ಸಿಬ್ಬಂದಿ ರೋಗಿಗಳ ಮನೆಗಳಿಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಭೇಟಿ ನೀಡಿ ಡೆಂಗ್ಯೂ ನಿಯಂತ್ರಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
24 ವರ್ಷದ ಯುವತಿ ನಾಲ್ಕು ದಿನಗಳಿಂದ ಅತಿಯಾದ ಜ್ವರ, ಮೈಕೈ ನೋವು ಮತ್ತು ವಾಂತಿಯಿಂದ ಬಳಲಿ ವೈದ್ಯರ ಬಳಿಗೆ ಚಿಕಿತ್ಸೆಗೆಂದು ಬರುತ್ತಾಳೆ. ಆಕೆಯನ್ನು ಪರೀಕ್ಷೆಗೆ ಒಳಪಡಿಸಿದಾಗ ಡಬ್ಲ್ಯೂಬಿಸಿ ಮತ್ತು ಪ್ಲೇಟ್ಲೇಟ್ ಪ್ರಮಾಣದಲ್ಲಿ ಗಣನೀಯ ಕುಸಿತ ಉಂಟಾಗಿರುವುದು ಪತ್ತೆಯಾಗುತ್ತದೆ. ಮತ್ತಷ್ಟು ತಪಾಸಣೆ ನಡೆಸಿದಾಗ ಆಕೆಯಲ್ಲಿ ಎನ್ಎಸ್1 ಡೆಂಗ್ಯೂ ಸೋಂಕು ತಗುಲಿರುವುದು ಗೊತ್ತಾಗುತ್ತದೆ.
ಅದೇ ರೀತಿ 3 ದಿನಗಳಿಂದ ಜ್ವರ ಮತ್ತು ವಾಂತಿಯಿಂದ ಬಳಲುತ್ತಿದ್ದ 18 ವರ್ಷದ ಯುವಕನ ತಪಾಸಣೆ ನಡೆಸಿದಾಗ ಆತನಲ್ಲಿಯೂ ಪ್ಲೇಟ್ಲೇಟ್ ಸಂಖ್ಯೆ ಕಡಿಮೆಯಾಗಿರುವುದು ಕಂಡುಬರುತ್ತದೆ. ಇದೊಂದು ವೈರಲ್ ಫೀವರ್ ಆಗಿದ್ದು, ಡೆಂಗ್ಯೂ ನೆಗೆಟಿವ್ ಎಂದು ಗೊತ್ತಾಯಿತು ಎಂದು ಸೇಂಟ್ ಮಾರ್ಥಾಸ್ ಆಸ್ಪತ್ರೆಯ ಸೀನಿಯರ್ ಕನ್ಸಲ್ಟೆಂಟ್ ಫಿಸಿಶಿಯನ್ ಡಾ.ಅಶೋಕ್ ಹೇಳುತ್ತಾರೆ.
ಮೂರು ತಿಂಗಳ ಬಿರು ಬೇಸಿಗೆ ನಂತರ ಸುಮಾರು ಎರಡು ವಾರಗಳಿಂದ 28 ವರ್ಷದ ಆರ್. ಶ್ರೀಕಾಂತ್ ಎಂಬ ಯುವಕ ಜ್ವರದಿಂದ ಬಳಲಿದ. ನಂತರ ಆಸ್ಪತ್ರೆಗೆ ತೆರಳಿ ಪರೀಕ್ಷೆ ಮಾಡಿಸಿಕೊಂಡರು. ಡೆಂಗ್ಯೂ ಪತ್ತೆಗಾಗಿ ಮಾಡುವ ಎನ್ಎಸ್1 ಪರೀಕ್ಷೆ ನಡೆಸಿದ್ದು, ರಕ್ತದೊತ್ತಡದಲ್ಲಿ ಇಳಿಮುಖವಾಗಿರುವುದು ಮತ್ತು ಪ್ಲೇಟ್ಲೆಟ್ಸ್ ಪ್ರಮಾಣದಲ್ಲಿ ಭಾರೀ ಇಳಿಮುಖವಾಗಿರುವುದು ಪತ್ತೆಯಾಯಿತು. ಈ ಹಿನ್ನೆಲೆಯಲ್ಲಿ ಆತನಿಗೆ ಸತತ ಐದು ದಿನಗಳ ಕಾಲ ಪ್ಲೇಟ್ಲೇಟ್ಗಳನ್ನು ಹಾಕಲಾಯಿತು. ಆದರೆ, ನ್ಯುಮೋನಿಯಾ, ಶ್ವಾಸಕೋಶದ ತೊಂದರೆ ಮತ್ತು ಇತರೆ ಗಂಭೀರ ಸ್ವರೂಪದ ತೊಂದರೆ ಎದುರಿಸುವಂತಾಯಿತು. ಶ್ವಾಸನಾಳ ಮತ್ತು ಮೂತ್ರಕೋಶದಲ್ಲಿ ಊತ ಕಾಣಿಸಿಕೊಳ್ಳಲಾರಂಭಿಸಿತು. ಇದರ ಪರಿಣಾಮ ಶ್ರೀಕಾಂತ್ ಗೆ ಮೂರು ದಿನಗಳ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಿ ನಂತರ 2 ವಾರಗಳ ಕಾಲ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.
ಆದರೆ, ಇದು ಗಂಭೀರ ಸಮಸ್ಯೆಯಾಗಿ ಪರಿಣಮಿಸಬಹುದು. ಅತಿಯಾದ ಜ್ವರ ಬಂದು ಲಿಂಪ್ ಮತ್ತು ರಕ್ತ ನಾಳಗಳನ್ನು ಹಾನಿಗೊಳಿಸಬಹುದು, ಮೂಗಿನಲ್ಲಿ ರಕ್ತಸ್ರಾವ ಕಾಣಿಸಿಕೊಳ್ಳಬಹುದು, ಲಿವರ್ ನ ಗಾತ್ರವನ್ನು ಹಿಗ್ಗಿಸುತ್ತದೆ ಮತ್ತು ರಕ್ತನಾಳ ವ್ಯವಸ್ಥೆಯಲ್ಲಿ ಸಮಸ್ಯೆಯನ್ನು ತಂದೊಡ್ಡುತ್ತದೆ. ಇದರ ಪರಿಣಾಮ ಅತಿಯಾದ ರಕ್ತಸ್ರಾವ ಮತ್ತು ಸಾವಿನಂಚಿಗೂ ಕೊಂಡೊಯ್ಯುವ ಸಾಧ್ಯತೆಗಳಿವೆ. ಇದಕ್ಕೆ ಡಂಗ್ಯೂ ಶಾಕ್ ಸಿಂಡ್ರೋಮ್(ಡಿಎಸ್ಎಸ್) ಎಂದು ಕರೆಯಲಾಗುತ್ತದೆ.
ಬೇವು ಮತ್ತು ತುಳಸಿ ಎಲೆಗಳನ್ನು ಸೇವಿಸುವುದರಿಂದ ಮಾನ್ಸೂನ್ ವೇಳೆ ಕಾಣಿಸಿಕೊಳ್ಳಲಿರುವ ಇನ್ಫೆಕ್ಷನ್ ಗಳನ್ನು ಪರಿಹಾರ ಮಾಡಿಕೊಳ್ಳಬಹುದಾಗಿದೆ. ತುಳಸಿ ಕೇವಲ ವೈರಲ್ ಇನ್ಫೆಕ್ಷನ್ ಗೆ ಪರಿಹಾರ ಮಾತ್ರವಲ್ಲ, ಇದರ ಜತೆಗೆ ಶುಂಠಿಯನ್ನು ಸೇರಿಸಿ ಸೇವಿಸಿದಾಗ ಉಸಿರಾಟದಂತಹ ತೊಂದರೆಗಳೂ ಪರಿಹಾರವಾಗುತ್ತವೆ.
ಕರಾವಳಿ ಪ್ರದೇಶಗಳಲ್ಲಿ ಬೆಳೆಯುವ ಗೂಸ್ಬೆರ್ರಿ, ಮೆಣಸು ಮತ್ತು ಶುಂಠಿ ಅತ್ಯುತ್ತಮವಾದ ಕ್ಷಾರಕ ನಿವಾರಣಾ ಪದಾರ್ಥಗಳಾಗಿವೆ. ಈ ನೈಸಗರ್ಿಕ ಉತ್ಪನ್ನಗಳು ಶ್ವಾಸನಾಳಗಳ ಇನ್ಫೆಕ್ಷನ್, ವೈರಲ್ ರೋಗಾಣುಗಳನ್ನು ಹೊಡೆದೋಡಿಸುವ ಶಕ್ತಿ ಹೊಂದಿವೆ ಎನ್ನುತ್ತಾರೆ ತಜ್ಞರು.
1000 ಕ್ಕಿಂತಲೂ ಅಧಿಕ ಯೋಗ ಕೇಂದ್ರಗಳನ್ನು ಹೊಂದಿರುವ ಯೋಗ ತಜ್ಞರಾದ ಕಲಾ ನೆಹೆತೆ ಅವರು ಹೇಳುವಂತೆ, ಪ್ರತಿದಿನ ಯೋಗವನ್ನು ಮಾಡುತ್ತಾ ನಿಗದಿತ ಪ್ರಮಾಣದಲ್ಲಿ ನಿಂಬೆ ಎಲೆ, ತುಳಸಿ ಮತ್ತು ಶುಂಠಿಯನ್ನು ಸೇವಿಸಿದರೆ ಡೆಂಗ್ಯೂ ಸೇರಿದಂತೆ ಎಲ್ಲಾ ಬಗೆಯ ವೈರಲ್ ಫೀವರ್ ನಂತಹ ರೋಗಗಳು ಬರುವುದಿಲ್ಲ.

ಡೆಂಗ್ಯೂ ಹರಡದಂತೆ ಕ್ರಮ

ಡೆಂಗ್ಯೂ , ಚಿಕುನ್ ಗೂನ್ಯಾ, ಹೆಚ್1ಎನ್1 ರೋಗಗಳು ಹರಡದಂತೆ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾಗರಿಕರು ಗಾಬರಿ ಪಡಬಾರದು ಎಂದು  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ರಮೇಶ್ ಬಾಬು ಹೇಳಿದ್ದಾರೆ.
ಬೆಂಗಳೂರು ನಗರ ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಮ್ಮಿಕೊಂಡಿದ್ದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.
ಈ ವರ್ಷದ ಜನವರಿಯಿಂದ ಅಕ್ಟೋಬರ್ ವರೆಗೆ 5515 ಶಂಕಿತ ಡೇಂಘಿ ಪ್ರಕರಣಗಳನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 156 ಪ್ರಕರಣಗಳು ಮೇಲ್ನೋಟಕ್ಕೆ ಖಚಿತವಾಗಿದ್ದವು. ಎರಡು ಡೇಂಘಿ ಪ್ರಕರಣದಲ್ಲಿ ಇಬ್ಬರು ಮೃತಪಟ್ಟಿರುವುದು ಮಾತ್ರ ದೃಢಪಟ್ಟಿದೆ ಎಂದು ತಿಳಿಸಿದರು.
ಡೇಂಘಿ ಈಡೀಸ್ ಲಾರ್ವಾ ಸೊಳ್ಳೆಯಿಂದ ಹರಡುತ್ತದೆ. ಇದಕ್ಕೆ ಸ್ವಚ್ಛತೆಯೇ ಮೂಲ ಮಂತ್ರ. ಚರಂಡಿ ಕಟ್ಟಿಕೊಂಡಿದ್ದರೆ, ನೀರು ನಿಂತರೆ ಸೊಳ್ಳೆ ಉತ್ಪತ್ತಿಯಾಗಿ ಆ ಮೂಲಕ ಡೇಂಘಿ ಹರಡುತ್ತದೆ ಎಂದು ಜನರು ತಿಳಿದುಕೊಂಡಿದ್ದಾರೆ. ಆದರೆ ಸ್ವಚ್ಛ ನೀರಿನಲ್ಲೇ ಡೇಂಘಿ ಸೊಳ್ಳೆಗಳು ಹೆಚ್ಚು  ಉತ್ಪತ್ತಿಯಾಗುತ್ತವೆ ಎಂದು ತಿಳಿಸಿದರು.
ಸ್ವಚ್ಛ ನೀರನ್ನು ಕಾಯಿಸಿ, ಶೋಧಿಸಿ, ಮುಚ್ಚಿಟ್ಟು  ಉಪಯೋಗಿಸಬೇಕು ಎಂದು ಸಲಹೆ ನೀಡಿದರು.
ಜನವರಿಯಿಂದ ಸೆಪ್ಟೆಂಬರ್ ವರೆಗೆ 3112159 ಮನೆಗಳಿಗೆ ಭೇಟಿ ಕೊಟ್ಟೆವು. ಇದರಲ್ಲಿ 810318 ಮನೆಗಳಲ್ಲಿ ನೀರಿನ ಸಂಗ್ರಹವನ್ನು ಪರಿಶೀಲಿಸಿ ಸೊಳ್ಳೆ ಉತ್ಪತ್ತಿಯಾಗಿದ್ದುದನ್ನು ನಾಶಪಡಿಸಿದ್ದೇವೆ ಎಂದು ಹೇಳಿದರು.
ಡೇಂಘಿ ಕುರಿತು ಜಾಗೃತ ಅಭಿಯಾನ ಮಾಡಿದ್ದೇವೆ. 220 ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದೆವು. 52 ಕಾರ್ಯಕ್ರಮ ರೂಪಿಸಿದ್ದೆವು. 150 ಶಾಲೆಗಳಲ್ಲಿ ಭಾಷಣ, ರಸಪ್ರಶ್ನೆ ಸ್ಪರ್ಧೆ ಹಾಗೂ 72 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪ್ರಯೋಗಾಲಯಗಳನ್ನು ಸ್ಥಾಪಿಸಿದ್ದೇವೆ. ಜಿ.ಪಂ., ಗ್ರಾಪಂ, ತಾಪಂ, ಎನ್ ಜಿಒ ಹಾಗೂ ಕಾರ್ಪೊರೇಟ್ ಮಟ್ಟದಲ್ಲಿ  ಈ ಕುರಿತು ಅರಿವು ಮೂಡಿಸಿದ್ದೇವೆ ಎಂದು ಹೇಳಿದರು.
ಇದುವರೆಗೆ 10 ಮಲೇರಿಯಾ ಪ್ರಕರಣಗಳು ಪತ್ತೆಯಾಗಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗಿದೆ. ಈ ತನಕ ಒಂದೂ ಮಿದುಳು ಜ್ವರ ಪ್ರಕರಣ ಪತ್ತೆಯಾಗಿಲ್ಲ ಎಂದು ಡಾ. ರಮೇಶ್ ಬಾಬು ಸ್ಪಷ್ಟಪಡಿಸಿದರು.
ಕೆಲವು ಖಾಸಗಿ ಆಸ್ಪತ್ರೆಗಳು ಚಿಕುನ್ ಗೂನ್ಯಾ  ಪ್ರಕರಣಗಳು ಹೆಚ್ಚಾಗಿವೆ ಎಂದು ಹೇಳುತ್ತಾ ಜನರಲ್ಲಿ ಆತಂಕ ಮೂಡಿಸುತ್ತಿವೆ. ಇದನ್ನು ನಾಗರಿಕರು ನಂಬಬಾರದು. ನಾವು ಇದುವರೆಗೆ ಯಾವುದನ್ನೂ ದೃಢಪಡಿಸಿಲ್ಲ. ಸರ್ಕಾರಿ ಆಸ್ಪತ್ರೆಗಳು ದೃಢಪಡಿಸಿದರೆ ಮಾತ್ರ ಚಿಕುನ್ ಗೂನ್ಯಾ ಹರಡುತ್ತಿದೆ ಎಂಬುದನ್ನು ಜನರು ನಂಬಬೇಕು ಎಂದು ಹೇಳಿದರು.
ಈ ಬಗ್ಗೆ ಯಾರೂ ಭಯಪಡಬೇಕಿಲ್ಲ. ಈ  ಎಲ್ಲಾ ರೋಗಗಳ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದೇವೆ ಎಂದು ಅವರು ತಿಳಿಸಿದರು.
Share196Tweet123Send
Previous Post

ಕೋಮುಭಾವನೆ ಕೆರಳಿಸುವಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು: ಗೋವಿಂದ ಕಾರಜೋಳ

Next Post

ಕೊಡ್ಲಿಪೇಟೆಯಲ್ಲಿ ಯಶಸ್ವಿಯಾಗಿ ನಡೆದ ವೀರಶೈವ ಸಮಾಜ ಬಾಂಧವರ ಜಿಲ್ಲಾ ಸಮಾವೇಶ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೊಡ್ಲಿಪೇಟೆಯಲ್ಲಿ ಯಶಸ್ವಿಯಾಗಿ ನಡೆದ ವೀರಶೈವ ಸಮಾಜ ಬಾಂಧವರ ಜಿಲ್ಲಾ ಸಮಾವೇಶ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ

ಸೃಜನಶೀಲತೆಯೇ ಯಶಸ್ವಿ ಇಂಜಿನಿಯರ್‌ನ ನಿಜವಾದ ಗುರುತು: ಎನ್‌ಇಎಸ್ ಕಾರ್ಯದರ್ಶಿ ನಾಗರಾಜ

May 16, 2026
ಶಿವಮೊಗ್ಗ | ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಫುಟ್‌ಪಾತ್‌ ಒತ್ತುವರಿ ತೆರವು

ಶಿವಮೊಗ್ಗ | ಬೆಳ್ಳಂಬೆಳ್ಳಗೆ ಜೆಸಿಬಿ ಘರ್ಜನೆ, ಫುಟ್‌ಪಾತ್‌ ಒತ್ತುವರಿ ತೆರವು

May 16, 2026
ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ, ಶಾಸಕ ಚನ್ನಬಸಪ್ಪ ಭೇಟಿ

May 16, 2026
ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

ನೈಋತ್ಯ ರೈಲ್ವೆ ಮೈಸೂರು ವಿಭಾಗದಲ್ಲಿ ಅಂತರ್ ವಿಭಾಗ ನಾಟಕ ಸ್ಪರ್ಧೆ ಯಶಸ್ವಿ

May 16, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL