No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Thursday, April 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ನಾವು ಮಾಡಿದ್ದೆಲ್ಲವನ್ನೂ ಚುನಾವಣೆಗೆ ಲಿಂಕ್ ಮಾಡುವುದು ದುರಾದೃಷ್ಟ: ಪ್ರಧಾನಿ ಮೋದಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 2, 2016
in ರಾಜಕೀಯ
0
Share on FacebookShare on TwitterShare on WhatsApp
ನವದೆಹಲಿ, ಸೆ.2: ನಾವು ಮಾಡಿದ್ದೆಲ್ಲವನ್ನು ಚುನಾವಣೆಗೆ ಲಿಂಕ್ ಮಾಡುವ ಮೂಲಕ ಮಾತನಾಡುವುದು ಹಾಗೂ ಟೀಕಿಸುವುದು ನಿಜಕ್ಕೂ ದುರಾದೃಷ್ಟ ಎಂದು ಪ್ರಧಾನಿ ನರೇಂದ್ರ ಮೋದಿ ಬೇಸರ ವ್ಯಕ್ತಪಡಿಸಿದ್ದಾರೆ.
ಸಿಎನ್ ಎನ್ ನ್ಯೂಸ್ 18 ಚಾನಲ್ ಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮೋದಿ ಮನಬಿಚ್ಚಿ ಮಾತನಾಡಿದ್ದಾರೆ. ತಮ್ಮ ಸಂದರ್ಶನದ ಉದ್ದಕ್ಕೂ ಪ್ರಸ್ತುತ ಪ್ರಮುಖ ವಿಚಾರಗಳು, ದೇಶದ ಆರ್ಥಿಕತೆ, ಸಾಮಾಜಿಕ ಪೂರ್ವಾಗ್ರಹ ಚುನಾವಣಾ ರಾಜಕೀಯ ಹಾಗೂ ಸರ್ಕಾರದ ಆದ್ಯತಾ ಕಾರ್ಯಗಳೂ ಸೇರಿದಂತೆ ಹಲವು ವಿಚಾರಗಳ ಕುರಿತು ಮೋದಿ ಮಾತನಾಡಿದ್ದಾರೆ.
ಪ್ರಧಾನಿ ಮೋದಿ ಮಾತಿನ ಹೈಲೆಟ್ಸ್:
* ಕಾಶ್ಮೀರದ ಜನತೆ ಉಳಿಸಿಕೊಂಡಿರುವ ನಂಬಿಕೆ ಹಾಗೂ ಅಭಿವೃದ್ಧಿ ಕುರಿತಾಗಿ ಯಾವಾಗಲೂ ಬದ್ಧತೆಯನ್ನು ಹೊಂದಿದ್ದೇನೆ.
*ದೇಶಕ್ಕೆ ಅಗತ್ಯವಾಗಿರುವ ಕೌಶಲ್ಯ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.
*ಹಿಂದಿನ ಸರ್ಕಾರದ ಆಡಳಿತದ ಕಾಲಾವಧಿಗೆ ಹೋಲಿಕೆ ಮಾಡಿ ನೋಡಿದರೆ, ನಮ್ಮ ಸರ್ಕಾರದ ಅವಧಿಯಲ್ಲಿ ದಲಿತರ ಮೇಲಿನ ದೌರ್ಜನ್ಯ, ಕೋಮುಗಲಭೆಗಳು, ಬುಡಕಟ್ಟು ನಿವಾಸಿಗಳ ಮೇಲಿನ ದೌರ್ಜನ್ಯದಂತಹ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿದೆ ಎಂದು ವರದಿಗಳು ಹೇಳಿವೆ.
*ದಲಿತ ಸಾಂಸದ, ದಲಿತ ಶಾಸಕ, ಬುಡಕಟ್ಟು ಸಾಂಸದ, ಬುಡಕಟ್ಟು ಶಾಸಕರು ಬಿಜೆಪಿಯಲ್ಲೇ ಹೆಚ್ಚು ಇದ್ದು, ಇದಕ್ಕೆ ಪಕ್ಷ ಆದ್ಯತೆ ನೀಡಿದೆ.
*ಈ ದೇಶದಲ್ಲಿ ಜಾತಿ ಎಂಬ ವಿಷಬೀಜವನ್ನು ಹಿಂದೆಯೇ ಬಿತ್ತಿ, ಇಡಿಯ ವ್ಯವಸ್ಥೆಯನ್ನೇ ಹಾಳು ಮಾಡಿದ್ದಾರೆ.
*ಅನ್ಯಾಯದ ಗಾಯಗಳು ಸಾವಿರಾರು ವರ್ಷ ಕಳೆದರೂ ಮಾಯವಾಗಿಲ್ಲ. ಸಣ್ಣದೊಂದು ಹಾನಿ ಬಹಳಷ್ಟು ದೊಡ್ಡ ನೋವಿಗೆ ಕಾರಣವಾಗುತ್ತದೆ. ಘಟನೆ ದೊಡ್ಡದೋ ಅಥವಾ ಸಣ್ಣದೋ ವಿಚಾರವಲ್ಲ. ಅದರಿಂದಾಗುವ ನೋವು ಹಾಗೂ ಹಿಂಸೆ ದೊಡ್ಡದು.
*ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಏಕಾಂಗಿಯಾಗಿ ಸ್ಪರ್ಧಿಸಲಿದ್ದು, ಅಭಿವೃದ್ಧಿ ಕುರಿತಾಗಿನ ವಿಚಾರಗಳ ನಮ್ಮ ಅಂಶಗಳು.
*ನಾವು ಮಾಡಿದ ಪ್ರತಿ ಕೆಲಸವನ್ನೂ ಚುನಾವಣೆಗೆ ಲಿಂಕ್ ಮಾಡಿ ಮಾತನಾಡುವುದು ಹಾಗೂ ಟೀಕಿಸುವುದು ನಿಜಕ್ಕೂ ಖೇದಕರ.
*ಸಬಲೀಕರಣದ ಪ್ರಮುಖ ಅಸ್ತ್ರಶಿಕ್ಷಣ.
*ಅಭಿವೃದ್ಧಿ ಎಂದಿಗೂ ನಮ್ಮ ಪ್ರಮುಖ ವಿಚಾರ. ಇದು ಎಂದಿಗೂ ನಮ್ಮ ಆದ್ಯತೆಯಾಗಿರುತ್ತದೆ. ಇದರಲ್ಲಿ ರಾಜಕೀಯವಿಲ್ಲ, ಬದಲಾಗಿ ಬದ್ದತೆಯಿದೆ.
*ದೇಶವನ್ನು ಬಡತನ ಮುಕ್ತವನ್ನಾಗಿಸಬೇಕು ಎಂದರೆ ಅಭಿವೃದ್ಧಿಯಾಗಬೇಕು. ಬಡವರನ್ನು ಸಬಲರನ್ನಾಗಿ ಮಾಡಬೇಕು.
*ಯುವ ಸಮೂಹವನ್ನು ಎಚ್ಚರಿಸಲು ಹಾಗೂ ಪ್ರೇರಣೆಗೊಳಿಸಲು ಸ್ಟಾರ್ಟ್ ಅಪ್ ಯೋಜನೆಯನ್ನು ಜಾರಿ ಮಾಡಿದ್ದೇವೆ.
*ದೇಶ 80 ಕೋಟಿ ಯುವಕರನ್ನು ಹೊಂದಿದೆ. ಇದರಲ್ಲಿ ಬಹುತೇಕರು 30ರ ವಯಸ್ಸಿನ ಆಸುಪಾಸಿನವರು. ಇವರಿಗೆಲ್ಲಾ ಕೌಶಲ್ಯಾಭಿವೃದ್ಧಿ ಮಾಡಿದರೆ ದೇಶದ ಗತಿಯನ್ನೇ ಇವರೆಲ್ಲಾ ಬದಲಿಸಿ, ಅಭಿವೃದ್ಧಿಯತ್ತ ಕೊಂಡೊಯ್ಯುವರು.
*ಪ್ರತಿ ಭಾರತೀಯನಿಗೂ ಇಂದು ಅಭಿವೃದ್ಧಿ ಬೇಕಾಗಿದೆ.
*ಬಿಜೆಪಿಯವರೂ ಸೇರಿದಂತೆ ಭಾರತದ ಎಲ್ಲ ರಾಜಕಾರಣಿಗಳಿಗೆ ಒಂದು ವಿಚಾರ ಹೇಳಲು ಬಯಸುತ್ತೇನೆ. ನೀವು ಯಾವುದೇ ಒಂದು ವರ್ಗ ಅಥವಾ ಸಮೂಹದ ವಿರುದ್ಧ ಮಾತನಾಡಿದರೆ, ಆ ಸಮೂಹಕ್ಕೆ ಮಾತ್ರವಲ್ಲ ನೀವು ಇಡಿಯ ದೇಶಕ್ಕೆ ಉತ್ತರದಾಯಿಯಾಗುತ್ತೀರ, ನೆನಪಿರಲಿ…
*ದಲಿತರ ಜೀವನವನ್ನು ಉತ್ತಮಗೊಳಿಸುವಲ್ಲಿ ನಾನು ಬದ್ಧನಾಗಿದ್ದೇನೆ.
*ಮೋದಿ ಅಂಬೇಡ್ಕರ್ ಅವರ ಭಕ್ತನಾಗಿರುವುದು ಬಹಳಷ್ಟು ಮಂದಿಗೆ ಸಂಕಟ ಪ್ರಾಯವಾಗಿದೆ.
*19 ಹಾಗೂ 20ನೆಯ ಶತಮಾನದಲ್ಲಿ ನಾವು 1700 ಕಾನೂನುಗಳನ್ನು ನಾವು ಜಾರಿಗೊಳಿಸಿದ್ದೇವೆ. ಆದರೆ, ಇವುಗಳನ್ನು ರಾಜ್ಯಗಳೂ ಸಹ ಮಾಡುವಂತೆ ನಾನು ಕೇಳುತ್ತೇನೆ.
*ದಲಿತರ ಮೇಲಿನ ಹಲ್ಲೆ ಸೇರಿದಂತೆ ಯಾವುದೇ ಪ್ರಕರಣಗಳಿದ್ದರೂ ಅದರ ಅಡ್ಡ ಪರಿಣಾಮ ರಾಷ್ಟ್ರದ ಮೇಲಾಗುತ್ತದೆ. ಅದು ದೇಶದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತರುತ್ತದೆ.
*ವಿದೇಶದಲ್ಲಿರುವ ಕಾಳಧನವನ್ನು ವಾಪಾಸು ತರಲು ನಮ್ಮಲ್ಲಿ ಕಠಿಣ ಕಾನೂನು ಇದೆ. ಅದರೆ, ಅದಕ್ಕೆ ಸಮಯ ಬೇಕು.
*ದೇಶದಲ್ಲಿ ವಿದ್ಯುತ್ ಕೊರತೆ ನೀಗಿಸಲು ಉತ್ಪಾದನೆಯನ್ನು ಹೆಚ್ಚಿಸಲಾಗಿದೆ. ಮೂಲಭೂತ ಸೌಲಭ್ಯವನ್ನು ಉನ್ನತೀಕರಿಸುವ ಮೂಲಕ ಅಭಿವೃದ್ಧಿ ಹೊಂದುವ ಹಾದಿಯಲ್ಲಿ ಆರ್ಥಿಕತೆಗೆ ಸಹಾಯ ಮಾಡುತ್ತಿದ್ದೇವೆ.
*ರಾಜಕೀಯ ದ್ವೇಷವನ್ನು ನಾನು ಎಂದು ಮಾಡಿಲ್ಲ ಎನ್ನುವುದಕ್ಕೆ ನನ್ನ ಹಿಂದಿನ ಇತಿಹಾಸ ದಿನಗಳೇ ಸಾಕ್ಷಿಯಾಗಿದೆ.
*ಸ್ವಾತಂತ್ರ್ಯಾ ನಂತರ ನಾವು ಬಹಳಷ್ಟು ವಿದೇಶಿ ಹೂಡಿಕೆಯನ್ನು ಕಂಡಿದೆ. ಈ ವಿಚಾರದಲ್ಲಿ ನಾವು ವೇಗವಾಗಿ ಅಭಿವೃದ್ಧಿ ಹೊಂದುತ್ತಿದ್ದೇವೆ.
*ಸಾಮಾನ್ಯ ಜನರ ಬದುಕನ್ನು ಉನ್ನತೀಕರಿಸುವುದು ಹೇಗೆ ಎಂಬ ವಿಚಾರದ ಕುರಿತು ನಾವು ಗಂಭೀರ ಚಿಂತನೆ ನಡೆಸಬೇಕಿದೆ.
*ತೆರಿಗೆ ಪದ್ದತಿಯನ್ನು ಸರಳೀಕರಣ ಮಾಡಬೇಕಿದೆ. ಇದು ಸಾಮಾನ್ಯ ಜನರಿಗೆ ಸಹಕಾರಿಯಾಗುವುದು ಮಾತ್ರವಲ್ಲದೇ, ಇದರಿಂದ ಬರುವ ಆದಾಯದಿಂದ ದೇಶದ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ. 
*ಸಮಾಧಾನಕರ ವ್ಯವಹಾರ ವೇಗದ ಅಭಿವೃದ್ಧಿಗೆ ಸಹಕಾರಿ. ಇದು ವ್ಯವಸ್ಥೆಯಲ್ಲಿ ಬದಲಾವಣೆ ತರದೇ ಆಗಲು ಸಾಧ್ಯವಿಲ್ಲ.
*ನನ್ನ ಸರ್ಕಾರದ ಮಂತ್ರ: ಸುಧಾರಣೆ… ನಿರ್ವಹಣೆ…ರೂಪಾಂತರ(reform, perform and transform)
*ಸ್ವತಂತ್ರ್ಯಾ ನಂತರದ ಭಾರತದಲ್ಲಿ ಜಿಎಸ್ ಟಿ ಅತಿದೊಡ್ಡ ತೆರಿಗೆ ಸುಧಾರಣೆಯಾಗಿದೆ. ಇದು ದೇಶದಲ್ಲಿ ಮಹತ್ತರ ಬದಲಾವಣೆಯನ್ನು ತರುತ್ತದೆ.
*ಹತಾಶ ವಾತಾವರಣವನ್ನು ನಿರ್ನಾಮ ಮಾಡುವುದು ನಾನ ಅಧಿಕಾರಕ್ಕೆ ಬಂದ ನಂತರದ ಮೊದಲ ಆದ್ಯತೆಯಾಗಿತ್ತು. ಈ ನಿಟ್ಟಿನಲ್ಲಿ ಕಾರ್ಯನಿರ್ವಹಣೆ ಮಾಡುತ್ತಿದ್ದೇನೆ.
*ನನ್ನ ಸರ್ಕಾರ ಹೇಗೆ ಕಾರ್ಯ ನಿರ್ವಹಿಸುತ್ತಿದೆ ಎನ್ನುವ ವಿಚಾರ ಹಾಗೂ ಈ ಕುರಿತ ನಿರ್ಣಯವನ್ನು ದೇಶದ ಜನರಿಗೇ ಬಿಟ್ಟಿದ್ದೇನೆ.
*ಅಭಿವೃದ್ಧಿ ಕಾರ್ಯಗಳನ್ನು ಅನಾವಶ್ಯಕವಾಗಿ ಚುನಾವಣಾ ವಿಚಾರವನ್ನಾಗಿ ಮಾಡಿಕೊಳ್ಳಬಾರದು.
*ಪಾರ್ಲಿಮೆಂಟ್, ಅಸೆಂಬ್ಲಿ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಯವಂತೆ ಬದಲಾವಣೆ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಮೋದಿಯವರ ಮಾತು ಅತ್ಯಂತ ಬಲವಾಗಿತ್ತು.
*ನಾನು 14 ವರ್ಷ ಮುಖ್ಯಮಂತ್ರಿಯಾಗಿದ್ದೆ. ಆದರೆ, ಆ ಅವಧಿಯಲ್ಲಿ ರಾಜಕೀಯ ಕಾರಣಗಳಿಗಾಗಿ ಯಾವುದೇ ಪ್ರಕರಣಗಳನ್ನು ಹೊರತೆಗೆದಿಲ್ಲ. ರಾಜಕೀಯ ಕಾರಣಗಳಿಗೆ ಹಾಗೂ ದ್ವೇಷಗಳಿಗೆ ಯಾವುದೇ ಪ್ರಕರಣ ಹೊರಗೆಳೆಯುವಂತೆ ಒತ್ತಡ ಹೇರಿಲ್ಲ. ನಮಗೆ ನ್ಯಾಯ ಮುಖ್ಯವಷ್ಟೇ.
*ಕಾಳಧನಿಕರು ತಮ್ಮ ಆಸ್ತಿಯನ್ನು ನ್ಯಾಯಯುತವಾಗಿ ಸೆಪ್ಟೆಂಬರ್ 30ರ ಒಳಗಾಗಿ ಘೋಷಿಸಿಕೊಳ್ಳಬೇಕು. ಇಲ್ಲದೇ ಹೋದಲ್ಲಿ ಕಾನೂನು ರೀತ್ಯಾ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಇದರಲ್ಲಿ ಯಾವುದೇ ಮುಲಾಜಿಲ್ಲ.
Share196Tweet123Send
Previous Post

ದುಲೀಪ್ ಟ್ರೋಪಿ: ಫೈನಲ್ ಗೆ ರೆಡ್ ಇಂಡಿಯಾ

Next Post

ದೇಶದ್ರೋಹಿ ನೀಚರಿಗೇಕೆ ಸರ್ಕಾರಿ ಸವಲತ್ತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶದ್ರೋಹಿ ನೀಚರಿಗೇಕೆ ಸರ್ಕಾರಿ ಸವಲತ್ತು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

ಯಲಹಂಕ ರೈಲು ನಿಲ್ದಾಣದಲ್ಲಿ ಕಳೆದ 7.5 ಲಕ್ಷ ಮೌಲ್ಯದ ಚಿನ್ನವಿದ್ದ ಬ್ಯಾಗ್ | ಸುರಕ್ಷಿತವಾಗಿ ಹಿಂತಿರುಗಿಸಿದ ಸಿಬ್ಬಂದಿ

April 2, 2026
ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

ಕ್ರಿಯೇಟಿವ್ ಕಾಲೇಜಿನಲ್ಲಿ ‘ ಡಿಟೆಕ್ಟಿವ್ ದಿವಾಕರ್’ ತುಳು ಚಲನಚಿತ್ರದ ಟೀಸರ್ ಲಾಂಚ್

April 2, 2026
ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

ಏ.5 | ರಾಜಧಾನಿಯಲ್ಲಿ ಸಂಯೋಗ ಕಲಾಶಾಲೆಯ ವತಿಯಿಂದ ಗೆಜ್ಜೆಪೂಜೆ

April 2, 2026
ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಸೇರಿದ ವಿಶ್ವಕಪ್ ವಿಜೇತ ನಾಯಕಿ ನಿಕಿ ಪ್ರಸಾದ್!

April 1, 2026
ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

ಬೆಂಗಳೂರು ಎಫ್‌ಸಿ ತಂಡಕ್ಕೆ ಸಾವಿಯೊ ಮೆಡೈರಾ ಸೇರ್ಪಡೆ

April 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL