No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Friday, May 22, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಬಣ್ಣ ಬೇಡ ಮಣ್ಣೇ ಸಾಕು!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 4, 2016
in Army
0
Share on FacebookShare on TwitterShare on WhatsApp
ಈಗ ಎಲ್ಲೆಡೆ ಗೌರಿ-ಗಣೇಶ ಹಬ್ಬದ ಸಂಭ್ರಮ. ವಿವಿಧ ರೀತಿಯ ಗಣಪನ ಮೂರ್ತಿಗಳು ಕಂಗೊಳಿಸುತ್ತಿವೆ. ಅಂಗೈ ಅಗಲದ ಪುಟ್ಟ ಮೂರ್ತಿಯಿಂದ ಹಿಡಿದು ಆಳೆತ್ತರದ ದೊಡ್ಡ ವಿಗ್ರಹಗಳು ಸಾಲುಸಾಲಾಗಿ ಮಾರಾಟಕ್ಕಿದೆ. ಬೇರೆ ಬೇರೆ ವರ್ಣಾಂಕಲಾರಗಳಲ್ಲಿ ರಾರಾಜಿಸುತ್ತಿರುವ ವಿನಾಯಕನ ಮೂರ್ತಿಗಳನ್ನು ನೋಡುವುದೇ ಕಣ್ಣಿಗೆ ಹಬ್ಬ ಬಣ್ಣ ಬಣ್ಣದ ಗಣಪತಿ, ಪಟಗುಟ್ಟುವ ಪಟಾಕಿ ಖರೀದಿಯಲ್ಲಿ ಹಲವರು ಮಗ್ನರಾಗಿದ್ದಾರೆ. ಆದರೆ ಹಬ್ಬದ ಮೋಜು ತರುವ ಅಪಾಯಗಳ ಬಗ್ಗೆಯೂ ಎಚ್ಚರ ವಹಿಸುವುದು ಅಗತ್ಯ.
ರಂಗುರಂಗಿನ ಗಣಪನ ಮೂರ್ತಿಗೆ ಎಲ್ಲಿಲ್ಲದ ಬೇಡಿಕೆ. ನಮ್ಮಲ್ಲಿಂದ ವಿದೇಶಕ್ಕೂ ಇವು ರಫ್ತಾಗುತ್ತವೆ. ಬೇಡಿಕೆ ಹೆಚ್ಚಿರುವುದರಿಂದ ಕೈಯಿಂದ ಮೂರ್ತಿ ಮಾಡುವ ಬದಲು ಅಚ್ಚು ಉಪಯೋಗಿಸುತ್ತಾರೆ. ಹೀಗೆ ಅಚ್ಚಿನಿಂದ ತಯಾರಾದ ಗಣಪನಿಗೆ ಮೆಟಲ್ ಪೇಂಟ್ ಹಚ್ಚುತ್ತಾರೆ. ೧೦೦ ಗ್ರಾಂ ಸೀಸ ಇರುತ್ತದೆ. ಇದು ವಿಷಕಾರಕ ವಸ್ತು ಪರಿಸರ ಹಾಗೂ ಮನುಷ್ಯರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಜಿಪ್ಸಂ, ಸಲ್ಪರ್, ಪಾಸ್ಪರಸ್ ಮತ್ತು ಮ್ಯಾಗ್ನಿಷಿಯಂ ಒಳಗೊಂಡ ಪ್ಲಾಸ್ಟರ್ ಆಫ್ ಪ್ಯಾರಿಸ್ ಮೂರ್ತಿಗಳಂತೂ ಹಾನಿಕಾರಕ ಅಂಶಗಳ ಆಗರ.
ಇಂಥ ಬಣ್ಣ ಹಚ್ಚಿದ ಮೂರ್ತಿಗಳನ್ನು ಕೆರೆ ಅಥವಾ ನದಿಯಲ್ಲಿ ವಿಸರ್ಜಿಸಿದರೆ ಅಲ್ಲಿರುವ ಜಲಚರಗಳ ಗತಿ ಏನು? ಆ ನೀರು ಕುಡಿದರೆ ಮನುಷ್ಯನ ಆರೋಗ್ಯದ ಮೇಲೆ ಏನೆಲ್ಲ ಪರಿಣಾಮವಾದೀತು ಎಂಬುದನ್ನು ಯೋಚಿಸಿದ್ದೀರಾ?
ಬಣ್ಣದಲ್ಲಿರುವ ಸೀಸದ ಅಂಶ ನೇರವಾಗಿ ನಮ್ಮ ದೇಹಕ್ಕೆ ಹೋಗದಿರಬಹುದು. ಆದರೆ ಉಸಿರಾಟದ ಮೂಲಕ ಅದರಲ್ಲಿರುವ ಹಾನಿಕಾರಕ ಅಂಶಗಳು ದೇಹದೊಳಗೆ ಸೇರಿಬಿಡುತ್ತವೆ.
ನೇರ ಪರಿಣಾಮ
ಸೀಸದ ವ್ಯತಿರಿಕ್ತ ಪರಿಣಾಮ ಮೊದಲು ಕಾಣಿಸಿಕೊಳ್ಳುವುದೇ ಮಕ್ಕಳಲ್ಲಿ ಅದರಲ್ಲೂ ಆರು ವರ್ಷದೊಳಗಿನ ಪುಟಾಣಿಗಳ ಮೇಲೆ ಇದರ ಪ್ರಭಾವ ಬಹುಬೇಗನೇ ಆಗುತ್ತದೆ. ಅವರ ಮಿದುಳು ಮತ್ತು ನರಮಂಡಲದ ಮೇಲೆ ಇದುನೇರ ಪರಿಣಾಮ ಬೀರುತ್ತದೆ. ಇದರ ಫಲವಾಗಿ ಗ್ರಹಣಶಕ್ತಿ ಕ್ಷೀಣಿಸಿವಿಕೆ, ಏಕಾಗ್ರತೆ ಕೊರತೆ, ಶಾರೀರಿಕ ಬೆಳವಣಿಗೆ ಕುಂಠಿತಗೊಳ್ಳುವುದು, ಬುದ್ಧಿಮಾಂದ್ಯತೆ ಮೊದಲಾದ ಸಮಸ್ಯೆಗಳು ತಲೆದೋರುತ್ತವೆ. ಇದಲ್ಲದೇ ಮೂತ್ರಪಿಂಡದ ತೊಂದರೆಗೂ ಕಾರಣವಾಗುತ್ತದೆ. ಜತೆಗೆ ಸಂತಾನಹೀನತೆ ಹಾಗೂ ಅಧಿಕ ರಕ್ತದೊತ್ತಡಕ್ಕೂ ದಾರಿ ಮಾಡಿಕೊಡುತ್ತದೆ.
ಗಣಪತಿ ಅಪ್ಪಟ ಮಣ್ಣಿನ ಮಗ-ಮಣ್ಣಲ್ಲಿ ಏನಿಲ್ಲ? ಎಲ್ಲಾ ಇದೆ. ರೋಗ-ರುಜಿನ ತರಬಲ್ಲ ರೋಗಾಣುಗಳಿವೆ. ಬಾತಿನ ತತ್ತಿಗಳಿವೆ, ಪರೋಪಕಾರಿ ಜೀವಿಗಳಿವೆ. ಇಂಥ ಮಣ್ಣನ್ನೇ ತಿದ್ದಿ ತೀಡಿ ಗಣಪತಿ ಮೂರ್ತಿಯನ್ನು ಕಲಾವಿದರು ತಯಾರಿಸುತ್ತಾರೆ. ಮನಮೋಹಕ ಬಣ್ಣ ಬಳಿಯುತ್ತಾರೆ. ಮಿಂಚು ಹೆಚ್ಚಲು ಸುನೇರಿ ಹಚ್ಚುತ್ತಾರೆ. ಭಕ್ತಿ-ಭಾವುಕತೆಗಳ ಗಡಿ ಮೀರಿ ವೈಜ್ಞಾನಿಕ ವಿಶ್ಲೇಷಣೆ ಮಾಡಿದಾಗ ವಿಷರಾಸಾಯನಿಕಗಳ ರಸಗಟ್ಟಿ.
ಕಲಾವಿದರು ಈ ವಿಷ ವಸ್ತುಗಳಿಗೆ ನೇರವಾಗಿ ಬಲಿಯಾಗುತ್ತಾರೆ. ಭಕ್ತ ಸಮೂಹ ಗಣಪತಿ ವಿಸರ್ಜಿಸಿದ ಬಾವಿ, ಹೆರೆ, ಹೊಂಡಗಳಲ್ಲಿಯ ನೀರು ಸೇವಿಸುವ ಮೂಲಕ ಹೊಟ್ಟೆ ತೊಳೆಸುವಿಕೆ, ವಾಂತಿ, ಭೇಧಿ, ಕಾಮಾಲೆ, ಟೈಫಾಯಿಡ್ ಹಾವಳಿಗೆ ಒಳಗಾಗಬೇಕಾಗುತ್ತದೆ.
ಪರಿಹಾರವೇನು?
ರಾಸಾಯನಿಕ ಬಣ್ಣ ಹಚ್ಚಿದ ಮೂರ್ತಿಗೆ ಬದಲು ಕೇವಲ ಮಣ್ಣಿನ ಮೂರ್ತಿಯನ್ನು ಖರೀದಿಸಿ ಅರಿಶಿನ, ಕುಂಕುಮ ಮತ್ತಿತರ ಸಾವಯವ ಬಣ್ಣ ಹಚ್ಚಿ ವರ್ಣ ವಿನ್ಯಾಸ ಮಾಡಬಹುದಲ್ಲ.
ನಗರದಲ್ಲಿನ ಒತ್ತಡದ ಬದುಕಿನಲ್ಲಿ ಇದಕ್ಕೆಲ್ಲ ಸಮಯ ಹೊಂದಿಸಿಕೊಳ್ಳುವುದು ಕಷ್ಟ. ಆದರೆ ಪೇಟೆಯಲ್ಲಿ ಸಾವಯವ ಬಣ್ಣದಿಂದ ಅಲಂಕರಿಸಿದ ಮೂರ್ತಿಗಳು ಸಿಗುತ್ತವೆ. ಕೆಲವು ಕಡೆ ವಿಚಾರಿಸಿ ಖರೀದಿ ಮಾಡಬೇಕು ಅಷ್ಟೆ.
ನಮ್ಮ ಮನೆಯಲ್ಲಿ ಪ್ರತಿಷ್ಠಾಪಿಸುವ ಗಣಪ ಎಲ್ಲರಿಗೂ ಶುಭದಾಯಕವಾಗಬೇಕೆ ಹೊರತು ಇತರರಿಗೆ ಕಿರಿಕಿರಿಯುಂಟು ಮಾಡಬಾರದು. ಪ್ಲಾಸ್ಟರ್ ಆಫ್ ಪ್ಯಾರಿಸ್‌ನಿಂದ ತಯಾರಿಸಿದ ಗಣೇಶ ನೋಡಲು ಸುಂದರವಾಗಿರುತ್ತಾದರೂ, ನೀರಿನಲ್ಲಿ ಮುಳುಗದೆ ತ್ಯಾಜ್ಯವಾಗುತ್ತದೆ. ಕೆರೆಯ ಹೂಳಿನೊಂದಿಗೆ ಸೇರಿ ಮಾಲಿನ್ಯ ಸಮಸ್ಯೆಗೆ ತನ್ನ ಕೊಡುಗೆ ನೀಡುತ್ತದೆ. ಇದರಿಂದ ಯಾರಿಗೆ ಲಾಭ ಎಂಬುದನ್ನು ಮನಗಾಣಬೇಕು.
ಮೂರ್ತಿಗಳಿಗೆ ಹಚ್ಚುವ ಹಾನಿಕಾರಕ ಬಣ್ಣಗಳ ಬಗ್ಗೆ ದಶಕದ ಹಿಂದೆಯೇ ಕೆಲವರಲ್ಲಿ ಜಾಗೃತಿ ಮೂಡಿತ್ತು. ಅದು ಈಗ ಚಳುವಳಿ ರೂಪ ಪಡೆಯುತ್ತಿದೆ. ಈ ನಿಟ್ಟಿನಲ್ಲಿ ಹಲವು ಪರಿಸರಪ್ರಿಯ ಸಂಘಟನೆಗಳು ಹೆಗಲುಕೊಟ್ಟಿವೆ.
ನೀರಿಗೆ ಹಾನಿ ಉಂಟುಮಾಡದ ರಾಸಾಯನಿಕ ಬಣ್ಣ ಹೊಂದಿರುವ ಮೂರ್ತಿಗಳನ್ನು ಕೊಂಡು ಪೂಜಿಸಬೇಕು. ಪುಟ್ಟ ಮೂರ್ತಿಗಳನ್ನು ಮನೆಯ ತೊಟ್ಟಿ ಅಥವಾ ಹತ್ತಿರದ ಬಾವಿ-ಹೊಂಡಗಳಲ್ಲೇ ವಿಸರ್ಜಿಸಬಹುದು. ಇದರಿಂದ ನೀರು ಕೂಡ ಮಲಿನವಾಗುವುದಿಲ್ಲ. ಮೂರ್ತಿ ತಯಾರಕರಿಗೆ ಹಾಗೂ ಮಾರಾಟಗಾರರಿಗೆ ಈ ಬಗ್ಗೆ ಅರಿವು ಮೂಡಿಸಬೇಕು. ಜತೆಗೆ ಇಂಥ ಬಣ್ಣಗಳನ್ನು ಬಳಸದಿರುವಂತೆ ಎಚ್ಚರಿಕೆ ನೀಡಬೇಕು.
ಸಾಮಾನ್ಯ ಪ್ರಜ್ಞೆಗೆ ನಿಲುಕವಂತಹ ವಿಷಯಗಳನ್ನು ಮಾರ್ಗ ಸೂಚಿ ಮೂಲಕ ಅರಿವು ಉಂಟುಮಾಡುವ ಸರ್ಕಾರದ  ನಿರಂತರ ಯತ್ನ ನೀರಿನಲ್ಲಿ ಹೋಮ ಮಾಡಿದಷ್ಟೇ ನಿಷ್ಪ್ರಯೋಜಕವಾಗಿ, ನಮ್ಮ ದುರ್ನಡತೆ ಮೇಲುಗೈ ಸಾಧಿಸುತ್ತಲೆ ಇದೆ.
ಪರಿಸರಸ್ನೇಹಿ ಗಣಪನನ್ನು ಪೂಜಿಸಿ ಮಾಲಿನ್ಯಕ್ಕೆ ಕಡಿವಾಣ ಹಾಕೋಣ.
 
ಅಪ್ಪಟ ಮಣ್ಣಿನ ಮಗು-ಬೇಡ ಬಣ್ಣಗಳ ಬೆಡಗು
ಗೌರಿ-ಗಣೇಶ ಹಬ್ಬ ಸಮೃದ್ಧಿ ಹಾಗೂ ಸಹಬಾಳ್ವೆಯ ಸಂಕೇತವಾಗಿ ಆಚರಿಸಲಾಗುತ್ತದೆ. ಸಂಭ್ರಮಾಚರಣೆಯಿಂದ ಪರಿಸರಕ್ಕೆ ಹಾನಿಯುಂಟಾಗದಿರಲಿ. ಪರಿಸರ ಸಂರಕ್ಷಣೆ  ಇಡೀ ಸಮುದಾಯದ ಜವಾಬ್ದಾರಿ – ಹಬ್ಬದ ಸಡಗರದೊಡನೆ ಈ ಅಂಶಗಳು ನಿಮ್ಮ ನೆನಪಲ್ಲಿರಲಿ.
*ಶ್ರದ್ಧಾ ಭಕ್ತಿಯೇ ಗಣೇಶೋತ್ಸವದ ತಿರುಳಾಗಬೇಕು, ಆಡಂಬರವಲ್ಲ. 
*ಚೆಂದಕ್ಕೆ ಮಹತ್ವ ಕೊಡದೆ ಸತ್ವಕ್ಕೆ ಪ್ರಾಶಸ್ತ್ಯ ಕೊಟ್ಟು ಬಣ್ಣವಿರದ ಮಣ್ಣಿನ ಸಣ್ಣ ಮೂರ್ತಿ ತಂದು ಪೂಜಿಸಿ.  
*ಪಾಲಿಕೆ ರೂಪಿಸಿರುವ ಮೊಬೈಲ್ ಟ್ಯಾಂಕ್‌ನಲ್ಲಿ ಅಥವಾ ನಿಮ್ಮ ಮನೆಯ ಬಕೆಟ್‌ಗಳಲ್ಲೇ ವಿಸರ್ಜಿಸಿ
* ಶಬ್ದ, ವಾಯುಮಾಲಿನ್ಯ ಮಾಡುವ ಪಟಾಕಿ ಸಿಡಿಸದೇ ಸಂಪದ್ಭರಿತ ಪರಿಸರ ಸಂರಕ್ಷಿಸಿ. 
* ಗಣಪತಿ ನಿಸರ್ಗದ ಸೃಷ್ಠಿ: ಪ್ರಾಕೃತಿಕವಾಗಿ ದೊರೆಯುವ ವಸ್ತುಗಳಿಂದ ಆರಾಧಿಸಿ. 
* ಉತ್ಸವಕ್ಕಾಗಿ ಪೆಂಡಾಲ್ ಹಾಕಲು ರಸ್ತೆ ಅಗೆಯಬೇಡಿ. 
*ನೀರು ವಿದ್ಯುತ್ ಮಿತವಾಗಿ ಬಳಸಿ ಸ್ವಚ್ಛತೆ ಕಾಪಾಡಿ.
ಲೇಖಕರು: ಗುರುರಾಜ ಪೋಶೆಟ್ಟಿಹಳ್ಳಿ, 
ಯುವ ಅಧ್ಯಾತ್ಮ ಚಿಂತಕರು,
ಬೆಂಗಳೂರು.
ಗಣೇಶನ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿಯಲು ಇದೇ ಲೇಖಕರ ನೂತನ ಕೃತಿ – ವಿಶ್ವವಂದಿತ ವಿನಾಯಕ ನೋಡಬಹುದು.
 vishwavinayaka108.blogspot.com 
Share196Tweet123Send
Previous Post

ಎಂತಹಾ ವಿಷವನ್ನು ಕರಗಿಸುವ ಶಕ್ತಿ ಗೋಮೂತ್ರದಲ್ಲಿದೆ: ರಾಘವೇಶ್ವರ ಶ್ರೀ

Next Post

ಮುಖ್ಯಮಂತ್ರಿ ಕನಸಲ್ಲಿ ನವಜೋತ್ ಸಿಂಗ್ ಸಿಧು!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮುಖ್ಯಮಂತ್ರಿ ಕನಸಲ್ಲಿ ನವಜೋತ್ ಸಿಂಗ್ ಸಿಧು!

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

ಗಾಯಕಿ ಭೂಮಿಕಾ ಮಧುಸೂಧನ್’ಗೆ ಆರ್ಯಭಟ ಅಂತಾರಾಷ್ಟ್ರೀಯ ಪ್ರಶಸ್ತಿಯ ಗೌರವ

May 22, 2026
ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

ಕುವೆಂಪು ವಿವಿಯಲ್ಲಿ ಭಯೋತ್ಪಾದನಾ ವಿರೋಧಿ ದಿನ | ಪ್ರತಿಜ್ಞಾ ವಿಧಿ ಸ್ವೀಕಾರ

May 22, 2026
ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

ಅಕ್ರಮ ಗೋ ಸಾಗಾಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ: ಹಿಂದೂ ಜಾಗರಣ ವೇದಿಕೆ ಆಗ್ರಹ

May 22, 2026
ನರೇಂದ್ರ ಮೋದಿಯವರನ್ನು ಪ್ರಧಾನಿ ಹುದ್ದೆಯಿಂದ ವಜಾಗೊಳಿಸಬೇಕು: ರಾಷ್ಟ್ರಪತಿಗಳಿಗೆ ಮನವಿ

ನಾಳೆ ರೋಜಗಾರ್ ಮೇಳ | 51,000ಕ್ಕೂ ಹೆಚ್ಚು ಯುವಕರಿಗೆ ನೇಮಕಾತಿ ಪತ್ರ ವಿತರಣೆ

May 22, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಕನ್ಯಾಕುಮಾರಿ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲಿನ ಸಮಯ ಬದಲು

May 22, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL