No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Tuesday, February 17, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ : ಎ.ಕೆ.ಸುಬ್ಬಯ್ಯ ಟೀಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 18, 2016
in ಜಿಲ್ಲೆ
0
Share on FacebookShare on TwitterShare on WhatsApp
ಮಡಿಕೇರಿ, ಅ.18: ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುವ ಮೂಲಕ ಮಡಿಕೇರಿ ಕೊಡವ ಸಮಾಜ ಬಿಜೆಪಿಯ ಬ್ರ್ಯಾಂಚ್ ಆಫೀಸ್ ನಂತೆ ವರ್ತಿಸಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎ.ಕೆ. ಸುಬ್ಬಯ್ಯ ಟೀಕಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೊಡವ ಸಮಾಜಗಳು ಸಮಾಜಕ್ಕೆ ಸಂಬಂಧಿಸಿದ ಕೆಲಸ ಮಾಡಬೇಕೆ ಹೊರತು ಬಿಜೆಪಿಯ ಬ್ರ್ಯಾಂಚ್ ಆಫೀಸ್ ನಂತೆ ಕಾರ್ಯನಿರ್ವಹಿಸುವುದು ಸರಿಯಲ್ಲವೆಂದರು. ಟಿಪ್ಪು ಜಯಂತಿ ಆಚರಿಸಬೇಕು ಎನ್ನುವುದು ಕಾಂಗ್ರೆಸ್ ಸರಕಾರದ ಅಜಂಡಾವಾದರೆ, ಇದನ್ನು ವಿರೋಧಿಸುವುದು ಬಿಜೆಪಿಯ ಅಜಂಡಾವಾಗಿದೆ. ಪರಿಸ್ಥಿತಿ ಹೀಗಿರುವಾಗ ಕೊಡವ ಸಮಾಜ ಮತ್ತು ಕೊಡವ ಮೂಲಭೂತ ವಾದಿಗಳು ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವುದು ಕೊಡವ ಸಮುದಾಯಕ್ಕೆ ತೋರಿದ ಅಗೌರವವಾಗಿದೆ. ಸ್ವಂತ ಬುದ್ಧಿಯ ಮೂಲಕ ಪ್ರಬುದ್ಧತೆಯನ್ನು ಮೆರೆಯಬೇಕಾಗಿದ್ದ ಕೊಡವ ಸಮಾಜ ಕೊಡವರ ಗೌರವಕ್ಕೆ ದಕ್ಕೆ ತರುತ್ತಿದೆ ಎಂದು ಸುಬ್ಬಯ್ಯ ಆರೋಪಿಸಿದರು.
ಸುಳ್ಳಿನ ಆಧಾರದಲ್ಲಿ ಟಿಪ್ಪು ಜಯಂತಿಯನ್ನು ವಿರೋಧಿಸುವವರು ಅನೇಕರಿದ್ದಾರೆ. ಬಿಜೆಪಿ ಮತ್ತು ಸಂಘ ಪರಿವಾರ ದೇವಟ್ಪರಂಬು ಎನ್ನುವ ಸುಳ್ಳನ್ನು ಸೃಷ್ಟಿಸಿವೆ. ಇತಿಹಾಸವನ್ನು ಅಧ್ಯಯನ ಮಾಡಿದರೆ ದೇವಟ್ಪರಂಬು ಪ್ರದೇಶ ಅಥವಾ ಅಲ್ಲಿ ಹತ್ಯೆ ನಡೆದಿರುವ ಬಗ್ಗೆ ಯಾವುದೇ ಸಾಕ್ಷ್ಯಗಳಿಲ್ಲವೆಂದು ಅಭಿಪ್ರಾಯಪಟ್ಟ ಸುಬ್ಬಯ್ಯ ಕೊಡವ ಸಮಾಜ ಮೊದಲು ಚರಿತ್ರೆಯನ್ನು ಅಧ್ಯಯನ ಮಾಡಲಿ ಎಂದು ಒತ್ತಾಯಿಸಿದರು.
ಕೊಡವ ಸಮಾಜದ ಈ ವರ್ತನೆಯಿಂದ ಸಮಾಜದಲ್ಲಿ ಕೊಡವರನ್ನು ಪ್ರತ್ಯೇಕವಾಗಿ ಕಾಣುವಂತಹ ಪರಿಸ್ಥಿತಿ ನಿರ್ಮಾಣವಾಗುವುದಲ್ಲದೆ ದ್ವೇಷ ಮನೋಭಾವನೆ ಬೆಳೆಯುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ದೇವಟ್ಪರಂಬುವಿನಲ್ಲಿ ಕೊಡವರ ಹತ್ಯೆ ಮತ್ತು ಅತ್ಯಾಚಾರ ನಡೆದಿದೆ ಎಂದು ಸುಳ್ಳು ಹೇಳುವ ಮೂಲಕ ಕೊಡವರನ್ನು ಅವಮಾನಿಸಲಾಗುತ್ತಿದ್ದು, ಈ ಬಗ್ಗೆ ಕೊಡವ ಸಮಾಜಗಳು ಜಾಗೃತವಾಗಬೇಕಾಗಿದೆ. ಟಿಪ್ಪುವಿನಿಂದ ಈ ಕೃತ್ಯ ನಡೆದಿದೆ ಎನ್ನುವುದಕ್ಕೆ ಆಧಾರ ನೀಡುವಂತೆ ಒತ್ತಾಯಿಸಿದ ಎ.ಕೆ. ಸುಬ್ಬಯ್ಯ, ಕಳೆದ ವರ್ಷ ನಡೆದ ಟಿಪ್ಪು ಜಯಂತಿಯ ಸಂದರ್ಭ ಸಂಭವಿಸಿದ ಎರಡು ಸಾವಿನ ಪ್ರಕರಣಕ್ಕೆ ಜಯಂತಿಯನ್ನು ವಿರೋಧಿಸಿದವರೇ ಕಾರಣರೆಂದು ಆರೋಪಿಸಿದರು.
ಗೌಡ ಸಮಾಜದ ಬಹುತೇಕ ಮಂದಿ ಬಿಜೆಪಿಯಲ್ಲಿದ್ದರೂ ಟಿಪ್ಪು ಜಯಂತಿಯ ವಿಚಾರದಲ್ಲಿ ಮೌನವಾಗಿರುವ ಮೂಲಕ ಪ್ರೌಢಿಮೆಯನ್ನು ತೋರಿದ್ದಾರೆ ಎಂದು ಸುಬ್ಬಯ್ಯ ಶ್ಲಾಘಿಸಿದರು.
ಇತ್ತೀಚೆಗೆ ಜಿಲ್ಲಾ ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಟಿಪ್ಪು ಜಯಂತಿ ಆಚರಣೆಯನ್ನು ವಿರೋಧಿಸಿ ನಿರ್ಣಯ ಕೈಗೊಳ್ಳಲು ಬಿಜೆಪಿ ಸದಸ್ಯರು ಒತ್ತಡ ಹೇರಿದ್ದರು. ಈ ಸಂದರ್ಭ ತೀವ್ರ ವಿರೋಧ ವ್ಯಕ್ತಪಡಿಸಿದ ಕಾಂಗ್ರೆಸ್ ನ ಮಹಿಳಾ ಸದಸ್ಯರು ಬಿಜೆಪಿ ಪ್ರಸ್ತಾಪವನ್ನು ವಿಫಲಗೊಳಿಸಿದ್ದಾರೆ. ಇದು ಅತ್ಯಂತ ಚೇತೋಹಾರಿ ಬೆಳವಣಿಗೆಯಾಗಿದ್ದು, ಜಿಲ್ಲೆಯ ಕಾಂಗ್ರೆಸ್ ನಾಯಕರು ಕೂಡ ಮಹಿಳಾ ಸದಸ್ಯರ ಧೈರ್ಯವನ್ನು ಅನುಸರಿಸಬೇಕಾಗಿದೆ ಎಂದು ಸುಬ್ಬಯ್ಯ ಅಭಿಪ್ರಾಯಪಟ್ಟರು.
ಜಿಲ್ಲಾ ಕಾಂಗ್ರೆಸ್ ಕಮಲ ಕಾಂಗ್ರೆಸ್ ನವರ ಹಿಡಿತದಲ್ಲಿದ್ದು, ಇನ್ನು ಮುಂದೆಯಾದರು ಪಕ್ಷದ ಗೌರವವನ್ನು ಉಳಿಸುವ ಕೆಲಸವನ್ನು ಪ್ರಮುಖರು ಮಾಡಬೇಕಾಗಿದೆ ಎಂದರು.

ನಾಚಪ್ಪ ವಿರುದ್ಧ ಕ್ರಿಮಿನಲ್ ಕೇಸ್

ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಎ.ಕೆ. ಸುಬ್ಬಯ್ಯ, ಭೂ ಒತ್ತುವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಚಪ್ಪ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕೆಂದು ಒತ್ತಾಯಿಸಿದರು.
ಮಡಿಕೇರಿ ತಾಲ್ಲೂಕಿನ ಮರಗೋಡು ಗ್ರಾಮದ ಸರ್ವೆ ಸಂಖ್ಯೆ 1/6ಎ ನಲ್ಲಿ ತಮ್ಮ ಹಾಗೂ ತಮ್ಮ ಪತ್ನಿಯ ಹೆಸರಿನಲ್ಲಿ ತಲಾ 5 ಏಕರೆ ಮತ್ತು ಇನ್ನಷ್ಟು ಜಾಗವನ್ನು ಒತ್ತುವರಿ ಮಾಡಿಕೊಳ್ಳುವ ಮೂಲಕ ಒಟ್ಟು 16 ಎಕರೆ ಪೈಸಾರಿ ಜಾಗವನ್ನು ಎನ್.ಯು. ನಾಚಪ್ಪ ಅತಿಕ್ರಮಣ ಮಾಡಿಕೊಂಡಿದ್ದಾರೆ ಎಂದು ಸುಬ್ಬಯ್ಯ ಆರೋಪಿಸಿದರು.
ಅಕ್ರಮ ಸಕ್ರಮ ಸಮಿತಿಯಡಿ ಪೈಸಾರಿ ಜಾಗವನ್ನು ಹೊಂದಲು ಅರ್ಹತೆ ಇಲ್ಲದಿದ್ದರೂ ಜಾಗವನ್ನು ಅತಿಕ್ರಮಣ ಮಾಡಿಕೊಳ್ಳಲಾಗಿದೆ. ಅಲ್ಲದೆ, ತಮ್ಮ ಪತ್ನಿಗೆ ತಿಳಿಯದೆಯೇ ನಕಲಿ ಸಹಿ ಮಾಡುವ ಮೂಲಕ ಪತ್ನಿಯ ಹೆಸರಿನಲ್ಲೂ ಅರ್ಜಿ ಸಲ್ಲಿಸಿದ್ದು, ಇದು ಕಾನೂನಿಗೆ ವಿರುದ್ಧವಾಗಿದೆ. ತಕ್ಷಣ ಲ್ಯಾಂಡ್ ಟ್ರಿಬ್ಯೂನಲ್ ಇದನ್ನು ಪರಿಶೀಲಿಸಿ ಅರ್ಜಿಯನ್ನು ವಜಾಗೊಳಿಸಿ ಕ್ರಿಮಿನಲ್ ಪ್ರಕರಣ ದಾಖಲಿಸಬೇಕೆಂದು ಸುಬ್ಬಯ್ಯ ಒತ್ತಾಯಿಸಿದರು.
ಎನ್.ಯು. ನಾಚಪ್ಪ ಅವರು ಗಾಜಿನ ಮನೆಯಲ್ಲಿ ಕುಳಿತು ಕಲ್ಲು ಹೊಡೆಯುತ್ತಿದ್ದಾರೆ ಎಂದು ಟೀಕಿಸಿದ ಎ.ಕೆ.ಸುಬ್ಬಯ್ಯ, ನಾಚಪ್ಪ ವಿರುದ್ಧ ಈಗಾಗಲೇ ಕಾನೂನು ಹೋರಾಟ ಆರಂಭಿಸಿರುವುದಾಗಿ ತಿಳಿಸಿದರು. ದೇವಟ್ ಪರಂಬು ಎಂದು ಹೇಳಿಕೊಳ್ಳುತ್ತಿರುವ ಜಾಗದಲ್ಲಿ ಅ.17ರ ಒಳಗೆ ಸ್ಮಾರಕ ನಿರ್ಮಾಣದ ಕಲ್ಲುಗಳನ್ನು ಸ್ಥಾಪಿಸದಿದ್ದಲ್ಲಿ ಕರಸೇವೆ ಮಾಡುವುದಾಗಿ ಎನ್.ಯು. ನಾಚಪ್ಪ ಘೋಷಿಸಿದ್ದರು. ಆದರೆ, ಅ.17 ಕಳೆದರೂ ಕರಸೇವೆಯ ಯಾವುದೇ ಬೆಳವಣಿಗೆ ಕಂಡು ಬರುತ್ತಿಲ್ಲ. ನಾಚಪ್ಪ ಕೇವಲ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಟೀಕಿಸಿದ ಸುಬ್ಬಯ್ಯ, ಕರಸೇವೆ ಮಾಡಬೇಕು ಅಥವಾ ಮೌನ ವಹಿಸಿ ಹೋರಾಟದಿಂದ ಹಿಂದೆ ಸರಿಯಬೇಕೆಂದು ಒತ್ತಾಯಿಸಿದರು.
—>
News by: ಇಂದ್ರೇಶ್, ಮಡಿಕೇರಿ
Share196Tweet123Send
Previous Post

ಪಾಕಿಸ್ಥಾನದ ಸಮರ ಸನ್ನಾಹ !

Next Post

ಮನುಷ್ಯನನ್ನು ರಕ್ಷಿಸಿದ ಮರಿಯಾನೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನುಷ್ಯನನ್ನು ರಕ್ಷಿಸಿದ ಮರಿಯಾನೆ!

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ಸಂತ ಸೇವಾಲಾಲ್ ಜಯಂತಿ ಸಂಭ್ರಮ

February 17, 2026
ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

ಕನ್ಸರ್ವೆನ್ಸಿ ಅಂಚಿನಲ್ಲಿರುವ ಮರಗಳನ್ನು ಸಂರಕ್ಷಿಸಿ | ಪರಿಸರ ಹೋರಾಟಗಾರರ ಆಗ್ರಹ

February 17, 2026
ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

ಮಾರಿಕಾಂಬ ಜಾತ್ರೆ ಹಿನ್ನೆಲೆ | ‘ಡಂಗುರ’ ಪ್ರಚಾರಕ್ಕೆ ಚಾಲನೆ

February 17, 2026
ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

ಫೆ.24ರಿಂದ 28 ಪುರಾಣ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರೆ

February 17, 2026
ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

ವಿಶ್ವರಂಗಭೂಮಿ ದಿನಾಚರಣೆ ಅಂಗವಾಗಿ ಶಿವಮೊಗ್ಗದಲ್ಲಿ ಕಿರು ನಾಟಕ ಸ್ಪರ್ಧೆ

February 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL