Monday, October 2, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚುತ್ತಿದ್ದಾರೆ ಕ್ರಿಮಿನಲ್ಸ್

September 28, 2016
in ಜಿಲ್ಲೆ, ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ರವಿ ಡಿ. ಚೆನ್ನಣ್ಣನವರ್ ಶಿವಮೊಗ್ಗ ಎಸ್ಪಿಯಾಗಿದ್ದ ವೇಳೆ ಅವರ ಭಯದಿಂದಲೇ ಹಲವು ಕ್ರಿಮಿನಲ್ಸ್‌ಗಳು ಊರು ತೊರೆದಿದ್ದರು. ಮತ್ತೆ ಕೆಲವರು ತಮ್ಮ ದುಷ್ಕೃತ್ಯಗಳಿಗೆ ತಾತ್ಕಾಲಿಕ ಕಡಿವಾಣ ಹಾಕಿದ್ದರು. ಇದು ನಾಗರಿಕರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯು ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡಿತ್ತು. ಈಗಿನ ಎಸ್‌ಪಿಯವರು ಉತ್ತಮ ಹೆಸರು ಮಾಡಿದವರು. ಅವರು ಜಿಲ್ಲೆಯ ಕ್ರಿಮಿನಲ್‌ಗಳ ಬಗ್ಗೆ ಜಾಗೃತರಾಗಬೇಕಿದೆ. ಅಪರಾಧಿಗಳ ಪಟ್ಟಿಯನ್ನು ಗಮನಿಸಿ ಅವರು ಸದ್ಯ ಮಾಡುತ್ತಿರುವ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕಿದೆ.

 

ರಾಜೇಂದ್ರನಗರದಲ್ಲಿ ಮನೆ ದರೋಡೆಗೆ ವಿಫಲ ಯತ್ನ, ವಿವೇಕಾನಂದ ನಗರದಲ್ಲಿ ಮರುಕಳಿಸಿದ ಸರಗಳ್ಳತನ, ಜೆಪಿ ನಗರದಲ್ಲಿ ರಾತ್ರಿ ನಿಲ್ಲಿಸಿದ್ದ ವಾಹನಗಳಿಗೆ ಬೆಂಕಿ, ಊರಗಡೂರಿನಲ್ಲಿ ಬೇರೆ ಬೇರೆ ಜಾತಿಯ ಯುವಕ-ಯುವತಿ ಒಟ್ಟಿಗೆ ಹೋಗುವಾಗ ಎಳೆದೊಯ್ದು ಕೆಲವು ಯುವಕರಿಂದ ಹಲ್ಲೆ…
ಇವು ಕಳೆದೊಂದು ವಾರದಲ್ಲಿ ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ನಡೆದ ಕ್ರಿಮಿನಲ್ ಚಟುವಟಿಕೆಗಳು. ಇವುಗಳನ್ನು ಗಮನಿಸಿದಾಗ ಮತ್ತೆ ಹಳೆ ಕ್ರಿಮಿನಲ್ಸ್ ಬಾಲ ಬಿಚ್ಚುತ್ತಿದ್ದಾರೆಯೇ ಅಥವಾ ಹೊಸಬರು ಕ್ರಿಮಿನಲ್ ಕೆಲಸಕ್ಕೆ ಕೈ ಹಾಕುತ್ತಿದ್ದಾರೆಯೇ ಎಂಬ ಪ್ರಶ್ನೆ ಮೂಡುತ್ತಿದೆ. ಎಸ್‌ಪಿ ಬದಲಾದ ನಂತರ ಈ ಬೆಳವಣಿಗೆ ಚಿಗಿತುಕೊಳ್ಳುತ್ತಿದೆಯೇ, ಪೊಲಿಸರು ಒಂದೇ ತಿಂಗಳಲ್ಲಿ ಹಿಂದಿನ ಬಿಗು ಕ್ರಮವನ್ನು ಮರೆತುಬಿಟ್ಟರೇ ಅಥವಾ ಕೈಬಿಟ್ಟರೇ ಎಂಬೆಲ್ಲ ಚಿಂತನೆಗಳು ಹರಿದಾಡಲಾರಂಭಿಸಿವೆ.
ಎಸ್‌ಪಿ ಆಗಿ ಅಭಿನವ್ ಖರೆ ಜಿಲ್ಲೆಗೆ ಬಂದ ನಂತರ ಇನ್ನೂ ಏಕೊ ಅವರು ಸದ್ದು ಮಾಡಲಾರಂಭಿಸಿಲ್ಲ. ಇದರಿಂದ ಇಂತಹ ಚಟುವಟಿಕೆ ಹೆಚ್ಚುತ್ತಿದೆಯೇ ಎಂಬ ಅನುಮಾನ ಜನರಲ್ಲಿ ಬರುವಂತಾಗಿದೆ. ಖರೆಯವರು ಸದ್ದಿಲ್ಲದೆ ಕೆಲಸ ಮಾಡುತ್ತಿರಬಹುದು. ಅದು ಅಪರಾಧಿಗಳಿಗೆ ಗೊತ್ತಾಗದೆಯೇ ಇದ್ದಿರಲೂಬಹುದು. ಆದರೆ ಯಶಸ್ವಿ ಗಣೇಶೋತ್ಸವ ಮೆರವಣಿಗೆಯನ್ನು ನಿರ್ವಹಿಸಿದ ನಂತರ ಎಸ್‌ಪಿಯವರ ಹೆಸರು ಎಲ್ಲೂ ಕೇಳಿಬರುತ್ತಿಲ್ಲ.
ಇದೇನೆ ಇರಲಿ, ಕೆಲವು ದಿನಗಳಿಂದ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ದಿಢೀರ್ ಆಗಿ ಅಪರಾಧ ಕೃತ್ಯಗಳು ಏರುಗತಿಯಲ್ಲಿ ಸಾಗುತ್ತಿವೆ. ವಿಶೇಷವಾಗಿ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುಷ್ಕೃತ್ಯಗಳಲ್ಲಿ ಕೆಲವು ಕಿಡಿಗೇಡಿಗಳು ನಿರಂತರವಾಗಿ ತೊಡಗುತ್ತಿರುವುದು ಕಂಡುಬರುತ್ತಿದೆ. ಹೆಚ್ಚುತ್ತಿರುವ ಕ್ರಿಮಿನಲ್ಸ್‌ಗಳ ಅಟ್ಟಹಾಸಕ್ಕೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಪೊಲೀಸರ ಕಾರ್ಯವೈಖರಿಯ ಬಗ್ಗೆ ನಾಗರಿಕರು ಸಾಮಾಜಿಕ ಜಾಲತಾಣ ‘ವ್ಯಾಟ್ಸಾಪ್’ ಗ್ರೂಪ್‌ಗಳಲ್ಲಿ ಚರ್ಚೆ ನಡೆಸಲಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಪಿ ಅಭಿನವ್ ಖರೆ ಕ್ರಿಮಿನಲ್ಸ್‌ಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಾಗಿದೆ.
ರವಿ ಡಿ. ಚೆನ್ನಣ್ಣನವರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಮಿಸಿದ್ದ ಸಂದರ್ಭದಲ್ಲಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯಾದ್ಯಂತ ರೌಡಿಸಂ, ಸರಗಳ್ಳತನ, ಮನೆಗಳ್ಳತನ, ದರೋಡೆ, ವಾಹನ ಕಳ್ಳತನ, ಯುವತಿಯರಿಗೆ ಕಿರುಕುಳ, ಹಫ್ತಾ ವಸೂಲಿ, ಸಮಾಜದ ಶಾಂತಿ-ಸುವ್ಯವಸ್ಥೆಗೆ ಭಂಗ ಉಂಟು ಮಾಡುವಂತಹ ದುಷ್ಕೃತ್ಯಗಳು ಸೇರಿದಂತೆ ನಾನಾ ರೀತಿಯ ಅಪರಾಧ ಕೃತ್ಯಗಳು ವಿಪರೀತ ಮಟ್ಟಕ್ಕೆ ತಲುಪಿತ್ತು. ಅದರಲ್ಲಿಯೂ ರಾಜಕೀಯ ಕೃಪಾಪೋಷಿತ ಕ್ರಿಮಿನಲ್ಸ್‌ಗಳ ಹಾವಳಿ ಹೇಳತೀರದಾಗಿತ್ತು. ಕ್ರಿಮಿನಲ್ಸ್‌ಗಳಿಗೆ ಪೊಲೀಸರ ಭಯವೇ ಇಲ್ಲದಂತಹ ಪರಿಸ್ಥಿತಿ ಸೃಷ್ಟಿಯಾಗಿತ್ತು. ನಾಗರಿಕರು ಪೊಲೀಸ್ ಇಲಾಖೆಯ ಮೇಲಿದ್ದ ನಂಬಿಕೆಯನ್ನೇ ಕಳೆದುಕೊಳ್ಳುವಂತಹ ಸ್ಥಿತಿ ನಿರ್ಮಾಣವಾಗಿತ್ತು.
ಆದರೆ ಚೆನ್ನಣ್ಣನವರ್ ತಮ್ಮ ನೇರ-ನಿರ್ಭೀಡ ಕಾರ್ಯವೈಖರಿಯ ಮೂಲಕ, ಸಿನಿಮೀಯ ಶೈಲಿಯಲ್ಲಿಯೇ ಕ್ರಿಮಿನಲ್ಸ್‌ಗಳನ್ನು ಸೆದೆಬಡಿಯುವ ಕೆಲಸ ಆರಂಭಿಸಿದರು. ತಾವೇ ಖುದ್ದಾಗಿ ನಾಗರಿಕರ ಅಹವಾಲು ಆಲಿಸಿ ಅಪರಾಧಿಗಳ ಬೆನ್ನು ಬಿದ್ದರು. ಮಾರುವೇಷದ ಕಾರ್ಯಾಚರಣೆ ನಡೆಸಿ ಕಾನೂನುಬಾಹಿರ ಕೃತ್ಯ ನಡೆಸುವವರ ಎದೆ ನಡುಗುವಂತೆ ಮಾಡಿದರು. ರಾತ್ರಿ-ಹಗಲು ಗಸ್ತು ವ್ಯವಸ್ಥೆ ಬಿಗಿಗೊಳಿಸಿದ್ದರು. ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ಸ್‌ಗಳಿಗೆ ಲಾಠಿ ಏಟು ಖಚಿತ ಎಂಬ ಭಯ ಹುಟ್ಟಿಸಿದರು. ಕಾನೂನುಬಾಹಿರ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದ್ದ, ಕ್ರಿಮಿನಲ್ಸ್‌ಗಳೊಂದಿಗೆ ಶಾಮೀಲಾಗಿದ್ದ ಇಲಾಖೆಯಲ್ಲಿದ್ದ ಭ್ರಷ್ಟ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳಿಗೂ ತಕ್ಕ ಶಾಸ್ತಿ ಮಾಡಿದರು. ಕಠಿಣ ಕ್ರಮಗಳಿಂದ ಸೀಮಿತಾವಧಿಯಲ್ಲಿಯೇ ಇಡೀ ಜಿಲ್ಲೆಯಲ್ಲಿ ಕ್ರೈಂ ಚಟುವಟಿಕೆಗಳು ತಹಬದಿಗೆ ಬಂದಿದ್ದವು.
ಚೆನ್ನಣ್ಣನವರ್ ಭಯದಿಂದಲೇ ಹಲವು ಕ್ರಿಮಿನಲ್ಸ್‌ಗಳು ಊರು ತೊರೆದಿದ್ದರು. ಮತ್ತೆ ಕೆಲವರು ತಮ್ಮ ದುಷ್ಕೃತ್ಯಗಳಿಗೆ ತಾತ್ಕಾಲಿಕ ಕಡಿವಾಣ ಹಾಕಿದ್ದರು. ಇದರಿಂದ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನೆಲೆಸಿತ್ತು. ಇದು ನಾಗರಿಕರಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿತ್ತು. ಜೊತೆಗೆ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯವೈಖರಿಯು ಇಡೀ ರಾಜ್ಯದ ಗಮನ ಸೆಳೆಯುವಂತೆ ಮಾಡಿತ್ತು.
ಈಗಿನ ಎಸ್‌ಪಿಯವರು ಉತ್ತಮ ಹೆಸರು ಮಾಡಿದವರು. ಅವರು ಜಿಲ್ಲೆಯ ಕ್ರಿಮಿನಲ್‌ಗಳ ಬಗ್ಗೆ ಜಾಗೃತರಾಗಬೇಕಿದೆ. ಅಪರಾಧಿಗಳ ಪಟ್ಟಿಯನ್ನು ಗಮನಿಸಿ ಅವರು ಸದ್ಯ ಮಾಡುತ್ತಿರುವ ಚಟುವಟಿಕೆಗಳ ಬಗ್ಗೆ ನಿಗಾ ವಹಿಸಬೇಕಿದೆ. ಹೊಸ ಕ್ರಿಮಿನಲ್‌ಗಳನ್ನು ಬಗ್ಗುಬಡಿಯುವ ಕೆಲಸ ಮಾಡಬೇಕಿದೆ. ತಮ್ಮ ಕೆಳಗಿನ ಅಧಿಕಾರಿಗಳು ಈ ಹಿಂದಿನಂತೆ ನಿರ್ಭಿಡತೆಯಿಂದ ಕೆಲಸ ಮಾಡಲು ಸೂಚಿಸಬೇಕಿದೆ. ಕೂಡಲೇ ಅಂತಹವರ ಬಗ್ಗೆ ಕ್ರಮ ಜರುಗಿಸುವತ್ತ ಮುಂದಡಿ ಇಡಬೇಕಿದೆ.
ಕೆಲವು ದಿನಗಳಿಂದ ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯ ಹಲವೆಡೆ ದಿಢೀರ್ ಆಗಿ ಅಪರಾಧ ಕೃತ್ಯಗಳು ಏರುಗತಿಯಲ್ಲಿ ಸಾಗುತ್ತಿವೆ. ವಿಶೇಷವಾಗಿ, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸಮಾಜದ ಶಾಂತಿ-ಸುವ್ಯವಸ್ಥೆಗೆ ಧಕ್ಕೆ ಉಂಟು ಮಾಡುವ ದುಷ್ಕೃತ್ಯಗಳಲ್ಲಿ ಕೆಲವು ಕಿಡಿಗೇಡಿಗಳು ನಿರಂತರವಾಗಿ ತೊಡಗುತ್ತಿರುವುದು ಕಂಡುಬರುತ್ತಿದೆ. ಹೆಚ್ಚುತ್ತಿರುವ ಕ್ರಿಮಿನಲ್ಸ್‌ಗಳ ಅಟ್ಟಹಾಸಕ್ಕೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ ಹಾಕುವಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ವಿಫಲವಾಗಿದೆಯೇ ಎಂಬ ಪ್ರಶ್ನೆ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ. ಪೊಲೀಸರ ಕಾರ್ಯವೈಖರಿಯ ಬಗ್ಗೆ ನಾಗರಿಕರು ಸಾಮಾಜಿಕ ಜಾಲತಾಣ ‘ವ್ಯಾಟ್ಸಾಪ್’ ಗ್ರೂಪ್‌ಗಳಲ್ಲಿ ಚರ್ಚೆ ನಡೆಸಲಾರಂಭಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಪಿ ಅಭಿನವ್ ಖರೆ ಕ್ರಿಮಿನಲ್ಸ್‌ಗಳಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡಬೇಕಾಗಿದೆ.

Previous Post

ಭಗತ್‌ಸಿಂಗ್ ಏಕೆ ರಾಷ್ಟ್ರೀಯ ನಾಯಕರಲ್ಲ?

Next Post

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

kalpa

kalpa

Next Post

ಶ್ರೀಮಠ ಎಂದಿಗೂ ಧರ್ಮದ ಹಾದಿಯನ್ನು ಬಿಟ್ಟಿಲ್ಲ: ರಾಘವೇಶ್ವರ ಶ್ರೀ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ರಾಗಿಗುಡ್ಡದಲ್ಲಿ ಕಲ್ಲುತೂರಾಟ, ಸೆಕ್ಷನ್ ಜಾರಿ, ಆರ್’ಎಎಫ್ ರೂಟ್ ಮಾರ್ಚ್

October 1, 2023

ಭಾರತಕ್ಕೆ ಬೇಕಿದ್ದ ನಟೋರಿಯಸ್, ಮೋಸ್ಟ್ ವಾಂಟೆಡ್ ಉಗ್ರ ಪಾಕ್ ಅಪರಿಚಿತರ ಗುಂಡಿಗೆ ಉಡೀಸ್

October 1, 2023

ಕಾರು ಅಪಘಾತಕ್ಕೆ ಮಹಿಳೆ ಸಾವು | ಖ್ಯಾತ ನಟ ನಾಗಭೂಷಣ್ ಬಂಧನ | ಜಾಮೀನು ಮಂಜೂರು

October 1, 2023

ಭದ್ರಾವತಿ | ಭೀಕರ ಅಪಘಾತ | ಲಾರಿ ಹರಿದು ಮೂವರ ದಾರುಣ ಸಾವು

October 1, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ರಾಗಿಗುಡ್ಡದಲ್ಲಿ ಕಲ್ಲುತೂರಾಟ, ಸೆಕ್ಷನ್ ಜಾರಿ, ಆರ್’ಎಎಫ್ ರೂಟ್ ಮಾರ್ಚ್

October 1, 2023

ಭಾರತಕ್ಕೆ ಬೇಕಿದ್ದ ನಟೋರಿಯಸ್, ಮೋಸ್ಟ್ ವಾಂಟೆಡ್ ಉಗ್ರ ಪಾಕ್ ಅಪರಿಚಿತರ ಗುಂಡಿಗೆ ಉಡೀಸ್

October 1, 2023

ಕಾರು ಅಪಘಾತಕ್ಕೆ ಮಹಿಳೆ ಸಾವು | ಖ್ಯಾತ ನಟ ನಾಗಭೂಷಣ್ ಬಂಧನ | ಜಾಮೀನು ಮಂಜೂರು

October 1, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!