No Result
View All Result
ABB deepens Karnataka footprint with new investments to serve high growth emerging sectors
English Articles

ABB deepens Karnataka footprint with new investments to serve high growth emerging sectors

by ಕಲ್ಪ ನ್ಯೂಸ್
March 12, 2026
0

Kalpa Media House  |  BENGALURU | ABB, a global technology leader in electrification and automation, is expanding its manufacturing footprint...

Read moreDetails
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ಸುಪ್ರೀಂ ಗೆ ಕಾವೇರಿ ಜಲಾನಯನ ಪ್ರದೇಶಗಳ ಅಧ್ಯಯನ ವರದಿ ಸಲ್ಲಿಕೆ: ಮಂಗಳವಾರ ವಿಚಾರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 17, 2016
in ಜಿಲ್ಲೆ
0
Share on FacebookShare on TwitterShare on WhatsApp

ನವದೆಹಲಿ, ಅ.17: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚನೆ ಮಾಡಿದ್ದ ತಜ್ಞರ ಸಮಿತಿ ಕರ್ನಾಟಕ, ತಮಿಳುನಾಡಿನ ಕಾವೇರಿ ಜಲಾನಯನ ಪ್ರದೇಶಕ್ಕೆ 4 ದಿನಗಳ ಭೇಟಿ ನೀಡಿ ನಡೆಸಿದ್ದ ಅಧ್ಯಯ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದೆ.

ಕೇಂದ್ರ ಜಲ ಆಯೋಗದ ಮುಖ್ಯಸ್ಥ ಜಿಎಸ್ ಝಾ ಅವರ ನೇತೃತ್ವದ ತಜ್ಞರ ಸಮಿತಿ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಪ್ರವಾಸ ಮಾಡಿ ತನ್ನ ವರದಿ ತಯಾರಿಸಿದ್ದು, ಸುಮಾರು 39  ಪುಟಗಳ ವರದಿಯನ್ನು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆ ಮಾಡಿದೆ. ಎರಡೂ ರಾಜ್ಯಗಳ ನೀರಿನ ಲಭ್ಯತೆ ಹಾಗೂ ನೀರಿನ ಅವಶ್ಯಕತೆಗಳ ಕುರಿತು ಮಾತ್ರ ಮಾಹಿತಿ ನೀಡಲಾಗಿದ್ದು, ತಮಿಳುನಾಡಿಗೆ ನೀರು ಬಿಡುವ ಕುರಿತು ಅಥವಾ ನೀರು ಬಿಡಬಾರದು ಎಂಬುದರ ಕುರಿತು ಯಾವುದೇ ರೀತಿಯ ಶಿಫಾರಸ್ಸು ಮಾಡಿಲ್ಲ ಎನ್ನಲಾಗಿದೆ.

ಜಿಎಸ್ ಝಾ ನೇತೃತ್ವದ ತಂಡ ತಮ್ಮ ವರದಿಯಲ್ಲಿ ಎರಡೂ ರಾಜ್ಯಗಳ ನೀರಿನ ಕೊರತೆ ಹಾಗೂ ನೀರಿನ ಲಭ್ಯತೆ ಕುರಿತಂತೆ ಮಾಹಿತಿ ನೀಡಿದ್ದಾರೆ. ಅದರಂತೆ  ಕರ್ನಾಟಕದಲ್ಲಿ ನೀರಿನ ಸಮಸ್ಯೆಯಿಂದಾಗಿ 42 ತಾಲ್ಲೂಕುಗಳನ್ನು ಬರ ಪೀಡಿತ ಎಂದು ರಾಜ್ಯ ಸರ್ಕಾರ ಘೋಷಣೆ ಮಾಡಿದೆ. ಕರ್ನಾಟಕದಲ್ಲಿನ ನೀರಿನ ಕೊರತೆಯಿಂದಾಗಿ ಅಲ್ಲಿ ಉದ್ಯೋಗ  ಸೃಷ್ಟಿಗೂ ಸಮಸ್ಯೆಯಾಗಿದೆ. ಮಂಡ್ಯ ಜಿಲ್ಲೆಯಲ್ಲಿ ಬೆಳೆ ನಾಶದಿಂದಾಗಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಕೊರತೆಯಿಂದಾಗಿ ಕರ್ನಾಟಕದ ಮೀನುಗಾರರು ಕೂಡ  ಸಮಸ್ಯೆ ಎದುರಿಸುತ್ತಿದ್ದು, ಆರ್ಥಿಕವಾಗಿ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ಪ್ರಸ್ತುತ ಕರ್ನಾಟಕದ ಜಲಾಶಯಗಳಲ್ಲಿ ಕೇವಲ 30 ಟಿಎಂಸಿ ನೀರಿನ ಸಂಗ್ರಹ ಮಾತ್ರವಿದೆ ಎಂದು  ವರದಿಯಲ್ಲಿ ಉಲ್ಲೇಖಿಸಿದ್ದಾರೆ.

ಅಂತೆಯೇ ಕರ್ನಾಟಕದ ರೈತರ ಕುರಿತಂತೆ ಮಾಹಿತಿ ನೀಡಿರುವ ಜಿಎಸ್ ಝಾ, ಕರ್ನಾಟಕದ ರೈತರಲ್ಲಿ ಅಭಿವೃದ್ಧಿ ಆಕಾಂಕ್ಷೆ ಹಾಗೂ ಆಶೋತ್ತರಗಳಿದ್ದು, ಅವರನ್ನು ನೀರಿನ ಸದ್ಭಳಕೆ ಕುರಿತಂತೆ  ಶಿಕ್ಷಿತರನ್ನಾಗಿ ಮಾಡುವ ಅನಿವಾರ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಇನ್ನು ತಮಿಳುನಾಡು ವಿಚಾರಕ್ಕೆ ಸಂಬಂಧಿಸಿದಂತೆ, ತಮಿಳುನಾಡಿನ ರೈತರಿಗೂ ನೀರಿ ಅವಶ್ಯಕತೆ ಇದ್ದು, ಬೆಳೆದು ನಿಂತ ಬೆಳೆಗಳನ್ನು ರಕ್ಷಿಸಿಕೊಳ್ಳಲು ಅಲ್ಲಿನ ರೈತರಿಗೆ ನೀರು  ಅನಿವಾರ್ಯವಾಗಿದೆ. ತಮಿಳುನಾಡು ಸರ್ಕಾರ ರೈತರಿಗೆ ಸಾಕಷ್ಟು ಸಬ್ಸಿಡಿ ಘೋಷಣೆ ಮಾಡಿದ್ದು, ಈ ಸಬ್ಸಿಡಿ ಪರಿಣಾಮಕಾರಿಯಾಗಿ ರೈತರ ತಲುಪಲು ನೀರು ಬೇಕೇ ಬೇಕು ತಮ್ಮ ವರದಿಯಲ್ಲಿ  ಉಲ್ಲೇಖಿಸಿದ್ದಾರೆ. ಇದೇ ವೇಳೆ ಬೆಳೆ ಉಳಿಸಿಕೊಳ್ಳಲು ನೀರು ಬೇಕು ಬೇಕು ಎಂದು ಹೇಳಿರುವ ಝಾ ಮುಂದುವರೆದ ತಂತ್ರಜ್ಞಾನವನ್ನು ರೈತರು ಅಳವಡಿಸಿಕೊಳ್ಳುವ ಮೂಲಕ ರೈತರು ತಮ್ಮ  ಬೆಳೆಗಳನ್ನು ಉಳಿಸಿಕೊಳ್ಳಬಹುದು. ತಮಿಳುನಾಡಿಗೆ ಶೇ.50ರಷ್ಟು ನೀರು ಕಡಿತವಾದರೂ ಬೆಳೆ ನಿಭಾಯಿಸಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.

ತಜ್ಞರ ಪ್ರಕಾರ ಈ ಅಂಶ ನಾಳೆ ಕರ್ನಾಟಕ ಸುಪ್ರೀಂ ಕೋರ್ಟ್ನಲ್ಲಿ ವಾದ ಮಂಡಿಸಲು ನೆರವಾಗಬಹುದು ಎಂದು ಹೇಳಲಾಗುತ್ತಿದೆ.

ಅಕ್ಟೋಬರ್ 6ರಿಂದ 10ರವರೆಗೂ ಜಿ.ಎಸ್.ಝಾ ನೇತೃತ್ವದ ತಂಡ ಎರಡು ರಾಜ್ಯಗಳ ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಅಧ್ಯಯನ ನಡೆಸಿತ್ತು. ಕೆಆರೆಸ್, ಹೇಮಾವತಿ, ಕಬಿನಿ ಹಾಗೂ  ಹಾರಂಗಿ ಜಲಾಶಯಗಳ ಹಾಗೂ ಜಲಾಶಯ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧ ಮಾಡಿತ್ತು.

ಇಂದು ಏನಾಗುತ್ತೆ? 

ಹಿಂದಿನ ವಿಚಾರಣೆಯಲ್ಲಿ ಅ.18ರ ವರೆಗೆ 2000 ಕ್ಯೂಸೆಕ್ ನೀರು ಹರಿಸಲು ಆದೇಶಿಸಿತ್ತು. ಸುಪ್ರೀಂಕೋರ್ಟ್ ಆದೇಶವನ್ನು ಸರ್ಕಾರ ಪಾಲಿಸಿದೆ. ಈಗ ಈ ವರದಿ ಆಧರಿಸಿ ಮಂಗಳವಾರ ಸುಪ್ರೀಂಕೋರ್ಟ್ ಯಾವ ಆದೇಶವನ್ನು ನೀಡಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಅಕ್ಟೋಬರ್ 6ರಿಂದ 10ರವರೆಗೂ ಜಿ.ಎಸ್.ಝಾ ನೇತೃತ್ವದ ತಂಡ ಎರಡು ರಾಜ್ಯಗಳ ಕಾವೇರಿ ಅಚ್ಚುಕಟ್ಟು ಪ್ರದೇಶಗಳಲ್ಲಿ ಅಧ್ಯಯನ ನಡೆಸಿತ್ತು. ಈ ವೇಳೆ ತಮಿಳುನಾಡಿಗಿಂತಲೂ ಕರ್ನಾಟಕದ ಸ್ಥಿತಿ ಶೋಚನೀಯವಾಗಿದೆ ಎಂಬ ಸತ್ಯಸಂಗತಿ ಅರಿತ ಕೇಂದ್ರ ತಂಡ ಮರುಕ ವ್ಯಕ್ತಪಡಿಸಿತ್ತು. ಹೀಗಾಗಿ ನಾಳೆ ನಡೆಯುವ ವಿಚಾರಣೆಯಲ್ಲಿ ರಾಜ್ಯಕ್ಕೆ ಒಂದಿಷ್ಟು ನ್ಯಾಯ ಸಿಗುವ ಆಶಾಭಾವನೆಯಿದೆ.

2 ದಿನ ಕರ್ನಾಟಕದ ಕಾವೇರಿ ಕೊಳ್ಳದಲ್ಲಿ ಅಧ್ಯಯನ ನಡೆಸಿದ ವೇಳೆ ಝಾ ನೇತೃತ್ವದ ತಂಡ ಇಲ್ಲಿನ ಪರಿಸ್ಥಿತಿ ಕಂಡು ಮರುಗಿತ್ತು. ನಿಮಗೆ ತುಂಬಾ ಕಷ್ಟವಿದೆ. ನಿಮ್ಮ ಕಷ್ಟ ನಮಗೆ ಅರ್ಥವಾಗಿದೆ ನಿಮಗೆ ಕುಡಿಯಲು ನೀರೂ ಇಲ್ಲ ಅಂತಾ ಹೇಳಿತ್ತು. ನಿಮ್ಮ ಕಷ್ಟವನ್ನು ಸುಪ್ರೀಂ ಕೋರ್ಟ್ ಮುಂದೆ ಇಡುತ್ತೇವೆ ಅಂತಾ ಹೇಳಿತ್ತು. ಕೆಆರೆಸ್, ಹೇಮಾವತಿ, ಕಬಿನಿ ಹಾಗೂ ಹಾರಂಗಿ ಜಲಾಶಯಗಳ ಹಾಗೂ ಜಲಾಶಯ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧ ಮಾಡಿತ್ತು. ಈ ವೇಳೆ ಕಾವೇರಿ ಕೊಳ್ಳದ ಜನ ಕೂಡಾ ಕಾವೇರಿ ಟೀಂ ಮುಂದೆ ತಮ್ಮ ಕಷ್ಟವನ್ನು ಹೇಳಿಕೊಂಡು ಅಳಲು ತೋಡಿಕೊಂಡಿದ್ದರು.

ರಾಜ್ಯಕ್ಕೆ ವರವೋ…ಶಾಪವೋ…?

ಕಾವೇರಿ ಕೊಳ್ಳದ ಜಲಾನಯನ ಪ್ರದೇಶಗಳ ವಾಸ್ತವಿಕ ಪರಿಸ್ಥಿತಿ ಅಧ್ಯಯನ ಮಾಡಲು ಸುಪ್ರೀಂಕೋರ್ಟ್ ನೇಮಿಸಿದ್ದ ತಾಂತ್ರಿಕ ಸಮಿತಿ ನೀಡಿರುವ ವರದಿ ರಾಜ್ಯಕ್ಕೆ ವರವಾಗುವ ಸಾಧ್ಯತೆ ಇದೆಯಾದರೂ ಕಾದುನೋಡಬೇಕಿದೆ.

ಸುಪ್ರೀಂಕೋರ್ಟ್ ಸೂಚನೆಯಂತೆ ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ಕೊಳ್ಳದ ವಸ್ತುಸ್ಥಿತಿ ಅಧ್ಯಯನ ನಡೆಸಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿಯಲ್ಲಿ ರಾಜ್ಯಕ್ಕೆ ಪೂರಕವಾಗಿರುವ ಅಂಶಗಳು ಉಲ್ಲೇಖವಾಗಿರುವುದು ಕಂಡುಬಂದಿದೆ.

ರಾಜ್ಯದ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿಲ್ಲ. ಸುಮಾರು 42 ತಾಲೂಕುಗಳನ್ನು ರಾಜ್ಯ ಸರ್ಕಾರ ಬರ ಪ್ರದೇಶವೆಂದು ಘೋಷಿಸಿದೆ. ಕಾವೇರಿ ಜಲಾಶಯದ ಪ್ರದೇಶಗಳಲ್ಲಿ ಬೆಳೆ ಒಣಗಿ ಹಾಳಾಗಿದೆ. ಜಲಾಶಯಗಳಲ್ಲಿ ನೀರಿನ ಮಟ್ಟ ಡೆಡ್ ಸ್ಟೋರೇಜ್ ಹಂತ ತಲುಪಿದೆ. ಬೆಳೆದು ನಿಂತ ಬೆಳೆಗಳಿಗೆ ನೀರಿಲ್ಲ. ಕೆಲ ಹಳ್ಳಿಗಳಲ್ಲಿ ರೈತರು ಪರ್ಯಾಯ ಬೆಳೆಗೆ ಮಾರು ಹೋಗಿದ್ದಾರೆ.  ತಮಿಳುನಾಡಿನ ಜಲಾಶಯಗಳಲ್ಲಿ ನೀರಿನ ಪ್ರಮಾಣ ಸಾಕಷ್ಟಿದೆ. ಅಲ್ಲಿನ ಬೆಳೆ ನಷ್ಟದ ಪ್ರಮಾಣ ಕಡಿಮೆ ಇದೆ. ಇಲ್ಲಿ ಕುಡಿಯುವ ನೀರಿಗೆ ನೀರು ಸಂಗ್ರಹ ಮಾಡಿಕೊಳ್ಳಲಾಗಿದೆ. ಆದರೆ, ಅಲ್ಲಿ ಸಾಂಬಾ ಬೆಳೆಗೆ ನೀರು ಸಂಗ್ರಹ ಮಾಡಿಕೊಳ್ಳಲಾಗಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ತಮಿಳುನಾಡಿಲ್ಲೂ ಕೂಡ ಸಾಂಬಾ ಬೆಳೆ, ಅರಿಶಿನ ಬೆಳೆ ನಷ್ಟ ಉಂಟಾಗಿದೆ. ಆದರೆ, ಕರ್ನಾಟಕದ ಪ್ರಮಾಣದಲ್ಲಿ ಬೆಳೆ ನಷ್ಟವಾಗಿಲ್ಲ ಎಂದು ಸಮಿತಿ ಹೇಳಿದೆ.

Share196Tweet123Send
Previous Post

ಉಕ್ಕು ಸೇತುವೆ ಪಾರದರ್ಶಕ, ಸಂಶಯ ಬೇಡ: ಸಿದ್ಧರಾಮಯ್ಯ ಸ್ಪಷ್ಟನೆ

Next Post

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾಂಗ್ರೆಸ್ ಗೆ ವಿದಾಯ ಹೇಳಿದ ಶ್ರೀನಿವಾಸ್ ಪ್ರಸಾದ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

March 12, 2026
ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

ಹರ್ಮುಜ್ ಮಾರ್ಗದ ತೈಲಕ್ಕಿಂತಲೂ ಹೆಚ್ಚಿನದ್ದು ಭಾರತ ತಲುಪಿದೆ, ಭಯ ಬೇಡ | ಕೇಂದ್ರ ಮಹತ್ವದ ಹೇಳಿಕೆ

March 12, 2026
ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

ಕಳ್ಳತನ ನಡೆದಿದ್ದು ಭದ್ರಾವತಿಯ ಜನ್ನಾಪುರದಲ್ಲಿ | ಆರೋಪಿ ಪತ್ತೆಯಾಗಿದ್ದು ಬೆಂಗಳೂರಿನಲ್ಲಿ | ನಡೆದಿದ್ದೇನು?

March 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ದಿನಗಳು ಶಿವಮೊಗ್ಗದ ಮೂರು ರೈಲುಗಳ ಸಂಚಾರದಲ್ಲಿ ಮಹತ್ವದ ಬದಲಾವಣೆ | ಇಲ್ಲಿದೆ ಡೀಟೇಲ್ಸ್

March 12, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL