No Result
View All Result
Cervical Cancer | Early Detection and Prevention Can Save Lives
English Articles

Cervical Cancer | Early Detection and Prevention Can Save Lives

by ಕಲ್ಪ ನ್ಯೂಸ್
January 16, 2026
0

Kalpa Media House  |  Special Article  |Cervical cancer remains one of the most preventable yet life-threatening cancers affecting women worldwide....

Read moreDetails
From Global Gold to Mumbai Spirit: Andre De Grasse Brings Olympic Legacy to the Tata Mumbai Marathon

From Global Gold to Mumbai Spirit: Andre De Grasse Brings Olympic Legacy to the Tata Mumbai Marathon

January 16, 2026
ಟಾಟಾ ಮುಂಬೈ ಮ್ಯಾರಥಾನ್ 2026ರಲ್ಲಿ ದಾಖಲೆ ನಿಧಿ ಸಂಗ್ರಹ

Haseena Themali Raises Over ₹5 Lakh for Palliative Care at the Tata Mumbai Marathon 2026 in her bid

January 15, 2026
ಚಳಿಗಾಲದ ಸೋಂಕುಗಳು & ಆಂಟಿಬಯೋಟಿಕ್ ದುರ್ಬಳಕೆ | ವೈರಲ್ ಯಾವುದು? ಅಪಾಯಕಾರಿ ಯಾವುದು?

Winter Infections and Antibiotic Misuse: What Is Viral? What Is Dangerous?

January 12, 2026
ಶಿವಮೊಗ್ಗ | ಜ.5-9 | ಕೃಷಿ ವಿವಿಯಲ್ಲಿ ನಡೆಯಲಿದೆ ಅಂತಾರಾಷ್ಟ್ರೀಯ ಮಹತ್ವದ ಕಾರ್ಯಾಗಾರ

Shivamogga | An international workshop will be held at the Agricultural University from Jan 5-9

January 1, 2026
  • Advertise With Us
  • Grievances
  • About Us
  • Contact Us
Sunday, January 18, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಹಸಿದ ಸಿಂಹ ಬಾಯಿಗೆ ದೊರೆತ ಉಗ್ರ ನರಿಗಳು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 29, 2016
in Army
0
Share on FacebookShare on TwitterShare on WhatsApp
ಇತಿಹಾಸ ಮರುಕಳಿಸಿದೆ. ತಾಯಿ ಭಾರತಾಂಬೆಗೆ ಸಂಕಟ ಬಂದಾಗಲೆಲ್ಲಾ ಅದನ್ನು ಪರಿಹಾರ ಮಾಡಲು ಓರ್ವ ವ್ಯಕ್ತಿ ನಾಯಕನಾಗಿ ಉದಯಿಸುತ್ತಾನೆ, ಸಂಕಟದಲ್ಲಿರುವ ಮಾತೆಯನ್ನು ದುಷ್ಟರಿಂದ ಪಾರು ಮಾಡಿ, ಶತ್ರುಗಳ ಗುಂಡಿಗೆಯನ್ನು ಸೀಳುತ್ತಾನೆ. ಅಂತಹ 56 ಇಂಚಿನ ಎದೆಯ ನಾಯಕ ನಮ್ಮ ದೇಶವನ್ನು ಮುನ್ನಡೆಸಲು ನಿಂತಂದಿನಿಂದ ದೇಶ ಬದಲಾಗುತ್ತಾ ಹೋಯಿತು.
ಇಂದು ದೇಶದ ಪ್ರಧಾನಿ ಮಾತ್ರ 56 ಇಂಚಿನ ಎದೆಯವರಲ್ಲ, ಇಡಿಯ ಭಾರತ ದೇಶವೇ 56 ಇಂಚು ಎದೆಯಿಂದ ಹೆಮ್ಮೆಯಿಂದ ನಿಲ್ಲುವಂತಹ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಹಾಗೂ ಈ ಹೆಮ್ಮೆಯ ವಾಸ್ತವ ಕರ್ತೃ, ಕರ್ಮ, ಕ್ರಿಯೆಯಾಗಿ ಹೋರಾಡಿದ ಪ್ರತಿಯೊಬ್ಬ ಭಾರತೀಯ ಯೋಧರಿಗೆ ಇಡಿಯ ದೇಶವೇ ಇಂದು ತಲೆಬಾಗಬೇಕಿದೆ.
ಭಾರತದ ಸಾಂಪ್ರದಾಯಿಕ ಶತ್ರು ರಾಷ್ಟ್ರ ಪಾಕಿಸ್ಥಾನದ ಸೇನೆ ಹಾಗೂ ಪಾಕ್ ಸೇನೆ ಪ್ರಾಯೋಜಿತ ಉಗ್ರರ ಉಪಟಳ ಮಿತಿ ಮೀರಿತ್ತು. ಗಡಿಯಲ್ಲಿ ಮೇಲಿಂದ ಮೇಲೆ ಕಾಲು ಕೆರೆದುಕೊಂಡು ಅಪ್ರಚೋದಿತ ದಾಳಿಯನ್ನು ನಡೆಸುತ್ತಿದ್ದ ಪಾಕಿಸ್ಥಾನ, ಉರಿ ಸೆಕ್ಟರ್‌ನಲ್ಲಿ ಮಲಗಿದ್ದ ಯೋಧರ ಮೇಲೆ ಗ್ರೆನೇಡ್ ಎಸೆದು ಯೋಧರನ್ನು ಹತ್ಯೆ ಮಾಡಿತೋ… ಇನ್ನು ತಾಳ್ಮೆ ಸಲ್ಲ… ಆ ವೇಳೆ ಎದ್ದು ನಿಂತಿದ್ದು ಮೋದಿ ನೇತೃತ್ವದ ಭಾರತ ಸರ್ಕಾರ ಹಾಗೂ ಇದನ್ನು ಸಾಕಾರಗೊಳಿಸಿದ್ದು ಭಾರತದ ಹೆಮ್ಮೆಯ ಯೋಧರು.
ಉರಿ ಸೆಕ್ಟರ್‌ನಲ್ಲಿ ಭಾರತೀಯ ಯೋಧರ ಮೇಲೆ ದಾಳಿ ನಡೆದ ನಂತರ ತಾಳ್ಮೆ ಕಳೆದುಕೊಳ್ಳದ ಮೋದಿ ಸರ್ಕಾರ ಅತ್ಯುತ್ತಮ ರಾಜತಾಂತ್ರಿಕ ನಡೆಯನ್ನು ಇಟ್ಟಿದೆ. ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಮಾತನ್ನು ಕೇಳಿಬರದಂತಹ ಸೂಕ್ಷ್ಮತೆಯನ್ನು ವಹಿಸಿ, ಅಂತಿಮವಾಗಿ ಪಾಕ್ ಗಡಿಯೊಳಗೆ ಸೇನೆಯನ್ನು ನುಗ್ಗಿಸಿ, ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿತು. ಸರ್ಕಾರ ದಾಳಿ ನಡೆಸಿ ಎಂದು ಆದೇಶ ನೀಡಿದ ಕೂಡಲೇ ಜೀವವನ್ನೂ ಲೆಕ್ಕಿಸದೇ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ವ್ಯವಸ್ಥಿತವಾಗಿ ಸುತ್ತುವರಿದು, ಅಕ್ಷರಶಃ ಅಟ್ಟಾಡಿಸಿ ಕೊಂದಿದ್ದಾರೆ ನಮ್ಮ ಭಾರತೀಯ ಯೋಧರು ಎಂದರೆ, ನಮ್ಮ ಮಣ್ಣಿನ ಪರಾಕ್ರಮ ಗುಣ ಇನ್ನೆಂತಹುದ್ದಿರಬೇಕು. ಇದನ್ನು ಸಾಕ್ಷೀ ಕರಿಸುವುದು ನಿನ್ನೆ ನಡೆದ ದಾಳಿಯಲ್ಲಿ ಭಾರತೀಯ ಸೇನೆಯ ಒಬ್ಬನೇ ಒಬ್ಬ ಯೋಧನನ್ನು ನಾವು ಕಳೆದುಕೊಂಡಿಲ್ಲ ಎನ್ನುವುದು.
ಭಾರತೀಯರೇ ಹಾಗೇ… ಯಾರ ಮೇಲೂ ದಂಡೆತ್ತಿ ಹೋಗುವುದಿಲ್ಲ. ಆದರೇ, ವೃಥಾ ಕಾಲುಕೆರೆದುಕೊಂಡು ಕೆಣಕಿದರೆ ಸುಮ್ಮನೆ ಬಿಡುವ ಪ್ರಸಂಗವೇ ನಮ್ಮಲ್ಲಿಲ್ಲ. ಮೋದಿ ಪ್ರಧಾನಿಯಾದ ನಂತರ ಪಾಕ್‌ನೊಂದಿಗೆ ಶಾಂತಿ ಕಾಪಾಡಲು ಸಾಕಷ್ಟು ಪ್ರಯತ್ನಗಳನ್ನು ನಡೆಸಿದ್ದರು. ಆದರೆ, ಇದನ್ನೇ ನಮ್ಮ ದೌರ್ಬಲ್ಯ ಎಂದು ತಿಳಿದ ಪಾಕ್ ಆಕ್ರಮಣಗಳ ಮೇಲೆ ಆಕ್ರಮಣ ಮಾಡಿತು. ಇನ್ನು ಸುಮ್ಮನೆ ಕೂರಲು ಈಗೇನು ದೇಶದಲ್ಲಿ ಹೆಂಗಸರ ಸರ್ಕಾರವಿಲ್ಲ. ಈಗಿರುವುದು ಭಾರತಾಂಬೆಯ ಸೇವೆಗಾಗಿ ತನ್ನನ್ನೇ ಸಮರ್ಪಿಸಿಕೊಂಡಿರುವ ಮೋದಿ ನೇತೃತ್ವದ ಗಂಡು ಸರ್ಕಾರ.
ಪರಿಣಾಮ ಮಲಗಿದ್ದ ಸಿಂಹವನ್ನು ಬಡಿದೆಬ್ಬಿಸಿದ ಪಾಕ್‌ನ ನರಿಗಳನ್ನು ಭಾರತೀಯ ಪುರುಷ ಸಿಂಹಗಳು ಅಟ್ಟಾಡಿಸಿ ಬೇಟೆಯಾಡುವ ಮೂಲಕ ಪ್ರಪಂಚಕ್ಕೆ ನಮ್ಮ ಸಾಮರ್ಥ್ಯ ಏನು ಎಂಬುದನ್ನು ತೋರಿಸಿಕೊಟ್ಟಿದ್ದಾರೆ. ಮಾತ್ರವಲ್ಲ ಉರಿಯಲ್ಲಿ ಹುತಾತ್ಮರಾದ ೧೯ ಯೋಧರ ಬಲಿದಾನಕ್ಕೆ ಪ್ರತಿಯಾಗಿ ಅದರ ಮೂರು ಪಟ್ಟು ನರಿಗಳನ್ನು ಕೊಂದು ಲೆಕ್ಕ ಚುಕ್ತಾ ಮಾಡಿಲಾಗಿದೆ.
ರಾಜತಾಂತ್ರಿಕ ನಡೆಗೆ ಹ್ಯಾಟ್ಸಾಫ್ ಮೋದಿಜಿ
ಮೋದಿ ಪ್ರಧಾನಿಯಾದ ಆರಂಭದಿಂದ ಎಲ್ಲ ರಾಷ್ಟ್ರಗಳ ಪ್ರವಾಸ ಕೈಗೊಂಡು, ಹೋದೆಡೆಯೆಲ್ಲಾ ಭಯೋತ್ಪಾದನಾ ನಿಗ್ರಹವನ್ನುಪ್ರಸ್ತಾಪ ಮಾಡುತ್ತಾ, ಭಾರತದೊಂದಿಗಿನ ಸಂಬಂಧವನ್ನು ವೃದ್ಧಿಸುತ್ತಾ ಬಂದರು. ಐಎಸ್‌ಐಎಸ್ ಉಗ್ರರಿಗೆ ಪೋಷಕರಾಗಿರುವ ಭಾರತಕ್ಕೆ ಪೆಟ್ರೋಲಿಯಂ ಪೂರೈಕೆ ಮಾಡುವ ರಾಷ್ಟ್ರಗಳಿಗೆ ಜಾಣತನದಿಂದ ಪೆಟ್ಟುಕೊಟ್ಟರು.
ಎನ್‌ಎಸ್‌ಜಿಯಲ್ಲಿ ಖಾಯಂ ಸ್ಥಾನಕ್ಕಾಗಿ ಪ್ರಮುಖ ರಾಷ್ಟ್ರಗಳ ಬೆಂಬಲವನ್ನು ಪಡೆದರು. ಪ್ರಮುಖವಾಗಿ ಕಾಶ್ಮೀರ ಸಮಸ್ಯೆ ಕುರಿತಂತೆ ಜಾಣತನದಿಂದ ಪಾಕಿಸ್ಥಾನವೇ ಅಂತರ್ರಾಷ್ಟ್ರೀಯ ವಿವಾದವನ್ನಾಗಿ ಮಾಡುವಂತೆ ಮಾಡಿದರು. ಈ ವಿಚಾರದಲ್ಲಿ ಉಗ್ರರನ್ನು ಪೋಷಿಸಿ, ಪೊರೆಯುತ್ತಿರುವ ಪಾಕ್ ತನಗೆ ಸರಿಸಮರಿಲ್ಲ ಎಂದು ಬೀಗತೊಡಗಿತು.  ಆದರೆ ಮೋದಿ ಮಾತ್ರ ಮೌನವಾಗಿಯೇ ರಾಜತಾಂತ್ರಿಕ ಬಲೆಯನ್ನು ಹೆಣೆಯುತ್ತಿದ್ದರು.
ಉರಿ ಸೆಕ್ಟರ್ ಮೇಲೆ ದಾಳಿ ನಡೆದ 19 ಯೋಧರ ಬಲಿಯಾದ ನಂತರ ಭಾರತ ಹಾಗೂ ಪಾಕ್ ನಡುವಿನ ದ್ವೇಷ ಹೆಚ್ಚಾಯಿತು. ಈ ವೇಳೆ ಮೌನವಾಗಿದ್ದ ಮೋದಿ ವಿರುದ್ಧ ಸಾಕಷ್ಟು ಟೀಕೆಗಳು ಕೇಳಿಬಂದವು. ಪ್ರಮುಖವಾಗಿ ಕಾಂಗಿಗಳು, ಎಡಪಂಥೀಯರು, ಪ್ರಗತಿಪರರು ಮೋದಿಯನ್ನು ಇನ್ನಿಲ್ಲದಂತೆ ಅವಹೇಳನ ಮಾಡಿದರು.
ಆದರೆ, ನಮ್ಮ ಮೇಲಾಗುತ್ತಿರುವ ದಾಳಿಯನ್ನು ರಾಜತಾಂತ್ರಿಕ ಸೂಕ್ಷ್ಮ ನಡೆಯಿಂದ ಮಟ್ಟ ಹಾಕಬೇಕು ಎಂದು ಎಚ್ಚರಿಕೆಯ ಹೆಜ್ಜೆಯನ್ನಿಟ್ಟ ಮೋದಿ, ಅಮೆರಿಕಾ ಸೇರಿದಂತೆ ಜಗತ್ತಿನ ಪ್ರಮುಖ ರಾಷ್ಟ್ರಗಳ ಬೆಂಬಲ ಪಡೆದರು. ಪರಿಣಾಮ, ಪ್ರಮುಖ ರಾಷ್ಟ್ರಗಳ ಪಾಕ್ ವಿರುದ್ಧ ಕಳೆದ ಕೆಲವು ದಿನಗಳಿಂದ ಮುಗಿಬಿದ್ದು ಎಚ್ಚರಿಕೆ ನೀಡಿದವು.
ಆದರೆ, ನಿನ್ನೆ ಭಗತ್ ಸಿಂಗ್ ಜನ್ಮದಿನಾಚರಣೆ ಆಚರಿಸಿ ಇಡೀ ದೇಶ ನೆಮ್ಮದಿಯಿಂದ ನಿದ್ದೆ ಮಾಡಿದ್ದರೆ, ಅಲ್ಲಿ ಮೋದಿ ಯೋಜನೆಯೆ ಸಿಂಹಗಳ ಪಡೆ ವ್ಯವಸ್ಥಿತವಾಗಿ ಪಾಕ್ ಗಡಿಯೊಳಗೆ ನುಗ್ಗಿ ಉಗ್ರರನ್ನು ಬೇಟೆಯಾಡಿದವು.
ಇಲ್ಲಿ ಪ್ರಮುಖವಾಗಿ ಗಮನಿಸಬೇಕಾದ ಒಂದು ಅಂಶವೆಂದರೆ, ಪತ್ರಿಕಾಗೋಷ್ಠಿ ನಡೆಸಿದ ಸೇನಾ ಮುಖ್ಯಸ್ಥರು ಹಾಗೂ ವಿದೇಶಾಂಗ ಕಾರ್ಯದರ್ಶಿಯವರು, ನಮ್ಮ ಯುದ್ಧ ಪಾಕ್ ವಿರುದ್ಧವಲ್ಲ. ಉಗ್ರರ ವಿರುದ್ಧ. ಉಗ್ರರನ್ನು ಸದೆ ಬಡಿಯಲು ಪಾಕ್ ನಮಗೆ ಸಹಕಾರ ನೀಡುತ್ತದೆ ಎಂದು ನಾವು ನಂಬಿದ್ದೇವೆ ಎಂದು ಹೇಳಿಕೆ ನೀಡಿದರು. ಅಲ್ಲಿಗೆ, ಮೋದಿಯವರ ರಾಜತಾಂತ್ರಿಕ ಸೂಕ್ಷ್ಮ ನಡೆಗೆ ಮತ್ತೊಂದು ಸಾಕ್ಷಿ ಸಿಕ್ಕಂತಾಯಿತು. ಅಂದರೆ, ವಿಶ್ವ ಸಮುದಾಯದ ಮುಂದೆ ರಾಜತಾಂತ್ರಿಕವಾಗಿ ಭಾರತ ಸುಭದ್ರವಾದಂತಾಯಿತು ಈ ಹೇಳಿಕೆಯಿಂದ.
ಉರಿಯಲ್ಲಿ ಉಗ್ರರ ದಾಳಿ ನಡೆದಾಗ ಮೋದಿ ಈ ದೇಶಕ್ಕೆ ಮಾತು ನೀಡಿದ್ದರು. ನಮ್ಮ ಯೋಧರ ಪ್ರತಿ ಬಲಿದಾನಕ್ಕೂ ಉತ್ತರ ನೀಡುತ್ತೇವೆ, ಲೆಕ್ಕ ಚುಕ್ತಾ ಮಾಡುತ್ತೇವೆ ಎಂದು ಗುಡುಗಿದ್ದರು. ಅದು ಇಂದು ಸಾಕಾರಗೊಂಡಿದೆ. ಅಂದೆ ಮೋದಿ ದೇಶಕ್ಕೆ ನೀಡಿದ ಮಾತನ್ನು ಉಳಿಸಿಕೊಂಡಿದ್ದಾರೆ.
ಪಾಕ್ ಗೆ ಪೆಟ್ಟು ನೀಡದೇ ನೋವು ನೀಡಿದ ಭಾರತ…
ಇಂದು ಪತ್ರಿಕಾಗೋಷ್ಠಿ ನಡೆಸಿದ ಸೇನಾ ಮುಖ್ಯಸ್ಥರು ಹಾಗೂ ವಿದೇಶಾಂಗ ಕಾರ್ಯದರ್ಶಿಯವರ ಹೇಳಿಕೆಯನ್ನು ಗಮನಿಸಿ.
ಎಲ್‌ಒಸಿ ಭಾಗದಲ್ಲಿ ಉಗ್ರರು ಹೊಂಚುಹಾಕಿ ಕಾದಿದ್ದಾರೆ ಎಂಬ ಖಚಿತ ವರ್ತಮಾನ ಬಂದಿತ್ತು. ಈ ಹಿನ್ನೆಲೆಯಲ್ಲಿ ಎಲ್‌ಒಸಿ ದಾಟಿ ದಾಳಿ ಮಾಡಿದ್ದೇವೆ ಎಂದು ರಣಭೀರ್ ಸಿಂಗ್, ಉಗ್ರರಿಂದ ಗಡಿ ಭಾಗದಲ್ಲಿ ಆಗಿರುವ ಹಾನಿಯನ್ನು ನಾವು ಎಂದಿಗೂ ಸಹಿಸುವುದಿಲ್ಲ. ಉಗ್ರರನ್ನು ಸದೆ ಬಡಿಯಲು ಪಾಕ್ ಸೇನೆ ನಮಗೆ ಸಹಕಾರ ನೀಡುತ್ತದೆ ಎಂದು ನಾವು ನಂಬಿದ್ದೇವೆ. ಈ ವಿಚಾರದಲ್ಲಿ ಪಾಕಿಸ್ಥಾನ ಸೇನಾ ಮುಖ್ಯಸ್ಥರೊಂದಿಗೆ ನಾವು ಈಗಾಗಲೇ ಮಾತುಕತೆಯನ್ನು ನಡೆಸಿದ್ದೇವೆ ಎಂದರು.
ಅಂದರೆ ಈ ಮಾತಿನಿಂದ ನಿಮ್ಮ ಪ್ರಾಯೋಜಿತ ಕೃತ್ಯಗಳನ್ನು ಸಹಿಸುವುದಿಲ್ಲ ಎಂಬ ಸಂದೇಶ ನೀಡುತ್ತಲೇ, ನಿಮ್ಮ ಸಹಕಾರ ನೀಡಿ ಎಂಬ ರಾಜತಾಂತ್ರಿಕ ನಡೆಯನ್ನು ಎಚ್ಚರಿಕೆಯಿಂದ ಇಡುತ್ತಲೇ ತಕ್ಕ ಪಾಠ ಕಲಿಸಲಾಗಿತ್ತು.
ಅದರಲ್ಲು ಮುಖ್ಯವಾದ ಅಂಶವೆಂದರೆ, ಒಟ್ಟು ಎಂಟು ಸೀಮಿತ ದಾಳಿಗಳನ್ನು ನಡೆಸಲು ನಿರ್ಧರಿಸಲಾಗಿದೆ. ಈ ವಿಚಾರದಲ್ಲಿ ದಾಳಿ ನಡೆಸಲು ಖಚಿತ ಮಾಹಿತಿ ಆಧಾರದ ಯೋಜನೆ ರೂಪುಗೊಂಡಿದೆ. ಇಂತಹ ದಾಳಿಯನ್ನು ಮುಂದಿನ ದಿನಗಳಲ್ಲಿ ಮತ್ತೆ ಕೈಗೊಳುವ ಇರಾದೆ ನಮ್ಮ ಮುಂದಿಲ್ಲ . ಆದರೆ  ಪಾಕ್‌ನ ಉಗ್ರ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಿನ ದಿನಗಳಲ್ಲಿ ಸೀಮಿತ ಕಾರ್ಯಚರಣೆ ನಡೆಸಲು ನಾವು ಸಿದ್ಧವಾಗಿದ್ದೇವೆ ಎನ್ನುವ ಎಚ್ಚರಿಕೆಯನ್ನು ಪಾಕ್‌ಗೆ ರವಾನಿಸಿರುವುದು ಭಾರತದ ಜಾಣ ಹಾಗೂ ಸುಭದ್ರ ನಡೆಯಾಗಿದೆ.
 
ಯುದ್ಧಕ್ಕೆ ಸನ್ನದ್ಧ ಸ್ಥಿತಿಯ ಪರಿಸ್ಥಿತಿ
ನಾವು ಇದನ್ನು ಮುಂದುವರೆಸಲು ಇಚ್ಛಿಸುವುದಿಲ್ಲ ಎಂದು ಭಾರತ ಹೇಳಿದ್ದರೂ, ಪಾಪಿ ಪಾಕಿಸ್ಥಾನದ ಕುತಂತ್ರ ಯಾವ ಕ್ಷಣದಲ್ಲಾದರೂ ಜಾಗೃತವಾಗಿ ಭಾರತದ ಮೇಲೆ ದಾಳಿ ನಡೆಸಬಹುದು ಎಂದು ಕೇಂದ್ರ ಸರ್ಕಾರ ಅರಿಯದೇ ಇರಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿಯೇ ಗಡಿ ಭಾಗದ ಜನವಸತಿ ಪ್ರದೇಶಗಳಿಂದ ನಾಗರಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಲಾಗುತ್ತಿದೆ, ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ಎಂತಹುದ್ದೇ ಪರಿಸ್ಥಿತಿಯನ್ನು ಎದುರಿಸಲು ಸಿದ್ದವಾಗಿರಿ ಎಂದು ಸ್ವತಃ ಪ್ರಧಾನಿ ಮೋದಿಯೇ ಹೇಳಿರುವುದು ಯುದ್ಧದ ಸಾಧ್ಯತೆಗಳನ್ನು ತಳ್ಳಿ ಹಾಕುವಂತಿಲ್ಲ ಎಂಬುದನ್ನು ಸೂಚಿಸುತ್ತದೆ.
ಹೀಗಾಗಿ, ಯುದ್ಧ ನಡೆಯುವುದಾದರೆ ನಡೆಯಲಿ.. ಯೋಧರೊಂದಿಗೆ, ಕೇಂದ್ರ ಸರ್ಕಾರದೊಂದಿಗೆ ಇಡಿಯ ಭಾರತವಿದೆ… ನಾವಿದ್ದೇವೆ… ಯಾವುದೇ ಕಾರಣಕ್ಕೂ ಹಿಂಜರಿಕೆ ಬೇಡ… ವಾಮಮಾರ್ಗವೇ ಅಷ್ಟೊಂದು ಧೈರ್ಯದಿಂದ ಇರುವಾಗ, ರಾಜಮಾರ್ಗವೇಕೆ ಹೆದರಬೇಕು… ಅಂತಹ ಪರಿಸ್ಥಿತಿ ಬಂದರೆ ಯುದ್ಧ ಘೋಷಿಸಿ… ಎಲ್ಲರೂ ಒಟ್ಟಾಗಿ ಹೋರಾಡೋಣ… ಭಾರತಾಂಬೆಯನ್ನು ರಕ್ಷಿಸೋಣ…. ಜೈಹಿಂದ್…
ಯುದ್ಧ ಘೋಷಣೆಯಾದರೆ ನಾಗರಿಕರೇನು ಮಾಡಬಹುದು…?
ಪರಿಸ್ಥಿತಿ ಕೈಮೀರಿ ನಡೆದು ಒಂದು ವೇಳೆ ಯುದ್ಧ ಘೋಷಣೆಯಾದರೆ ಸೈನಿಕರು ಗಡಿಯಲ್ಲಿ ಹೋರಾಟ ಮಾಡಿದರೆ, ದೇಶದ ಪ್ರತಿ ನಾಗರಿಕನೂ ಅದಕ್ಕೆ ಸಹಕಾರ ನೀಡಬೇಕು. ಪ್ರತಿಯೊಬ್ಬರೂ ಸೈನ್ಯದಲ್ಲಿ ಹೋಗಿ ಹೋರಾಡುವುದು ಸಾಧ್ಯವಿಲ್ಲ. ಆದರೆ ಈ ಕೆಳಗಿನ ಸೇವೆಗಳನ್ನು ಮಾಡಬಹುದು.
*ಮೊಟ್ಟ ಮೊದಲನೆಯದಾಗಿ ಜಾತಿ, ಧರ್ಮ, ಭಾಷೆ ಹಾಗೂ ರಾಜ್ಯ ಎಂಬುದನ್ನು ಬದಿಗಿಟ್ಟು ಕೇಂದ್ರ ಸರ್ಕಾರ ಹಾಗೂ ಸೇನೆಗೆ ನೈತಿಕ ಬೆಂಬಲ ನೀಡುವುದು.
*ದೇಶದ ಯಾವುದೇ ಸ್ಥಳಕ್ಕೆ ಅಪಾಯ ಸಂಭವಿಸುವ ಸಂದರ್ಭ ಎದುರಾದರೆ ಅಂತಹ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧರಾಗಿದ್ದು, ತಕ್ಷಣ ಕಾರ್ಯಪ್ರವೃತ್ತರಾಗುವುದು.
*ಸೇನೆಯಲ್ಲಿ ಹೋರಾಡುತ್ತಿರುವ ಯೋಧರಿಗೆ ನೈತಿಕ ಬೆಂಬಲ ನೀಡುವುದು. ಅದರಲ್ಲಿ ಪ್ರಮುಖವಾಗಿ ನಿಮ್ಮ ನಗರ, ಬಡಾವಣೆಗಳಲ್ಲಿ ಯೋಧರ ಕುಟುಂಬಸ್ಥರು ಯಾರಾದರೂ ಇದ್ದರೆ ಅಂತಹವರಿಗೆ ನೈತಿಕ ಬೆಂಬಲವಾಗಿ ನಿಲ್ಲುವುದು.
*ನಗರಗಳಲ್ಲಿನ ಪ್ರಮುಖ ವ್ಯಕ್ತಿಗಳೂ, ಶ್ರೀಮಂತರು, ನಾಗರಿಕರು ಯೋಧರ ಕುಟುಂಬಸ್ಥರನ್ನು ಭೇಟಿ ಮಾಡಿ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆಯನ್ನು ಮೂಡಿಸುವುದು.
*ಒಂದು ವೇಳೆ ಯಾವುದಾದರೂ ಯೋಧ ಹುತಾತ್ಮನಾದರೆ ಇಡಿಯ ನಗರ ಆ ಯೋಧನ ಕುಟುಂಬದ ಬೆನ್ನಿಗೆ ನಿಲ್ಲುವುದು.
*ಎಲ್ಲಕ್ಕೂ ಪ್ರಮುಖವಾಗಿ ಯುದ್ಧ ಘೋಷಣೆಯಾದರೆ ಅತ್ಯಧಿಕ ವೆಚ್ಚ ತಗಲುತ್ತದೆ. ಹೀಗಾಗಿ, ಸೇನೆಯ ಬ್ಯಾಂಕ್ ಖಾತೆಗೆ ಒಂದು ರೂಪಾಯಿಯಿಂದ ಹಿಡಿದು ಅವರವರ ಶಕ್ತಿಗೆ ಅನುಸಾರವಾಗಿ ಕೊಡುಗೆ ಸಂದಾಯ ಮಾಡುವುದು.
*ಯುದ್ಧ ಎಂದರೆ ಕೇವಲ ಗಡಿಯಲ್ಲಿ ನಡೆಯುವುದಲ್ಲ. ಸ್ಥಳೀಯ ಮಟ್ಟದಲ್ಲಿ ಅಹಿತಕರ ಘಟನೆಗಳನ್ನು ಸೃಷ್ಠಿಸಿ ಆಂತರಿಕವಾಗಿ ಕುಟಿಲ ಯುದ್ಧ ನಡೆಯುತ್ತದೆ. ಇಂತಹ ಬೆಳವಣಿಗೆ ನಡೆಯದಂತೆ ಎಚ್ಚರಿಕೆ ವಹಿಸುವುದು.
*ಸಾಮಾಜಿಕ ಜಾಲತಾಣಗಳಲ್ಲಿ ಅನಾವಶ್ಯಕ ಪ್ರಚೋದನಾತ್ಮಕ ಸಂದೇಶಗಳನ್ನು ರವಾನೆ ಮಾಡುವುದು ಸಲ್ಲ. ಇದರಿಂದ ಆಂತರಿಕ ಭದ್ರತೆಗೆ ಧಕ್ಕೆ ಬರುತ್ತದೆ.
*ಎಲ್ಲಕ್ಕೂ ಮಿಗಿಲಾಗಿ, ದೇಶದ ರಕ್ಷಣೆಗೆ ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಎಲ್ಲ ನಿರ್ಧಾರಗಳನ್ನು ಪಕ್ಷಾತೀತವಾಗಿ, ಸೈದ್ಧಾಂತಿಕ ನಿಲುವಿನ ಹೊರತಾಗಿ ಬೆಂಬಲ ನೀಡಬೇಕು. 
Share196Tweet123Send
Previous Post

ಕೆಣಕಿದ ಉಗ್ರರ ಹುಟ್ಟಡಗಿಸುತ್ತಿರುವ ಭಾರತೀಯ ಯೋಧರು: 150ಕ್ಕೂ ಅಧಿಕ ಉಗ್ರರ ಸಾವು?

Next Post

ಸರ್ವಪಕ್ಷಗಳ ಸಭೆಯ ಸಂಪೂರ್ಣ ಮಾಹಿತಿ.

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರ್ವಪಕ್ಷಗಳ ಸಭೆಯ ಸಂಪೂರ್ಣ ಮಾಹಿತಿ.

Leave a Reply Cancel reply

Your email address will not be published. Required fields are marked *

  • Trending
  • Latest
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

ತೀರ್ಥಹಳ್ಳಿ ಭೀಕರ ಅಪಘಾತ | ನಾಲ್ಕಕ್ಕೆ ಏರಿದ ಸಾವಿನ ಸಂಖ್ಯೆ

January 14, 2026
ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

ಶಿವಮೊಗ್ಗ | ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

January 9, 2026
ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

ಜ.14ರಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರರ 853ನೇ ಜಯಂತಿ ಆಚರಣೆ: ರವಿಕುಮಾರ್

January 12, 2026
ಇಂದಿನ ಪಂಚಾಂಗ : 2026ರ ಜನವರಿ 7, ಮಂಗಳವಾರ

ಇಂದಿನ ಪಂಚಾಂಗ | 2026ರ ಜನವರಿ 18, ಭಾನುವಾರ

January 17, 2026
ದೆಹಲಿ ಬ್ಲಾಸ್ಟ್ | ಯಾರೊಬ್ಬರನ್ನೂ ಬಿಡಲ್ಲ | ಮೋದಿ ಶಪಥ | ಸದ್ಯದಲ್ಲಿ ಕಾದಿದೆ ಮಾರಿಹಬ್ಬ?

ಕ್ರೂರ ತೃಣಮೂಲ ಸರ್ಕಾರವನ್ನು ಕಿತ್ತೊಗೆಯಿರಿ | ಪ.ಬಂಗಾಳದ ಜನರಿಗೆ ಪ್ರಧಾನಿ ಮೋದಿ ಮನವಿ

January 17, 2026
ಆರ್’ಸಿಬಿಗೆ ಭರವಸೆ | ಸ್ಪೋಟಕ ಬ್ಯಾಟಿಂಗ್’ಗೆ ಬೆಚ್ಚಿ ಬಿದ್ದ ಬೌಲರ‍್ಸ್

ಆರ್’ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್ | ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಕ್ಕೆ ಗ್ರೀನ್ ಸಿಗ್ನಲ್

January 17, 2026
ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

ಉದ್ಯೋಗ ಮೇಳದ ಪೂರ್ವಭಾವಿ ತರಬೇತಿಯಿಂದ ಸಂದರ್ಶನ ಕೌಶಲ್ಯ ವೃದ್ಧಿ | ಗುರುಮೂರ್ತಿ ಅಭಿಮತ

January 17, 2026
ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

ಮೈಸೂರು ವಿವಿ ಕುಲಪತಿ ಹೇಳಿಕೆಗೆ ಕುವೆಂಪು ವಿವಿ ಕುಲಪತಿ ಶರತ್ ಅನಂತಮೂರ್ತಿ ಖಂಡನೆ | ಏನಿದು ವಿಚಾರ?

January 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL