No Result
View All Result
AESL Launches Victory Batch at Rs 99 to support students appearing for RE-NEET
English Articles

AESL Launches Victory Batch at Rs 99 to support students appearing for RE-NEET

by ಕಲ್ಪ ನ್ಯೂಸ್
May 13, 2026
0

Kalpa Media House  |  New Delhi  | To support students who will appear for the RE-NEET exam following the cancellation...

Read moreDetails
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
  • Advertise With Us
  • Grievances
  • About Us
  • Contact Us
Thursday, May 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಈ ಬಾರಿಯದ್ದು ಅತ್ಯಂತ ವಿಶೇಷ ವಿಜಯದಶಮಿ: ಪ್ರಧಾನಿ ಮೋದಿ ವ್ಯಾಖ್ಯಾನ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 9, 2016
in ರಾಷ್ಟ್ರೀಯ
0
Share on FacebookShare on TwitterShare on WhatsApp
ನವದೆಹಲಿ, ಅ.9: ಗಡಿ ನಿಯಂತ್ರಣ ರೇಖೆಯಾಚೆ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತದ ವಿರುದ್ಧ ಭಯೋತ್ಪಾದಕ ದಾಳಿಗೆ ಸಂಚು ನಡೆಸುತ್ತಿದ್ದ ಭಯೋತ್ಪಾದಕ  ಶಿಬಿರಗಳ  ಮೇಲೆ ಭಾರತೀಯ ಪಡೆಗಳು ನಡೆಸಿದ ದಾಳಿ ನಡೆಸಿ ವಿಧ್ವಂಸಕ ಶಿಬಿರಗಳನ್ನು ಧ್ವಂಸಗೈದ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿಯವರು ಈ ವರ್ಷ ನಾವಾಚರಿಸುವ ವಿಜಯ ದಶಮಿ ‘ಅತ್ಯಂತ ವಿಶೇಷ’ ಎಂದು ಮಾರ್ಮಿಕವಾಗಿ ಉಲ್ಲೇಖಿಸಿದ್ದಾರೆ.
ಇಂದು ಇಲ್ಲಿನ ವಿಜ್ಞಾನ ಭವನದಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ಮೋದಿಯವರು, ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಅತ್ಯಂತ ಸಮರ್ಥ ಸಶಸ್ತ್ರಪಡೆಗಳು ಅಗತ್ಯ ಎಂದು ಒತ್ತಿ ಹೇಳಿದರು. ನಾವು ವಿಜಯದಶಮಿ ಆಚರಿಸಲು ಸಜ್ಜಾಗಿದ್ದೇವೆ. ಈ ವರ್ಷದ ವಿಜಯದಶಮಿ ದೇಶಕ್ಕೆ ಅತ್ಯಂತ ವಿಶೇಷವಾಗಿದೆ ಎಂದು ಪ್ರಧಾನಿಯವರು ಹೇಳಿದಾಗ ಪ್ರೇಕ್ಷಕವರ್ಗದಿಂದ ಕಿವಿಗಡಚಿಕ್ಕುವ ಕರತಾಡನ ವ್ಯಕ್ತವಾಯಿತು.
ಕೆಡುಕಿನ ವಿರುದ್ಧ ಒಳಿತಿನ ವಿಜಯದ ಸಂದೇಶವನ್ನು ಸಾರುವ ವಿಜಯದಶಮಿಯು, ನಮ್ಮ ಸೇನಾಪಡೆ ಇತ್ತೀಚೆಗೆ ಎಲ್ಒಸಿಯಾಚೆ ನುಗ್ಗಿ ಲಷ್ಕರ್ ತೊಯ್ಬಾ ಸೇರಿದಂತೆ ವಿವಿಧ ಪಾಕ್ ಪ್ರೇರಿತ ಭಯೋತ್ಪಾದಕ ಶಿಬಿರಗಳನ್ನು ಧ್ವಂಸಗೊಳಿಸಿ 38ರಿಂದ 70ರಷ್ಟು ಉಗ್ರರನ್ನು ಸಂಹರಿಸಿದ ಹಿನ್ನೆಲೆಯಲ್ಲಿ ಮಹತ್ವ ಪಡೆದಿರುವುದಾಗಿ ಪ್ರಧಾನಿಯವರು ಪರೋಕ್ಷವಾಗಿ ಉಲ್ಲೇಖಿಸಿದರು.
ಈ ಸಂದರ್ಭ ಪ್ರಧಾನಿ ಮೋದಿಯವರು ಜನಸಂಘದ ಮಾಜಿ ಅಧ್ಯಕ್ಷ ದೀನದಯಾಳ್ ಉಪಾಧ್ಯಾಯ ಅವರ ಜೀವನ ಮತ್ತು ಸಂದೇಶಗಳಿಗೆ ಸಂಬಂಸಿ 15ಪುಸ್ತಕ ಸಂಕಲನವನ್ನು ಬಿಡುಗಡೆಗೊಳಿಸಿ  ಮಾತನಾಡಿದರು. ಈ ವರ್ಷ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮಶತಾಬ್ದಿ ಆಚರಣೆಯನ್ನು ಬಿಜೆಪಿಯು ಆಯೋಜಿಸಿರುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ನಡೆದಿದೆ. ಉಪಾಧ್ಯಾಯ ಅವರು ಏಕಾತ್ಮತಾ ಮಾನವತಾವಾದದ ಮೂಲಕ ಜನರನ್ನು ಜಾತಿ, ಮತ, ಪಂಥಗಳ ಹೆಸರಿನಲ್ಲಿ ಒಡೆಯುವ ಹುಸಿ ಸೆಕ್ಯುಲರ್ ರಾಜಕೀಯಕ್ಕಿಂತ ಭಿನ್ನವಾಗಿ ಎಲ್ಲರನ್ನು ಸಮಾನ ಗೌರವದಿಂದ ಕಾಣುವ ಸಂದೇಶವನ್ನು ನೀಡಿದ್ದಾರೆ.
ದೀನದಯಾಳ್ ಉಪಾಧ್ಯಾಯ ಅವರು ಕೆಲವೇ ವ್ಯಕ್ತಿಗಳ ಹಿಡಿತದಲ್ಲಿರುವ ರಾಜಕೀಯ ಪಕ್ಷದ ಬದಲಿಗೆ ಸಂಘಟನೆ ಆಧಾರಿತ ರಾಜಕೀಯ ಪಕ್ಷದ ಪರಿಕಲ್ಪನೆಯನ್ನು ದೇಶಕ್ಕೆ ನೀಡಿರುವುದು ಅತ್ಯಂತ ದೊಡ್ಡ ಕೊಡುಗೆ ಎಂದು ಮೋದಿ ಒತ್ತಿ ಹೇಳಿದರು.
ಇದೇ ರೀತಿ , ವಿಶೇಷವಾಗಿ ಬಲಿಷ್ಠ ಸೇನೆಯೊಂದು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕಿರುವ ಬಹುದೊಡ್ಡ ಅಗತ್ಯ. ಈಗಿನ ಪರಿಸ್ಥಿತಿಯಲ್ಲಂತೂ ಇದು ಅತ್ಯಂತ ಅಗತ್ಯ. ಈ ಹಿನ್ನೆಲೆಯಲ್ಲೇ , ದೇಶದ ಸಶಸ್ತ್ರಪಡೆಗಳು ಅತ್ಯಂತ ಸಮರ್ಥ ಮತ್ತು ಶಕ್ತಿಶಾಲಿಯಾಗಿರಬೇಕು. ಇದರಿಂದ ಮಾತ್ರವೇ ದೇಶವೊಂದು ಶಕ್ತಿಶಾಲಿಯಾಗಿ ಎದ್ದು ನಿಲ್ಲಲು ಸಾಧ್ಯ ಎಂದು ದೀನದಯಾಳ್ ರು ಹೇಳಿರುವುದು ಉಲ್ಲೇಖನೀಯ.  ಇದು ಸ್ಪರ್ಧಾತ್ಮಕ ಯುಗ. ಈ ಹಿನ್ನೆಲೆಯಲ್ಲಿ ದೇಶ ಸಮರ್ಥ ಮತ್ತು ಬಲಿಷ್ಠವಾಗಿರಬೇಕು  ಎಂದರು.
ಯಾರ ವಿರುದ್ಧವೂ ಅಲ್ಲ
ಬಲಿಷ್ಠ ಎಂದ ಮಾತ್ರಕ್ಕೆ ಇದು ಯಾರೊಬ್ಬರ ವಿರುದ್ಧವೆಂದರ್ಥವಲ್ಲ. ನಾವು ನಮ್ಮ ಬಲ ಹೆಚ್ಚಿಸಿಕೊಳ್ಳಲು ಯತ್ನಿಸಿದರೆ ನೆರೆಯವರು  ಇದು ತಮ್ಮನ್ನು ಗುರಿಯಾಗಿರಿಸಿ ನಡೆಸಲಾಗುತ್ತಿದೆ ಎಂದು ಆತಂಕ ಪಡಬೇಕಾದ್ದೇನೂ ಇಲ್ಲ. ನಾನು ಬಲಿಷ್ಠನಾಗುವುದು ನನ್ನ ಬಲಕ್ಕಾಗಿ ಮತ್ತು ನನ್ನ ಆರೋಗ್ಯಕ್ಕಾಗಿ ಎಂದು ಮೋದಿ ಮಾರ್ಮಿಕವಾಗಿ ನುಡಿದರು.
ಕಾಂಗ್ರೆಸಿಗೆ ಪರ್ಯಾಯವೊಂದನ್ನು ತರುವ ನಿಟ್ಟಿನಲ್ಲಿ ದೀನದಯಾಳ್ಜೀ ಅವರ  ಪ್ರಯತ್ನದ ಬಗ್ಗೆ  ರಾಮ್ ಮನೋಹರ ಲೋಹಿಯಾ ಅವರು 1967ರಲ್ಲಿ ಪ್ರಸ್ತಾವಿಸಿದ್ದನ್ನು ನೆನಪಿಸಿದರು. ದೀನದಯಾಳ್ಜೀ ಅವರು  ಏಕಾತ್ಮತಾ ಮಾನವತಾವಾದವನ್ನು ಎತ್ತಿಹಿಡಿದವರು. ಅವರ ಆಶಯದಂತೆ , ತಮ್ಮ ಸರಕಾರ ಬಡವರಲ್ಲಿ ಬಡವರಿಗೆ ಮತ್ತು ಸಮಾಜದ ಕೊಟ್ಟಕೊನೆಯ ವ್ಯಕ್ತಿಗೆ ಅಭಿವೃದ್ಧಿಯ ಫಲ ತಲುಪುವಂತೆ ಮಾಡಲು ಪ್ರಯತ್ನಿಸುತ್ತಿರುವುದಾಗಿ ಮೋದಿ ಹೇಳಿದರು. ದೀನದಯಾಳ್ಜೀ ಅವರ ಸರಳತೆ , ಆದರ್ಶ ನೀತಿಯನ್ನು ಮೋದಿ ಸ್ಮರಿಸಿಕೊಂಡರು.
ಕಾರ್ಯಕರ್ತರ ನಿಮರ್ಾಣ ಆಧಾರಿತ ರಾಜಕೀಯ ಪಕ್ಷ ಕಟ್ಟುವ ಮತ್ತು ಪಕ್ಷ ಕೇಂದ್ರಿತ ನೀತಿ ಮತ್ತು  ರಾಷ್ಟ್ರಹಿತ ಕೇಂದ್ರಿತ ಪಕ್ಷದ ನೀತಿಯಿಂದ ನಾವು ಬಿಜೆಪಿ ಕಾರ್ಯಕರ್ತರೆಲ್ಲ ಪ್ರೇರಣೆ ಪಡೆಯಬೇಕು ಎಂದರು .ರೈತರು, ದೀನದಲಿತರು, ದುರ್ಬಲವರ್ಗದ ಜನರ ಕಲ್ಯಾಣಕ್ಕೆ ದೀನದಯಾಳ್ಜೀ ಅವರ ಕಳಕಳಿಯನ್ನು ಬೊಟ್ಟು ಮಾಡಿದ ಮೋದಿ, ಇದಕ್ಕಾಗಿ ತಮ್ಮ ಸರಕಾರ `ಗರೀಬ್ ಕಲ್ಯಾಣ ವರ್ಷ’ಆಚರಣೆಗೆ ಮುಂದಾಗಿರುವುದಾಗಿ ಹೇಳಿದರು.
ಈ ಸಂದರ್ಭ ಬಿಜೆಪಿ ಅಧ್ಯಕ್ಷ ಅಮಿತ್ ಶಾ, ಆರ್‍ ಎಸ್ ಎಸ್ ಸರಕಾರ್ಯವಾಹ ಸುರೇಶ್ ಭಯ್ಯಾಜಿ ಜೋಶಿ ಮಾತನಾಡಿ ಭಾರತದ ಭದ್ರತೆಯನ್ನು ಬಲಪಡಿಸಬೇಕಾದ ಅಗತ್ಯವನ್ನು ಎತ್ತಿ ಹೇಳಿದರು. ಭಾರತದ ಕಾರ್ಯಾಚರಣೆಯು ಅನ್ಯರನ್ನು ಸೋಲಿಸುವುದಕ್ಕಿಂತ ಹೆಚ್ಚಾಗಿ ತನ್ನನ್ನು ರಕ್ಷಿಸಿಕೊಳ್ಳುವ ಅಗತ್ಯದಿಂದ ಪ್ರೇರಿತವಾಗಿದೆ ಎಂದು ಜೋಶಿ ನುಡಿದರು.
Share196Tweet123Send
Previous Post

ಜಂಬು ಸವಾರಿಗೆ ಸಿದ್ದವಾಗಿದೆ ಮೈಸೂರು: ಅರಮನೆ ಖಾಸಗಿ ದರ್ಬಾರ್ ವೈಭವ

Next Post

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್-ಹಿಲರಿ ಅಪಖ್ಯಾತಿಯಲ್ಲಿ ಫೇಮಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮೆರಿಕಾ ಅಧ್ಯಕ್ಷೀಯ ಚುನಾವಣೆ: ಟ್ರಂಪ್-ಹಿಲರಿ ಅಪಖ್ಯಾತಿಯಲ್ಲಿ ಫೇಮಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

ಮೇ.17ರಂದು ಪತ್ರಕರ್ತರ ವಾರ್ಷಿಕ ಕ್ರೀಡಾಕೂಟ, ಪ್ರತಿಭಾಪುರಸ್ಕಾರ ಕಾರ್ಯಕ್ರಮ

May 14, 2026
ಮೇ 15ರೊಳಗೆ ಶಿವಮೊಗ್ಗದ ಈ ಸಮಸ್ಯೆಗಳು ಬಗೆಹರಿಯದಿದ್ದರೆ ಉಗ್ರ ಹೋರಾಟ | ಕೆ.ಈ. ಕಾಂತೇಶ್ ಎಚ್ಚರಿಕೆ

ಮೇ17ರಂದು `ನಾದನಿನಾದ’ ವೇಣು-ಗಾನ ಜುಗಲ್‍ಬಂದಿ ಕಾರ್ಯಕ್ರಮ: ಕಾಂತೇಶ್

May 14, 2026
ಮುಸಲ್ಮಾನ ಗೂಂಡಾಗಳಿಗೆ ಕಾಂಗ್ರೆಸ್ ಸರ್ಕಾರ ಬೆಂಬಲ ನೀಡುತ್ತಿರುವುದೇ ಗಲಭೆಗೆ ಕಾರಣ | ಈಶ್ವರಪ್ಪ ಕಿಡಿ

ಹಿಜಾಬ್‍ಗೆ ಅವಕಾಶ, ಕೇಸರಿ ಶಾಲಿಗೆ ನಿರ್ಬಂಧ | ರಾಜ್ಯ ಸರ್ಕಾರದ ವಿರುದ್ಧ ಈಶ್ವರಪ್ಪ ವಾಗ್ದಾಳಿ

May 14, 2026
12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

12ನೇ ತರಗತಿಯವರೆಗೆ ಈ ಎಲ್ಲಾ ಧಾರ್ಮಿಕ ಸಂಕೇತಗಳನ್ನು ವಿದ್ಯಾರ್ಥಿಗಳು ಧರಿಸಬಹುದು: ಮುಖ್ಯಮಂತ್ರಿ ಸಿದ್ದರಾಮಯ್ಯ

May 14, 2026
ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

ಭಾರತದ ಆರ್ಥಿಕತೆಗೆ ಎಐ ಬಲ | 2030ರ ವೇಳೆಗೆ ಎಐನಿಂದ 500 ಶತಕೋಟಿ ಡಾಲರ್ ಕೊಡುಗೆಯ ನಿರೀಕ್ಷೆ | ಅಧ್ಯಯನ ವರದಿಯಲ್ಲಿ ಘೋಷಣೆ

May 14, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL