Read - < 1 minute
ಚಾಮರಾಜನಗರ: ಮಧ್ಯಪ್ರದೇಶ್ ಮತ್ತು ಗುಜರಾತ್ನಲ್ಲಿ ಸತತವಾಗಿ ಮೂರ್ನಾಲ್ಕು ಬಾರಿ ಬಿಜೆಪಿ ಬರುವುದಾದರೆ, ಕರ್ನಾಟಕದಲ್ಲಿ ಕಾಂಗ್ರೇಸ್ ಸರ್ಕಾರ ಎರಡನೇ ಬಾರಿಗೆ ಬರಬಾರದೇಕೆ? ಎಂದು ಪ್ರಶ್ನಿಸಿರುವ ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್, ಮುಂದಿನ ಚುನಾವಣೆಗೆ ಸನ್ನದ್ದರಾಗಲು ಕಾರ್ಯಕರ್ತರಿಗೆ ಇಂದಿಲ್ಲಿ ಕರೆ ನೀಡಿದ್ದಾರೆ.
ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಚಾಮರಾಜನಗರಕ್ಕೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ.ಪರಮೇಶ್ವರ್, ಕಾಂಗ್ರೇಸ್ ಕಛೇರಿಗೆ ಭೇಟಿ ನೀಡಿ, ಕಾರ್ಯಕರ್ತರೊಂದಿಗೆ ಸಮಾಲೋಚಿಸಿದರು. ಈ ವೇಳೆ ಪರಮೇಶ್ವರ್ ರವರಿಗೆ ಕಾಂಗ್ರೇಸ್ ಮುಖಂಡರು ಅದ್ದೂರಿಯಾಗಿ ಸ್ವಾಗತಿಸಿದರು.
ನಂತರ ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ನೀಡಿದ್ದ ಬಹುತೇಕ ಭರವಸೆಗಳು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ, ಮಧ್ಯಪ್ರದೇಶದಲ್ಲಿ ಮೂರು ಬಾರಿ, ಗುಜರಾತ್ನಲ್ಲಿ ಸತತವಾಗಿ ನಾಲ್ಕು ಬಾರಿ ಬಿಜೆಪಿ, ಆಡಳಿತದ ಚುಕ್ಕಾಣಿ ಹಿಡಿದರೆ, ಕರ್ನಾಟಕದಲ್ಲಿ ನಾವು ಎರಡನೇ ಬಾರಿಗೇಕೆ? ಕಾಂಗ್ರೇಸ್ ಸರ್ಕಾರ ರಚಿಸಬಾರದೆಂದರು.
ಮುಂದಿನ ಸಾರ್ವತ್ರಿಕ ಚುನಾವಣೆಗೆ ಈಗಾಗಲೇ ದಿನಗಣನೆ ಆರಂಭವಾಗಿದ್ದು, ಧೀನ-ದಲಿತರು, ಹಿಂದುಳಿದ ವರ್ಗ ಹಾಗೂ ಬಡವರಿಗೆ ಕಾಂಗ್ರೇಸ್ ಸರ್ಕಾರ ನೀಡಿರುವ ಜನಪರ ಅಭಿವೃಧ್ದಿ ಕಾರ್ಯಕ್ರಮಗಳನ್ನ ಪ್ರತಿಯೊಬ್ಬರಿಗೂ ತಲುಪಿಸಲು ಗ್ರಾಮ ಸ್ವರಾಜ್ ಸಮಾವೇಶ ನಡೆಸಲಾಗುವುದೆಂದು ಹೇಳಿದರು.
ಚಿಕ್ಕಬಳ್ಳಾಪುರ ಜಿಲ್ಲೆಯ ವಿಜುರಾಶ್ವತದಲ್ಲಿ ಅಕ್ಟೋಬರ್ 2ರ ಗಾಂಧಿಜಯಂತಿಯಂದು ಗ್ರಾಮ ಸ್ವರಾಜ್ ಸಮಾವೇಶ ಆರಂಭವಾಗಲಿದ್ದು, ರಾಜ್ಯದ ಜಿಲ್ಲೆ, ತಾಲ್ಲೂಕು, ಹೋಬಳಿ ಮತ್ತು ಪ್ರತಿ ಗ್ರಾಮದಲ್ಲೂ ಈ ಸಮಾವೇಶ ನಡೆಸುವುದರ ಮೂಲಕ, ಮುಂದಿನ ಚುನಾವಣೆಗೆ ಸಜ್ಜಾಗುವಂತೆ ಪರಮೇಶ್ವರ್ ಕಾಂಗ್ರೇಸ್ ಕಾರ್ಯಕರ್ತರಿಗೆ ಕರೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಹದೇವಪ್ರಸಾದ್, ಕಾಂಗ್ರೇಸ್ ಅಧ್ಯಕ್ಷ ಸದಾಶಿವಮೂರ್ತಿ, ಸಂಸದ ಧ್ರುವನಾರಾಯಣ್, ಸ್ಥಳೀಯ ಶಾಸಕ ಪುಟ್ಟರಂಗಶೆಟ್ಟಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರಾಮಚಂದ್ರು ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
Discussion about this post