News by: ಪುನೀತ್ ಕೂಡ್ಲೂರು
ಮೈಸೂರು, ಸೆ.9: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂ ಆದೇಶದ ಹಿನ್ನೆಲೆಯಲ್ಲಿ ನೀರು ಹರಿಸಿದ ರಾಜ್ಯ ಸರ್ಕಾರದ ವಿರುದ್ಧ ಇಂದು ಕರೆ ನೀಡಲಾಗಿದ್ದ ಕರ್ನಾಟಕ ಬಂದ್ ಗೆ ಮೈಸೂರು ನಗರದಲ್ಲಿ ವ್ಯಾಪಕ ಬೆಂಬಲ ವ್ಯಕ್ತವಾಯಿತು.
ಮುಂಜಾನೆಯಿಂದಲೇ ಬಂದ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಂಡಿತ್ತು. ಅಂಗಡಿ ಮುಂಗಟ್ಟು ಮುಚ್ಚಿದ್ದು, ವ್ಯಾಪಾರ ವಹಿವಾಟು ಸ್ಥಗಿತಗೊಂಡಿತ್ತು. ನಗರದೆಲ್ಲೆಡೆ ಎಲ್ಲ ಸಮುದಾಯ, ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕಾವೇರಿಯನ್ನು ಉಳಿಸಿಕೊಳ್ಳಲು ಜನ ಜಾಗೃತಿ ಮೂಡಿತು.
ನಗರದಲ್ಲಿನ ಪ್ರತಿಭಟನೆಯ ಸಂಪೂರ್ಣ ವಿವರ ಇಂತಿದೆ:
ಕಾವೇರಿ ನ್ಯಾಯಂಗ ತೀರ್ಪನ್ನು ವಿರೋಧಿಸಿ ಮೈಸೂರಿನ ನ್ಯಾಯಾಲಯದ ಮುಂಭಾಗದ ಉದ್ಯಾನವನದಲ್ಲಿ ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಸದಸ್ಯರು ಸಾಮೂಹಿಕ ಸಂಧ್ಯಾವಂದನೆ ಮಾಡಿ ನೀರಿನ ಅಭಾವತೆಯನ್ನು ಪ್ರದರ್ಶಿಸಿ ಆಕ್ರೋಶ ವ್ಯಕ್ತಪಡಿಸಿದರು, ನಂತರ ಜಿಲ್ಲಾ ಬ್ರಾಹ್ಮಣ ಯುವವೇದಿಕೆ ಅಧ್ಯಕ್ಷ ಮುಳ್ಳೂರು ಗುರುಪ್ರದಾದ್ ಮಾತನಾಡಿ ಧಾರ್ಮಿಕ ವಿಧಿವಿಧಾನಗಳು ಮತ್ತು ಗಾಯತ್ರಿಜಪ ಪ್ರಾರಂಭವಾಗುವುದೆ ಜಲಪ್ರೋಕ್ಷಣೆಯ ಮುಖಾಂತರ ಮತ್ತು ದೇವಸ್ಥಾನಗಳಲ್ಲಿ ಅಭಿಶೇಕ ಪೂಜಕೈಂಕರ್ಯಕ್ಕಾಗಿ ಅನಿವಾರ್ಯವಾಗಿದೆ. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ದೇವಸ್ಥಾನಗಳಲ್ಲಿ ಧಾರ್ಮಿಕ ಕಾರ್ಯಕ್ರಮಗಳಿಗೆ ತೊಂದರೆಯಾಗಲಿದೆ ಮುಂದಿನ ದಿನಗಳಲ್ಲಿ ರಾಜ್ಯಸರ್ಕಾರ ದಿಟ್ಟ ಹೆಜ್ಜೆಯಿಟ್ಟು ಕಾವೇರಿ ನೀರನ್ನು ರಾಜ್ಯದ ಜನತೆಗಾಗಿ ಮೀಸಲಿಡಬೇಕು ಎಂದು ತಿಳಿಸಿದರು. ಪ್ರತಿಭಟನೆಯಲ್ಲಿ ಬ್ರಾಹ್ಮಣ ಹಿರಿಯ ಮುಖಂಡ ನಟರಾಜ್ ಜೋಯಿಸ್, ಜಿಲ್ಲಾ ಬ್ರಾಹ್ಮಣ ಯುವೇದಿಕೆ ಅಧ್ಯಕ್ಷ ಮುಳ್ಳೂರು ಗುರುಪ್ರಸಾದ್, ಪ್ರಧಾನಕಾರ್ಯದರ್ಶಿ ವಿಕ್ರಂ, ಡಿಕೆ ನಾಗಭೂಷಣ್, ಅಜಯ್ ಶಾಸ್ತ್ರಿ, ಜಯಸಿಂಹ, ರಂಗನಾಥ್, ಜಗದೀಶ್, ರಾಜಗೋಪಾಲ್, ಮಂಜುನಾಥ್, ಶ್ರೀಕಾಂತ್ ಮುಂತಾದವರು ಭಾಗವಹಿಸಿದ್ದರು.
ವಿವಿಧ ಮುಖಂಡರಿಂದ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ…
ಅರಮನೆ ಮುಂಭಾಗ ಬಿಜೆಪಿ ಮುಖಂಡ ಹಾಗೂ ಕಾರ್ಯಕರ್ತರ ಪ್ರತಿಭಟನೆ…
ಕಾವೇರಿ ಹೋರಾಟವನ್ನು ಮೈಸೂರು ನಗರ ಬಸ್ ನಿಲ್ದಾಣದ ಮುಂದೆ ವಿವಿಧ ಕನ್ನಡ ಸಂಘಟನೆ ಇಂದು ಜಯಲಲಿತಾ ಭಾವಚಿತ್ರವನ್ನು ಸುಟ್ಟು ಪ್ರತಿಭಟನೆ ಮಾಡಲಾಯಿತು. ನಗರ ಪಾಲಿಕೆ ಸದಸ್ಯ ಮ ವಿ ರಾಮಪ್ರಸಾದ್, ವಿಕ್ರಮ, ಸಂದೀಪ್, ಪಾರ್ಥಸರಾರ್ಥಿ , ತೇಜಸ್ ಲೋಕೇಶ್ ಗೌಡ, ಪ್ರಸಾದ್ ಮುಂತಾದವರು ಇದ್ದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರಿಂದ ಪ್ರತಿಭಟನೆ ಹಾಗೂ ಮುತ್ತಿಗೆ.
ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಅರಮನೆ ಮುಂದೆ ಕುರಿ ಕಟ್ಟಿ, ಕಬ್ಬು ಪ್ರದರ್ಶಿಸಿ ಪ್ರತಿಭಟನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಶಾಂತಕುಮಾರ್, ರಾಜ್ಯದ ರೈತರ ಹಿತವನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡನೀಯ ಎಂದು ಕಿಡಿ ಕಾರಿದರು.
ಕಾವೇರಿ ನೀರಿಗಾಗಿ ಇಂದು ನಡೆದ ಪ್ರತಿಭಟನೆಯಲ್ಲಿ ಸ್ನೇಕ್ ಶ್ಯಾಮ್ ಪಾಲ್ಗೊಂಡು ಬೆಂಬಲ ಸೂಚಿಸಿದರು. ಈ ವೇಳೆ, ಎಚ್.ವಿ. ರಾಜೀವ್, ಡಾ. ಮಂಜುನಾಥ್ ಉಪಸ್ಥಿತರಿದ್ದು, ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದರು.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಿರುವ ಕ್ರಮವನ್ನು ವಿರೋಧಿಸಿ ಮೈಸೂರು ಹೊಟೇಲ್ ಮಾಲೀಕರ ಸಂಘದ ವತಿಯಿಂದ ಇಂದು ಬಂದ್ ಗೆ ಬೆಂಬಲ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಲಾಯಿತು.
Discussion about this post