No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಜಕೀಯ

ಕಾವೇರಿ ವಿವಾದ: ಆಕಾಶವಾಣಿಯಲ್ಲಿ ಮುಖ್ಯಮಂತ್ರಿಗಳ ಸಂದೇಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 7, 2016
in ರಾಜಕೀಯ
0
Share on FacebookShare on TwitterShare on WhatsApp
ಬೆಂಗಳೂರು, ಸೆ.7: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ವಿವಾದ ಸೃಷ್ಠಿಯಾಗಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆಕಾಶವಾಣಿಯಲ್ಲಿ ಮಾತನಾಡಿದ್ದು, ರಾಜ್ಯದ ಜನತೆಗೆ ಸಂದೇಶ ನೀಡಿದ್ದಾರೆ. ಅದು ಮುಖ್ಯಾಂಶಗಳು ಇಂತಿವೆ:
* ಕಾವೇರಿಯ ತವರೂರು ಕರ್ನಾಟಕ. ತಲಕಾವೇರಿಯಲ್ಲಿ ಹುಟ್ಟಿ ಮುಂದಕ್ಕೆ ಹರಿಯುವ ಕಾವೇರಿ ಜತೆ ನಮಗೆ ಕರುಳುಬಳ್ಳಿಯ ಸಂಬಂಧ ಇದೆ. ನಮ್ಮ ರೈತರ ಪಾಲಿನ ಜೀವನದಿ ಇದು. ನದಿ ಉಕ್ಕಿ ಹರಿದಾಗ ಸಂಭ್ರಮಿಸುವ ನಮ್ಮ ರೈತರು ಸಮುದಾಯ ಬತ್ತಿಹೋದಾಗ ಸಂಕಟಪಡುತ್ತಾರೆ.
* ಮಳೆಯ ಜೂಜಾಟಕ್ಕೆ ಸಿಕ್ಕಿ ನಮ್ಮ ರೈತಬಂಧುಗಳು ಆಗಾಗ ಇಂತಹ ಸಂಕಷ್ಟಕ್ಕೆ ಸಿಲುಕುತ್ತಲೇ ಬಂದಿದ್ದಾರೆ. ಈ ವರ್ಷ ಅಂತಹದ್ದೊಂದು ಭೀಕರವಾದ ಸಂಕಷ್ಟದ ಪರಿಸ್ಥಿತಿಯಲ್ಲಿ ನಾವಿದ್ದೇವೆ.
* ಈ ವರ್ಷದ ಜೂನ್ ತಿಂಗಳಿನಿಂದ ಆಗಸ್ಟ್ ಅಂತ್ಯದ ವರೆಗಿನ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶ ಮಳೆಯ ತೀವ್ರ ಅಭಾವಕ್ಕೆ ತುತ್ತಾಗಿದೆ.
* ನಮ್ಮ ನಾಲ್ಕು ಜಲಾಶಯಗಳಾದ ಕೃಷ್ಣರಾಜ ಸಾಗರ, ಹಾರಂಗಿ, ಹೇಮವಾತಿ ಮತ್ತು ಕಬಿನಿ ಆಗಸ್ಟ್  ಅಂತ್ಯದ ವರೆಗೆ ಸಾಮಾನ್ಯ ವರ್ಷದಲ್ಲಿ 215.70 ಟಿಎಂಸಿ ನೀರು ಹರಿದುಬರಬೇಕಾಗಿತ್ತು. ಆದರೆ ಮಳೆಯ ಅಭಾವದಿಂದಾಗಿ ಈ ವರ್ಷ ಹರಿದು ಬಂದಿರುವ ನೀರು ಕೇವಲ 114.66 ಟಿಎಂಸಿ ಮಾತ್ರ.
* ಕೃಷಿ ಚಟುವಟಿಕೆಗಾಗಿ 47.71 ಟಿಎಂಸಿ, ಕುಡಿಯುವ ನೀರು ಪೂರೈಕೆಗಾಗಿ 28.08 ಟಿಎಂಸಿ ಮತ್ತು ಕೆರೆ ತುಂಬಿಸುವುದಕ್ಕಾಗಿ 11.58 ಹೀಗೆ ಒಟ್ಟು 87.37 ಟಿಎಂಸಿ ನಮಗೆ ಬೇಕಾಗಿದೆ. ನಮ್ಮ ನಾಲ್ಕು ಜಲಾಶಯಗಳಲ್ಲಿ ಲಭ್ಯ ಇರುವ ನೀರಿನ ಸಂಗ್ರಹ 58.78 ಟಿಎಂಸಿ ಮಾತ್ರ.
* ಇಂತಹ ಪರಿಸ್ಥಿತಿಯಲ್ಲಿ ಕಾವೇರಿ ನೀರು ಬಿಡುವುದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ  ಸುಪ್ರೀಂಕೋರ್ಟ್ ಮುಂದಿನ ಹತ್ತು ದಿನಗಳ ಕಾಲ ತಮಿಳುನಾಡಿಗೆ  ಪ್ರತಿದಿನ 15000 ಕ್ಯುಸೆಕ್ಸ್ ನೀರು ಹರಿಸುವಂತೆ ಆದೇಶ ನೀಡಿದೆ..
* ನಮಗೆ ಕುಡಿಯುವ ನೀರಿಗೂ ತತ್ವಾರ ಇರುವಂತಹ ಸ್ಥಿತಿಯಲ್ಲಿ ತಮಿಳುನಾಡಿನ ಸಾಂಬಾ ಬೆಳೆಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿರುವುದು ನಮಗೆ ಆಘಾತವನ್ನುಂಟುಮಾಡಿದೆ.
* ಈ ರೀತಿಯ ಇಕ್ಕಟ್ಟಿನ ಪರಿಸ್ಥಿತಿಯನ್ನು ಕರ್ನಾಟಕ ಎದುರಿಸಿರುವುದು ಇದೇ ಮೊದಲ ಬಾರಿಯೇನಲ್ಲ. 2012-13ರ ಸಾಲಿನಲ್ಲಿ ಮಳೆ ಕೊರತೆಯಿಂದಾಗಿ ಇದೇ ರೀತಿಯ ಪರಿಸ್ಥಿತಿ ಉದ್ಭವವಾಗಿತ್ತು.
* ಆಗಲೂ ತಮಿಳುನಾಡಿನ ಮೊರೆಯನ್ನು ಆಲಿಸಿದ ಸುಪ್ರೀಂ ಕೋರ್ಟ್  ಸೆಪ್ಟೆಂಬರ್ ಹನ್ನೆರಡರಿಂದ ಸೆಪ್ಟೆಂಬರ್ 2ರ ವರೆಗೆ 9 ದಿನಗಳ ಕಾಲ ಪ್ರತಿದಿನ 10,000 ಕ್ಯುಸೆಕ್ಸ್ ನಂತೆ ಕಾವೇರಿ ನೀರನ್ನು ಆ ರಾಜ್ಯಕ್ಕೆ ಹರಿಸುವಂತೆ ಆದೇಶ ನೀಡಿತ್ತು. ಆಗ ಆಡಳಿತ ನಡೆಸುತ್ತಿದ್ದ ಸರ್ಕಾರ ನ್ಯಾಯಾಲಯದ ಆದೇಶವನ್ನು ಒಪ್ಪಿಕೊಂಡು ಅಷ್ಟು ಪ್ರಮಾಣದ ನೀರನ್ನು ತಮಿಳುನಾಡಿಗೆ ಹರಿಸಿತ್ತು ಎನ್ನುವುದನ್ನು ವಿನಮ್ರತೆಯಿಂದ ವಿರೋಧಪಕ್ಷಗಳ ನಾಯಕರಿಗೆ ನೆನಪಿಸಬಯಸುತ್ತೇನೆ.
* ಪ್ರಜಾಸತ್ತಾತ್ಮಕ ವ್ಯವಸ್ಥೆಯ ಭಾಗವಾಗಿರುವ ನಾವು ನ್ಯಾಯಾಲಯದ ಆದೇಶಕ್ಕೆ ತಲೆಬಾಗಲೇಬೇಕಾದ ಅನಿವಾರ್ಯ ಸ್ಥಿತಿಯಲ್ಲಿ ಇದ್ದೇವೆ. ಆದೇಶವನ್ನು ಪಾಲಿಸದೆ ಇದ್ದರೆ ನ್ಯಾಯಾಂಗದ ನಿಂದನೆಯ ಆರೋಪವನ್ನು ಎದುರಿಸಬೇಕಾಗುತ್ತದೆ. ಅಂತಹ ದುಸ್ಸಾಹಸಕ್ಕೆ ಇಳಿಯುವುದು ಜಾಣತನದ ನಡೆಯೂ ಅಲ್ಲ.
* ಈ ಹಿನ್ನೆಲೆಯಲ್ಲಿ ಸಂಭವನೀಯ ಪರಿಸ್ಥಿತಿಯ ಸಾಧಕ-ಬಾಧಕಗಳನ್ನೆಲ್ಲ ಗಮನದಲ್ಲಿಟ್ಟುಕೊಂಡು ಸುಪ್ರೀಂಕೋರ್ಟ್ ಆದೇಶವನ್ನು ಭಾರವಾದ ಮನಸ್ಸಿನಿಂದ ಪಾಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಆದರೆ ಇದರಿಂದಾಗಿ ಕಾವೇರಿ ಕಣಿವೆಯ ರೈತರು ಆತಂಕಕ್ಕೀಡಾಗುವ ಅವಶ್ಯಕತೆ ಇಲ್ಲ. ನ್ಯಾಯಾಂಗದ ಹೋರಾಟದಲ್ಲಿ ಯಾವುದೇ ರೀತಿಯ ರಾಜಿಮಾಡಿಕೊಳ್ಳದೆ ರಾಜ್ಯದ ಹಿತಾಸಕ್ತಿಯ ರಕ್ಷಣೆಗಾಗಿ ನಮ್ಮೆಲ್ಲ ಶಕ್ತಿ-ಯುಕ್ತಿಯನ್ನು ಬಳಸಿಕೊಳ್ಳಲಾಗುವುದು.
* ನಾಲ್ಕು ದಿನಗಳೊಳಗೆ ಮೇಲುಸ್ತುವಾರಿ ಸಮಿತಿ ಮುಂದೆ ಹೋಗುವಂತೆ ಸುಪ್ರೀಂಕೋರ್ಟ್  ತನ್ನ ಆದೇಶದಲ್ಲಿ ತಿಳಿಸಿದೆ. ನಾವು ತಡಮಾಡದೆ ಮೇಲುಸ್ತುವಾರಿ ಸಮಿತಿ ಮುಂದೆ ಹಾಜರಾಗಿ ರಾಜ್ಯದ ಸಂಕಷ್ಟದ ಪರಿಸ್ಥಿತಿಯನ್ನು ಹೇಳಿಕೊಳ್ಳುತ್ತೇವೆ. ಇದರ ಜತೆಗೆ ಸುಪ್ರೀಂ ಕೋರ್ಟ್ ಆದೇಶವನ್ನು ಮಾರ್ಪಾಡು ಮಾಡುವಂತೆ ಕೋರಿ ಅರ್ಜಿಯನ್ನು ಕೂಡಾ ಸಲ್ಲಿಸಲಾಗುವುದು.
* ಸುಪ್ರೀಂಕೋರ್ಟ್ ಆದೇಶಕ್ಕೆ ರಾಜ್ಯದಲ್ಲಿ ವ್ಯಕ್ತವಾದ  ಪ್ರತಿಕ್ರಿಯೆಯನ್ನು ಸುಪ್ರೀಂ ಕೋರ್ಟ್ ಕೂಡಾ ಗಮನಿಸಿರಬಹುದು ಇದರ ಜತೆಗೆ ರಾಜ್ಯದ ಜನರು ಎದುರಿಸುತ್ತಿರುವ ಸಂಕಷ್ಟದ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತದೆ ಎಂಬ ಭರವಸೆ ನನಗಿದೆ
* ಕಾನೂನು ತಜ್ಞರೂ ಮತ್ತು ಅನುಭವಿಗಳನ್ನೊಳಗೊಂಡಿರುವ ನಮ್ಮ ರಾಜ್ಯದ ವಕೀಲರ ತಂಡ ಸಮರ್ಥವಾಗಿ ನದಿನೀರು ವಿವಾದವನ್ನು ನಿರ್ವಹಿಸುತ್ತಾ ಬಂದಿದೆ. ಮುಂದೆಯೂ ನಮ್ಮ ವಕೀಲರು ನಮ್ಮೆಲ್ಲರ ನಿರೀಕ್ಷೆ ಹುಸಿಯಾಗದ ರೀತಿಯಲ್ಲಿ ಕೆಲಸ ಮಾಡುತ್ತಾರೆಂಬ ನಂಬಿಕೆ ನಮಗಿದೆ. ರಾಜ್ಯದ ಜನತೆ ಕೂಡಾ ಅವರ ಮೇಲೆ ಭರವಸೆ ಇಡಬೇಕೆಂದು ನಾನು ಕೋರಿಕೊಳ್ಳುತ್ತೇನೆ.
* ಕಾವೇರಿ ಕಣಿವೆಯ ಸುಮಾರು 2.9 ಲಕ್ಷ ಎಕರೆ ಭೂಮಿಯಲ್ಲಿ ಬೆಳೆ ಇದೆ. ಇದನ್ನು ರಕ್ಷಿಸಬೇಕಾಗಿರುವುದು ನಮ್ಮ ಜವಾಬ್ದಾರಿಯಾಗಿದೆ. ಈ ಬೆಳೆಪ್ರದೇಶಕ್ಕೆ ಸೆಪ್ಟೆಂಬರ್ ಹತ್ತರಿಂದ ನೀರು ಹರಿಸಬೇಕೆಂದು ಇತ್ತೀಚೆಗೆ ನಡೆದ ನೀರಾವರಿ ಸಲಹಾ ಸಮಿತಿ ನಿರ್ಧರಿಸಿತ್ತು. ಆದರೆ ಪರಿಸ್ಥಿತಿಯ ಗಂಭೀರತೆಯನ್ನು ಮನಗಂಡು ನಾಳೆಯಿಂದ ಅಂದರೆ ಸೆಪ್ಟೆಂಬರ್ ಎಂಟರಿಂದಲೇ ನೀರು ಹರಿಸಲು ಸರ್ಕಾರ ತೀರ್ಮಾನಿಸಿದೆ.
* ಕಾವೇರಿ ನದಿನೀರು ಹಂಚಿಕೆಯ ವಿಚಾರದಲ್ಲಿ ಕರ್ನಾಟಕ ಅನ್ಯಾಯಕ್ಕೆ ಈಡಾಗುತ್ತಲೇ ಬಂದಿರುವುದಕ್ಕೆ ದೀರ್ಘ ಇತಿಹಾಸ ಇದೆ. ಆದರೆ ಕರ್ನಾಟಕದ ಜನತೆ ಸಹನಶೀಲರು ಮತ್ತು ಶಾಂತಿಪ್ರಿಯರು. ತಮ್ಮ ನೋವನ್ನು ನುಂಗಿಕೊಂಡು ಅತ್ಯಂತ ಸಂಯಮದಿಂದ ಪ್ರತಿಕೂಲದ ಪರಿಸ್ಥಿತಿಯನ್ನು ಎದುರಿಸುತ್ತಾ ಬಂದಿದ್ದಾರೆ. ನ್ಯಾಯಾಂಗದ ಬಗ್ಗೆ ನಂಬಿಕೆ ಹೊಂದಿರುವ ನಾವು ಎಂದೂ ಅದರ ಗೌರವಕ್ಕೆ ಚ್ಯುತಿ ತರುವಂತಹ ಕೆಲಸ ಮಾಡಿಲ್ಲ.
* ಕೃಷಿಯನ್ನೇ ನಂಬಿ ಬದುಕುವ ರೈತರ ಪಾಲಿಗೆ ನೀರು ಎನ್ನುವುದು ಜೀವಕ್ಕೆ ಸಮವಾದುದು. ಇದರಿಂದಾಗಿ ನೀರಿಲ್ಲದೆ ಬಿತ್ತಿದ ಬೆಳೆ ಒಣಗತೊಡಗಿದಾಗ ಸಹಜವಾಗಿಯೇ ಆತನಿಗೆ ನೋವಾಗುತ್ತದೆ. ರೈತರ ಭಾವುಕ ಪ್ರತಿಕ್ರಿಯೆ ಅರ್ಥವಾಗುವಂತಹದ್ದು. ಆದರೆ ಭಾವನೆಗಳಲ್ಲಿ ತೇಲಿಹೋಗಿ ಅನಾಹುತಕ್ಕೆ ದಾರಿಮಾಡಿಕೊಡಬಾರದು.
* ಸಾರ್ವಜನಿಕ ಆಸ್ತಿಗೆ ಹಾನಿಮಾಡುವ ಇಲ್ಲವೇ ಶಾಂತಿ-ಸುವ್ಯವಸ್ಥೆಯನ್ನು ಕದಡುವ ಅತಿರೇಕಕ್ಕೆ ಹೋಗಬಾರದು. ಸಂಯಮದಿಂದ ವರ್ತಿ ಸಿ ರಾಜ್ಯದಲ್ಲಿ ಶಾಂತಿ ಕಾಪಾಡಲು ನೆರವಾಗಬೇಕು. ಸರ್ಕಾರದ ಮೇಲೆ, ನನ್ನ ಮೇಲೆ ಭರವಸೆ ಇಡಿ. ರೈತನ ಮಗನಾದ ನಾನು ರೈತರಿಗೆ ಅನ್ಯಾಯವಾಗಲು ಅವಕಾಶ ಖಂಡಿತ ನೀಡುವುದಿಲ್ಲ.
Share196Tweet123Send
Previous Post

ಗೋವು ಸಂಚರಿಸುವ ಸ್ಥಳಗಳನ್ನು ಪ್ಲಾಸ್ಟಿಕ್ ಮುಕ್ತವಾಗಿಸಿ: ರಾಘವೇಶ್ವರ ಶ್ರೀ ಕರೆ

Next Post

ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇನ್ಸಾಟ್-3 ಡಿಆರ್ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

ಕ್ರೈಸ್ಟ್‌ಕಿಂಗ್: ಎಸ್‌ಎಸ್‌ಎಲ್‌ಸಿಯಲ್ಲಿ ಅಮೋಘ ಸಾಧನೆ | ಸತತ 17ನೇ ಬಾರಿಗೆ ಶೇ.100 ಫಲಿತಾಂಶ

April 23, 2026
ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

ಶಿವಮೊಗ್ಗ | ರಾಮಕೃಷ್ಣ ವಿದ್ಯಾ ಸಂಸ್ಥೆಯ ಮೂರೂ ಶಾಲೆಗಳಲ್ಲಿ ಶೇ.100 ಫಲಿತಾಂಶ

April 23, 2026
ಡಿ.17ರಂದು ಗಾಮ ಗ್ರಾಮದ ಶ್ರೀವೀರಭದ್ರೇಶ್ವರ ಸ್ವಾಮಿ ರಥೋತ್ಸವ

ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಮುರಿತ | ಇಬ್ಬರಿಗೆ ಗಂಭೀರ ಗಾಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL