Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ

ಕೇಂದ್ರ ಜಲ ಆಯೋಗದಿಂದ ಕಾವೇರಿ ಕೊಳ್ಳದಲ್ಲಿ ಅಧ್ಯಯನ

October 7, 2016
in ಜಿಲ್ಲೆ
0 0
0
Share on facebookShare on TwitterWhatsapp
Read - 2 minutes
ಬೆಂಗಳೂರು, ಅ.7: ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ ಅಧ್ಯಯನ ತಂಡ ಇಂದು ಮಂಡ್ಯ ಜಿಲ್ಲೆಯ ವಿವಿಧ ಕೆರೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿನ ರೈತರ ಬೆಳಗಳ ವಾಸ್ತವ ಸ್ಥಿತಿಯ ಅಧ್ಯಯನ ನಡೆಸಿದೆ. ಶನಿವಾರವೂ ಈ ತಂಡ ಪರಿಶೀಲನೆ ನಡೆಸಿ ಮಾಹಿತಿಯನ್ನು ಕಲೆ ಹಾಕಲಿದೆ.
ಇಂದು ಬೆಳಗ್ಗೆ ವಿಧಾನಸೌಧದಲ್ಲಿ ಸಭೆ ನಡೆಸಿ ರಾಜ್ಯ ಸರ್ಕಾರದಿಂದ ಮಾಹಿತಿ ಪಡೆದ ಕೇಂದ್ರದ ಅಧ್ಯಯನ ತಂಡ  ಮಧ್ಯಾಹ್ನದಿಂದ ಸಂಜೆವರೆಗೆ ಮಂಡ್ಯ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ  ಕೆಲವು ಕಡೆ ಸ್ಥಳ ಪರಿಶೀಲನೆ ಮಾಡಿತು.
ಹೆಲಿಕಾಫ್ಟರ್ ಮೂಲಕ ಬೆಂಗಳೂರಿನಿಂದ ತೆರಳಿದ ಅಧ್ಯಯನ ತಂಡವು ಮದ್ದೂರು ತಲುಪಿತು. ನಂತರ ತಾಲ್ಲೂಕಿನ ತೈಲೂರು, ಸೋಮನಹಳ್ಳಿ, ಹೆಮ್ಮನಹಳ್ಳಿ, ದೊಡ್ಡ ಅರಸಿನಕೆರೆ, ಹನುಮಂತನಗರ, ಕೆ.ಎಂ.ದೊಡ್ಡಿ, ಮಾದರಹಳ್ಳಿ, ಮಳವಳ್ಳಿ, ಶೆಟ್ಟಿಹಳ್ಳಿ, ಕಿರುಗಾವಲು, ಚಾಮನಹಳ್ಳಿ, ಕೌಡ್ಲೆ ಮತ್ತಿತರ ಕೆರೆಗಳ ಅಚ್ಚುಕಟ್ಟು ಪ್ರದೇಶದಲ್ಲಿ ಬೆಳೆಯ ವಸ್ತುಸ್ಥಿತಿಯನ್ನು ಅಧ್ಯಯನ ಮಾಡಿತು. ವಿವಿಧ ಕೆರೆಗಳ ಅಚ್ಚುಕಟ್ಟು ಪ್ರದೇಶಗಳಲ್ಲಿ ಸ್ಥಳ ಪರಿಶೀಲನೆ ನಡೆಸಿತು. ಮದ್ದೂರಿನಿಂದ ಹೆಲಿಕಾಪ್ಟರ್ ಮೂಲಕ ಸಂಜೆ ಕೆಆರ್ ಎಸ್ ಗೆ ತೆರಳಿ ಜಲಾಶಯದ ಪರಿಶೀಲನೆ ನಡೆಸಿ ಅಲ್ಲೇ ವಾಸ್ತವ್ಯ ಹೂಡಲಿದೆ.
ಅಧ್ಯಯನ ಪ್ರವಾಸ ಕೈಗೊಳ್ಳುವ ಮುನ್ನ ವಿಧನಸೌಧದಲ್ಲಿ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಶ್ ಚಂದ್ರ ಕುಂಟಿಯಾ, ನಿವೃತ್ತ ಮುಖ್ಯ ಕಾರ್ಯದರ್ಶಿ ಅರವಿಂದ್ ಜಾದವ್, ಜಲ ಸಂಪನ್ಮೂಲ ಇಲಾಖೆ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಚಿಕ್ಕರಾಯಪ್ಪ ಅವರಿಂದ ಮಾಹಿತಿ ಪಡೆಯಲಾಯಿತು.
ಕಾವೇರಿ ಜಲಾನಯನ ಭಾಗದಲ್ಲಿ ಮಳೆ ಅಭಾವದಿಂದ ಬೆಳೆ ಹಾನಿ, ಜಲಾಶಯಗಳಲ್ಲಿ ನೀರಿನ ಕೊರತೆ ಹಾಗೂ ಬೆಂಗಳೂರು ಸೇರಿದಂತೆ ವಿವಿಧ ನಗರ, ಪಟ್ಟಣಗಳಿಗೆ ಕುಡಿಯುವ ನೀರಿನ ಅಗತ್ಯತೆ ಬಗ್ಗೆ ಕೇಂದ್ರದ ಅಧ್ಯಯನ ತಂಡಕ್ಕೆ ಮಾಹಿತಿ ಒದಗಿಸಲಾಯಿತು.
ಪವರ್ ಪಾಯಿಂಟ್ ಪ್ರೆಜೆಂಟೇಶನ್ ಮೂಲಕ ಕೇಂದ್ರ ತಂಡಕ್ಕೆ ವಸ್ತುಸ್ಥಿತಿಯನ್ನು ಮನವರಿಕೆ ಮಾಡಿಕೊಡಲಾಯಿತು. ಕಾವೇರಿ ಜಲಾನಯನ ಭಾಗದ ಕೆಆರ್ಎಸ್, ಹಾರಂಗಿ, ಹೇಮಾವತಿ, ಹಾಗೂ ಕಬಿನಿ ಜಲಾಶಯಗಳ ಪರಿಶೀಲನೆಯನ್ನು ಕೇಂದ್ರ ತಂಡ ನಡೆಸಲಿದೆ.
ನಾಳೆ ಬೆಳಗ್ಗೆ ಕೆಆರ್ ಎಸ್ ರಸ್ತೆ ಮೂಲಕ ಹೊರಡುವ ಅಧ್ಯಯನ ತಂಡವು ಮಾರ್ಕೋನಹಳ್ಳಿ, ಅಶೋಕನಗರ, ಚಿನಕುರಳಿ, ನಿಯಮಗಿರಿ, ಮಂಡಗೆರೆ ಅಚ್ಚುಕಟ್ಟು ಪ್ರದೇಶಗಳ ವ್ಯಾಪ್ತಿಯಲ್ಲಿ ಅಧ್ಯಯನ ನಡೆಸಲಿದೆ.
ನಂತರ ಹಾಸನ ಜಿಲ್ಲೆ ವ್ಯಾಪ್ತಿಯ ಗೊರೂರು ತಲುಪಿ ಹೇಮಾವತಿ ಜಲಾಶಯ ವೀಕ್ಷಿಸಲಿದೆ. ಹೇಮಾವತಿ ಜಲಾಶಯದ ಅಚ್ಚುಕಟ್ಟು ಪ್ರದೇಶದಲ್ಲಿ ವೀಕ್ಷಣೆ ಮಾಡಲಿದೆ. ಕಾವೇರಿ ಜಲಾನಯನ ಭಾಗದಲ್ಲಿ ಎರಡು ದಿನ ಗಳ  ಸಮೀಕ್ಷೆ ಮುಗಿಸಿ ನಾಳೆ ರಾತ್ರಿ ತಮಿಳುನಾಡಿನ ಮೆಟ್ಟೂರಿಗೆ ಪ್ರಯಾಣ ಬೆಳಸಲಿದೆ ಎಂದು ಅಧಿಕೃತ ಮೂಲಕಗಳು ತಿಳಿಸಿದೆ.
ಮಂಡ್ಯ: ಜಿ.ಎಸ್.ಝಾ ನೇತೃತ್ವದ ಕೇಂದ್ರ ಅಧ್ಯಯನ ತಂಡದಲ್ಲಿ ಆಯೋಗದ ಸದಸ್ಯ ಎಸ್.ಮಸೂದ್ ಹುಸೇನ್, ಗೋದಾವರಿ ಮತ್ತು ಕೃಷ್ಣ ಕೊಳ್ಳದ ಮುಖ್ಯ ಇಂಜಿನಿಯರ್ ಆರ್.ಕೆ.ಗುಪ್ತ, ಕರ್ನಾಟಕ ಮತ್ತು ತಮಿಳುನಾಡಿನ ಮುಖ್ಯ ಕಾರ್ಯದರ್ಶಿಗಳು ಅಥವಾ ಅವರಿಂದ ನಿಯೋಜಿತ ಹಿರಿಯ ಅಧಿಕಾರಿಗಳು, ಕಾವೇರಿ ಕೊಳ್ಳದ ನಾಲ್ಕು ರಾಜ್ಯಗಳ ಜಲ ಸಂಪನ್ಮೂಲ ಇಲಾಖೆಗಳ ಇಂಜಿನಿಯರ್ ಗಳು ಈ ತಂಡದಲ್ಲಿದ್ದಾರೆ.
ಅಳಲುತೋಡಿಕೊಂಡ ರೈತರು:
ಕಳೆದ ಬಾರಿ ಮಳೆಯಿಲ್ಲದೆ ಸಾಲಬಾಧೆಯಿಂದ 120ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಾರಿ ಬೆಳೆಗಳಿಗೆ ನೀರಿಲ್ಲ ರೈತರು ಆತ್ಮಹತ್ಯೆಯತ್ತ ಮುಖ ಮಾಡುತ್ತಿದ್ದಾರೆ. ಅಂತರ್ಜಲ ಕುಸಿದಿದೆ ಎಂದು ತಾಲ್ಲೂಕಿನ ಹೆಮ್ಮನಹಳ್ಳಿಗೆ ಭೇಟಿ ನೀಡಿದ ಕೇಂದ್ರದ ಝಾ ನೇತೃತ್ವದ ಜಲತಾಂತ್ರಿಕ ಸಮಿತಿಯ ಮುಂದೆ ರೈತರು ಅಳಲು ತೋಡಿಕೊಂಡ ಪರಿ ಇದಾಗಿತ್ತು.
ಕಾವೇರಿಕೊಳ್ಳಗಳ ನೈಜ ಸ್ಥಿತಿ ಅಧ್ಯಯನ ಮಾಡಲು ಮಂಡ್ಯ ಜಿಲ್ಲೆಯ ವಿವಿಧ ಭಾಗಗಳಿಗೆ ಆಗಮಿಸಿದ ತಾಂತ್ರಿಕ ತಂಡದ ಅಧಿಕಾರಿಗಳ ಎದುರು ರೈತರು ತಮ್ಮ ಪರಿಸ್ಥಿತಿಯನ್ನು ವಿವರಿಸಿದರು.
ಗದ್ದೆಗಳು ಒಣಗಿವೆ. ಚಾನಲ್ಗಳಲ್ಲಿ ನೀರು ಬರುತ್ತಿಲ್ಲ. ಒಂದು ಬೆಳೆಯನ್ನೂ ಬೆಳೆಯಲಾಗುತ್ತಿಲ್ಲ. ನೀರಾವರಿ ಪ್ರದೇಶವಾದರೂ ನೀರು ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. 900 ಅಡಿ ಆಳಕ್ಕೆ ಬೋರ್ ಕೊರೆದರೂ ನೀರು ಬರುತ್ತಿಲ್ಲ. ಕೆರೆ-ಕಟ್ಟೆಗಳಲ್ಲೂ ಕೂಡ ನೀರಿಲ್ಲ. ನಿಗದಿಯಂತೆ ಮಳೆಯಾಗಿಲ್ಲ. ಜಾನುವಾರುಗಳಿಗೂ ಕೂಡ ನೀರು ಇಲ್ಲ ಎಂದು ರೈತರು ಅಧಿಕಾರಿಗಳ ಮುಂದೆ ತಮ್ಮ ಸಂಕಷ್ಟದ ಪರಿಸ್ಥಿತಿಯನ್ನು ವಿವರಿಸಿದರು.
ವಸ್ತುಸ್ಥಿತಿ ಅಧ್ಯಯನ ಮಾಡಿ ಸುಪ್ರೀಂಕೋರ್ಟ್ ಗೆ ಅಂತಿಮ ವರದಿ
ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲಿನ ಕಾವೇರಿ ಜಲಾನಯನ ಭಾಗದ ವಸ್ತುಸ್ಥಿತಿ ಅಧ್ಯಯನ ಮಾಡಿ ಸುಪ್ರೀಂಕೋರ್ಟ್ ಗೆ ಅಂತಿಮ ವರದಿ ಸಲ್ಲಿಸಲಾಗುವುದು ಎಂದು ಕೇಂದ್ರ ಅಧ್ಯಯನ ತಂಡದ ನೇತೃತ್ವ ವಹಿಸಿರುವ ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ  ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್, ಮುಖ್ಯಕಾರ್ಯದರ್ಶಿ ಸುಭಾಷ್ ಚಂದ್ರ ಕುಂಟಿಯಾ ಮತ್ತಿತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಮತ್ತು ನಾಳೆ ಕರ್ನಾಟಕದ ಕಾವೇರಿ ಜಲಾನಯನ ಭಾಗದಲ್ಲಿ ಪ್ರವಾಸ ಕೈಗೊಂಡು ವಸ್ತವ ಸ್ಥಿತಿ-ಗತಿಯನ್ನು ಅಧ್ಯಯನ ಮಾಡುತ್ತೇವೆ. ನಂತರ ತಮಿಳುನಾಡಿಗೂ ತೆರಳಿ ಅಲ್ಲಿನ ವಸ್ತು ಸ್ಥಿತಿಯನ್ನು ಪರಿಶೀಲಿಸಿ ಅಧ್ಯಯನದ ವರದಿಯನ್ನು ಸಿದ್ದಪಡಿಸಿ ಸುಪ್ರೀಂಕೋರ್ಟ್ ಗೆ  ಸಲ್ಲಿಸಲಾಗುವುದು ಎಂದರು.
ಉಭಯ ರಾಜ್ಯಗಳ ಜಲಾಶಯಗಳಲ್ಲಿರುವ ನೀರಿನ ಪ್ರಮಾಣ, ಬೆಳೆ ಪರಿಸ್ಥಿತಿ ಸೇರಿದಂತೆ ಸಮಗ್ರವಾಗಿ ವಸ್ತುಸ್ಥಿತಿಯನ್ನು ಪರಿಶೀಲಿಸಲಾಗುವುದು ಎಂದು ಹೇಳಿದರು.
ಕೇಂದ್ರ ತಂಡದ ಜೊತೆ ರಮ್ಯಾ ಪ್ರತ್ಯಕ್ಷ:
ಇದಕ್ಕಿದ್ದ ಹಾಗೆ ಕಾವೇರಿ ಜಲಾನಯನ ಪ್ರದೇಶದ ಅಧ್ಯಯನಕ್ಕೆ ಬಂದಿರುವ ಕೇಂದ್ರ ತಂಡದ ಜೊತೆ ಮಾಜಿ ಸಂಸದೆ ರಮ್ಯಾ ಕಾಣಿಸಿಕೊಂಡು ಅಚ್ಚರಿಮೂಡಿಸಿದರು.
ಮದ್ದೂರು ಪ್ರವಾಸಿ ಮಂದಿರದಲ್ಲಿ ರಮ್ಯಾ ಮಾತನಾಡಿ, ಕೇಂದ್ರ ತಂಡ ಇಲ್ಲಿನ ವಾಸ್ತವ ಸ್ಥಿತಿ ಅಧ್ಯಯನ ಮಾಡುತ್ತಿದೆ,
ಅವರ ಜೊತೆ ನಾನೂ ಹೋಗಿ ಸ್ಥಳೀಯ ಸಮಸ್ಯೆ ಮನವರಿಕೆ ಮಾಡಿಕೊಡುತ್ತಿದ್ದೇನೆ, ಮನವಿ ಮುಖಾಂತರ ಇಲ್ಲಿನ ಸಮಸ್ಯೆ ವಿವರಿಸಿದ್ದೇನೆ. ಯಾವ ಕಾರಣಕ್ಕೂ ನೀರು ಬಿಡೋಕೆ ಆಗಲ್ಲ ಅನ್ನೋದೂ ಮನವರಿಕೆ ಮಾಡಿಬಿಟ್ಟಿದ್ದೇನೆ ಎಂದು ಹೇಳಿದರು.
Previous Post

ಮೋದಿ ರಕ್ತದ ದಲ್ಲಾಳಿಯಾದರೆ, ಕಾಂಗ್ರೆಸ್ ಯಮನ ಏಜೆಂಟ್ ಅಲ್ಲವೇ?

Next Post

ಮನುಷ್ಯನ ದುರಾಸೆಗೆ ಅರಣ್ಯ ಸಂಪತ್ತು ನಾಶ: ರಾಜ್ಯಪಾಲ ವಾಲಾ ವಿಷಾದ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನುಷ್ಯನ ದುರಾಸೆಗೆ ಅರಣ್ಯ ಸಂಪತ್ತು ನಾಶ: ರಾಜ್ಯಪಾಲ ವಾಲಾ ವಿಷಾದ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!