No Result
View All Result
Annual Disaster Management Mock Drill Conducted at Harihar Railway Station
English Articles

Annual Disaster Management Mock Drill Conducted at Harihar Railway Station

by ಕಲ್ಪ ನ್ಯೂಸ್
May 14, 2026
0

Kalpa Media House  |  Harihara  | Mysuru Division of South Western Railway successfully conducted a full-scale Annual Disaster Management Mock...

Read moreDetails
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
Amazon Expands Health Coverage for 90,000 Delivery Associates across India

Amazon Expands Health Coverage for 90,000 Delivery Associates across India

May 12, 2026
IBM and Yotta Announce Plans to Deliver Agentic AI Platform for Indian Enterprises

IBM and Yotta Announce Plans to Deliver Agentic AI Platform for Indian Enterprises

May 9, 2026
  • Advertise With Us
  • Grievances
  • About Us
  • Contact Us
Friday, May 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ನಿಜಕ್ಕೂ ಕಲಾಂ ಅಂದರೆ…..

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 15, 2016
in Army
0
Share on FacebookShare on TwitterShare on WhatsApp

ಕಲಾಂ ಅನ್ನುವ ಹೆಸರೇ ನಮ್ಮ ಹೃದಯ ದಲ್ಲಿ ಹೊಸ ಸ್ಫೂರ್ತಿಯನ್ನು ತುಂಬುತ್ತದೆ. ಇದಕ್ಕೆ ಕಾರಣವೇನೆಂದು ನಾವು ಪ್ರತ್ಯೇಕವಾಗಿ ಯೋಚಿಸಬೇಕಾಗಿಲ್ಲ. ಏಕೆಂದರೆ ಆ ವ್ಯಕ್ತಿ ಬದುಕಿದ್ದೇ ಹಾಗೆ. ೭ ಮಕ್ಕಳಿದ್ದ ತುಂಬು ಸಂಸಾರದಲ್ಲಿ  ಕೊನೆಯವರಾಗಿ ಜನಿಸಿದ್ದ ಕಲಾಂ ಪ್ರತಿಷ್ಠಿತ ಮನೆತನದವರೇನೂ ಅಲ್ಲ. ತಮಿಳುನಾಡಿನ ದೈವಭೂಮಿ  ಎಂದು ಕರೆಸಿಕೊಳ್ಳುವ ರಾಮೇಶ್ವರಂ ನ ಒಂದು ಪುಟ್ಟ ಗ್ರಾಮ ದ ಗುಡಿಸಲೊಂದರಲ್ಲಿ ಕಲಾಂ ಹುಟ್ಟಿದರು. ಕಲಾಂ ತಂದೆ ಜನರನ್ನು ಸಾಗಿಸುವ ದೋಣಿಯನ್ನು ನಿರ್ವಹಿಸುವ  ಕೆಲಸ ಮಾಡುತ್ತಿದ್ದರು. ಅಷ್ಟು ದೊಡ್ಡ ಸಂಸಾರಕ್ಕೆ ಅದೊಂದೇ ಆದಾಯದ ಆಸರೆಯಾಗಿತ್ತು.
ಹೌದು! ಕಲಾಂ ಬದುಕಿನಲ್ಲಿ ಬಡತನವಿತ್ತು. ಅದು ಬರಿಯ ಗರಿಗರಿ ನೋಟುಗಳಿಗೆ ಮಾತ್ರ. ಅವರ ಹೃದಯ ವೈಶಾಲ್ಯತೆ ಹಾಗೂ ಬುದ್ದಿಮತ್ತೆಗೆ ಅಪಾರ ಶ್ರೀಮಂತಿಕೆಯಿತ್ತು. ಸಿನೆಮಾಗಳಲ್ಲಿ ನಾವು ಬಹಳಷ್ಟು ನೋಡುವಂತೆ ಸರಿಯಾದ ಮೂಲಸೌಕರ್ಯ ವೂ ಇಲ್ಲದ ಪುಟ್ಟ ಗ್ರಾಮ ವೊಂದರಲ್ಲಿ ಶುರುವಾದ ಕಲಾಂ ಎಂಬ ಹುಡುಗನ ಜೀವನ ಪ್ರಯಾಣ ರಾಷ್ಟ್ರಪತಿ ಭವನದವರೆಗೂ ತಲುಪಿದ್ದು ಒಂದು ರೋಮಾಂಚನಕಾರಿ ಕಥೆ. ಅದು ಅದೃಷ್ಟ ಲಕ್ಷ್ಮೀ ಯ  ಧನಲಕ್ಷ್ಮಿಯ ವರವೂ ಇರಲಿಲ್ಲ. ಅವರ ಜೊತೆಗಿದ್ದದ್ದು ಬರೀ ಸರಸ್ವತಿ ಮಾತ್ರ.
ಸಾಮಾನ್ಯ ವಾಗಿ ನಮಗೆ ಪರಿಸ್ಥಿತಿ ಗಳು ವಿರುದ್ದವಾದಾಗ, ಅದೃಷ್ಟ ಕೈಕೊಟ್ಟಾಗ ಹತಾಶರಾಗಿ ಕುಳಿತುಬಿಡುತ್ತೇವೆ. ಇಂದಿನ ಯುವಮನಸ್ಸುಗಳು ಆತ್ಮಹತ್ಯೆ ಯಂತಹ ನಿರ್ಧಾರ ಕ್ಕೂ ಬರುತ್ತವೆ. ಇಂತಹ ಮನಸ್ಥಿತಿ ಯವರಿಗೆಲ್ಲ ಕಲಾಂರ ಬದುಕೇ ಒಂದು ಪಾಠ. ತಾನಿರುವುದು ಗುಡಿಸಲಿನಲ್ಲಿ ಎಂದು ಆತ ಎಂದೂ ಚಿಂತಿಸಲಿಲ್ಲ, ಬದಲಾಗಿ ಬಾನಲ್ಲಿ ಸ್ವಚ್ಛವಾಗಿ ಹಾರುತ್ತಿದ್ದ ಹಕ್ಕಿಗಳನ್ನು ಕಂಡು ತಾನೂ ಹಾಗೇ ಹಾರಬೇಕೆಂಬ ಕನಸು ಕಂಡ. ಮನೆಯಲ್ಲಿ ಹಣಕಾಸಿನ ಸಮಸ್ಯೆ ಯಿದೆ, ಓದು ಹೇಗೆ ಮುಂದುವರಿಸಲಿ ಎಂದು ಕುಸಿಯಲಿಲ್ಲ, ಬದಲಾಗಿ ಅಪ್ಪನಿಗೆ ಸಹಕಾರಿ ಯಾವ ಉತ್ತರ ನೆ ಎಂದುಕೊಂಡು ಮನೆಮನೆಗೆ ಪೇಪರ್ ಹಾಕುವ ಕೆಲಸ ಮಾಡಿದ.
ಕಲಾಂ ಆಶಾವಾದಿ ಮಾತ್ರವಲ್ಲ ಪರಿಶ್ರಮಿ ಮತ್ತು ಛಲವಾದಿಯೂ ಆಗಿದ್ದರು.ಕಾಲೇಜಿನ ಶಿಕ್ಷಣ ವನ್ನೆಲ್ಲ ಕಲಾಂ ತಮಗೆ ಸಿಗುತ್ತಿದ್ದ ವಿದ್ಯಾರ್ಥಿ ವಿದ್ಯಾರ್ಥಿವೇತನ ದಿಂದಲೇ ಪೊರೈಸಿದ್ದರು. ಕಾಲೇಜು ದಿನಗಳಲ್ಲಿ ಒಮ್ಮೆ ಪ್ರಾಜೆಕ್ಟ್ ಸರಿಯಾದ ಸಮಯಕ್ಕೆ ಒಪ್ಪಿಸಲು ಅಸಾಧ್ಯವಾದಾಗ ಅವರ ಪ್ರೊಫೆಸರ್ ಅವರನ್ನು ಕರೆದು ಗದರಿದ್ದರು. ಇನ್ನು ೩ ದಿನಗಳಲ್ಲಿ ನೀನಿದನ್ನು ಪೂರ್ಣಗೊಳಿಸದೇ ಇದ್ದಲ್ಲಿ  ನಿನ್ನ ವಿದ್ಯಾರ್ಥಿ ವಿದ್ಯಾರ್ಥಿವೇತನ ಕಡಿತಮಾಡುತ್ತೇವೆ ಅಂದುಬಿಟ್ಟರು‌. ಕಲಾಂ ಗೀಗ ಅಗ್ನಿಪರೀಕ್ಷೆ,  ಈ ಕೆಲಸ ಪೂರ್ಣಗೊಳಿಸದೇ ಇದ್ದಲ್ಲಿ ತನ್ನ ತನ್ನ ವಿದ್ಯಾರ್ಥಿವೇತನದ ಜೊತೆಗೆ ಓದು ಕೂಡ ನಿಂತು ಹೋಗುತ್ತದೆ. ಪರೀಕ್ಷೆ ಬರೆದು ಫಲಿತಾಂಶ ಬರುವ ಮುನ್ನವೇ  ಖಿನ್ನತೆ ಗೊಳಗಾಗುವ ಇಂದಿನ ವಿದ್ಯಾರ್ಥಿಗಳು ಈ ಘಟನೆಯನ್ನು ಒಮ್ಮೆ ನೆನಪಿಸಿಕೊಳ್ಳಬೇಕು. ಊಟ ನಿದ್ದೆ ಎಲ್ಲ ಮರೆತು ಕಲಾಂ ಕೆಲಸ ಶುರುವಿಟ್ಟುಕೊಂಡರು. ಸತತ ಮೂರು ದಿನಗಳು ಕಲಾಂ ಡ್ರಾಯಿಂಗ್ ರೂಮ್ ಬಿಟ್ಟು ಕದಲಲಿಲ್ಲ. ಕೊನೆಗೂ ಕ್ಲಪ್ತ ಸಮಯಕ್ಕೆ ಕೆಲಸ ಮುಗಿಸಿದ ಕಲಾಂ ಅದನ್ನು ಪ್ರೊಫೆಸರ್ ಗೆ ಒಪ್ಪಿಸಿದರು.
ಡ್ರಾಯಿಂಗ್ ಕಂಡು ಸಂತೋಷದಿಂದ ಬೀಗಿದ ಪ್ರೊಫೆಸರ್ ಶ್ರೀನಿವಾಸನ್ ಸರ್ ಕಲಾಂ ರನ್ನು ಮನದುಂಬಿ ಹರಸಿದರು. ” ನನಗೂ ಗೊತ್ತಿತ್ತು, ನಾನು ನಿನಗೆ ವಹಿಸಿರುವುದು ಬಲು ಕಷ್ಟ ಸಾಧ್ಯವಾದ ಕೆಲಸ. ಅಂತಹ ಒತ್ತಡದಲ್ಲೂ ಅತ್ಯುತ್ತಮ ನಿರ್ವಹಣೆ ತೋರಿದ್ದೀಯ. ನಿನಗೆ ಉಜ್ವಲವಾದ  ಭವಿಷ್ಯ ವಿದೆ‌. ಎಂದು ಬೆನ್ನುತಟ್ಟಿದರು.
ಕಲಾಂ ಇಚ್ಚಾಶಕ್ತಿ ಹಾಗೂ ಆಸಕ್ತಿಗಳು ಸದಾ ಗುರಿಯನ್ನು  ಸೇರುವಲ್ಲಿಯವರೆಗೆ ಚಿಂತಿಸುತ್ತಿತ್ತಾ ಇದ್ದುದರಿಂದ, ಯಾವ ಸಮಸ್ಯಗಳಿಗೂ ಅವರ ಕನಸನ್ನು ಕಿತ್ತುಕೊಳ್ಲುವ ತಾಕತ್ತಿರಲಿಲ್ಲ. ಹೈಸ್ಕೂಲ್ ಶಿಕ್ಷಣ ದ ಬಳಿಕ  ೫೩ಕಿಮೀ. ದೂರದ ಸೈಂಟ್ ಜೋಸೆಫ್ ಕಾಲೇಜು ಸೇರಿ ಬಿಎಸ್ಸಿ ಅಧ್ಯಯನ ಮುಂದುವರಿಸಿದರು. ಅದರೂ ಅವರ ಮನಸ್ಸು ಇಂಜಿನಿಯರಿಂಗ್ ಕಡೆಗೆ ಸೆಳೆಯುತ್ತಿತ್ತು. ಬಹಳ ವಿಚಾರ ಮಾಡಿದ ನಂತರ ತಾವು ವೈಮಾನಿಕ ಅಧ್ಯಯನ ದಲ್ಲಿ ಮುಂದುವರಿಯುವುದೆಂದು  ನಿರ್ಧರಿಸಿ, ಮದರಾಸು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಗೆ ಸೇರಿಕೊಂಡರು. ವಿದ್ಯಾರ್ಥಿವೇತನ ದೊರೆಯುತ್ತಿದ್ದರೂ ಅದು ಅವರ ಶಿಕ್ಷಣಕ್ಕೆ ಸಾಲುತ್ತಿರಲಿಲ್ಲ. ಇದಕ್ಕಾಗಿ ಹಣ ಹೊಂದಿಸಲು ಬಹಳ ಕಷ್ಟ ಪಟ್ಟರು. ಇದನ್ನು ಕಂಡ ಅವರ ಅಕ್ಕ ಜೊಹರಾ ತಮ್ಮ ಚಿನ್ನದ ಸರ, ಉಂಗುರವನ್ನು ಬ್ಯಾಂಕಿನಲ್ಲಿ ಅಡವಿಟ್ಟು ಹಣ ಹೊಂದಿಸಿ ಕೊಟ್ಟರು. ಆಕೆಯ ಈ ಉದಾರ ಮನಸ್ಸೇ ಮುಂದೆ ಕಲಾಂ ಸಾಧನೆಯ ಶಿಖರವೇರಲು ಸಹಕಾರಿಯಾಯಿತು.
ಕಾಲೇಜಿನಿಂದ ಹೊರಬಂದ  ಕಲಾಂ ಎಚ್ಎಲ್ ಗೆ ಸೇರಿಕೊಂಡರು. ಸಾಗಿ ಬಂದ ದಾರಿ ಮರೆಯದ ಕಲಾಂ, ಅಡವಿಟ್ಟಿದ್ದ ತನ್ನ ಅಕ್ಕನ ಚಿನ್ನವನ್ನು ಬಿಡಿಸಿಕೊಟ್ಟು ಕರ್ತವ್ಯಪ್ರಜ್ಞೆ ಮೆರೆದರು. ಮುಂದಿನದೆಲ್ಲ  ಇತಿಹಾಸ,
ಎಚ್ಎಲ್ ಬಳಿಕ ರಕ್ಷಣಾ ಸಚಿವಾಲಯದಲ್ಲಿ ಸೀನಿಯರ್ ಅಸಿಸ್ಟೆಂಟ್ ಆಗಿ,  ಡಿ.ಆರ್.ಡಿ.ಓ  ಪ್ರಾಜೆಕ್ಟ್ ಡೈರೆಕ್ಟರ್ ಆಗಿ ಸೇವೆ ಸಲ್ಲಿಸಿದರು. ಭಾರತದ ಬಾಹ್ಯಾಕಾಶ ಉಪಗ್ರಹ ಉಡಾವಣೆ ಮತ್ತು ರಾಕೆಟ್ ತಯಾರಿಯಲ್ಲಿ ಇವರ ಕೊಡುಗೆ ಅನನ್ಯವಾದುದು. ೯ ವರ್ಷಗಳ ಕಾಲ ಭಾರತದ ವೈಜ್ಞಾನಿಕ ಸಲಹೆಗಾರರಾಗಿ ಸೇವೆ ಸಲ್ಲಿಸಿದರು. ಪೋಖ್ರಾನ್ ಅಣುಪರೀಕ್ಷೆಯಲ್ಲಿ ಕಲಾಂ ಪಾತ್ರ ಬಹಳ ದೊಡ್ಡದು. ಇವರ ಅದ್ಭುತ ಸೇವೆಗಾಗಿ ಪದ್ಮ ಪ್ರಶಸ್ತಿ ಪುರಸ್ಕಾರಗಳು, ೩೦ ವಿಶ್ವ ವಿದ್ಯಾಲಯಗಳಿಂದ ಗೌರವ ಡಾಕ್ಟರೇಟ್ ಗಳು ಸಂದವು. ಭಾರತದ ರಕ್ಷಣಾ ಕ್ಷೇತ್ರದಲ್ಲಿ  ಹೊಸ ಇತಿಹಾಸ ಬರೆಯುವ ಮೂಲಕ “ಭಾರತದ ಕ್ಷಿಪಣಿ ಜನಕ ” ಅನ್ನುವ ಅಭಿದಾನಕ್ಕೆ  ಪಾತ್ರರಾದರು. ಇವರು ದೇಶಕ್ಕೆ ಕೊಟ್ಟ ಅತ್ಯುನ್ನತ ಕೊಡುಗೆಗಾಗಿ ದೇಶದ ಶ್ರೇಷ್ಟ ನಾಗರಿಕ ಪುರಸ್ಕಾರ “ಭಾರತ  ರತ್ನ” ಒಲಿದು ಬಂತು.

ಭಾರತ ರತ್ನ ಪ್ರಶಸ್ತಿ ಸ್ವೀಕರಿಸುವಾಗ ಅವರು ಮಾಧ್ಯಮಗಳೊಂದಿಗೆ ಹಂಚಿಕೊಂಡ ಒಂದು ಘಟನೆ ನಮ್ಮೆಲ್ಲರ ಚಿಂತನೆಯ ದಿಕ್ಕನ್ನೇ ಬದಲಿಸುವಂತದ್ದು. ಕಲಾಂ ಶಾಲಾ ದಿನಗಳಲ್ಲಿ  ರಾಮನಾಥನೆಮಬ ಸ್ನೇಹಿತ ನಿದ್ದ. ಹೊಸದಾಗಿ ಬಂದ ಶಿಕ್ಷಕರೊಬ್ಬರು ಒಟ್ಟೊಟ್ಟಿಗೇ ಕುಳಿತಿದ್ದ ಪುರೋಹಿತರ ಮಗ ರಾಮನಾಥ ಹಾಗೂ ಕಲಾಂ ನನ್ನು ಕಂಡು ಗಾಬರಿಗೊಂಡು  ಕಲಾಂ ನನ್ನು ಗದರಿ ಬೇರೆಡೆ ಕುಳ್ಳಿರಿಸಿದರು. ಇಬ್ಬರು ಬಾಲಕರ ಕಣ್ಣುಗಳೂ ತುಂಬಿ ಬಂದಿದ್ದವು.ನಂತರ ಘಟನೆ ಬಗ್ಗೆ ತಿಳಿದ ರಾಮನಾಥನ ಪುರೋಹಿತ ತಂದೆ ಆ ಶಿಕ್ಷಕನನ್ನು ಗದರಿದರು. ಕ್ಷಮೆ ಕೇಳಬೇಕು ಇಲ್ಲವೇ ಊರು ತೊರೆಯಬೇಕೆಂದರು. ಕೊನೆಗೂ ಆ ಶಿಕ್ಷಕ ಕ್ಷಮೆ ಕೇಳಬೇಕಾಯಿತು.

“ರಾಮನಾಥನ ಅಂದಿನ ಕಣ್ಣೀರು ತುಂಬಿದ್ದ ಕಣ್ಣುಗಳು ಇಂದಿಗೂ ನನ್ನ ಕಣ್ಣ ಮುಂದಿವೆ. ಇಂದಿಗೂ ಅದೇ ನೆನಪಿನಲ್ಲಿ ಬದುಕುತ್ತಿದ್ದೇನೆ. ನಮ್ಮೆಲ್ಲರಿಗೂ ಭಗವದ್ಗೀತೆ-ಕುರಾನ್ ಬಹಳ ದೊಡ್ಡದು, ಆದರೆ ಹಿಂದೂಸ್ತಾನ ಅದಕ್ಕಿಂತ ಮಿಗಿಲು.” ಎನ್ನುವ ಸಂದೇಶ ಕೊಟ್ಟಿದ್ದರು.
ಹೀಗೆ ಬದುಕಿದ್ದಾಗಲೇ ದಂತಕಥೆಯಾಗಿ, ಶಾಲಾ ಮಕ್ಕಳಿಗೆ ಪಾಠವಾಗಿ, ನಮ್ಮೆಲ್ಲರ ನೆಚ್ಚಿನ ಮೇಸ್ಟ್ರೂ ಆಗಿ, ಜನರ ಅಧ್ಯಕ್ಷ ರಾಗಿ ಮೆರೆದ ಕಲಾಂ ಪಂಚಭೂತಗಳಲ್ಲಿ ಲೀನರಾಗಿ ವರುಷ ಕಳೆದರೂ ಅವರ ನೆನಪು ಎದೆಯಾಳದಲ್ಲಿ ಹಸಿರಾಗಿದೆ.

ನಿಜಕ್ಕೂ ಕಲಾಂ ಅಂದರೆ…..  ಅದ್ಭುತ ಕನಸುಗಾರ, ಸ್ಫೂರ್ತಿಯ ಕಿರಣ, ಸರಸ್ವತೀ ಪುತ್ರ, ಸರಳತೆಯ ಮೂರ್ತಿ, ಅಪ್ಪಟ ದೇಶಪ್ರೇಮಿ, ಉತ್ಸಾದ ಗಣಿ, ಎಲ್ಲರೊಳಗೊಂದಾಗುವ ಕಲಾಂ ಮೇಷ್ಟ್ರು… ಸರ್.., ನೀವು ನಮ್ಮನ್ನು ಅಗಲಿ ಹೋಗಿಲ್ಲ, ಏಕೆಂದರೆ ನನ್ನ ದೇಶದ ಪ್ರತೀ ಕನಸಿನಲ್ಲಿ ಪ್ರತೀ ಮನಸಿನಲ್ಲಿ ನೀವಿದ್ದೀರಿ.  ಆದರೂ ದೇಶಭಕ್ತಿಯ, ಇಚ್ಚಾಶಕ್ತಿಯ ಪಾಠ ಹೇಳಲು  ಮತ್ತೊಮ್ಮೆ ಹುಟ್ಟಿ ಬರುವಿರಾ..?

—–>

ಲೇಖಕರು: ಅಕ್ಷತಾ ಬಜಪೆ

Share196Tweet123Send
Previous Post

ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಹುಟ್ಟುಹಬ್ಬ: ಪ್ರಧಾನಿ ಮೋದಿಯಿಂದ ಗೌರವ ಸಲ್ಲಿಕೆ

Next Post

ದೇಶಭಕ್ತಿಗಿಂತಲೂ ಮಿಗಿಲಾದ್ದನ್ನು ಕಲಿಸಿದ ವಾಲ್ಮೀಕಿ ಮಹರ್ಷಿ: ಯಡಿಯೂರಪ್ಪ ಅಭಿಪ್ರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ದೇಶಭಕ್ತಿಗಿಂತಲೂ ಮಿಗಿಲಾದ್ದನ್ನು ಕಲಿಸಿದ ವಾಲ್ಮೀಕಿ ಮಹರ್ಷಿ: ಯಡಿಯೂರಪ್ಪ ಅಭಿಪ್ರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ | ಕೇಂದ್ರ ನಿರ್ಧಾರ

ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ ನೀಟ್ ಪರೀಕ್ಷೆ | ಕೇಂದ್ರ ನಿರ್ಧಾರ

May 15, 2026
SWR to run special trains for Good Friday, Easter rush

ಬೆಂಗಳೂರು-ಕಲಬುರಗಿ ಸಾಪ್ತಾಹಿಕ ಎಕ್ಸ್’ಪ್ರೆಸ್ ವಿಶೇಷ ರೈಲಿನ ಕುರಿತು ಲೇಟೆಸ್ಟ್ ಅಪ್ಡೇಟ್

May 15, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು ಮತ್ತು ಮುಂಬೈ ನಡುವೆ ನೂತನ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಸಂಚಾರ ಪ್ರಾರಂಭ

May 15, 2026
ಕಾರು ಬದಲಿಸಿ ಗುಪ್ತವಾಗಿ ಪತ್ನಿ ನಿವಾಸಕ್ಕೆ ದರ್ಶನ್ | ಬೆಂಬಿಡದೇ ತೆರಳಿ ಬಂಧಿಸಿದ ಪೊಲೀಸರು

ನಟ ದರ್ಶನ್’ಗೆ ಬಿಗ್ ಸೆಟ್ ಬ್ಯಾಕ್ | ಇನ್ನೊಂದು ವರ್ಷ ಜೈಲೇ ಫಿಕ್ಸ್ | ಕಾರಣವೇನು?

May 15, 2026
ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

ಅಧಿಕ ಜ್ಯೇಷ್ಠ ಮಾಸೋತ್ಸವದ | ಸತ್ಯಾತ್ಮ ತೀರ್ಥರ ಮೈಸೂರು ದಿಗ್ವಿಜಯ | ಭವ್ಯ ಸ್ವಾಗತ

May 15, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL