No Result
View All Result
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ
English Articles

Special Train Between Bengaluru Cantt and Chennai

by ಕಲ್ಪ ನ್ಯೂಸ್
April 3, 2026
0

Kalpa Media House  |  Bengaluru  | To clear the extra rush of passengers during the Summer Holiday season, South Western...

Read moreDetails
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಮತ್ತೆ ಅಡಿ ಇಟ್ಟಿದೆ ಬರಗಾಲ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 14, 2016
in Army
0
Share on FacebookShare on TwitterShare on WhatsApp
ಸರ್ಕಾರ ಬರಗಾಲ ಪರಿಹಾರ ಕಾಮಗಾರಿಯನ್ನು ಸಮರೋಪಾದಿಯಲ್ಲಿ ಆರಂಭಿಸಿದರೆ ಸ್ಪಲ್ವವಾದರೂ ಜನ ನೆಮ್ಮದಿಯನ್ನು ಕಾಣಬಹುದು. ಕೇಂದ್ರವೂ ಸಹ ರಾಜ್ಯದ ಬರ ಪರಿಸ್ಥಿತಿಗೆ ನೆರವಾಗಬೇಕಿದೆ. ಕೇಂದ್ರ ಸರ್ಕಾರ ತನ್ನ ಅಧಿಕಾರಿಗಳನ್ನು ಕಳುಹಿಸಿ ಬರಸಮೀಕ್ಷೆ ಮಾಡಿಸಿ ಹೆಚ್ಚಿನ ಮೊತ್ತದ ಪರಿಹರ ಘೋಷಣೆಗೆ ಮುಂದಾಗಬೇಕಿಕು. ರಾಜ್ಯದ ಸಾಂಸದರು ಕೇಂದ್ರದ ಮೇಲೆ ಒತ್ತಡ ತರುವತ್ತ ಕಾರ್ಯೋನ್ಮುಖರಾಗಬೇಕಿದೆ. ಬರ ಎದುರಾಗಿರುವ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಮ್ಮನದಿಂದ ಕೆಲಸ ಮಾಡಬೇಕು. ಇದನ್ನು ಬಿಟ್ಟು ಕೇಂದ್ರ ರಾಜ್ಯ ಸರ್ಕಾರವನ್ನು, ರಾಜ್ಯ ಕೇಂದ್ರವನ್ನು ದೂಷಿಸುತ್ತ ಕೂಡ್ರುವ ಕೆಲಸವನ್ನು ಮಾಡಬಾರದು.
ರಾಜ್ಯದಲ್ಲಿ ಈ ಬಾರಿ ಮತ್ತೆ ಬರಗಾಲ ಕಾಲಿಟ್ಟಿದೆ. ನಿಗದಿತ ಪ್ರಮಾಣದಲ್ಲಿ ಮಳೆ ಸುರಿಯದೆ ಸೆಪ್ಟೆಂಬರ್‌ನಲ್ಲೇ ಬರಪೀಡಿತ ತಾಲೂಕುಗಳನ್ನು ಘೋಷಿಸುವ ಪರಿಸ್ಥಿತಿ ಬಂದೊದಗಿದೆ.
ಮಳೆ ಇಲ್ಲದೆ ಜಲಾಶಯಗಳು ತುಂಬಿಲ್ಲ. ಇದರಿಂದ ಬೆಳೆಗೆ ನೀರಿಲ್ಲ ಮತ್ತು ಕುಡಿಯಲು ನೀರಿಲ್ಲ. ಬೆಳೆಗೆ ನೀರು ಕೊಟ್ಟರೆ ಕುಡಿಯಲು ನೀರಿರುವುದಿಲ್ಲ. ಹೀಗೆ ಒಂದರ ಮೇಲೊಂದು ಸಮಸ್ಯೆ ಎದುರಾಗಿದೆ. ಕರ್ನಾಟಕ ಸರ್ಕಾರ ಬರಗಾಲಪೀಡಿತ ತಾಲೂಕುಗಳ ಪಟ್ಟಿ ಮಾಡುವಲ್ಲಿ ನಿರತವಾಗಿದೆ.
ರಾಜ್ಯದಲ್ಲ್ ಒಟ್ಟೂ ೭ ಲಕ್ಷ ಹೆಕ್ಟೇರ್‌ನಲ್ಲಿ ಭತ್ತ ನಾಟಿಯಾಗಬೇಕಿತ್ತು. ಆದರೆ ಈ ಬಾರಿ  ಕೇವಲ ೨,೪೨ ಹೆಕ್ಟೇರ್‌ನಲ್ಲಿ ಮಾತ್ರ ನಾಟಿಯಾಗಿದೆ. ಇದು ಆಘಾತಕರಿ ವಿಚಾರವಾಗಿದೆ. ಮಳೆಯಾಗದೇ ಇರುವುದರಿಂದ ರೈತರು ಭತ್ತ ನಾಟಿಯತ್ತ ತಲೆಹಾಕಲೇ ಇಲ್ಲ. ಈ ವರ್ಷ ಮಳೆಗಾಲ ಉತ್ತಮ ಆರಂಭವನ್ನು ಮಾಡಿ ನಿರೀಕ್ಷೆಯನ್ನು ಹುಟ್ಟಿಸಿತ್ತು. ಇದರಿಂದ ಎಲ್ಲರೂ ಸಂತಸಗೊಂಡಿದ್ದರು. ಆದರೆ ಬರಬರುತ್ತ ಮಳೆ ಕಡಿಮೆಯಾಗತೊಡಗಿತರು. ಆರಂಭದ ಅಂದರೆ ಜೂನ್ ತಿಂಗಳಲ್ಲೇ ಕೊರತೆಯ ಮಳೆ ಕಾಡಿತು. ಮತ್ತೆ ಜುಲೈ, ಆಗಸ್ಟ್‌ನಲ್ಲೂ ಇದೇ ಪರಿಸ್ಥಿತಿ ಎದುರಾಗಿದೆ.
ರಾಜ್ಯದಲ್ಲಿ ೨೦೦೨ರಿಂದ ೨೦೦೫ರವರೆಗಿನ ವರ್ಷದಲ್ಲಿ ಮಾತ್ರ ಉತ್ತಮ ಮಳೆಯಾಗಿದೆ. ಇದರ ಹೊರತುಪಡಿಸಿದರೆ ಎಲ್ಲ ವರ್ಷವೂ ಮಳೆ ಖೋತಾ. ಅರೆಬರೆ ಬರಗಾಲ ಬಂದಿತ್ತು. ಆದರೆ ಇದನ್ನು ಎದುರಿಸುವಲ್ಲಿ ಆಯಾಯ ಸರ್ಕಾರಗಳು ಯಶಸ್ಸಿಗಿಂತ ಹೆಚ್ಚು ವಿಫಲತೆಯನ್ನೇ ಕಂಡಿವೆ.  ಏಕೆಂದರೆ ಎಷ್ಟೇ ಬರ ಎದುರಾದರೂ ಸರಕಾರಗಳು ಮುನ್ನೆಚ್ಚರಿಕೆ ಕೈಗೊಳ್ಳದಿರುವುದು ಇದಕ್ಕೆ ಕಾರಣ. ಈ ವರ್ಷವೂ ಕಳೆದೆಲ್ಲ ವರ್ಷಗಳಿಗಿಂತ ಮುನ್ನವೇ ಬರ ಕಾಲಿಟ್ಟಿದೆ. ಇದು ರಾಜ್ಯದ ಜನರನ್ನು ಆತಂಕಕ್ಕೆ ನೂಕಿದೆ. ಮುಂದಿನ ಜೀವನ ಹೇಗೆಂಬ ಭಯ ಕಾಡಲಾರಂಭಿಸಿದೆ. ಬೆಳೆಗಳೆಲ್ಲ ಬಹುತೇಕ ನೆಲಕಚ್ಚಿವೆ. ಇನ್ನೊಂದೆಡೆ, ಬೆಳೆವಿಮೆಯೂ ಸರಿಯಾಗಿ ಪಾವತಿಯಾಗದೆ ರೈತ ಕಂಗಾಲಾಗಿದ್ದಾನೆ. ಬೆಳೆದ ಬೆಳೆಗೂ ಉತ್ತಮ ಬೆಲೆ, ಮಾರುಕಟ್ಟೆ ಇಲ್ಲದೆ ಇನ್ನಷ್ಟು ಹೈರಾಣಾಗುವಂತಾಗಿದೆ.
 ಶಿವಮೊಗ್ಗ ಜಿಲ್ಲೆಯಲ್ಲೇ ಈ ಬಾರಿ ಶೇ. ೭೦ರಷ್ಟು ಮಳೆ ಕೊರತೆ ಆಗಿದೆ. ಮಲೆನಾಡಿನ ಜಿಲ್ಲೆಯಲ್ಲಿ ಹೀಗಾದರೆ ಇನ್ನು ಬಯಲುಸೀಮೆ, ಅರೆಬಯಲುಸೀಮೆ ಜಿಲ್ಲೆಗಳ ಪರಿಸ್ಥಿತಿ ಏನಾಗಬಹುದು? ಬಯಲುಸೀಮೆಯ ಜಿಲ್ಲೆಯಲ್ಲಿ ಯಥಾಪ್ರಕರ ಗುಳೆ ಆರಂಭವಾಗಿದೆ. ಮುಂಬಯಿ, ಗೋವಾ ಮತ್ತು ಕರಾವಳಿ ಜಿಲ್ಲೆಗಳತ್ತ ವಲಸೆ ಆರಂಭವಾಗಿದೆ. ಅನ್ನಕ್ಕಾಗಿ ಇವರು ಕುಟುಂಬಸಹಿತ ಊರು ಖಾಲಿ ಮಾಡುತ್ತಿದ್ದಾರೆ. ಇವರನ್ನು ತಡೆಯುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿಲ್ಲ. ಮಹಾತ್ಮಾಗಾಂಧಿ ಗ್ರಾಮೀಣ ಉದ್ಯೋಗ ಯೋಜನೆಯನನ್ನು ಕೂಡಲೇ ಜಾರಿಗೊಳಿಸುವ ಕೆಲಸವಾಗಬೇಕಿದೆ. ಈ ಯೋಜನೆಯಲ್ಲಿ ದಿನಕ್ಕೆ ೨೦೪ ರೂ. ಗಳ ವೇತನವನ್ನು ಪುರುಷ ಮತ್ತು ಮಹಿಳೆಯರಿಗೆ (ಸಮಾನವಾಗಿ) ನೀಡಲಾಗುತ್ತಿದೆ. ಆದರೆ ಈ ವರ್ಷ ಇನ್ನೂ ಇದು ಆರಂಭವಾಗಿಲ್ಲ.
ಸರ್ಕಾರ ಬರಗಾಲ ಪರಿಹಾರ ಕಾಮಗಾರಿಯನ್ನು ಸಮರೋಪಾದಿಯಲ್ಲಿ  ಆರಂಭಿಸಿದರೆ ಸ್ಪಲ್ವವಾದರೂ ಜನ ನೆಮ್ಮದಿಯನ್ನು ಕಾಣಬಹುದು. ಕೇಂದ್ರವೂ ಸಹ ರಾಜ್ಯದ ಬರ ಪರಿಸ್ಥಿತಿಗೆ ನೆರವಾಗಬೇಕಿದೆ. ಕೇಂದ್ರ ಸರ್ಕಾರ ತನ್ನ ಅಧಿಕಾರಿಗಳನ್ನು ಕಳುಹಿಸಿ ಬರಸಮೀಕ್ಷೆ ಮಾಡಿಸಿ ಹೆಚ್ಚಿನ ಮೊತ್ತದ ಪರಿಹರ ಘೋಷಣೆಗೆ ಮುಂದಾಗಬೇಕಿಕು. ರಾಜ್ಯದ ಸಾಂಸದರು ಕೇಂದ್ರದ ಮೇಲೆ ಒತ್ತಡ ತರುವತ್ತ ಕಾರ್ಯೋನ್ಮುಖರಾಗಬೇಕಿದೆ. ಬರ ಎದುರಾಗಿರುವ ಸಂದರ್ಭದಲ್ಲಿ ಎಲ್ಲ ರಾಜಕೀಯ ಪಕ್ಷಗಳು ಒಮ್ಮನದಿಂದ ಕೆಲಸ ಮಾಡಬೇಕು. ಇದನ್ನು ಬಿಟ್ಟು ಕೇಂದ್ರ ರಾಜ್ಯ ಸರ್ಕಾರವನ್ನು, ರಾಜ್ಯ ಕೇಂದ್ರವನ್ನು ದೂಷಿಸುತ್ತ ಕೂಡ್ರುವ ಕೆಲಸವನ್ನು ಮಾಡಬಾರದು.
ಬರಗಾಲ ತಡೆಯುವ ನಿಟ್ಟಿನಲ್ಲಿ ಶಾಶ್ವತ ಕಾರ್ಯಕ್ರಗಳನ್ನು ಕೈಗೊಳ್ಳುವ ಬಗ್ಗೆ ಯೋಜನೆ ರೂಪಿಸುವುದು ಇಂದಿನ ತುರ್ತು ಅಗತ್ಯವಾಗಿದೆ. ಕಳೆದ ವರ್ಷ ರಾಜ್ಯ ಸರ್ಕಾರ ಕೆರೆಗಳ ಹೂಳೆತ್ತುವಿಕೆ, ಮಳೆ ನೀರು ಸಂಗ್ರಹ, ಬಸಿಗಾಲುವೆಯಂತಹ ಕಾರ್ಯಕ್ರಮವನ್ನು ರೂಪಿಸಿತ್ತು. ಒತ್ತುವರಿಯಾಗಿದ್ದ ಅನೇಕ ಕೆರೆಗಳನ್ನು ತೆರವುಗೊಳಿಸಿ ಬೇಲಿ ಹಾಕಿಸಿ, ಅವುಗಳ ಸಂರಕ್ಷಣೆಗೆ ಮುಂದಾಗಿತ್ತು ಈ ವರ್ಷವೂ ಇದನ್ನು ಮುಂದುವರೆಸಿದರೆ ಮುಂದಿನ ವರ್ಷಗಳಲ್ಲಿ ಇನ್ನಷ್ಟು ಜಲಮರುಪೂರಣಕ್ಕೆ ಅನುಕೂಲವಾಗಬಹುದು. ಇದರಿಂದ ಬರಗಾಲವನ್ನು ಎದುರಿಸಲು ಸಹಕಾರಿಯಗಬಹುದು.
ಬರಗಾಲದ ಹಿನ್ನೆಲೆಯಲ್ಲಿ ಸಾಕಷ್ಟು ಕುಡಿಯುವ ನೀರು ಕಾಪಾಡಿಕೊಳ್ಳುವತ್ತ ಸರಕಾರ ಕ್ರಮ ಜರುಗಿಸಬೇಕು. ಕಾವೇರಿ ಜಲಾನಯನ ಪ್ರದೇಶದಲ್ಲಿನ ನೀರಿಗೆ ಜಯಲಲಿತಾ ಗಂಟುಬಿದ್ದಿರುವುದರಿಂದ ಆ ಭಾಗದ ಜಿಲ್ಲೆಯ ಜನರಿಗೆ ಬೇಸಿಗೆಯಲ್ಲಿ ಈ ಬಾರಿ ಕುಡಿಯುವ ನೀರು ಕೊಡುವುದು ಕಷ್ಟವಾದೀತು. ಬೆಂಗಳೂರಿನಂತಹ ಮಹಾನಗರ ನೀರಿಗಾಗಿ ಪರಿತಪಿಸಬೇಕಾದ ಸ್ಥಿತಿ ಎದುರಾಗಲಿದೆ. ಮಲೆನಾಡು ಜಿಲ್ಲೆಗಳಲ್ಲೂ ಜಲಾಶಯಗಳು ಭರ್ತಿಯಾಗಿಲ್ಲ. ಮಹಾರಾಷ್ಟ್ರದಲ್ಲಿ ಉತ್ತಮ ಮಳೆಯಾಗಿದ್ದರೂ ಆಲಮಟ್ಟಿ ಜಲಾಶಯ ತುಂಬಿಲ್ಲ. ಇದರಿಂದ ಆ ಭಾಗದ ಕುಡಿಯುವ ನೀರು, ಬೆಳೆಗಳಿಗೆ ಕಂಟಕ ಕಾದಿರುವುದು ನಿಶ್ಚಿತ…
Share196Tweet123Send
Previous Post

ಸಾಂಸದ ಸುರೇಶ್ ವಿರುದ್ಧ ದೂರು

Next Post

ಬಿಜೆಪಿ ಬೆಳೆಸಲು ಎಸ್‌ಟಿ ಮೋರ್ಚಾ ಮುಂದಾಗಲಿ: ಕೆ.ಎಸ್‌. ಈಶ್ವರಪ್ಪ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬಿಜೆಪಿ ಬೆಳೆಸಲು ಎಸ್‌ಟಿ ಮೋರ್ಚಾ ಮುಂದಾಗಲಿ: ಕೆ.ಎಸ್‌. ಈಶ್ವರಪ್ಪ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಪೊಲೀಸ್ ಪಬ್ಲಿಕ್ ಶಾಲೆ | ವಿವಿಧ ಶಿಕ್ಷಕರ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

April 3, 2026
“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

“ಮೂರ್ಖ ಯೋಜನೆಗಳ” ವಿರುದ್ಧ ಬೆಂಗಳೂರಿಗರ ಆಕ್ರೋಶ | ನಗರಾಭಿವೃದ್ಧಿ ಯೋಜನೆಗಳ ಮರುಕಲ್ಪನೆಗೆ ನಾಗರಿಕರ ಆಗ್ರಹ

April 3, 2026
SWR Mysuru Division Excels with Record Passenger Revenue and Strong Commercial Growth

ನೈಋತ್ಯ ರೈಲ್ವೆ ಮೈಸೂರು ವಿಭಾಗದಿಂದ ದಾಖಲೆಯ ಆದಾಯ, ಹಲವು ಮೈಲಿಗಲ್ಲು

April 3, 2026
ಭದ್ರಾವತಿಯ ಇಬ್ಬರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ, ಏನಿದು ಪ್ರಕರಣ?

ಲಂಚದ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಧಿಕಾರಿಗೆ ಎರಡು ವರ್ಷ ಕಠಿಣ ಕಾರಾಗೃಹ ಶಿಕ್ಷೆ: ಕೋರ್ಟ್ ಆದೇಶ

April 3, 2026
SWR to run special trains for Good Friday, Easter rush

Extension of Partial Cancellation of Trains between Chitradurg-Chikjajur

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL