No Result
View All Result
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು
English Articles

Young Woman Dies of Cardiac Arrest; Parents Give New Life Through Organ Donation

by ಕಲ್ಪ ನ್ಯೂಸ್
June 3, 2026
0

Kalpa Media House  |  Bhadravathi | In a remarkable act of humanity amid grief, the parents of a young woman...

Read moreDetails
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
  • Advertise With Us
  • Grievances
  • About Us
  • Contact Us
Thursday, June 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ

ರಾಯಣ್ಣ ಬ್ರಿಗೇಡ್ ಪೂರ್ವಭಾವಿ ಸಭೆ ಯಶಸ್ವಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 22, 2016
in ಜಿಲ್ಲೆ, ಶಿವಮೊಗ್ಗ
0
Share on FacebookShare on TwitterShare on WhatsApp

ಶಿವಮೊಗ್ಗ, ಸೆ.22: ರಾಯಣ್ಣ ಬ್ರಿಗೇಡ್ ಆಶಯವೊಂದೇ, ಅದು ಬಿಜೆಪಿ ಸರ್ಕಾರವನ್ನು ಅಸ್ತಿತ್ವಕ್ಕೆ ತರುವುದು. ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯಮಂತ್ರಿಯನ್ನಾಗಿಸುವುದು ಎಂದು ವಿಧಾನಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಮತ್ತೊಮ್ಮೆ ಘೋಷಿಸಿದರು.
ಅ.1ರಂದು ಹಾವೇರಿಯಲ್ಲಿ ನಡೆಯಲಿರುವ ಸಂಗೊಳ್ಳಿರಾಯಣ್ಣ ಬ್ರಿಗೇಡ್‌ನ ಸಮಾವೇಶದ ಸಿದ್ದತಾ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ರಾಯಣ್ಣ ಬ್ರಿಗೇಡ್ ಮೂಲಕ ಬಿಜೆಪಿಯನ್ನು ಬೆಂಬಲಿಸಬೇಕು. ಕಾಂಗ್ರೆಸ್‌ನ ದುರಾಡಳಿತದಿಂದ ಬೇಸತ್ತಿರುವ ಅನೇಕರು ಕಾಂಗ್ರೆಸ್ ಬಿಟ್ಟು ಅನೇಕರು ಬ್ರಿಗೇಡ್‌ಗೆ ಸೇರಿದ್ದಾರೆ. ಹಲವು ಮಠಾಧೀಶರು, ನಿವೃತ್ತ ಅಧಿಕಾರಿಗಳು ನೇರವಾಗಿ ಬಿಜೆಪಿಯನ್ನು ಸೇರದಿರುವವರು ಬ್ರಿಗೇಡ್ ಮೂಲಕ ಬಿಜೆಪಿಯನ್ನು ಕಟ್ಟಲಿದ್ದಾರೆ. ಇದರಿಂದ ಬಿಜೆಪಿ ಮತ್ತಷ್ಟು ಗಟ್ಟಿಯಾಗುತ್ತದೆ. ಇದನ್ನು ನಾವು ನಮ್ಮ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೂ ಮನವರಿಕೆ ಮಾಡಿಕೊಟ್ಟಿದ್ದೇವೆ.
ಕಾಂಗ್ರೆಸ್ ಸರ್ಕಾರ ದಲಿತರಿಗೆ ಯಾವ ನ್ಯಾಯವನ್ನು ನೀಡಿಲ್ಲ ಕೇವಲ ಅವರನ್ನು ತಮ್ಮ ವೋಟ್‌ಬ್ಯಾಂಕ್‌ನ್ನಾಗಿ ಮಾಡಿಕೊಂಡಿದೆಯೇ ವಿನಾ ಯಾವ ಕಲ್ಯಾಣವನ್ನು ಮಾಡಿಲ್ಲ. ಅವರ ಅಭಿವೃದ್ಧಿಯೂ ಆಗಿಲ್ಲ, ದಲಿತರಿಗೆ ಕುಡಿಯಲು ನೀರು ಸಹಾ ಸಿಗದ ಪರಿಸ್ಥಿತಿ ಬಂದಿದೆ. ಅವರ ಸ್ಥಿತಿ ಹೀನಾಯವಾಗುತ್ತಿದೆ. ಸಿದ್ದರಾಮಯ್ಯನವರು ಚುನಾವಣೆ ಬರುತ್ತಿದ್ದಂತೆ ನಾವಿರುವುದು ದಲಿತರ, ಬಡವರ, ಹಿಂದುಳಿದ ವರ್ಗದವರ ಉದ್ದಾರಕ್ಕೆ ಅವರಿಗೆ ನ್ಯಾಯ ದೊರಕಿಸಿಕೊಡುತ್ತೇವೆ ಎಂದು ಹೇಳುತ್ತಾರೆ. ಆದರೆ ಅವರ ಮೂರುವರೆ ವರ್ಷದ ಆಡಳಿತದಲ್ಲಿ ಕೇವಲ ಇವರಿಗೆ ಅನ್ಯಾಯವಾಗಿದೆ ಹೊರತು ಯಾವುದೇ ಸೌಲಭ್ಯವಾಗಲಿ ಸಹಾಯವಾಗಲಿ ಸಿಗುತ್ತಿಲ್ಲ ಎಂದು ಆಕ್ರೋಶವ್ಯಕ್ತಪಡಿಸಿದರು.


ರಾಯಣ್ಣ ಬ್ರಿಗೇಡ್ ಹುಟ್ಟಿರುವುದೇ ದಲಿತರ, ಹಿಂದುಳಿದವರ ಮತ್ತು ಬಡವರ ಏಳಿಗೆಗಾಗಿ. ಅವರಿಗೆ ಸಿಗಬೇಕಾದ ನ್ಯಾಯ, ಸೌಲಭ್ಯಗಳನ್ನು ದೊರಕಿಸುವುದಕ್ಕಾಗಿ. ದಲಿತರ ಹಿಂದುಳಿದವರ ಮತ್ತು ಬಡವರ ಅಭಿವೃದ್ಧಿ ಮಾಡುವುದೇ ಬಿಜೆಪಿಯ ಗುರಿ. ದಲಿತ, ಹಿಂದುಳಿದ ಮತ್ತು ಬಡವರಿಗೆ ಅನ್ಯಾಯವಾಗಲು ಎಂದಿಗೂ ಬಿಡುವುದಿಲ್ಲ. ಯಾವಾಗ ಕಾಂಗ್ರೆಸ್ ಸರ್ಕಾರ ದಲಿತರನ್ನ ಕಡೆಗಾಣಿಸಿತೋ ಆಗ ನಾವು ಬ್ರಿಗೇಡ್ ಮೂಲಕ ದಲಿತರ ಕಲ್ಯಾಣಕ್ಕಾಗಿ ಶ್ರಮಿಸುತ್ತಿದ್ದೇವೆ. ಆ ಮೂಲಕ ಬಿಜೆಪಿಯನ್ನು ಬೆಳೆಸುತ್ತಿದ್ಧೇವೆ ಎಂದರು.
ರಾಯಣ್ಣ ಬ್ರಿಗೇಡ್‌ನ ಪ್ರಮುಖರಾದ ವಿರೂಪಾಕ್ಷಪ್ಪ, ಹುಲ್ತಿಕೊಪ್ಪ ಶ್ರೀಧರ್, ವಿಶ್ರಾಂತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ, ವೆಂಕಟೇಶ ಮೂರ್ತಿ, ನೀಲಮೇಗನಾ, ಕೊಟ್ರೇಸ್, ಸೋಮಶೇಖರ್, ಹೊಳಲೂರು ಜಿಲ್ಲಾಪಂಚಾಯ್ತಿ ಸದಸ್ಯ ಕೆ.ಇ. ಕಾಂತೇಶ್, ವೆಂಕ್ಯಾನಾಯ್ಕ ಸೇರಿದಂತೆ ಹಲವರಿದ್ದರು.

ಈಶ್ವರಪ್ಪ ಹೇಳಿದ್ದು…
*ನಾನು ಎಂದಿಗೂ ಜಾತಿವಾದಿಯಲ್ಲ, ಹಿಂದುತ್ವದ ಪರ
*ಕಾಂಗ್ರೆಸ್‌ನಿಂದ ದಲಿತರಿಗೆ ನ್ಯಾಯ ದೊರೆತಿಲ್ಲ
*ದಲಿತವರ್ಗ ಕಾಂಗ್ರೆಸ್ ಪಾಲಿಗೆ ವೋಟ್‌ಬ್ಯಾಂಕ್
*ನಮ್ಮ ಗುರಿ ದಲಿತೋದ್ಧಾರ, ಬಿಜೆಪಿಗೆ ಬೆಂಬಲ
*ಹಾವೇರಿ ಸಮಾವೇಶಕ್ಕೆ ಬಿಎಸ್‌ವೈ ಬರುತ್ತಾರೆ
*ಬ್ರಿಗೇಡ್ ಸ್ಥಾಪನೆ ಹಿಂದೆ ರಾಜಕೀಯ ಹಿತಾಸಕ್ತಿಯಿಲ್ಲ

ನಮ್ಮ ಮುಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೇ. ಬ್ರಿಗೇಡ್ ಮೂಲಕ ಎಲ್ಲರೂ ಬಿಜೆಪಿಯನ್ನು ಬೆಂಬಲಿಸಬೇಕು. ಹಾವೇರಿಯಲ್ಲಿ ನಡೆಯಲಿರುವ ಸಮಾವೇಶಕ್ಕೆ ತಮ್ಮ ಜೊತೆಗೆ ತಮ್ಮ ತಂಡವನ್ನು ಕರೆದುತರಬೇಕು. ೫೦ ಸಾವಿರಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ. ಆ ಮೂಲಕ ದಲಿತರ, ಹಿಂದುಳಿದವರ ಏಳಿಗೆಗಾಗಿ ನಾವು ದುಡಿಯೋಣ. ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದುಳಿದವರ ಮತ್ತು ದಲಿತ ವರ್ಗಗಳ ಉದ್ದಾರಕ್ಕೆ ಪ್ರಥಮ ಆದ್ಯತೆ. ಹಿಂದುಳಿದವರ, ದಲಿತರ, ಬಡವರ ಶ್ರೇಯೋಭೀವೃದ್ಧಿಗೆ, ಅತಿ ಹೆಚ್ಚು ಹಣ ಬಜೆಟ್‌ನಲ್ಲಿ ಮೀಸಲಿಡಲಾಗುವುದು.
– ಕೆ.ಎಸ್. ಈಶ್ವರಪ್ಪ

ಗಮನ ಸೆಳೆದ ಬೈಕ್ ರ‌್ಯಾಲಿ

ಕಾರ್ಯಕ್ರಮಕ್ಕೂ ಮುನ್ನಾ ಸರ್ಕ್ಯೂಟ್ ಹೌಸ್‌ನಿಂದ ಕಾರ್ಯಕ್ರಮ ಸ್ಥಳ ಕುವೆಂಪು ರಂಗಮಂದಿರದವರೆಗೂ ಬೈಕ್ ರ‌್ಯಾಲಿ ಹಮ್ಮಿಕೊಳ್ಳಲಾಗಿತ್ತು. ನೂರಾರು ಕಾರ್ಯಕರ್ತರು ರ‌್ಯಾಲಿಯಲ್ಲಿ ಉತ್ಸಾಹದಿಂದ ಪಾಲ್ಗೊಂಡಿದ್ದರು. ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಅದರಲ್ಲೂ ವಿಶೇಷವಾಗಿ ಮಹಿಳಾ ಕಾರ್ಯಕರ್ತರು ಅತಿ ಹೆಚ್ಚು ಪಾಲ್ಗೊಂಡಿದ್ದು ಕಂಡುಬಂದಿತು.

ಸಂಗೊಳ್ಳಿ ರಾಯಣ್ಣ ಭಾವಚಿತ್ರದ ಸಹಿತ ಈ ರ‌್ಯಾಲಿ ನಡೆಯಿತು. ಹೊಳಲೂರು ಜಿಲ್ಲಾ ಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್ ರ‌್ಯಾಲಿಯ ನೇತೃತ್ವವಹಿಸಿ ಯುವಕರ ಉತ್ಸಾಹ ಇಮ್ಮಡಿಗೊಳಿಸುತ್ತಿದ್ದರು.

ರಸ್ತೆಯ ಇಕ್ಕೆಲಗಳಲ್ಲಿ ಸಾರ್ವಜನಿಕರು ನಿಂತುಕೊಂಡು ರ‌್ಯಾಲಿಯನ್ನು ಕಣ್ತುಂಬಿಕೊಂಡರು.

ಅತಿ ಹೆಚ್ಚು ಮಹಿಳೆಯರು ಭಾಗಿ

ಬಿಜೆಪಿ ಕಾರ್ಯಕರ್ತರು ಹಾಗೂ ಮಹಿಳಾ ಕಾರ್ಯಕರ್ತೆಯರು ಅತಿ ಹೆಚ್ಚು ಮಂದಿ ಸಮಾವೇಶದಲ್ಲಿ ಭಾಗವಹಿಸಿದ್ದರು. ಜಿಲ್ಲಾ ಮಟ್ಟದ ವಿವಿಧ ಪ್ರಮುಖರು, ಕಾರ್ಯಕರ್ತರ ಉಪಸ್ಥಿತಿ ಕಂಡುಬಂದಿತು. ಕುವೆಂಪು ರಂಗಮಂದಿರದ ತುಂಬಿ ತುಳುಕುತ್ತಿತ್ತು. ರಂಗಮಂದಿರದಲ್ಲಿ ಇರುವ ಆಸನಗಳು ಸಾಲದೇ, ಕಾರ್ಯಕರ್ತರು ನಿಂತುಕೊಡೇ ಕಾರ್ಯಕ್ರಮಕ್ಕೆ ಸಾಕ್ಷಿಯಾದರು. ಯುವಕ, ಯುವತಿಯರು ಗಮನವಿಟ್ಟು ಆಲಿಸುತ್ತಾ, ಮುಖಂಡರ ಮಾತುಗಳಿಗೆ ಹರ್ಷೋದ್ಘಾರ, ಕೇಕೆಯ ಪ್ರತಿಕ್ರಿಯೆ ನೀಡುತ್ತಿದ್ದರು.
ಹಿಂದುಳಿದ ವರ್ಗಗಳನ್ನು ಸಂಘಟಿಸಿ, ಅಭಿವೃದ್ಧಿ ಕಾರ್ಯಕ್ರಮ ರೂಪಿಸಿದವರು ಬಂಗಾರಪ್ಪ. ಅವರ ನಂತರ ಈಶ್ವರಪ್ಪ ಈ ವಿಚಾರದಲ್ಲಿ ಟೊಂಕ ಕಟ್ಟಿ ನಿಂತಿದ್ದಾರೆ. ಹಾವೇರಿ ಸಮಾವೇಶಕ್ಕೆ ಜಿಲ್ಲೆಯಿಂದ ಸುಮಾರು 200 ಬಸ್‌ನಲ್ಲಿ ಕಾರ್ಯಕರ್ತರು ತೆರಳಲಿದ್ದಾರೆ.
– ಆರ್. ಶ್ರೀಧರ್ ಹುಲ್ತಿಕೊಪ್ಪ
ಬ್ರಿಗೇಡ್ ಜಿಲ್ಲಾ ಸಂಚಾಲಕ
ಬ್ರಿಗೇಡ್ ಕಾರ್ಯಕ್ರಮಕ್ಕೆ ಯಾರೂ ಹೋಗಬಾರದು ಎಂದು ಕೆಲವರು ಹೇಳುತ್ತಿದ್ದಾರೆ. ತಾಕೀತು ಮಾಡುತ್ತಿದ್ದಾರೆ. ಹಾಗೆ ಹೇಳುವವರಿಗೆ ಈಗಾಗಲೇ ನಮ್ಮ ಸಂಘಟನೆಯ ಬಗ್ಗೆ ಭಯ ಆರಂಭವಾದಂತಿದೆ. ಬಿಜೆಪಿ ಬಲವರ್ಧನೆಯೊಂದೇ ನಮ್ಮ ಗುರಿ. ಬಿಗ್ರೇಡ್‌ಗೆ ಬೆಂಬಲಿಸಿ, ಗುರುತಿಸಿಕೊಳ್ಳಲು ಭಯಪಡುವ ಅಗತ್ಯವಿಲ್ಲ.
– ವಿರೂಪಾಕ್ಷಪ್ಪ
ಬ್ರಿಗೇಡ್ ರಾಜ್ಯಾಧ್ಯಕ್ಷ
ಯಡಿಯೂರಪ್ಪ ಹಾಗೂ ರಾಘವೇಂದ್ರ ಬ್ರಿಗೇಡ್ ಕಾರ್ಯಕ್ರಮಕ್ಕೆ ತೆರಳಬೇಡ ಎಂದು ನನ್ನನ್ನು ವಿಮುಖಗೊಳಿಸಲು ಯತ್ನಿಸಿದರು. ಅವರಿಗೆ ಬ್ರಿಗೇಡ್ ಉದ್ದೇಶ ಬಿಜೆಪಿ ಬೆಂಬಲ ಹಾಗೂ ತಮ್ಮನ್ನು ಮುಖ್ಯಮಂತ್ರಿ ಮಾಡುವುದು ಎಂದು ತಿಳಿಸಿ, ಇಲ್ಲಿಗೆ ಬಂದಿದ್ದೇನೆ.
– ಈಸೂರು ಬಸವರಾಜ್
ಬ್ರಿಗೇಡ್ ಜಿಲ್ಲಾ ಸಂಚಾಲಕ

ಪಾಲ್ಗೊಂಡಿದ್ದ ಪ್ರಮುಖರು

ಬ್ರಿಗೇಡ್ ರಾಜ್ಯ ಸಂಚಾಲಕ ವಿರೂಪಾಕ್ಷಪ್ಪ, ವಿಶ್ರಾಂತ ಐಎಎಸ್ ಅಧಿಕಾರಿ ಪುಟ್ಟಸ್ವಾಮಿ, ಬೆಂಗಳೂರು ಮಾಜಿ ಮಹಾಪೌರ ವೆಂಕಟೇಶ ಮೂರ್ತಿ, ನೇಕಾರ ಸಮಾಜದ ರಾಜ್ಯ ಪ್ರಮುಖ ಸೋಮಶೇಖರ್, ಸವಿತಾ ಸಮಾಜದ ರಾಜ್ಯ ಮುಖಂಡ ತ್ಯಾಗರಾಜ್, ಮಡಿವಾಳ ಸಮಾಜದ ರಾಜ್ಯ ನಾಯಕ ಎಂಜೀರಪ್ಪ, ಉಪ್ಪಾರ ಸಮಾಜದ ರಾಜ್ಯ ಮುಖಂಡ ಸೋಮಶೇಖರ್, ಹೊಳಲೂರು ಜಿಲ್ಲಾಪಂಚಾಯ್ತಿ ಸದಸ್ಯ ಕೆ.ಈ. ಕಾಂತೇಶ್, ವೆಂಕ್ಯಾನಾಯ್ಕ, ಬ್ರಿಗೇಡ್ ಜಿಲ್ಲಾ ಸಂಚಾಲಕ ಆರ್. ಶ್ರೀಧರ್ ಹುಲ್ತಿಕೊಪ್ಪ , ಈಸೂರು ಬಸವರಾಜ್ ಪ್ರಮುಖರಾದ ಎಸ್. ಜ್ಞಾನೇಶ್ವರ್, ಕೃಷ್ಣಪ್ಪ, ಮೋಹನ್ ರೆಡ್ಡಿ, ಸುರೇಖಾ ಮುರಳೀಧರ್, ರೇಖಾ ಪ್ರವೀಣ್ ಇನ್ನಿತರರು.

Share196Tweet123Send
Previous Post

ರಾಹುಲ್ ಓಕೆ , ರಾಯಣ್ಣ ರಾಜಕೀಯ ಪ್ರೇರಿತ! ಎನ್‌ಎಸ್‌ಯುಐನ ಇಬ್ಬಗೆ ನೀತಿ

Next Post

ಉತ್ತರಾಧಿಕಾರಿ ಹುದ್ದೆ: ಪ್ರಾದೇಶಿಕ ಪಕ್ಷಗಳಲ್ಲಿ ವಿವಾದದ ಗಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಉತ್ತರಾಧಿಕಾರಿ ಹುದ್ದೆ: ಪ್ರಾದೇಶಿಕ ಪಕ್ಷಗಳಲ್ಲಿ ವಿವಾದದ ಗಾಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

ನೈಋತ್ಯ ರೈಲ್ವೆ | 49 ಮಕ್ಕಳ ರಕ್ಷಣೆ, 33 ಲಕ್ಷದ ಗಾಂಜಾ, 30 ಲಕ್ಷದ ಕೊರಿಯನ್ ಸಿಗರೇಟ್ ವಶ

June 4, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ಕೃಷ್ಣರಾಜಪುರಂ – ವೈಟ್‌ಫೀಲ್ಡ್ ನಡುವೆ ಕಾಮಗಾರಿ: ಕೆಲವು ರೈಲುಗಳ ರದ್ದತಿ, ಭಾಗಶಃ ರದ್ದತಿ

June 4, 2026
ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

ವಿನೋಬನಗರ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು | ಆರೋಪಿ ಬಂಧನ, ಬಂಗಾರದ ಆಭರಣ ವಶ

June 4, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಮಂಗಳೂರು-ಹೈದರಾಬಾದ್ ವಿಶೇಷ ರೈಲು | ಮಂತ್ರಾಲಯಕ್ಕೆ ತೆರಳುವವರಿಗೆ ಅನುಕೂಲ

June 4, 2026
ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

ಮೇ ತಿಂಗಳಲ್ಲಿ ನೈಋತ್ಯ ರೈಲ್ವೆ ದಾಖಲೆ ಸಾಧನೆ | ಸರಕು ಸಾಗಣೆ, ಆದಾಯದಲ್ಲಿ ಗಣನೀಯ ಏರಿಕೆ

June 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL