Thursday, July 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಸಂಜೆ 4ರ ನಂತರ ತಿಂಡಿಗಾಡಿಗಳಿಗೆ ಅವಕಾಶ: ಶಿವಮೊಗ್ಗ ಪಾಲಿಕೆ ಸಭೆಯಲ್ಲಿ ತೀರ್ಮಾನ

August 31, 2016
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಶಿವಮೊಗ್ಗ, ಆ.31: ನಗರದ ವಿವಿಧ ಬಡಾವಣೆಗಳಲ್ಲಿ ಹೆಚ್ಚುತ್ತಿರುವ ತಿಂಡಿಗಾಡಿಗಳನ್ನು ನಿಯಂತ್ರಿಸುವ ಸಂಬಂಧ ಮತ್ತು ಅವುಗಳಿಗೆ ವೇಳೆ ನಿಗದಿಗೊಳಿಸುವ ಸಂಬಂಧ ನಗರ ಪಾಲಿಕೆಯ ಇಂದಿನ ಮಾಸಿಕ ಸಭೆಯಲ್ಲಿ ವಿಶೇಷ ಚರ್ಚೆ ನಡೆಯಿತು.
ತಿಂಡಿಗಾಡಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಇದರಿಂದ ಪಾದಚಾರಿ ಮಾರ್ಗಗಳಲ್ಲಿ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಜೊತೆಗೆ ಹೊಟೆಲ್ ವ್ಯಾಪಾರಸ್ಥರಿಗೂ ನಷ್ಟವಾಗುವಂತಾಗಿದೆ. ಕಂಡಕಂಡಲ್ಲಿ ಈ ಗಾಡಿಗಳನ್ನು ಇಟ್ಟುಕೊಟ್ಟುಕೊಂಡಿರುವುದರಿಂದ ಸಂಚಾರಕ್ಕೂ ಸಹ ತೊಂದರೆಯಾಗುವಂತಾಗಿದೆ. ಆದ್ದರಿಂದ ಇವುಗಳ ನಿಯಂತ್ರಣದ ಬಗ್ಗೆ ಕ್ರಮ ಅಗತ್ಯ ಎಂದು ಬಹುತೇಕ ಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು.
ಬಿಜೆಪಿ ನಾಯಕ ಎನ್.ಜೆ. ರಾಜಶೇಖರ್ ಮಾತನಾಡಿ, ಬೀದಿ ವ್ಯಾಪಾರಸ್ಥರಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿದ್ದರೆ ಮುಂದಿನಗಳಲ್ಲಿ ಪರಿಸ್ಥಿತಿ ಕಠಿಣವಾಗುತ್ತದೆ. ಆಯುಕ್ತರು ಈ ಬಗ್ಗೆ ಪ್ರತ್ಯೇಕ ಸಭೆ ಕರೆದು ಚರ್ಚೆ ನಡೆಸಬೇಕು. ಅಥವಾ ಇದೇ ಸಭೆಯಲ್ಲಿ ಚರ್ಚೆ ನಡೆಸಲು ಮೇಯರ್ ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.
ಶಿವಮೊಗ್ಗ ನಗರವು ಸ್ಮಾರ್ಟ್ ಸಿಟಿ ಆಗುತ್ತಿರುವುದರಿಂದ ಅದಕ್ಕನುಗುಣವಾಗಿ ವ್ಯವಸ್ಥೆ ಮಾಡಿಕೊಡಬೇಕು. ಸಾಕಷ್ಟುಕಡೆ ಖಾಲಿ ಜಾಗಗಳಿದ್ದು, ಅಲ್ಲಿ ಅವರಿಗೆ ಅವಕಾಶ ಮಾಡಿಕೊಡಬಹುದು ಎಂದು ಹೇಳಿದರು.
ಕಾಂಗ್ರೆಸ್ ಮುಖಂಡ ವಿಶ್ವನಾಥ್ ಕಾಶಿ ಮಾತನಾಡಿ, ತಿಂದಿಗಾಡಿಯವರಿಗೆ ವೇಳೆ ನಿಗದಿ ಮಾಡದಿದ್ದರೆ ಇಡೀ ದಿನ ನಗರದ ತುಂಬಾ ವ್ಯಾಪಾರ ಮಾಡುತ್ತಾರೆ. ಸಂಜೆ ೪ ಗಂಟೆ ನಂತರ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು. ಜೊತೆಗೆ ವ್ಯಾಪಾರ ಮಾಡುವ ಪರಿಸರವನ್ನು ಶುಚಿಯಾಗಿಟ್ಟುಕೊಳ್ಳಲು ಸೂಚಿಸಬೇಕೆಂದು ಹೇಳಿದರು.
ಎನ್.ಜೆ. ರಾಜಶೇಖರ್ ಮಾತನಾಡಿ, ನಗರ ಪಾಲಿಕೆಯು ಕಾರ್ನರ್ ಸೈಟ್‌ಗಳನ್ನು ಯಾವಕಾರಣಕ್ಕೂ ಹರಾಜು ಮಾಡಬಾರದು. ಇಂತಹ ಜಾಗಗಳಲ್ಲಿ ತಿಂಡಿಗಾಡಿಗಳಿಗೆ ಒಂದೇ ಕಡೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಹೇಳಿದರು.
ನಂತರ ಈ ಸಂಬಂಧ ಮಾತನಾಡಿದ ಮೇಯರ್ ಎಸ್.ಕೆ. ಮರಿಯಪ್ಪ, ಸಂಜೆ ೪ ಗಂಟೆ ನಂತರ ತಿಂಡಿಗಾಡಿಗಳು ವ್ಯಾಪಾರ ನಡೆಸಬೇಕೆಂಬ ಆದೇಶವನ್ನು ಅಧಿಕಾರಿಗಳು ಹೊರಡಿಸುವಂತೆ ಸೂಚಿಸಿದರು. ಮತ್ತು ಪ್ರಕಾರ ನಡೆದುಕೊಳ್ಳಲು ಕಟ್ಟುನಿಟ್ಟಾಗಿ ಕ್ರಮಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಎಚ್ಚರಿಸಿದರು.
ಈ ವಿಚಾರವಾಗಿ ಹೆಚ್.ಸಿ. ಯೋಗೇಶ್, ಮಾಲತೇಶ್, ನರಸಿಂಹಮೂರ್ತಿ, ನಾಗರಾಜ್ ಕಂಕಾರಿ ಮೊದಲಾದವರು ಮಾತನಾಡಿದರು.

ಬೀದಿ ವ್ಯಾಪಾರಸ್ಥರ ನಿಯಂತ್ರಣಕ್ಕೆ ಟೌನ್ ವೆಂಡಿಂಗ್ ಕಮಿಟಿ ರಚನೆ: ಆಯುಕ್ತೆ
ಬೀದಿ ವ್ಯಾಪಾರಸ್ಥರನ್ನು ನಿಯಂತ್ರಿಸುವ ಸಂಬಂಧ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ಆ ಪ್ರಕಾರ ಟೌನ್ ವೆಂಡಿಂಗ್ ಕಮಿಟಿಯನ್ನು ರಚಿಸಬೇಕಾಗುತ್ತದೆ ಎಂದು ಆಯುಕ್ತೆ ತುಷಾರಮಣಿ ಹೇಳಿದ್ದಾರೆ.
ಪಾಲಿಕೆ ಮಾಸಿಕ ಸಭೆಯಲ್ಲಿ ಮಾತನಾಡಿದ ಅವರು, ಈ ಸಮಿತಿಯಲ್ಲಿ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಇರುತ್ತಾರೆ. ಈ ಸಮಿತಿಯನ್ನು ರಚಿಸುವ ಪ್ರಕ್ರಿಯೆ ಆರಂಭವಾಗಿದೆ. ಸಮಿತಿಯ ರಚನೆಯ ನಂತರ ಸಭೆ ಸೇರಿ ಯಾವ್ಯಾವ ಜಾಗಗಳಲ್ಲಿ ಬೀದಿ ವ್ಯಾಪಾರಸ್ಥರಿಗೆ ಅವಕಾಶ ಕೊಡಬೇಕು ಎನ್ನುವುದನ್ನು ನಿರ್ಧರಿಸಲಾಗುವುದು ಎಂದರು.
ನಗರದ ಆಯ್ದ ಭಾಗಗಳಲ್ಲಿ ಮಾತ್ರ ಬೀದಿ ವ್ಯಾಪಾರಸ್ಥರಿಗೆ ಅವಕಾಶಕೊಡಲಾಗುವುದು. ಉಳಿದೆಡೆ ನೋ ಪಾರ್ಕಿಂಗ್ ರೀತಿಯಲ್ಲಿ ನೋ ವೆಂಡಿಂಗ್ ನಾಮಫಲಕ ಅಳವಡಿಸಬೇಕಾಗುತ್ತದೆ. ಈ ವ್ಯಾಪಾರಸ್ಥರು ಇರುವ ಜಾಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆಗಳನ್ನು ಪಾಲಿಕೆ ಕಲ್ಪಿಸಬೇಕಾಗುತ್ತದೆ ಎಂದು ವಿವರಿಸಿದರು.
ಇದಕ್ಕೂ ಮುನ್ನ ನಗರದಲ್ಲಿ ಹೆಚ್ಚುತ್ತಿರುವ ಬೀದಿ ವ್ಯಾಪಾರಸ್ಥರು ಮತ್ತು ತಿಂಡಿಗಾಡಿಗಳು ಹಾಗೂ ಅವರಿಂದ ಉಂಟಾಗುತ್ತಿರುವ ಕಿರಿಕಿರಿ, ಸಮಸ್ಯೆಗಳ ಬಗ್ಗೆ ಬಹುತೇಕ ಎಲ್ಲಾ ಸದಸ್ಯರು ಮಾತನಾಡಿ ಸೂಕ್ತ ಕ್ರಮಕ್ಕಾಗಿ ಆಗ್ರಹಿಸಿದರು.
ಈ ವೇಳೆ ಎನ್.ಜೆ. ರಾಜಶೇಖರ್ ಬೀದಿ ವ್ಯಾಪಾರಸ್ಥರ ಬಗ್ಗೆ ಸರ್ಕಾರ ಇತ್ತೀಚೆಗೆ ಹೊರಡಿಸಿರುವ ಆದೇಶದ ವಿವರವನ್ನು ಆಯುಕ್ತೆ ವಿವರಿಸಬೇಕೆಂದು ಕೋರಿದರು. ಈ ಹಿನ್ನೆಲೆಯಲ್ಲಿ ಆಯುಕ್ತೆ ತುಷಾರಮಣಿ ಆದೇಶದ ವಿವರವನ್ನು ಸದಸ್ಯರಿಗೆ ನೀಡಿದರು.
ಬಗೆ ಹರಿಯದ ತರಕಾರಿ ಮಾರುಕಟ್ಟೆ ಹರಾಜು ವಿಚಾರ: ಮೇಯರ್‌ಗೆ ಅಧಿಕಾರ ನೀಡಿದ ಪಾಲಿಕೆ
ವಿನೋಬನಗರದ ಶಿವಾಲಯದ ಬಳಿ ನಿರ್ಮಿಸಲಾಗಿರುವ ಮಹಾನಗರ ಪಾಲಿಕೆಯ ತರಕಾರಿ ಮಾರುಕಟ್ಟೆಯ ಹರಾಜು ಪ್ರಕ್ರಿಯ ಬಗ್ಗೆ ಪಾಲಿಕೆಯ ಮಾಸಿಕ ಸಭೆಯಲ್ಲಿ ಇಂದು ತೀವ್ರ ಚರ್ಚೆ ನಡೆಯಿತು.
ಸಭೆಯ ಆರಂಭದಲ್ಲಿ ಮಾತನಾಡಿದ ಸದಸ್ಯ ಫಾಲಾಕ್ಷಿ, ಹರಾಜು ಮೂಲಕ ಹಂಚಿಕೆ ಮಾಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ ಪೊಲೀಸ್ ಚೌಕಿ ಮತ್ತು ಲಕ್ಷ್ಮೀ ಟಾಕೀಸ್ ಬಳಿ ಬೀದಿಯಲ್ಲಿ ತರಕಾರಿ ವ್ಯಾಪಾರ ಮಾಡುವವರಿಗೆ ಅವಕಾಶ ಕಲ್ಪಿಸಿಕೊಡಬೇಕೆಂದು ಆಗ್ರಹಿಸಿದರು.
ಟೆಂಡರ್ ಮೂಲಕ ಹರಾಜು ಪ್ರಕ್ರಿಯೆ ನಡೆಸಿದರೆ ಹಣ ಇರುವವರು ಮಾತ್ರ ಮಳಿಗೆಗಳನ್ನು ಪಡೆಯುತ್ತಾರೆ. ಇದಕ್ಕೆ ಅಕಾಶವಾಗದಂತೆ ಮಾಡಲು ಟೆಂಡರ್ ಪ್ರಕ್ರಿಯೆಯನ್ನು ಕೈಬಿಟ್ಟು ಮಳಿಗೆ ನಿರ್ಮಿಸಿದ ಮೂಲ ಉದ್ದೇಶಕ್ಕೆ ಧಕ್ಕೆ ಬಾರದಂತೆ ಕ್ರಮ ಜರುಗಿಸಬೇಕೆಂದು ಒತ್ತಾಯಿಸಿದರು.
ವಿಶ್ವನಾಥ್‌ಕಾಶಿ ಮಾತನಾಡಿ, ಶಿವಾಲಯ ಸುತ್ತಮುತ್ತ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿರುವವರಿಗೆ ಈ ಮಳಿಗೆಗಳಲ್ಲಿ ಮಾನವೀಯ ದೃಷ್ಠಿಯಿಂದ ಅವಕಾಶಕೊಡುವುದು ಸೂಕ್ತ ಎಂದರು.
ಎನ್.ಜೆ. ರಾಜಶೇಖರ್ ಮಾತನಾಡಿ, ನಗರದ ಬಹುತೇಕ ಕಡೆ ಈ ಸಮಸ್ಯೆ ಇದೆ. ಆದ್ದರಿಂದ ಸೂಕ್ತ ನಿರ್ಧಾರವನ್ನು ಸಭೆಯಲ್ಲಿ ಕೈಗೊಳ್ಳಬೇಕು. ಸರ್ಕಾರದ ಅನುದಾನದಡಿ ಎಲ್ಲೆಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸಲು ಅವಕಾಶವಿದೆಯೋ ಸಾಧ್ಯವಾದಷ್ಟು ಮಟ್ಟಿಗೆ ನಿರ್ಮಿಸಿ ಈ ಬಡ ವ್ಯಾಪಾರಸ್ಥರಿಗೆ ಹಂಚಬೇಕೆಂದರು.
ಮೇಯರ್ ಮರಿಯಪ್ಪ ಮಾತನಾಡಿ, ೨೭ ಫಲಾನುಭವಿಗಳಿಗೆ ಈಗ ಮಳಿಗೆಯಲ್ಲಿ ವ್ಯವಸ್ಥೆ ನೀಡಲು ಅವಕಾಶವಿದೆ. ಆದರೆ ಹಿಂದಿನ ಸಭೆಯಲ್ಲಿ ನಿರ್ಣಯಿಸಿದಂತೆ ಸದಸ್ಯಕ್ಕೆ ಮಳಿಗೆ ವಿತರಿಸಿಲ್ಲ. ಜಿಲ್ಲಾಧಿಕಾರಿಯವರು ಕಾನೂನಿನ ಪ್ರಕಾರ ಟೆಂಡರ್ ಮೂಲಕವೇ ಮಳಿಗೆ ವಿತರಿಸಲು ಸೂಚಿಸಿದ್ದಾರೆ ಎಂದರು.
ಹೆಚ್.ಸಿ. ಯೋಗೀಶ್, ನಾಗರಾಜ ಕಂಕಾರಿ, ರಾಜಶೇಖರ್, ಕಾಶಿ ವಿಶ್ವನಾಥ್, ಮಾಲತೇಶ್ ಮೊದಲಾದವರು ಮಾತನಾಡಿ, ಸೂಕ್ತ ಕ್ರಮಕೈಗೊಳ್ಳುವ ಅಧಿಕಾರವನ್ನು ಮೇಯರ್‌ಗೆ ಒಪ್ಪಿಸಲು ತೀರ್ಮಾನಿಸಿದರು. ಇದಕ್ಕೆ ಸಭೆ ಒಪ್ಪಿಗೆ ನೀಡಿತು. ಸಭೆಯಲ್ಲಿ ಉಪಮೇಯರ್ ಮಂಗಳಾ ಅಣ್ಣಪ್ಪ, ಆಯುಕ್ತೆ ತುಷಾರಮಣಿ ಉಪಸ್ಥಿತರಿದ್ದರು.

Previous Post

ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಸಲ್ಲಿಸಿ: ಪೊಲೀಸರಿಗೆ ಮೀರಾ ಸಿ. ಸಕ್ಸೇನಾ ಕರೆ

Next Post

ವಾಹನದಿಂದ ಕೆಳಗೆ ಬಿದ್ದ ಹಸುವನ್ನು ಎಳೆದೊಯ್ದೆ ವಾಹನ ಚಾಲಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಾಹನದಿಂದ ಕೆಳಗೆ ಬಿದ್ದ ಹಸುವನ್ನು ಎಳೆದೊಯ್ದೆ ವಾಹನ ಚಾಲಕ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025

ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಶ್ರೀ

July 24, 2025
Internet Image

ಆನೆ ದಾಳಿ | ಯುವತಿ ಸಾವು

July 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Special Train Services Between Yesvantpur and Talaguppa Extended

July 24, 2025

ಯಶವಂತಪುರ – ಶಿವಮೊಗ್ಗ – ತಾಳಗುಪ್ಪ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

July 24, 2025

ಧಾತುಗಳ ಸಮಸ್ಥಿತಿ ಆರೋಗ್ಯ, ವಿಕಾರವೇ ಅನಾರೋಗ್ಯ: ರಾಘವೇಶ್ವರ ಶ್ರೀ

July 24, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!