ಮಡಿಕೇರಿ ಅ.30 : ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರದ ಅವಧಿ ಪೂರ್ಣಗೊಂಡು ಒಂದು ತಿಂಗಳು ಕಳೆದಿದ್ದರೂ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸದೆ ಪೌರಾಯುಕ್ತರು ಹಾಗೂ ಕಾಂಗ್ರೆಸ್ ಆಡಳಿತದ ಪ್ರಮುಖರು ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ ಎಂದು ನಗರಸಭೆೆಯ ಬಿಜೆಪಿ ಸದಸ್ಯರು ಆರೋಪಿಸಿದ್ದಾರೆ. ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ಕಾನೂನು ಹೋರಾಟ ನಡೆಸುವುದಾಗಿ ಎಚ್ಚರಿಕೆ ನಿಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿಯ ಹಿರಿಯ ಸದಸ್ಯ ಕೆ.ಎಸ್. ರಮೇಶ್, ಸ್ಥಾಯಿ ಸಮತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯದೆ ಇರುವುದಕ್ಕೆ ಪೌರಾಯುಕ್ತರೆ ನೇರ ಹೊಣೆ ಎಂದು ಆರೋಪಿಸಿದರು. ಇದೇ ಸೆ.30 ರಂದು ಸ್ಥಾಯಿ ಸಮಿತಿ ಅಧ್ಯಕ್ಷರ ಅಧಿಕಾರವಧಿ ಪೂರ್ಣಗೊಂಡಿದ್ದು, ಇಲ್ಲಿಯವರೆಗೆ ನೂತನ ಅಧ್ಯಕ್ಷರ ಆಯ್ಕೆಯ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಒಂದು ತಿಂಗಳೊಳಗೆ ಅಧ್ಯಕ್ಷರ ಆಯ್ಕೆಯಾಗಬೇಕೆನ್ನುವ ನಿಯಮವಿದ್ದರೂ ಇದನ್ನು ಉಲ್ಲಂಘಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತರಲಾಗುತ್ತದೆ ಎಂದ ಅವರು, ಕಾನೂನು ಹೋರಾಟದ ಎಚ್ಚರಿಕೆ ನೀಡಿದರು.
ನಗರಸಭೆಯ ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ವಿಶೇಷ ಅನುದಾನಗಳು ಬಂದಿಲ್ಲವೆಂದು ಆರೋಪಿಸಿದ ರಮೇಶ್, ಕಾಂಗ್ರೆಸ್ ಸದಸ್ಯರೊಬ್ಬರ ಒತ್ತಡಕ್ಕೆ ಆಡಳಿತ ವ್ಯವಸ್ಥೆ ಮಣಿಯುತ್ತಿದಯೆಂದು ಟೀಕಿಸಿದರು. ಎಸ್ಎಫ್ಸಿ ಅನುದಾನ ಸೇರಿದಂತೆ ಪ್ರತಿವರ್ಷ ಎಂದಿನಂತೆ ಬರುತ್ತಿರುವ ಅನುದಾನ ನಗರಸಭೆಗೆ ಬಿಡುಗಡೆಯಾಗುತ್ತಿದೆಯೇ ಹೊರತು, ಕಾಂಗ್ರೆಸ್ ಪ್ರಯತ್ನದಿಂದ ಯಾವುದೇ ವಿಶೇಷ ಅನುದಾನ ಲಭ್ಯವಾಗುತ್ತಿಲ್ಲವೆಂದರು. ಆಡಳಿತ ವ್ಯವಸ್ಥೆ ಅಧ್ಯಕ್ಷರ ಬದಲಿಗೆ ಸದಸ್ಯರೊಬ್ಬರ ಹಿಡಿತದಲ್ಲಿದ್ದು, ಸಂಪೂರ್ಣ ನಿಜರ್ೀವವಾಗಿದೆ ಎಂದು ಟೀಕಿಸಿದರು.
ಎಲ್ಲೆಂದರಲ್ಲಿ ಮಾಂಸದ ಅಂಗಡಿಗಳು ನಿಯಮ ಉಲ್ಲಂಘಿಸಿ ಆರಂಭಗೊಳ್ಳುತ್ತಿದ್ದು, ನಗರಸಭೆ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲವೆಂದ ಅವರು ಲೈಸೆನ್ಸ್ ಇಲ್ಲದ ಅಂಗಡಿಗಳನ್ನು ತಕ್ಷಣ ಮುಚ್ಚಬೇಕೆಂದು ರಮೇಶ್ ಒತ್ತಾಯಿಸಿದರು.
ಸದಸ್ಯ ಪಿ.ಡಿ. ಪೊನ್ನಪ್ಪ ಮಾತನಾಡಿ, 4ನೇ ಹಣಕಾಸು ಆಯೋಗದ ಅಧ್ಯಕ್ಷರು ನಗರಸಭೆಗೆ ಭೇಟಿ ನೀಡಿದ್ದ ಸಂದರ್ಭ ಪೌರಾಯುಕ್ತರು ಹಾಗೂ ಅಧ್ಯಕ್ಷರು ಆದಾಯ ಸಂಗ್ರಹದ ಕುರಿತು ತಪ್ಪು ಮಾಹಿತಿಯನ್ನು ನೀಡಿದ್ದಾರೆ ಎಂದು ಆರೋಪಿಸಿದರು. ಹೆಚ್ಚಿನ ಅನುದಾನದ ಬೇಡಿಕೆಯನ್ನು ಸಲ್ಲಿಸಲಾಗಿದೆಯಾದರು ಬೇಡಿಕೆಯ ಮನವಿ ಪತ್ರ ಸಿದ್ಧಪಡಿಸುವಾಗ ಸರ್ವ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ್ಲ. ನಾಲ್ಕು ಗೋಡೆಗಳ ಮಧ್ಯೆ ಪೌರಾಯುಕ್ತರು ಹಾಗೂ ಅಧ್ಯಕ್ಷರು ತಮಗಿಷ್ಟ ಬಂದಂತೆ ನಿಧರ್ಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದಸರಾ ಅನುದಾನವು ಕೂಡ ಇನ್ನೂ ಬಿಡುಗಡೆ ಮಾಡಿಲ್ಲವೆಂದು ಪಿ.ಡಿ.ಪೊನ್ನಪ್ಪ ಆರೋಪಿಸಿದರು.
ಅಧಿಕಾರಿಗಳು ಹಾಗೂ ಪೌರಾಯುಕ್ತರ ನಡುವೆ ಯಾವುದೇ ಹೊಂದಾಣಿಕೆ ಇಲ್ಲದ ಕಾರಣ ಆಡಳಿತ ವ್ಯವಸ್ಥೆ ಕುಸಿದಿದೆ. ರಾಜಾಸೀಟು ಭಾಗದಲ್ಲಿ ರಸ್ತೆ ಬದಿ ಗೂಡಂಗಡಿ ವ್ಯಾಪಾರಸ್ಥರ ಸಂಖ್ಯೆ ಹೆಚ್ಚಾಗಿದ್ದು, ನಗರಸಭೆ ಇದಕ್ಕೆ ಕಡಿವಾಣ ಹಾಕುತ್ತಿಲ್ಲ. ಇದರಿಂದಾಗಿ ರಾಜಾಸೀಟು ರಸ್ತೆ ಸಂಪೂರ್ಣವಾಗಿ ವಾಹನ ದಟ್ಟಣೆಯಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಿಂಟಾಗುತ್ತಿದೆಯೆಂದು ಪಿ.ಡಿ. ಪೊನ್ನಪ್ಪ ಅಸಮಾಧಾನ ವ್ಯಕ್ತಪಡಿಸಿದರು.
ಉಪಾಧ್ಯಕ್ಷ ಟಿ.ಎಸ್. ಪ್ರಕಾಶ್ ಮಾತನಾಡಿ, 4ನೇ ಹಣಕಾಸು ಆಯೋಗದ ಅಧ್ಯಕ್ಷರು ಲೆಕ್ಕಪತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು. ಲೆಕ್ಕಪತ್ರದಲ್ಲಿ ಸಂಪೂರ್ಣ ತಪ್ಪು ಮಾಹಿತಿಗಳಿದ್ದು, ಅಧ್ಯಕ್ಷರು ಮತ್ತು ಪೌರಾಯುಕ್ತರು ಮಾತ್ರ ಸಹಿ ಮಾಡಿದ್ದಾರೆ ಎಂದು ಆರೋಪಿಸಿದರು. ಅಭಿವೃದ್ಧಿ ವಿಚಾರದಲ್ಲಿ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದರೂ ತಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲವೆಂದು ಆರೋಪಿಸಿದರು. ಯಾವುದೇ ವೈಯಕ್ತಿಕ ತೀಮರ್ಾನಗಳಿಗೆ ಬೆಂಬಲ ನೀಡುವುದಿಲ್ಲವೆಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಸದಸ್ಯರಾದ ಉಣ್ಣಿಕೃಷ್ಣನ್, ಅನಿತಾ ಪೂವಯ್ಯ ಹಾಗೂ ಶಿವಕುಮಾರಿ ಉಪಸ್ಥಿತರಿದ್ದರು.
Record Budget: Chief Minister Must Fulfill Hometown Demands, Urges Dr. Shushrutha Gowda
Kalpa Media House | Mysuru | BJP leader and noted neurologist Dr. Shushrutha Gowda has urged Chief Minister Siddaramaiah to...
Read moreDetails













