No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಹಾಡಿನೊಂದಿಗೆ ಬರಲು ‘ರಾಜರು’ ತಯಾರು!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 28, 2016
in ಸಿನೆಮಾ
0
Share on FacebookShare on TwitterShare on WhatsApp
ಎಂ.ಆರ್.ಎಸ್. ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ತಯಾರಾಗಿರುವ ಸಿನಿಮಾ ‘ರಾಜರು’. ಈ ಚಿತ್ರಕ್ಕೆ ‘ಅರಮನೆ ಇಲ್ಲ ರಾಣಿ ಹುಡುಕ್ತಾವ್ರೆ’ ಎನ್ನುವ ಹೊಸ ಬಗೆಯ, ಕುತೂಹಲ ಕೆರಳಿಸುವ ಅಡಿ ಬರಹ ಕೂಡಾ ಇದೆ.
ಚಿತ್ರದ ಶೀರ್ಷಿಕೆ ಮತ್ತು ಟ್ಯಾಗ್ ಲೈನ್ ಕಾರಣಕ್ಕೇ ಕ್ಯೂರಿಯಾಸಿಟಿ ಕ್ರಿಯೇಟ್ ಮಾಡಿರುವ ಈ ಚಿತ್ರದ ನಿರ್ದೇಶಕರು ಗಿರೀಶ್ ಮೂಲಿಮನಿ. ಮೂಲತಃ ಶಿವಮೊಗ್ಗ ಜಿಲ್ಲೆಯವರಾದ ಗಿರೀಶ್ ಮೂಲಿಮನಿ ಎಲ್‌ಎಲ್‌ಬಿ ವ್ಯಾಸಂಗ ಮುಗಿಸಿ ವಕೀಲಿ ವೃತ್ತಿ ಮಾಡಿಕೊಂಡಿದ್ದವರು. ಆದರೆ ಸಿನಿಮಾ ಎಂಬ ಮಾಯೆಯ ಸೆಳೆತದಿಂದ ಆ ವೃತ್ತಿಗೆ ಗುಡ್ ಬೈ ಹೇಳಿ, ಸೀದಾ ಬಂದು ಬೆಂಗಳೂರು ಸೇರಿ, ನಿರ್ದೇಶನದ ಪಟ್ಟುಗಳನ್ನು ಕಲಿತವರು. ಆರಂಭದಲ್ಲಿ ನಾಗೇಂದ್ರ ಅರಸ್ ಅವರ ರಾಕಿ ಮತ್ತು ಯಾರೆ ನೀ ದೇವತೆ ಚಿತ್ರಗಳು ಸೇರಿದಂತೆ ಒಂದಿಷ್ಟು ನಿರ್ದೇಶಕರ ಬಳಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಗಿರೀಶ್ ನಂತರ ಬಂದು ನೆಲೆ ನಿಂತಿದ್ದು ಕಿಚ್ಚ ಸುದೀಪ ಅವರೊಟ್ಟಿಗೆ. ಸುದೀಪ್ ಅವರ ಕೆಂಪೇಗೌಡ, ವರದ ನಾಯಕ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ ಗಿರೀಶ್ ಮಾಣಿಕ್ಯ ಚಿತ್ರದ ಮೊದಲ ಹಂತದ ಚಿತ್ರೀಕರಣಕ್ಕೂ ಕಾರ್ಯ ನಿರ್ವಹಿಸಿದ್ದರು. ಅದೇ ವೇಳೆಗೆ ಸ್ವತಂತ್ರ ನಿರ್ದೇಶಕರಾಗುವ ಅವಕಾಶ ಒದಗಿಬಂದಿದ್ದರಿಂದ ‘ರಾಜರು’ಗಳ ಸಖ್ಯ ಬೆಳೆಸಿದರು.
‘ರಾಜರು’ ಚಿತ್ರಕ್ಕೆ ಮೂವರು ನಿರ್ಮಾಪಕರು. ಎಂ. ಮೂರ್ತಿ, ಪಿ. ಶಿವಕುಮಾರ್ ಮತ್ತು ಹೆಚ್. ರಮೇಶ್ ಸೇರಿ ಪಾಲುದಾರಿಕೆಯಲ್ಲಿ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಪಿ. ಶಿವಕುಮಾರ್ ಅವರು ಮಾಜಿ ನಗರಪಾಲಿಕೆ ಸದಸ್ಯರು ಮತ್ತು ಇನ್ನುಳಿದ ಇಬ್ಬರು ನಿರ್ಮಾಪಕರು ರಿಯಲ್ ಎಸ್ಟೇಟ್ ಉದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ. ಗಿರೀಶ್ ಮೂಲಿಮನಿ ಅವರು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ದಿನದಿಂದಲೇ ಈ ನಿರ್ಮಾಪಕರ ಪರಿಚಯವಿತ್ತಂತೆ. ‘ನಾವು ಎಂದಾರೂ ಸಿನಿಮಾ ಮಾಡಿದರೆ ಅದಕ್ಕೆ ನೀವೇ ನಿರ್ದೇಶಕರು’ ಎಂಬ ಭರವಸೆ ನೀಡಿದ್ದರಂತೆ. ಹೀಗಿರುವಾಗಲೇ ಕ್ರಿಷ್ ರಂಗಸ್ವಾಮಿ ಎಂಬ ಪ್ರತಿಭಾವಂತ ಕತೆಗಾರ ಹೆಣೆದುತಂದ ಒಂದು ಎಳೆ ನಿರ್ಮಾಪಕರಿಗೂ ಒಪ್ಪಿಗೆಯಾಗಿ, ಆ ಕತೆಗೆ ಚಿತ್ರಕತೆ ಮತ್ತು ಸಂಭಾಷಣೆಯನ್ನು ಸ್ವತಃ ಗಿರೀಶ್ ಮೂಲಿಮನಿ ಅವರೇ ರಚಿಸಿದರು. ಆ ಮೂಲಕ ‘ರಾಜರು’ ಸಿನಿಮಾ ಆರಂಭಗೊಂಡಿತ್ತು. ಅದಾಗಲೇ, ಜಾಲಿಡೇಸ್, ಪೈಪೋಟಿ ಮತ್ತು ಕೇಸ್ ನಂಬರ್ ೧೮/೯ ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದ ನಿರಂಜನ್ ಶೆಟ್ಟಿ ಅವರು ಆಯ್ಕೆಯಾದರು. ಗಡ್ಡ ವಿಜಿ ನಿರ್ದೇಶನದ ‘+’ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದ ಶಾಲಿನಿ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಳ್ಳಲಾಯಿತು.
ಹೀಗೆ ಶುರುವಾದ ‘ರಾಜರು’ ಚಿತ್ರ ‘ಇಲ್ಲಿ ಎಲ್ಲರೂ ರಾಜರೇ. ಆದರೆ ಸರಿಯಾದ ದಾರಿಯನ್ನು ಆಯ್ಕೆ ಮಾಡಿಕೊಂಡರೆ ಮಾತ್ರ; ಬದುಕಿಗಾಗಿ ಅನ್ಯ ಮಾರ್ಗಗಳನ್ನು ತುಳಿದರೆ ಆಗಬಾರದ್ದೇ ಆಗುತ್ತದೆ’ ಎನ್ನುವ ಪ್ರಧಾನ ಸಂದೇಶವನ್ನು ಹೊಂದಿದೆ. ಈ ಚಿತ್ರದಲ್ಲಿ ನಾಯಕನ ಪಾತ್ರಕ್ಕೆ ಎಷ್ಟು ಪ್ರಾಧಾನ್ಯತೆ ಇದೆಯೋ ಅಷ್ಟೇ ಮಟ್ಟಿಗೆ ನಾಯಕಿಯ ಪಾತ್ರ ಕೂಡಾ ಪ್ರಾಮುಖ್ಯತೆಯನ್ನು ಪಡೆದಿದೆ. ಅರಮನೆಯಿಲ್ಲದ ರಾಜನಿಗೆ ಸಿಕ್ಸೂಚಿಯಂತೆ ಬರುವ ರಾಣಿಯದ್ದೇ ಇಲ್ಲಿ ಬಲು ದರ್ಬಾರು! ಈ ಕಾರಣಕ್ಕೇ ‘ಅರಮನೆ ಇಲ್ಲ-ರಾಣಿ ಹುಡುಕ್ತಾವ್ರೆ’ ಎನ್ನುವ ಅಡಿಬರಹವನ್ನು ಇರಿಸಲಾಗಿದೆ.
‘ರಾಜರು’ ಚಿತ್ರದಲ್ಲಿ ಕಥೆಯಷ್ಟೇ ಕಾಡುವ ಮತ್ತೊಂದು ಅಂಶವೆಂದರೆ, ಅದು ಸಂಗೀತ. ಶ್ರೀಧರ್ ವಿ. ಸಂಭ್ರಮ್ ಅವರು ನೀಡಿರುವ ಸುಂದರ ಸಂಗೀತಕ್ಕೆ ಜಯಂತ್ ಕಾಯ್ಕಿಣಿ, ಡಾ. ವಿ. ನಾಗೇಂದ್ರ ಪ್ರಸಾದ್ ಮತ್ತು ಯೋಗರಾಜ ಭಟ್ ಹಾಡುಗಳನ್ನು ಬರೆದಿದ್ದಾರೆ. ಪುನೀತ್ ರಾಜ್ ಕುಮಾರ್ ಅವರು ವಿಶೇಷ ಗೀತೆಯೊಂದಕ್ಕೆ ದನಿ ನೀಡಿದ್ದಾರೆ. ಅರ್ಮನ್ ಮಲ್ಲಿಕ್ ಮತ್ತು ಶ್ರೇಯಾ ಘೋಷಾಲ್ ಕೂಡಾ ಹಾಡಿದ್ದಾರೆ. ‘ಮುಂಗಾರು ಮಳೆ-೨’ ಚಿತ್ರದ ‘ಸರಿಯಾಗಿ ನೆನಪಿದೆ ನನಗೆ ಇದಕೆಲ್ಲ ಕಾರಣ ಕಿರುನಗೆ’ ಚಿತ್ರದ ಹಾಡಿನ ನಂತರ ಅರ್ಮನ್ ಮಲ್ಲಿಕ್ ಅವರಿಗೆ ಕನ್ನಡದಲ್ಲಿ ದೊಡ್ಡ ಯಶಸ್ಸು ‘ರಾಜರು’ ನೀಡುತ್ತಾರೆ ಎನ್ನುವ ನಂಬಿಕೆ ಖುದ್ದು ಚಿತ್ರತಂಡದ್ದು.
ಸಣ್ಣಪುಟ್ಟ ಅಡೆತಡೆಗಳ ನಡುವೆಯೂ ಯಾವುದೇ ದೊಡ್ಡ ಸಮಸ್ಯೆ ಎದುರಾಗದೆ, ಸಲೀಸಾಗಿ ಚಿತ್ರೀಕರಣ ಪೂರೈಸಿರುವ ‘ರಾಜರು’ ಚಿತ್ರದ ಹಾಡುಗಳು ದೀಪಾವಳಿ ಮುಗಿಯುತ್ತಿದ್ದಂತೇ ಲೋಕಾರ್ಪಣೆಗೊಳ್ಳಲಿವೆ ಮತ್ತು ಡಿಸೆಂಬರ್ ೨೦ರ ನಂತರ ತೆರೆಗೆ ಬರಲು ಸಕಲ ರೀತಿಯ ತಯಾರಿ ನಡೆಸಿದೆ. ಈಗಾಗಲೇ ಡಬ್ಬಿಂಗ್, ಡಿಐ ಸೇರಿದಂತೆ ಪೋಸ್ಟ್ ಪ್ರೊಡಕ್ಷನ್ ಕೂಡಾ ಶೇ. ೫೦ರಷ್ಟು ಸಂಪೂರ್ಣಗೊಂಡಿದೆ.
‘ರಾಜರು’ ಚಿತ್ರಕ್ಕಾಗಿ ಬೆಂಗಳೂರು, ಸಕಲೇಶಪುರ, ತುಮಕೂರು, ಹಾಸನ, ಗೋವಾ ಸೇರಿದಂತೆ ೫೧ದಿನಗಳ ಕಾಲ ಚಿತ್ರೀಕರಣ ನಡೆಸಲಾಗಿದೆ. ಸಿನಿಟೆಕ್ ಸೂರಿ ಅವರ ಛಾಯಾಗ್ರಹಣವಿರುವ ಈ ಚಿತ್ರದ ಎಲ್ಲ ಹಾಡುಗಳಿಗೆ ಮುರಳಿ ಅವರ ನೃತ್ಯ ಸಂಯೋಜನೆ ಇದೆ. ಈ ಚಿತ್ರದಲ್ಲಿ ನಿರಂಜನ್ ಶೆಟ್ಟಿ ಮತ್ತು ಶಾಲಿನಿ ನಾಯಕ, ನಾಯಕಿಯರಾಗಿ ಕಾಣಿಸಿಕೊಂಡರೆ, ‘ಮೈತ್ರಿ’ ಚಿತ್ರದಲ್ಲಿ ಕಳ್ಳನ ಪಾತ್ರ ನಿರ್ವಹಿಸಿದ್ದ ಜಗದೀಶ್ ಮತ್ತು ಕಿರುತೆರೆ ನಟ ನಾಗರಾಜ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲದೆ, ರಾಕ್‌ಲೈನ್ ಸುಧಾಕರ್, ಕರಿಸುಬ್ಬು ಮುಂತಾದವರ ತಾರಾಗಣವಿದೆ.
Share196Tweet123Send
Previous Post

‘ವರ್ಧನ’ ಮುಕ್ತಾಯ

Next Post

ಈ ವಾರ ತೆರೆಗೆ ‘ಮುಕುಂದ ಮುರಾರಿ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಈ ವಾರ ತೆರೆಗೆ ‘ಮುಕುಂದ ಮುರಾರಿ’

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

June 11, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

ಕೆಸಿಇಟಿ ಫಲಿತಾಂಶ | ಕಾರ್ಕಳ ಕ್ರೆಸ್ಟ್‌ಕಿಂಗ್ ಕಾಲೇಜು ವಿದ್ಯಾರ್ಥಿಗಳ ಮಿಂಚಿನ ಸಾಧನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL