ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರ ಪಥನದ ಅಂಚಿನಲ್ಲಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಯಾವುದೇ ಅನಾಹುತಗಳನ್ನು ತಡೆಯುವ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರದಾದ್ಯಂತ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತಂತೆ ಮಾತನಾಡಿರುವ ನಗರ ಪೊಲೀಸ್ ಆಯುಕ್ತ ಅಲೋಕ್ ಕುಮಾರ್, ರಾಜಕೀಯ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕ್ರಮ ಕೈಗೊಳ್ಳಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಮುಂದಿನ 48 ಗಂಟೆಗಳ ಕಾಲ 144 ಸೆಕ್ಷನ್ ಜಾರಿ ಮಾಡಲಾಗಿದೆ ಎಂದಿದ್ದಾರೆ.
ಸೆಕ್ಷನ್ ಅನ್ವಯ ನಗರ ವ್ಯಾಪ್ತಿಯಲ್ಲಿ 3 ಜನಕ್ಕಿಂತಲೂ ಹೆಚ್ಚು ಮಂದಿ ಒಂದೆಡೆ ಸೇರುವಂತಿಲ್ಲ, ಪ್ರತಿಭಟನೆ ನಡೆಸುವಂತಿಲ್ಲ ಹಾಗೂ ಬಾರ್, ವೈನ್ ಸ್ಟೋರ್ ಮತ್ತು ಪಬ್’ಗಳನ್ನು ತೆರೆಯುವಂತಿಲ್ಲ ಎಂದು ಆದೇಶಿಸಿದ್ದಾರೆ.
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
Kalpa Media House | Manipal | Manipal Institute of Technology (MIT), Manipal, a constituent unit of Manipal Academy of Higher...
Read moreDetails
















