ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ಸಾವರ್ಕರ್ ಫ್ಲೆಕ್ಸ್ ತೆರವಿನ ವಿಚಾರದಲ್ಲಿ ಶಿವಮೊಗ್ಗದಲ್ಲಿ ಉಂಟಾದ ಉದ್ವಿಗ್ನ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಹಾಗೂ ಟಿಪ್ಪು ಫ್ಲೆಕ್ಸ್ ತೆರವು ವಿಚಾರದಲ್ಲಿ ಗಲಭೆ ಉಂಟಾಗಿದ್ದು, ಇಬ್ಬರಿಗೆ ಚಾಕು ಇರಿತವಾಗಿದೆ. ಅಲ್ಲದೇ, ಹಳೆಯ ಶಿವಮೊಗ್ಗ ಭಾಗದಲ್ಲಿ ಪರಿಸ್ಥಿತಿ ಬಿಗುವಿನಿಂದ ಕೂಡಿದ್ದು, ಬೂದಿ ಮುಚ್ಚಿದ ಕೆಂಡದಂತಿದೆ.
ಜಿಲ್ಲಾ ಕೇಂದ್ರದಲ್ಲಿ ಇಂತಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಭದ್ರಾವತಿಯಲ್ಲೂ ಸಹ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ನಗರದಾದ್ಯಂತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಗಿದೆ. ರಂಗಪ್ಪ ವೃತ್ತ, ಮಾಧವಾಚಾರ್ ವೃತ್ತ ಸೇರಿದಂತೆ ಪ್ರಮುಖ ಪ್ರದೇಶಗಳಲ್ಲಿ ನಾಕಾ ಬಂಧಿ ಹಾಕಲಾಗಿದ್ದು, ಸೂಕ್ಷ್ಮ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ನಗರ ಪ್ರದೇಶದಲ್ಲಿ ಮೈಕ್ ಮೂಲಕ ಅನೌಂನ್ಸ್ ಮಾಡಲಾಗುತ್ತಿದ್ದು, ಅನವಾವಶ್ಯಕವಾಗಿ ಯಾರೂ ಮನೆಗಳಿಂದ ಹೊರಕ್ಕೆ ಬರಬಾರದು ಹಾಗೂ ಸುಖಾ ಸುಮ್ಮನೆ ಓಡಾಡುವಂತಿಲ್ಲ ಎಂದು ಸೂಚನೆ ನೀಡಲಾಗುತ್ತಿದೆ.
ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಅವರು ರಂಗಪ್ಪ ವೃತ್ತದಲ್ಲಿ ಖುದ್ಧು ಹಾಜರಿದ್ದು, ಅನಾವಶ್ಯಕವಾಗಿ ತಿರುಗಾಡದಂತೆ ವಾಹನ ಸವಾರರಿಗೆ ಸೂಚನೆ ನೀಡುತ್ತಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















