ಕಲ್ಪ ಮೀಡಿಯಾ ಹೌಸ್ | ಶಂಕರಘಟ್ಟ |
ಕುವೆಂಪು ವಿವಿಯಲ್ಲಿ ಇದೇ 9-10 ರಂದು ಎರಡು ದಿನಗಳ ಕಾಲ 14ನೇ ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನವನ್ನು ಆಯೋಜಿಸಲಾಗಿದೆ.
ಕುವೆಂಪು ವಿಶ್ವವಿದ್ಯಾಲಯ, ಕರ್ನಾಟಕ ಸಮಾಜಶಾಸ್ತ್ರ ಸಂಘ, ಸ್ನಾತಕೋತ್ತರ ಸಮಾಜಶಾಸ್ತ್ರ ವಿಭಾಗದ ಹಿರಿಯ ವಿದ್ಯಾರ್ಥಿಗಳ ಸಂಘಗಳು ಒಟ್ಟಾಗಿ ವಿವಿಯ ಬಸವ ಸಭಾ ಭವನದಲ್ಲಿ ಬುಧವಾರದಿಂದ ಎರಡು ದಿನಗಳ ಕಾಲ ಕೋವಿಡ್-19 ನಂತರದ ಭಾರತೀಯ ಸಮಾಜದ ಪುನರ್ರಚನೆ: ಸಮಾಜಶಾಸ್ತ್ರಕ್ಕಿರುವ ಸವಾಲುಗಳು ಮತ್ತು ಅವಕಾಶಗಳು ವಿಷಯ ಕುರಿತು ರಾಷ್ಟ್ರೀಯ ಸಮಾಜಶಾಸ್ತ್ರ ಸಮ್ಮೇಳನ ಆಯೋಜಿಸಲಾಗಿದೆ.

ಎರಡು ದಿನಗಳ ಸಮ್ಮೇಳನದಲ್ಲಿ ಹಲವು ದತ್ತಿ ಮತ್ತು ವಿಶೇಷ ಉಪನ್ಯಾಸಗಳನ್ನು ನೀಡಲು ದೇಶದ ಹಲವು ವಿವಿ ಮತ್ತು ಸಂಶೋಧನಾ ಸಂಸ್ಥೆಗಳಿಂದ ಸಮಾಜಶಾಸ್ತ್ರಜ್ಞರನ್ನು ಆಹ್ವಾನಿಸಲಾಗಿದೆ. ಸಮ್ಮೇಳನದಲ್ಲಿ 15 ಉಪವಿಷಯಗಳನ್ನು ರಚಿಸಿದ್ದು, ವಿವಿಧ ವಿವಿಗಳಿಂದ ಆಗಮಿಸಲಿರುವ 400ಕ್ಕೂ ಅಧಿಕ ಅಧ್ಯಾಪಕರು, ಸಂಶೋಧಕರು ತಮ್ಮ ಲೇಖನಗಳನ್ನು ಮಂಡಿಸಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post