Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಆಹಾರವನ್ನು ಸರಿಯಾಗಿ ಪೂರೈಸದ 150 ಅಂಗಡಿಗಳ ಅಮಾನತು: ಸಚಿವ ಗೋಪಾಲಯ್ಯ

May 9, 2020
in Small Bytes, ತುಮಕೂರು
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ತುಮಕೂರು: ಕೊರೋನಾದಿಂದ ದೇಶ ಸಂಕಷ್ಟದಲ್ಲಿದ್ದು, ರೈತರು ಬೆಳೆದರೆ ಮಾತ್ರ ದೇಶ ಉದ್ಧಾರ ಆಗಲು ಸಾಧ್ಯ ಎನ್ನುವುದನ್ನು ಅರಿತು ಕೃಷಿ ವಲಯಕ್ಕೆ ಲಾಕ್ ಡೌನ್ ನಡುವೆಯೂ ಸಡಿಲಿಕೆಯನ್ನು ನೀಡಲಾಗಿತ್ತು ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ಗೋಪಾಲಯ್ಯ ತಿಳಿಸಿದರು.

ತಾಲೂಕಿನ ಬುಗುಡನಹಳ್ಳಿ ಗ್ರಾಮದಲ್ಲಿ ಕೊರೋನಾ ಲಾಕ್ ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಕುಟುಂಬಗಳಿಗೆ ಪಡಿತರ ವಿತರಿಸಿ ಮಾತನಾಡಿದ ಅವರು, ಆಹಾರವನ್ನು ಸರಿಯಾಗಿ ಪೂರೈಕೆ ಮಾಡದ 150 ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದರು.

ಕೇಂದ್ರ ಮತ್ತು ರಾಜ್ಯ ಸರ್ಕಾರದಿಂದ ಪಡಿತರವನ್ನು ಉಚಿತವಾಗಿ ನೀಡಲಾಗುತ್ತಿದೆ, ರಾಜ್ಯ ಸಂಕಷ್ಟದಲ್ಲಿರುವ ಪರಿಸ್ಥಿತಿಯಲ್ಲಿ ಹಣ ಪಡೆಯದಂತೆ ಮನವಿ ಮಾಡಿದರೂ, ಅಂಗಡಿ ಮಾಲೀಕರು ಕೇಳದೇ ಮೋಸ ಮಾಡುತ್ತಿದ್ದ ಅಂಗಡಿಗಳು ಹಾಗೂ ಕಾರ್ಯ ನಿರ್ವಹಿಸದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂದು ಹೇಳಿದರು.

ರಾಜ್ಯದಲ್ಲಿ ಕೊರೋನಾ ಸಂಕಷ್ಟದಲ್ಲಿ ರಾಜ್ಯ ಸರ್ಕಾರ ನೀಡುವ ಪಡಿತರವನ್ನು 4.65 ಕೋಟಿ ಮಂದಿ ಪಡೆದಿದ್ದಾರೆ, ಕೇಂದ್ರ ಸರ್ಕಾರದಿಂದ ನೀಡುವ ಪಡಿತರವನ್ನು ಮೇ 1ರಿಂದ ವಿತರಿಸಲು ಕ್ರಮವಹಿಸಲಾಗಿದ್ದು, ಯಾವುದೇ ಕಾರಣಕ್ಕೂ ಕಳಪೆ ಪಡಿತರವನ್ನು ವಿತರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಪಡಿತರ ಚೀಟಿ ಹೊಂದಿರುವವರಿಗೆ ಉಚಿತವಾಗಿ ನೀಡುವಂತಾಗಬೇಕು ಎಂದರು.

ವಲಸೆ ಕಾರ್ಮಿಕರು ಎಲ್ಲಿಯೇ ಇದ್ದರು ಪೋರ್ಟಬಲಿಟಿ ಆಧಾರದ ಮೇಲೆ ಪಡಿತರವನ್ನು ವಿತರಿಸುವಂತಹ ಕೆಲಸವಾಗಬೇಕು, ಈ ನಿಟ್ಟಿನಲ್ಲಿ ಅಂಗಡಿ ಮಾಲೀಕರಿಗೆ ಜಾಗೃತಿ ಮೂಡಿಸಲಾಗಿದ್ದು, ಬಡವರ ಪಡಿತರ ಬಡವರಿಗೆ ಸಿಗುವಂತಾಗಬೇಕು ಎನ್ನುವುದು ನಮ್ಮ ಸರ್ಕಾರದ ಉದ್ದೇಶ ಎಂದು ತಿಳಿಸಿದರು.

ಮುಖ್ಯಮಂತ್ರಿ ಅನಿಲ ಭ್ಯಾಗ್ಯ ಹಾಗೂ ಉಜ್ವಲ್ ಯೋಜನೆಯಡಿ ಸಂಪರ್ಕ ಪಡೆದಿರುವವರಿಗೆ ಮೂರು ತಿಂಗಳ ಸಹಾಯಧನವನ್ನು ನೀಡಲಾಗುತ್ತಿದೆ, ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದವರಿಗೂ ಪಡಿತರವನ್ನು ವಿತರಿಸಲು ಸಿಎಂ ಯಡಿಯೂರಪ್ಪ ಅವರು ಕ್ರಮವಹಿಸಿದ್ದು, ಆದ್ಯತೆ ಮೇಲೆ ಎಪಿಎಲ್ ಕಾರ್ಡ್‌ದಾರರಿಗೂ ಪಡಿತರವನ್ನು ನೀಡಲಾಗುತ್ತಿದೆ ಎಂದರು.

ತುಮಕೂರು ಜಿಲ್ಲೆಯಲ್ಲಿ ರಾಗಿಯನ್ನು ಬೆಳೆಯನ್ನು ಹೆಚ್ಚಾಗಿ ಬೆಳೆಯುವುದರಿಂದ 2ಲಕ್ಷ ಮೆಟ್ರಿಕ್ ಟನ್ ರಾಗಿಯನ್ನು ರೈತರಿಂದ ಖರೀದಿಸಲಾಗಿದ್ದು, 96 ಸಾವಿರ ರೈತರು ರಾಗಿ ಮಾರಲು ನೋಂದಣಿ ಮಾಡಿಕೊಂಡಿದ್ದು, ಹೆಚ್ಚುವರಿಯಾಗಿ ಒಂದು ಲಕ್ಷ ಮೆಟ್ರಿಕ್ ಟನ್ ರಾಗಿ ಖರೀದಿಸಲು ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂದು ತಿಳಿಸಿದರು.

ಮಾಜಿ ಶಾಸಕ ಸುರೇಶ್ ಗೌಡ ಮಾತನಾಡಿ ಕಳೆದ ತಿಂಗಳಿಂದ ದೇಶ ಸ್ತಬ್ಧವಾಗಿದೆ, ಕೊರೋನಾ ವಿರುದ್ಧ ಹೋರಾಡಲು ಯುದ್ಧ ಮಾಡುವಂತೆ ಪ್ರಧಾನಿ ಮೋದಿ ಅವರು ನೀಡಿದ ಕರೆಯಂತೆ ದೇಶದ ಜನ ಯುದ್ಧ ಮಾಡಿದ್ದಾರೆ, ಕೊನೆ ಹಂತದಲ್ಲಿ ಭಾರತ ಗೆಲ್ಲಲ್ಲು ಜೂನ್, ಜುಲೈವರೆಗೆ ಹೋರಾಡಬೇಕಿದೆ ಎಂದು ತಿಳಿಸಿದರು.

ಲಾಕ್ ಡೌನ್ ನಿಂದ ಕಷ್ಟಕ್ಕೆ ಸಿಲುಕಿರುವ ಕೂಲಿ ಕಾರ್ಮಿಕರು, ಪಡಿತರ ಹೊಂದಿಲ್ಲದವರಿಗೆ ಪಡಿತರವನ್ನು ನೀಡುವಂತೆ ಪ್ರಧಾನಿ ಮೋದಿ, ಸಿಎಂ ಬಿಎಸ್ ವೈ ಅವರು ನೀಡಿದ್ದ ಕರೆಯಂತೆ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರು, ಮುಖಂಡರು ಪಡಿತರವನ್ನು ವಿತರಿಸಲಾಗುತ್ತಿದೆ ಎಂದರು.

ಲಾಕ್ ಡೌನ್ ನಿಂದ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಅವುಗಳನ್ನು ಪ್ರಾಮಾಣಿಕವಾಗಿ ತಲುಪಿಸುವಂತಹ ಕೆಲಸ ಮಾಡಬೇಕಿದೆ, ಬಡವರ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಿದಾಗ ಮಾತ್ರ ಸೇವೆಯಾಗುತ್ತದೆ, ಸರಳತೆಯಿಂದ ಸೇವೆ ಮಾಡಿದಾಗ ಮಾತ್ರ ಉತ್ತಮ ಸೇವೆ ಸಿಗುತ್ತದೆ ಎಂದರು.

ಯಾವುದೇ ಸಂದರ್ಭದಲ್ಲಿ ಆದರೂ ರೈತರಿಗೆ ಪಡಿತರ ಸಿಗಬೇಕು ಎನ್ನುವ ಉದ್ದೇಶದಿಂದ ಸ್ಥಾಪಿಸಿದ್ದ ಆಹಾರ ಭಂಡಾರವನ್ನು ರದ್ದುಗೊಳಿಸಿರುವುದರಿಂದ ಜನರಿಗೆ ಸಾಕಷ್ಟು ಕಷ್ಟವಾಗಿದ್ದು, ಆಹಾರ ಭಂಡಾರವನ್ನು ಮತ್ತೆ ಪ್ರಾರಂಭಿಸಬೇಕು ಎಂದು ಆಹಾರ ಸಚಿವ ಗೋಪಾಲಯ್ಯ ಅವರಿಗೆ ಮನವಿ ಮಾಡಿದರು.

ಯಾವುದೇ ರಾಜಕೀಯ ಉದ್ದೇಶವಿಲ್ಲದೇ, ಬಡವರ ಹಸಿವು ತೀರಿಸುವ ಕೆಲಸ ಮಾಡುವ ನಿಟ್ಟಿನಲ್ಲಿ ಯಾವುದೇ ಅಪೇಕ್ಷೇ ಇಲ್ಲದೇ ಗ್ರಾಮಾಂತರ ಕ್ಷೇತ್ರದಲ್ಲಿ ಪಡಿತರವನ್ನು ವಿತರವನ್ನು ವಿತರಿಸಲಾಗುತ್ತಿದೆ, ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಎಚ್ಚರಿಕೆ ಅಗತ್ಯವಾಗಿದ್ದು, ಸಾಮಾಜಿಕ ಅಂತರ, ಮಾಸ್ಕ್, ಸ್ಯಾನಿಟೈಜರ್ ಕಡ್ಡಾಯವಾಗಿ ಬಳಸುವ ಮೂಲಕ ಜೀವನ, ಜೀವವನ್ನು ಉಳಿಸಿಕೊಳ್ಳಬೇಕು, ಸರ್ಕಾರದ ಆದೇಶವನ್ನು ಪಾಲಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿ.ಪಂ.ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ವೈ.ಎಚ್.ಹುಚ್ಚಯ್ಯ, ಗೂಳೂರು ಶಿವಕುಮಾರ್, ರಾಜೇಗೌಡ, ಸಿದ್ದೇಗೌಡ, ತಾಪಂ ಅಧ್ಯಕ್ಷ ಗಂಗಾಜನೇಯ, ಉಪಾಧ್ಯಕ್ಷ ಶಾಂತಣ್ಣ, ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಶಂಕರಣ್ಣ, ಉಪಾಧ್ಯಕ್ಷ ರಘುನಾಥ್, ತಾಪಂ ಸದಸ್ಯೆ ಸುಜಾತ ರಮೇಶ್ ಹಾಗೂ ಗ್ರಾಮ ಪಂಚಾಯ್ತಿ ಅಧ್ಯಕ್ಷರು ಮತ್ತು ಸದಸ್ಯರು ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೂ ಮುನ್ನ ವೈದ್ಯಕೀಯ ಸಿಬ್ಬಂದಿ, ಆಶಾ, ಅಂಗನವಾಡಿ ಕಾರ್ಯಕರ್ತೆಯರು, ನರ್ಸ್, ಪೊಲೀಸರು, ಲೈನ್ ಮೆನ್ ಗಳಿಗೆ ಪುಷ್ಪವೃಷ್ಠಿಯನ್ನು ಮಾಡುವ ಮೂಲಕ ಗೌರವಿಸಲಾಯಿತು. ಸಾಮಾಜಿಕ ಅಂತರದಲ್ಲಿ ಪಡಿತರವನ್ನು ನೀಡಲಾಯಿತು.

(ವರದಿ: ಡಿ.ಎಲ್. ಹರೀಶ್)

Get in Touch With Us info@kalpa.news Whatsapp: 9481252093

Tags: CoronavirusCovid19IndiaKannadaNewsWebsiteLatestNewsKannadaTumkurಕೊರೋನಾ ವೈರಸ್ತುಮಕೂರುಸಚಿವ ಗೋಪಾಲಯ್ಯ
Previous Post

ಕೋಟೆ ಭಾಗ ಸೇರಿದಂತೆ ನಗರ ಪ್ರದೇಶದಲ್ಲಿ ಕ್ವಾರಂಟೈನ್’ಗೆ ಬಜರಂಗದಳ ತೀವ್ರ ವಿರೋಧ

Next Post

ರಾಜ್ಯದಲ್ಲಿ ಕೋವಿಡ್19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ. ಸುಧಾಕರ್ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದಲ್ಲಿ ಕೋವಿಡ್19 ಸ್ಥಿತಿಗತಿ ಕುರಿತಂತೆ ಕೇಂದ್ರ ಆರೋಗ್ಯ ಸಚಿವರ ಜೊತೆ ಸಚಿವ ಡಾ.ಕೆ. ಸುಧಾಕರ್ ಚರ್ಚೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!