ಲಕ್ನೋ: ಉತ್ತರಪ್ರದೇಶದ ಮೈನ್ಪುರಿ ಜಿಲ್ಲೆಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 17 ಮಂದಿ ದುರ್ಮರನವನ್ನಪ್ಪಿದ್ದು, 35ಕ್ಕೂ ಅಧಿಕ ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ.
ಘಟನೆ ಕುರಿತಂತೆ ಪ್ರಾಥಮಿಕ ಮಾಹಿತಿಗಳ ಅನ್ವಯ, ಅಪಘಾತಕ್ಕೀಡಾದ ಬಸ್ ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮತ್ತೊಂದು ಬಸ್ಗೆ ಅಪ್ಪಳಿಸಿ, ಹಲವು ಪಲ್ಟಿಗಳಾಗಿ ಬಿದ್ದಿದೆ ಎಂದು ಹೇಳಲಾಗಿದೆ.
17 dead,more than 35 injured after a private bus hit a divider and overturned near Mainpuri pic.twitter.com/ySVQzf43TQ
— ANI UP (@ANINewsUP) June 13, 2018
ಅಪಘಾತದ ಭೀಕರತೆಗೆ ಸ್ಥಳದಲ್ಲೇ 17 ಮಂದಿ ಸಾವಿಗೀಡಾಗಿದ್ದಾರೆ. ಅದೃಷ್ಟವಶಾತ್ ಚಾಲಕ ಸಾವಿನಿಂದ ಪಾರಾಗಿದ್ದು, ಆತನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕನ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡವರ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಸಾವಿನ ಸಂಖ್ಯೆ ಏರಿಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಘಟನೆಗೆ ಆಘಾತ ವ್ಯಕ್ತಪಡಿಸಿ, ಮೃತ ಕುಟುಂಬಗಳಿಗೆ ಧೈರ್ಯ ಹೇಳಿದ್ದಾರೆ. ಹಾಗೆಯೇ, ಗಾಯಾಳುಗಳಿಗೆ ಅಗತ್ಯವಿರುವ ಎಲ್ಲ ನೆರವು ನೀಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
Discussion about this post