ಚಂಡೀಘಡ: ಅಮೃತಸರದ ಸಮೀಪದಲ್ಲಿರುವ ರಾಜಸಾಂಸಿ ಗ್ರಾಮದಲ್ಲಿ ಭಾರೀ ಪ್ರಮಾಣದಲ್ಲಿ ಗ್ರೆನೇಡ್ ಸ್ಪೋಟಗೊಂಡಿದ್ದು, ಮೂವರು ಸಾವನ್ನಪ್ಪಿ, 10ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ.
ಇಲ್ಲಿನ ನಿರಾಂಕಾರಿ ಭವನದಲ್ಲಿ ಧಾರ್ಮಿಕ ಸಭೆಯ ಹಿನ್ನೆಲೆಯಲ್ಲಿ ಸುಮಾರು 250ಕ್ಕೂ ಅಧಿಕ ಮಂದಿ ಸೇರಿದ್ದ ವೇಳೆ ಘಟನೆ ಸಂಭವಿಸಿದೆ.
Spot visuals: Several injured in a blast at Nirankari Bhawan in Amritsar's Rajasansi village. More details awaited. #Punjab pic.twitter.com/Fzk0FW4725
— ANI (@ANI) November 18, 2018
ಈ ಕುರಿತಂತೆ ಅಲ್ಲಿನ ಐಜಿ ಸುರೀಂದ್ರ ಪಾಲ್ ಸಿಂಗ್ ಮಾತನಾಡಿದ್ದು, ಪ್ರತ್ಯಕ್ಷದರ್ಶಿಗಳ ಹೇಳಿಕೆಯಂತೆ ಬೈಕ್ನಲ್ಲಿ ಆಗಮಿಸಿದ ಮೂವರು ದುಷ್ಕರ್ಮಿಗಳು ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆ ಎಂದಿದ್ದಾರೆ.
Visuals from the hospital where those injured have been shifted after the blast at Nirankari Bhawan in Amritsar district, earlier today. #Punjab pic.twitter.com/NpumSbHq4e
— ANI (@ANI) November 18, 2018
ಇನ್ನು ಘಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ತುರ್ತು ಸಭೆ ನಡೆಸಿದ್ದು, ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ ಮಾಡಿದ್ದಾರೆ. ಅಲ್ಲದೇ, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಿರುವ ಪೊಲೀಸರು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
ಈ ರೀತಿ ದಾಳಿ ನಡೆಯುವ ಕುರಿತಾಗಿ ಗುಪ್ತಚರ ಇಲಾಖೆ ಮಾಹಿತಿ ನೀಡಿತ್ತು ಎಂದು ಹೇಳಲಾಗಿದೆ.
Discussion about this post