ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಉಡುಪಿಯ ನಾಡೋಜ ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕ ನಾ.ಜಿ. ಶಂಕರ್ ಅವರು ಜಿಲ್ಲೆಯಲ್ಲಿ ಈ ಬಾರಿ ಎಸ್’ಎಸ್’ಎಲ್’ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗಾಗಿ ಮಾಸ್ಕ್, ಫೇಸ್, ಶೀಲ್ಡ್’ಗಳನ್ನು ಕೊಡುಗೆಯಾಗಿ ನೀಡಿದ್ದಾರೆ.
ಸುಮಾರು 5 ಲಕ್ಷ ರೂ. ಮೌಲ್ಯದ 25,000 ಮಾಸ್ಕ್, 100 ಎನ್-95 ಹಾಗೂ 100 ಫೇಸ್ ಶೀಲ್ಡ್ಗಳನ್ನು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ. ರಮೇಶ್, ಮಹಾನಗರ ಪಾಲಿಕೆ ಸದಸ್ಯೆ ಸುನಿತಾ ಅಣ್ಣಪ್ಪ, ಟ್ರಸ್ಟ್ನ ಪ್ರತಿನಿಧಿಗಳಾದ ಉಡುಪಿ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಶಿವರಾಮ ಕೆ.ಎಂ., ರವೀಂದ್ರ ಶ್ರೀಯಾನ್, ವಿಠ್ಠಲ ಕಟ್ಕೇರ್ ಮುಂತಾದವರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post